• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೇಬೀಡು ದೇವಾಲಯದ ಮುಖ್ಯರಸ್ತೆಯ ಕಾಮಗಾರಿ ವೀಕ್ಷಣೆ
ವಿಶ್ವ ಪರಂಪರೆ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಐತಿಹಾಸಿಕ ಸ್ಥಳವಾದ ಹಳೇಬೀಡಿನ ಶ್ರೀ ಹೊಯ್ಸಳೇಶ್ವರ ದೇವಾಲಯದ ರಸ್ತೆಯ ಕಾಮಗಾರಿಯನ್ನು ಬೇಲೂರು ಕ್ಷೇತ್ರದ ಶಾಸಕ ಎಚ್.ಕೆ. ಸುರೇಶ್ ವೀಕ್ಷಿಸಿದರು. ವೀಕ್ಷಣೆ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಮಗಾರಿ ವಿಳಂಬವಾಗಿರುವುದು ಬೇಸರದ ವಿಚಾರವಾಗಿದೆ . ಹಳೇಬೀಡಿಗೆ ಪ್ರವಾಸಿಗರು ಹಾಗೂ ವಾಹನಗಳು ಹೆಚ್ಚು ಬರುತ್ತಿರುವುದು ರಸ್ತೆಯಲ್ಲಿ ನಿತ್ಯವು ಸಂಚಾರಕ್ಕೆ ಭಾರಿ ತೊಂದರೆಯಾಗಿದೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಕರೆದು ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಮಾಡಬೇಕೆಂದು ಆದೇಶಿಸಿದರು.
ರಜೆ ದಿನ ರಾಮನಾಥಪುರದಲ್ಲಿ ಭಕ್ತರ ದಂಡು
"ದಕ್ಷಿಣ ಕಾಶಿ " ಎಂದೇ ಪ್ರಖ್ಯಾತಿ ಹೊಂದಿರುವ ರಾಮನಾಥಪುರ ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ ಮಹಾ ರಥೋತ್ಸವ ಜನವರಿ 5ರಂದು ಭಾನುವಾರ ನಡೆಯುವ ಹಿನ್ನೆಲೆಯಲ್ಲಿ ರಜಾ ದಿನವಾದ ಭಾನುವಾರ ರಾಮನಾಥಪುರದಲ್ಲಿ ಎಲ್ಲೆಂದರಲ್ಲಿ ಜನಸಂದಣಿಯಿದ್ದು ಜಾತ್ರೆಮೈದಾನ, ದೇವಾಲಯಗಳು ಮತ್ತು ಸ್ನಾನಘಟ್ಟ ಭಕ್ತರಿಂದ ತುಂಬಿ ತುಳುಕಿತು. ಈ ಹಿಂದೆ ಡಿ. 7ರಂದು ಜರುಗಿದ ಪ್ರಸನ್ನ, ಶ್ರೀ ಸುಬ್ರಮಣ್ಯಸ್ವಾಮಿ ರಥೋತ್ಸವದಿಂದ ಆರಂಭವಾಗಿರುವ. ಈ ಜಾತ್ರೆಯು ತುಳು ಷಷ್ಠಿಯ ಜನವರಿ 5 ರ ವರೆಗೂ ಜರುಗಲಿದ್ದು, ಒಂದು ತಿಂಗಳಕಾಲ ಪ್ರತಿನಿತ್ಯವೂ ಸಹ ಭಕ್ತರು ಭೇಟಿ ನೀಡುತ್ತಾರೆ.
ಕಣತೂರಿನಲ್ಲಿ ಎತ್ತರದ ಶಿವಲಿಂಗ ಲೋಕಾರ್ಪಣೆ
ಆಲೂರು ತಾಲೂಕಿನ ಪಾಳ್ಯ ಹೋಬಳಿಯ ಕಣತೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ 21 ಅಡಿ ಎತ್ತರದ ಶಿವಲಿಂಗ ಮತ್ತು ಶಿವನ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮ ಡಿ. 23ರ ಸೋಮವಾರ ನಡೆಯಲಿದೆ ಎಂದು ಕಣತೂರು ಶಂಕರ ಲಿಂಗೇಶ್ವರ ಟ್ರಸ್ಟ್ ಅಧ್ಯಕ್ಷ ಕೆ ಬಿ ಬಾಲಲೋಚನ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಶಿವನ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮವನ್ನು ಸಂಸದ ಶ್ರೇಯಸ್ ಪಟೇಲ್ ಉದ್ಘಾಟಿಸುವರು.
ಪ್ರಾಮಾಣಿಕರಾಗಿದ್ದರೆ ಸ್ವಯಂ ಉದ್ಯೋಗದಲ್ಲಿ ಉತ್ತುಂಗಕ್ಕೇರಬಹುದು
ಸಂವಿಧಾನವು ಎಲ್ಲರಿಗೂ ಬದುಕುವ ಅವಕಾಶ ನೀಡಿದೆ. ಆ ನಿಟ್ಟಿನಲ್ಲಿ ಯಾರು ಯಾವುದೇ ಉದ್ಯೋಗವನ್ನು ಆರಿಸಿಕೊಳ್ಳಲು ಅವಕಾಶ ನೀಡಿದೆ. ಭಾರತದಲ್ಲಿ ಇರುವ ಮಾನವ ಸಂಪನ್ಮೂಲ, ಭೌಗೋಳಿಕ ಸಂಪನ್ಮೂಲ, ಅರ್ಥಿಕ ಶಕ್ತಿ ಇನ್ಯಾವುದೇ ದೇಶಗಳಲ್ಲಿ ಕಾಣಲು ಸಾಧ್ಯವಿಲ್ಲ ಎಂದು ಮುರುಂಡಿ ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲೋಹಿತ್ ತಿಳಿಸಿದರು. ವಿವಿಧ ಕ್ಷೇತ್ರಗಳ ಮೂಲಕ ಸೇವೆ ಸಲ್ಲಿಸಲು ಪ್ರೇರಣೆ ನೀಡುವ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸಹಕಾರಿಯಾಗಲಿವೆ ಎಂದರು.
ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ
ಹಳೇಬೀಡಿನ ಚನ್ನಮ್ಮ ನಂಜೇಗೌಡ ಕಲ್ಯಾಣ ಮಂಟಪದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾರಂಭ ನಡೆಯಿತು. ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡೆ ನುಡಿಯಿಂದ ಬೇಸತ್ತ ಕಾರ್ಯಕರ್ತರು ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ. ಹಳೇಬೀಡು ಸಮಾವೇಶದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡವರ ಸಂಖ್ಯೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.
ಹೊಳೆನರಸೀಪುರದಲ್ಲೂ ರಾಮ ಹನುಮನಾಮ ಜಪ
ವಿವಿಧ ಸಂಘಸಂಸ್ಥೆಗಳ ಸಹಕಾರದಲ್ಲಿ ಶ್ರೀ ಹನುಮ ಜಯಂತ್ಯುತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗುತ್ತಿದ್ದು, ಸಾವಿರಾರು ಜನರು ಶ್ರೀರಾಮನಿಗೆ ಜಯಘೋಷಗಳನ್ನು ಕೂಗುತ್ತಾ ಮೆರವಣಿಗೆಗೆ ವಿಶೇಷ ಮೆರಗು ತಂದರು. ಶ್ರೀ ಹನುಮ ಜಯಂತ್ಯುತ್ಸವ ಪ್ರಯುಕ್ತ ಪಟ್ಟಣವನ್ನು ತಳಿರು, ತೋರಣ ಹಾಗೂ ಕೇಸರಿ ಧ್ವಜಗಳಿಂದ ಸಿಂಗರಿಸಿ, ಮೈಸೂರು ದಸರಾದಂತೆ ಪಟ್ಟಣವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು.
ಬೇಲೂರು ತಾಲೂಕು ಕ್ರೈಸ್ತ ಹಿತರಕ್ಷಣಾ ವೇದಿಕೆಯಿಂದ ಕ್ರಿಸ್ಮಸ್
ಶಾಂತಿ, ಸೌಹಾರ್ದತೆ ಸಾರುವ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ತಾಲೂಕು ಕ್ರೈಸ್ತ ಹಿತರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿ, ಪೊಲೀಸ್ ಇಲಾಖೆ, ಪುರಸಭೆ ಹಾಗೂ ಸರ್ಕಾರಿ ಕಚೇರಿಗಳಿಗೆ ತೆರಳಿ ಅಲ್ಲಿಯ ಅಧಿಕಾರಿಗಳನ್ನು ಸನ್ಮಾನಿಸಿ ಶುಭಾಶಯ ತಿಳಿಸಿ ಕೇಕ್ ವಿತರಿಸಿದರು. ೨ ಸಾವಿರ ವರ್ಷಗಳ ಹಿಂದೆ ಏಸುಕ್ರಿಸ್ತನು ಈ ಭೂಮಿ ಮೇಲೆ ಮಾನವನಾಗಿ ಬಂದು ಮನುಷ್ಯನ ಪಾಪಗಳಿಗೋಸ್ಕರ ತಡೆಯಲು ಸ್ವತಃ ಮನುಷ್ಯನಾಗಿ ಬಂದು ಸ್ವತಃ ಶಿಲುಬೆಯಲ್ಲಿ ತನ್ನ ಪ್ರಾಣವನ್ನು ಕೊಡುವ ಮೂಲಕ ನಮ್ಮೆಲ್ಲರ ಪಾಪಗಳನ್ನು ಪರಿಹಾರ ಮಾಡಿ ಸ್ವರ್ಗಕ್ಕೆ ಏಕಮಾರ್ಗವಾಗಿ ಪ್ರಕಟಿಸಿಕೊಂಡಿದ್ದು ತನ್ನನ್ನು ತಾನೇ ಬೆಳಕು ಎಂದು ಹೇಳಿದ್ದಾರೆ.
ಇಂದು ಸಕಲೇಶಪುರದಲ್ಲಿ ಬೆಳೆಗಾರರ ಬೃಹತ್ ಸಮಾವೇಶ
ಸಕಲೇಶಪುರದ ಎ.ಪಿ.ಎಂ.ಸಿ ಮೈದಾನದಲ್ಲಿ ಡಿಸೆಂಬರ್ ೨೩ರ ಸೋಮವಾರದಂದು ಬೆಳಗ್ಗೆ ೧೦:೩೦ಕ್ಕೆ ಕರ್ನಾಟಕ ಬೆಳೆಗಾರರ ಒಕ್ಕೂಟದ ವತಿಯಿಂದ ಬೆಳೆಗಾರರ ಬೃಹತ್ ಸಮಾವೇಶ ಮತ್ತು ವಾರ್ಷಿಕ ಮಹಾಸಭೆಯನ್ನು ನಡೆಸಲಾಗುವುದು ಎಂದು ಕರ್ನಾಟಕ ಗೋವರ್ಸ್ ಫೆಡರೇಷನ್ ಅಧ್ಯಕ್ಷ ಡಾ. ಎಚ್.ಟಿ. ಮೋಹನ್ ಕುಮಾರ್ ತಿಳಿಸಿದರು. ಸಮಾವೇಶಕ್ಕೆ ಹೆಚ್ಚಿನ ಮಹಿಳಾ ಬೆಳೆಗಾರರು ಭಾಗವಹಿಸಬೇಕಾಗಿ ಮನವಿ ಮಾಡಿದರು.
ಗ್ರಾಮಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಒತ್ತಾಯ
ಕುರಭತ್ತೂರು ಗ್ರಾಮ ಪಂಚಾಯಿತಿಯ ಹಡ್ಲಹಳ್ಳಿ ಹೊರಟ್ಟಿಯ ಹತ್ತಾರು ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸದೆ ಚೆಸ್ಕಾಂ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೊರುತ್ತಿದ್ದಾರೆಂದು ಆರೋಪಿಸಿ ವಳಲಹಳ್ಳಿ ಕೂಡಿಗೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ವಿದ್ಯುತ್ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೆ, ಹಿರಿಯ ಅಧಿಕಾರಿಗಳ ಆದೇಶವನ್ನು ಪಾಲಿಸಲು ಅಧಿಕಾರಿಗಳು ಮುಂದಾಗದೆ ತಾಂತ್ರಿಕ ಕಾರಣ ನೀಡುತ್ತಿದ್ದಾರೆ ಎಂದು ದೂರಿದ ಪ್ರತಿಭಟನಕಾರರು, ಸ್ಥಳಕ್ಕೆ ಬಂದ ಚೆಸ್ಕಾಂ ಸಹಾಯಕ ಕಾರ್ಯಪಾಲ ಅಭಿಯಂತರ ಹರೀಶ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಅಂಗನವಾಡಿಗಾಗಿ ಭೂಮಿ ದಾನ
ಕೇರಳಾಪುರದ ನಿವಾಸಿಯಾದ ಹಾಗೂ ಕೇರಳಾಪುರ ಗ್ರಾಮಪಂಚಾಯ್ತಿ ಮಾಜಿ ಅಧ್ಯಕ್ಷರೂ ಆದ ಡಿ ಮಂಜುನಾಥ್ ಅವರು ಕೇರಳಾಪುರದಲ್ಲಿ ಜನತಾ ಬಡಾವಣೆಗೆ ಹೊಸದಾಗಿ ಮಂಜೂರಾಗಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ೩೦*೪೦ ಅಳತೆಯ ಸುಮಾರು ೩೦ ಲಕ್ಷ ಬೆಲೆಬಾಳುವ ನಿವೇಶನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಸರಿಗೆ ದಾನ ನೀಡಿದ್ದಾರೆ.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved