• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ದಲಿತ ಸಂಘರ್ಷ ಸಮಿತಿ ಪುನಾರಚನೆ
ಅರಕಲಗೂಡು ತಾಲೂಕು ಮಟ್ಟದ ದಲಿತ ಸಂಘರ್ಷ ಸಮಿತಿ ಪುನರ್‌ರಚನೆ ಹಾಗೂ ಸರ್ವ ಸದಸ್ಯರ ಸಭೆಯನ್ನು ಡಿ.22ರಂದು ಬೆಳಗ್ಗೆ 11ಗಂಟೆಗೆ ಪಟ್ಟಣದ ಡಿ.ದೇವರಾಜ ಅರಸು ಭವನದಲ್ಲಿ ಆಯೋಜಿಸಲಾಗಿದೆ ಎಂದು ದಸಂಸ(ಅಂಬೇಡ್ಕರ್‌ವಾದ) ಜಿಲ್ಲಾ ಸಂಚಾಲಕ ಕೃಷ್ಣ ದುಮ್ಮಿ ತಿಳಿಸಿದರು. ಸಂಘಟನೆಯನ್ನು ಸದೃಢಗೊಳಿಸಲು ದಸಂಸದ ತಾಲೂಕು ಮಟ್ಟದ ಸರ್ವಸದಸ್ಯರ ಸಭೆಯನ್ನು ಕರೆದು ಹೊಸ ಸಮಿತಿ ರಚಿಸಲಾಗುತ್ತಿದೆ ಎಂದು ತಿಳಿಸಿದರು.
ಅಮಿತ್‌ ಶಾ ವಿರುದ್ಧ ಆಲೂರಿನಲ್ಲಿ ಪ್ರತಿಭಟನೆ
ಡಾ. ಬಿ ಆರ್‌ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಾಲೂಕು ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.
ಅಮಿತ್ ಶಾ ವಜಾಕ್ಕೆ ಆಗ್ರಹಿಸಿ ಅಣಕು ಶವಯಾತ್ರೆ
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಅಪಮಾನಕರ ಮಾತುಗಳನ್ನಾಡಿರುವ ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಬಂಧಿಸುವಂತೆ ಆಗ್ರಹಿಸಿ ದಲಿತ - ಜನಪರ ಚಳವಳಿಗಳ ಒಕ್ಕೂಟದಿಂದ ಶುಕ್ರವಾರ ಪ್ರತಿಭಟನೆ ನಡೆಸಿದರಲ್ಲದೆ ಅಮಿತ್‌ ಶಾ ಅವರ ಪ್ರತಿಕೃತಿ ದಹಿಸಿ ಜಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಅಂಬೇಡ್ಕರ್ ವಿರೋಧಿ, ಸಂವಿಧಾನ ವಿರೋಧಿ ಮನುವಾದಿ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಸಂವಿಧಾನ ಮತ್ತು ಸಂವಿಧಾನ ಶಿಲ್ಪಿಯನ್ನು ಅವಮಾನಿಸಿದ ಅವರ ಮೇಲೆ ಕಾನೂನು ಕ್ರಮ ಜರುಗಿಸಿ ಬಂಧಿಸಬೇಕೆಂದು ಆಗ್ರಹಿಸಿದರು.
ತೋಟಗಾರಿಕೆಯ ಪ್ರಾಮುಖ್ಯತೆ ತಿಳಿಸುವುದು ಶಿಬಿರದ ಉದ್ದೇಶ
ಸಮೀಪದ ಮಾಯಗೊಂಡನಹಳ್ಳಿಯಲ್ಲಿ ಮೂಡಿಗೆರೆ ತೋಟಗಾರಿಕೆ ಮಹಾವಿದ್ಯಾಲಯದ ಅಂತಿಮ ವಿದ್ಯಾರ್ಥಿಗಳ ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಸಾಮಾನ್ಯ ಸಭೆ ಆಯೋಜಿಸಲಾಗಿತ್ತು. ತೋಟಗಾರಿಕಾ ಕಾಲೇಜು ಮೂಡಿಗೆರೆಯ ಅಂತಿಮ ವರ್ಷದ ಬಿಎಸ್ಸಿ ತೋಟಗಾರಿಕೆ ವಿದ್ಯಾರ್ಥಿಗಳು ಹಾಸನ ಜಿಲ್ಲೆಯ ಚಟ್ಟಹಳ್ಳಿಯಲ್ಲಿ ೨ ತಿಂಗಳುಗಳ ಗ್ರಾಮೀಣ ತೋಟಗಾರಿಕೆ ಕೆಲಸದ ಅನುಭವ ಕಾರ್ಯಕ್ರಮ ಯಶಸ್ವಿಯಾಗಿ ಆರಂಭಿಸಿದ್ದೇವೆ ಎಂದು ತಿಳಿಸಿದರು.
ವಿಜ್ಞಾನದ ಮೂಲಕ ಪ್ರತಿಭೆಗಳು ಹೊರಹೊಮ್ಮಬೇಕು
ಮಕ್ಕಳು ವೈದ್ಯರು, ಎಂಜಿನಿಯರ್ ಆಗುವ ಆಸೆಯ ಜತೆಗೆ ದೇಶದ ತಂತ್ರಜ್ಞಾನ ಬೆಳೆಸುವ ವಿಜ್ಞಾನಿಗಳು ಸಮಾಜ ತಿದ್ದುವ ಶಿಕ್ಷಕರಾಗಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಎನ್. ದೀಪ ಮಕ್ಕಳಿಗೆ ತಿಳಿಸಿದರು.ಶಿಕ್ಷಣ ಸಂಯೋಜಕ ಲೋಕೇಶ್ ಮಾತನಾಡಿ, ವಿಜ್ಞಾನದ ಮೂಲಕ ಪ್ರತಿಭೆಗಳು ಹೊರಹೊಮ್ಮಬೇಕು. ಆದ್ದರಿಂದ ಶಿಕ್ಷಕರು ಪ್ರತಿಭಾವಂತ ಮಕ್ಕಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಎಂದರು. ವಿಜ್ಞಾನದ ಆವಿಷ್ಕಾರಗಳನ್ನ ಅರಿತು ಪ್ರಯೋಗಗಳನ್ನು ಮಾಡಬೇಕು. ಪ್ರವಾಸಗಳು ವೈಜ್ಞಾನಿಕ ಚಿಂತನೆಯಡಿ ನಡೆದು, ತಂತ್ರಜ್ಞಾನ, ವಿಜ್ಞಾನದ ಆವಿಷ್ಕಾರಗಳನ್ನು ತಿಳಿಸುವ ಪ್ರವಾಸವಾಗಬೇಕು ಎಂದರು.
ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಭುಗಿಲೆದ್ದ ಆಕ್ರೋಶ
ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಬಗ್ಗೆ ಹಗುರವಾಗಿ ಮತ್ತು ಜವಾಬ್ದಾರಿಯಿಲ್ಲದೆ ಮಾತನಾಡಿರುವ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಹೇಳಿಕೆ ಖಂಡಿಸಿ ಅಂಬೇಡ್ಕರ್‌ ಪ್ರತಿಮೆ ಮುಂದೆ ರೈತ, ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಅಹಲ್ಯಾಬಾಯಿ ಹೋಳ್ಕರ್ ಸಂಘಕ್ಕೆ ಶಿಲ್ಪ ಚಂದ್ರು ಅಧ್ಯಕ್ಷೆ
ಅಹಲ್ಯಾಬಾಯಿ ಹೋಳ್ಕರ್ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿಲ್ಪ ಚಂದ್ರು ಹಾಗೂ ಉಪಾಧ್ಯಕ್ಷರಾಗಿ ಕಾವ್ಯ ಆದರ್ಶ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ದೇವರಾಜ್‌ ತಿಳಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಕಾವ್ಯ ಆದರ್ಶ್‌ ಹೊರತುಪಡಿಸಿ ಈ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯನ್ನು ಘೋಷಿಸಲಾಯಿತು. ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಂಡಸಿ ಜಗಣ್ಣ ಮಾತನಾಡಿ, ನಿಮ್ಮ ಮೇಲೆ ಸದಸ್ಯರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಎಲ್ಲ ಸದಸ್ಯರ ಸಹಕಾರ ಪಡೆದು ಸಂಘನ್ನು ಅತ್ಯುನ್ನತ ಸ್ಥಿತಿಗೆ ತರಬೇಕೆಂದು ಸಲಹೆ ನೀಡಿದರು.
ಬೇಡಿಕೆ ಈಡೇರಿಕೆಗಾಗಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ
ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಸಮಿತಿಯಿಂದ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯತ್‌ಗೆ ಮನವಿ ಸಲ್ಲಿಸಿದರು. ದೇಶದ ಅಭಿವೃದ್ಧಿಗೆ ಪೂರಕವಾದ ಮಕ್ಕಳ ಅಪೌಷ್ಟಿಕತೆಯಿಂದ ಹೋಗಲಾಡಿಸಿ, ಏಕಾಗ್ರತೆಯಿಂದ ಶಿಕ್ಷಣ ಪಡೆಯಲು, ಅರ್ಧದಲ್ಲಿ ಶಾಲೆಯನ್ನು ಬಿಡುವ ಕ್ರಮ ನಿಲ್ಲಿಸಲು ಮಧ್ಯಾಹ್ನದ ಉಪಾಹಾರ ಯೋಜನೆಯನ್ನು ಅಂದಿನಿಂದ ಇಂದಿನವರೆಗೆ ಸಮಗ್ರವಾಗಿ ನಡೆಸಿಕೊಂಡು ಬಂದಿದೆ ಎಂದರು.
ಭೀಮ ಕೋರೆಗಾಂವ್ ವಿಜಯೋತ್ಸವ ಆಚರಣೆಗೆ ಸಿದ್ಧತೆ
ಭೀಮ ಕೋರೆಗಾಂವ್ ವಿಜಯೋತ್ಸವ ಆಚರಣೆ ಮಾಡಲಾಗುವುದು ಎಂದು ಭೀಮ ಕೋರೆಗಾಂವ್ ವಿಜಯೋತ್ಸವ ಆಚರಣೆ ಸಮಿತಿಯವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ನಗರದ ತಾಲೂಕು ಕಚೇರಿ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ. ಮೈಸೂರಿನ ಪೆದ್ದಿ ಮಠದ ಶ್ರೀಗಳಾದ ಜ್ಞಾನಪ್ರಕಾಶ್ ಸ್ವಾಮೀಜಿಗಳು ಮತ್ತು ಖ್ಯಾತ ಚಲನಚಿತ್ರ ನಟ ದುನಿಯಾ ವಿಜಯ್ ಸೇರಿದಂತೆ ವಿವಿಧ ಗಣ್ಯರು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ.
ರೈತರಿಗೆ ಮೋಸವಾಗದಂತೆ ನಿಗಾ ವಹಿಸಲು ಸೂಚನೆ
ಜಿಲ್ಲೆಯಲ್ಲಿ ಬೆಳೆ ವಿಮೆ ಕಟ್ಟಿರುವ ರೈತರಿಗೆ ಯಾವುದೇ ರೀತಿಯಲ್ಲಿ ಮೋಸವಾಗದಂತೆ ನಿಗಾ ವಹಿಸಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಧಿಕಾರಿಗಳು ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಸ್ಥಳೀಯ ಸಮಸ್ಯೆಗಳನ್ನು ರೈತರು ಹೇಳುತ್ತಾರೆ ಎಂದರು. ಮುಂಗಾರು ಬೆಳೆಯ ಬಾಕಿ ಇರುವ ಬೆಳೆ ಕಟಾವು ಪ್ರಯೋಗಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved