• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಗಳ್ಳಿ ಗಣೇಶ್‌ಗೆ ಮರಣೋತ್ತರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ
ಡಾ.ಮೊಗಳ್ಳಿ ಗಣೇಶ್ ಅವರು ಅಕ್ಷರವನ್ನೇ ತಮ್ಮ ಅಸ್ತ್ರವಾಗಿಸಿಕೊಂಡು ಕಥೆ, ಕಾದಂಬರಿ, ಪ್ರಬಂಧ, ಸಂಶೋಧನ ಕೃತಿ, ಬೀದಿನಾಟಕ, ಕಾವ್ಯ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿಯನ್ನು ಮಾಡಿ ಪ್ರಖ್ಯಾತಿಯನ್ನು ಗಳಿಸಿದ್ದು ಇವರ ಸಾಹಿತ್ಯ ರಾಜ್ಯ , ರಾಷ್ಟ್ರ, ಅಂತಾರಾಷ್ಟ್ರಮಟ್ಟದಲ್ಲಿ ಮನ್ನಣೆಯನ್ನು ಪಡೆದಿದೆ.ಇವರ ಸಾಹಿತ್ಯ ಸೇವೆ ನಾಡಿಗೆ ಆಗಾಧವಾಗಿದೆ ಸದಾ ಸಮಾಜ ಜಾತಿ ಧರ್ಮ ವರ್ಣ ವ್ಯವಸ್ಥೆಯ ವಿರುದ್ಧ ಬೇಸರಗೊಂಡಿದ್ದರು. ಕುವೆಂಪು, ಪೂರ್ಣಚಂದ್ರತೇಜಸ್ವಿ, ಪಿ.ಲಂಕೇಶ್, ದೇವನೂರು ಮಹಾದೇವ, ಸಿದ್ದಲಿಂಗಯ್ಯ ಅವರ ಬರಹಗಳ ಬಗ್ಗೆ ಅಪಾರವಾದ ಪ್ರೀತಿ ಇತ್ತು. ಇವರು ಸ್ವಾಭಿಮಾನಿ, ಮಾತು ಮೆದುವಾದರೂ ಬಹಳ ಅರ್ಥಗರ್ಭಿತವಾಗಿರುತ್ತಿತ್ತು ಎಂದರು.
ಹಾಸನಾಂಬೆಯ ಸುಗಮ ದರ್ಶನಕ್ಕೆ ಭಕ್ತರ ಮೆಚ್ಚುಗೆ
ಕಳೆದ ವರ್ಷ ಅದ್ವಾನಗಳ ಆಗರವಾಗಿ ತಳ್ಳಾಟ ನೂಕಾಟ, ಲಾಠಿ ಚಾರ್ಜ್‌, ಹೀಗೆ ಹತ್ತು ಹಲವು ಗೊಂದಲಗಳ ಗೂಡಾಗಿದ್ದ ಹಾಸನಾಂಬೆ ದರ್ಶನೋತ್ಸವ ಈ ಬಾರಿ ಸುಸೂತ್ರವಾಗಿ ನಡೆಯುತ್ತಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ವಿಐಪಿ ಹಾಗೂ ವಿವಿಐಪಿ ಪಾಸ್‌ಗಳನ್ನು ರದ್ಧು ಮಾಡುವುದರ ಜತೆಗೆ ದರ್ಶನಕ್ಕೆ ಬರುವ ವಿಐಪಿಗಳಿಗೆ ಜಿಲ್ಲಾಡಳಿತವೇ ಪ್ರತ್ಯೇಕ ವ್ಯವಸ್ಥೆ ಮಾಡಿರುವುದು. ಇದರ ಮಾಸ್ಟರ್‌ ಮೈಂಡ್‌ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ. ಹಾಗಾಗಿ ಈ ಬಾರಿ ಸಾಮಾನ್ಯ ಜನರಿಗೂ ಹಾಸನಾಂಬೆ ದರ್ಶನ ಸುಸೂತ್ರವಾಗಿ ನಡೆಯುತ್ತಿದ್ದು, ದರ್ಶನ ಪಡೆದ ಭಕ್ತರೆಲ್ಲಾ ಈ ಬಾರಿಯ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಹಾಸನಾಂಬೆಯ ದರ್ಶನ ಪಡೆದ ಶಾಸಕ ಅರವಿಂದ್ ಬೆಲ್ಲದ್
ಶಾಸಕ ಅರವಿಂದ್ ಬೆಲ್ಲದ್ ಅವರು ಶನಿವಾರ ತಮ್ಮ ಕುಟುಂಬ ಸಮೇತರಾಗಿ ಶ್ರೀ ಹಾಸನಾಂಬ ದೇವಿಯ ದರ್ಶನ ಪಡೆದರು. ದರ್ಶನದ ಬಳಿಕ ಮಾತನಾಡಿದ ಅವರು, ಹಾಸನಾಂಬೆಯ ಜಾತ್ರಾ ಉತ್ಸವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಬಾರಿ ಜಿಲ್ಲಾಡಳಿತ ವಿವೇಕದಿಂದ ಕಾರ್ಯನಿರ್ವಹಿಸಿ, ವಿವಿಐಪಿಗಳಿಗೆ ಸರ್ಕಾರಿ ವಾಹನ ವ್ಯವಸ್ಥೆ ಮಾಡಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದರು. ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದೇವಿಯ ದರ್ಶನ ಪಡೆದು ನಾವು ಪುನೀತರಾಗಿದ್ದೇವೆ ಎಂದು ಅವರು ಭಕ್ತಿಭಾವದಿಂದ ಹೇಳಿದರು.
ಜಿಲ್ಲಾ ಪತ್ರಕರ್ತರ ಸಂಘ ಚುನಾವಣೆಗೆ ಚುನಾವಣಾಧಿಕಾರಿಯಾಗಿ ರಾಜೇಶ್ ನೇಮಕ
ನವೆಂಬರ್ ತಿಂಗಳಲ್ಲಿ ನಡೆಯಲಿರುವ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಜಿಲ್ಲಾ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತರಾದ ಜ್ಞಾನದೀಪ ರಾಜೇಶ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ. ಎಚ್. ವೇಣುಕುಮಾರ್ ಅವರು ಆದೇಶದ ಪ್ರತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವೇಣುಕುಮಾರ್ ಅವರು, ಈ ಬಾರಿ ನಡೆಯಲಿರುವ ಸಂಘದ ಚುನಾವಣೆ ಸಂಪೂರ್ಣ ನಿಷ್ಪಕ್ಷಪಾತವಾಗಿ, ಯಾವುದೇ ಬಾಹ್ಯ ಪ್ರಭಾವ ಅಥವಾ ಒತ್ತಡಗಳಿಲ್ಲದೇ, ಶಿಸ್ತಿನಿಂದ ಸಾಗುವಂತೆ ವಿನಂತಿಸುತ್ತೇನೆ ಎಂದು ಹೇಳಿದರು.
ಪತ್ರಕರ್ತರು ಕಾನೂನು ಅರಿತು ನೈಜ ಸುದ್ದಿಗೆ ಆದ್ಯತೆ ನೀಡಿ
ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುವ ಸುದ್ದಿಗಳ ನೈಜತೆಯನ್ನು ಅರಿತು ಪ್ರಸಾರ ಮಾಡಬೇಕು. ಕೆಲವೊಮ್ಮೆ ಸುದ್ದಿಗಳನ್ನು ಕೊಡುವುದರಿಂದ ಆಗುವ ಅಪಾರ್ಥಕ್ಕೆ ಇಡೀ ಸಮಾಜ ಬೆಲೆ ತೆರಬೇಕಾಗುತ್ತದೆ. ಪತ್ರಕರ್ತನಿಗೆ ವಿಷಯದ ಕುರಿತ ಸರಿಯಾದ ತಿಳಿವಳಿಕೆ ಹಾಗೂ ಪದಗಳ ಬಳಕೆಯ ಪರಿಜ್ಞಾನ ಅಗತ್ಯ. ಪತ್ರಕರ್ತರು ತಮ್ಮ ಕೆಲಸದ ಒತ್ತಡದ ನಡುವೆಯೂ ಕುಟುಂಬದವರ ಜೊತೆ ಕಾಲ ಕಳೆಯಲು ಸಮಯ ಮೀಸಲಿಡಬೇಕು. ಪತ್ರಕರ್ತರಲ್ಲಿ ಒಗ್ಗಟ್ಟಿದ್ದಾಗ ಮಾತ್ರ ಸಂಘಟನೆ ಬೆಳೆಯಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ರಸ್ತೆ ಕಾಮಗಾರಿಗೆ ಶಾಸಕ ಸುರೇಶ್ ಚಾಲನೆ
ಮಲೆನಾಡು ಭಾಗದ ದಬ್ಬೆ-ಕನ್ನಾಪುರ ಗ್ರಾಮದ ರು. ೧ ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಿ ಮಾತನಾಡಿದ ಅವರು ಕಳೆದ ವರ್ಷ ಅತಿವೃಷ್ಟಿಯಿಂದ ಮಲೆನಾಡು ಭಾಗದ ರಸ್ತೆಗಳು ತೀವ್ರವಾಗಿ ಹದಗೆಟ್ಟಿತ್ತು. ಈ ಬಗ್ಗೆ ಖುದ್ದು ಪರಿಶೀಲನೆ ನಡೆಸಿ ಸಂಬಂಧ ಪಟ್ಟ ಲೋಕೋಪಯೋಗಿ ಮಂತ್ರಿಗಳಿಗೆ ಶೀಘ್ರವೇ ರಸ್ತೆ ಹಾಗೂ ಸೇತುವೆ ನಿರ್ಮಿಸಲು ಹೆಚ್ಚಿನ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗಿದೆ. ಮಂತ್ರಿಗಳು ಕೂಡ ಸ್ಪಂದಿಸಿದ್ದು ಪಟ್ಟಣ ಹೊಳೆಬೀದಿಯ ಸೇತುವೆಗೆ ರು. ೩೭ ಕೋಟಿ ಅನುದಾನ ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆದಿರುವುದು ತಾವು ಪಟ್ಟ ಶ್ರಮಕ್ಕೆ ಫಲ ದೊರಕಿದೆ ಎಂದರು.
ವಸ್ತು ಪ್ರದರ್ಶನ ಪ್ರಯೋಜನ ಪಡೆದುಕೊಳ್ಳಿ
ಶ್ರೀ ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಹಾಸನ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಉತ್ಪಾದನೆಯಾದಂತಹ ಉತ್ಪನ್ನಗಳನ್ನು ಖರೀದಿಸಲು ಒಂದು ಸುವರ್ಣಾವಕಾಶ, ಕೃಷಿ, ತೋಟಗಾರಿಕೆ, ಪಶುಪಾಲನೆ, ರೇಷ್ಮೆ ಮತ್ತಿತರ ಇಲಾಖೆಗಳಿಂದ ರೈತರಿಗೆ ಬೇಕಾದಂತಹ ಮಾಹಿತಿಗಳನ್ನು ವಸ್ತು ಪ್ರದರ್ಶನದಲ್ಲಿ ನೀಡಲಾಗುತ್ತಿದೆ ಎಂದರು.
ಸನ್ಯಾಸಿಯೊಬ್ಬನಿಗೆ ಪ್ರಧಾನಿಯಾಗುವ ಯೋಗವಿದೆ
ಮುಂದಿನ ದಿನಗಳಲ್ಲಿ ಒಬ್ಬ ಸನ್ಯಾಸಿಗೆ ಪ್ರಧಾನಮಂತ್ರಿಯಾಗುವ ಯೋಗವಿದೆ. ದೇಶಕ್ಕೆ ಬ್ರಹ್ಮಚಾರಿ ನಾಯಕನ ಆವಶ್ಯಕತೆ ಇದೆ. ಇಲ್ಲದಿದ್ದರೆ ಜಗತ್ತಿನ ಮೇಲೆ ಶನಿಯ ಪ್ರಭಾವ ಹೆಚ್ಚಾಗುತ್ತದೆ ಬ್ರಹ್ಮಾಂಡ ಗುರೂಜಿ ಹೇಳಿದರು. ಕರ್ನಾಟಕ ಮೂರು ಭಾಗವಾಗುವ ಸಾಧ್ಯತೆ ಇದೆ. ಭಾರತ ದೇಶವೂ ಎರಡು ಭಾಗವಾಗಲಿದೆ. ಇದು ತಾಯಿ ಹಾಸನಾಂಬೆಯ ಮುನ್ಸೂಚನೆ ಎಂದು ಭವಿಷ್ಯ ನುಡಿದರು. ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸಲಿವೆ. ಎಲ್ಲ ನಾಯಕರು ಗೊಂದಲಕ್ಕೆ ಸಿಲುಕುತ್ತಾರೆ. ಪಕ್ಷಾಂತರಗಳು ನಡೆಯುತ್ತವೆ. ಕುರ್ಚಿ ರಾಜಕಾರಣ ತೀವ್ರವಾಗುತ್ತದೆ. ಸಂಕ್ರಾಂತಿ ವೇಳೆಗೆ ಕೇತು, ಸೂರ್ಯ, ರಾಹು ಸಂಚಾರದಿಂದ ದೊಡ್ಡ ರಾಜಕೀಯ ಗಲಾಟೆಗಳು ಉಂಟಾಗುತ್ತವೆ ಎಂದು ಹೇಳಿದರು.
ಶೀಘ್ರದಲ್ಲೇ ಪೌರ ಕಾರ್ಮಿಕರಿಗೆ ನಿವೇಶನ
ಪೌರಕಾರ್ಮಿಕರ ಬಗ್ಗೆ ಸ್ವತಃ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಅಪಾರವಾದ ಗೌರವವನ್ನು ತೋರಿದ್ದಾರೆ. ಕಾರ್ಮಿಕರು ಮಳೆ, ಗಾಳಿ, ಚಳಿ ಎನ್ನದೇ ನಸುಕಿನಲ್ಲಿ ಸ್ಚಚ್ಛ ಮಾಡುವ ಪೌರಕಾರ್ಮಿಕರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ಅವರಿಗೆ ಸಲ್ಲಬೇಕಾದ ಸವಲತ್ತು ದೊರಕಬೇಕು. ಪೌರಕಾರ್ಮಿಕರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ, ಶ್ರದ್ಧೆಯಿಂದ ಮನಃಪೂರ್ವಕವಾಗಿ ಮಾಡುತ್ತಿದ್ದಾರೆ. ಚನ್ನಕೇಶವ ಸ್ವಾಮಿ ರಥೋತ್ಸವ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಾರೆ. ಆ ಸಂದರ್ಭದ ಸ್ವಚ್ಛತೆಗೊಳಿಸುವ ಕೀರ್ತಿ ಪೌರಕಾರ್ಮಿಕರಿಗೆ ಸಲ್ಲುತ್ತದೆ, ಪ್ರತಿವರ್ಷ ಪುರಸಭಾ ವತಿಯಿಂದ ಕಾರ್ಮಿಕರನ್ನ ಸನ್ಮಾನಿಸುತ್ತಿರುವುದು ಜನಮೆಚ್ಚುವ ಕೆಲಸವಾಗಿದೆ. ನಿವೇಶನ ನೀಡಲು ಮತ್ತು ನೀರು ಸರಬರಾಜುದಾರರಿಗೆ ಎಲ್ಲ ರೀತಿಯ ಸವಲತ್ತು ಕಲ್ಪಿಸಲು ಸದನದಲ್ಲಿ ಮಾತನಾಡಿ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದರು.
ಬಸ್‌ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ
ಹೊಳೆನರಸೀಪುರ ಪಟ್ಟಣದಿಂದ ಹಾಸನದ ಶಾಲಾ ಕಾಲೇಜಿಗೆ ಸಮಯಕ್ಕೆ ಸರಿಯಾಗಿ ತೆರಳಲು ಅಗತ್ಯ ಬಸ್ ವ್ಯವಸ್ಥೆ ಇಲ್ಲದೇ ಹೈರಾಣಾಗಿದ್ದ ವಿದ್ಯಾರ್ಥಿಗಳು ಶುಕ್ರವಾರ ಬಸ್‌ಗಳು ನಿಲ್ದಾಣದಿಂದ ಬಸ್ಸುಗಳು ಹೊರಹೋಗದಂತೆ ತಡೆದು ಪ್ರತಿಭಟಿಸಿದರು. ಕರ್ನಾಟಕ ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆ ಆರಂಭಿಸಿದ ಬಳಿಕ ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಜತೆಗೆ ಬಹುತೇಕ ಎಲ್ಲಾ ಬಸ್‌ಗಳಲ್ಲಿ ಜನದಟ್ಟನೆಯೊಂದಿಗೆ ಓಡಾಡುವ ಪರಿಸ್ಥಿತಿಯೂ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಂಕಷ್ಟ ಉಂಟು ಮಾಡಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 544
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved