• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಸಂಸ್ಕಾರ ನೀಡಿ ಮೊಬೈಲ್‌ನಲ್ಲ
ಪೋಷಕರು ಮಕ್ಕಳಿಗೆ ಸಂಸ್ಕಾರ ನೀಡಬೇಕು. ಮಕ್ಕಳನ್ನು ಮೊಬೈಲ್ ಹಾವಳಿಯಿಂದ ದೂರವಿರುವಂತೆ ನೋಡಿಕೊಳ್ಳಬೇಕು ಎಂದು ಕೆಸವತ್ತೂರು ಮಠದ ಯತಿಗಳಾದ ಶ್ರೀ ಬಸವರಾಜೇಂದ್ರ ಸ್ವಾಮಿಗಳು ತಿಳಿಸಿದರು. ತಾಲೂಕು ಕುಂಚಿಟಿಗರ ಸಂಘದ ಅಧ್ಯಕ್ಷರಾದ ಪಾಂಡುರಂಗ ಅವರ ೫೦ನೇ ವರ್ಷದ ಸುವರ್ಣ ಸಂಭ್ರಮ ಆಚರಣೆಯಲ್ಲಿ ಆಶೀರ್ವಚನ ನೀಡಿ ಮಾತನಾಡುತ್ತಾ, ಸರಳ ಜೀವನದ ಜೊತೆಗೆ ಸಂಸ್ಕಾರವಂತರಾಗಿ ಬೆಳೆದಾಗ ಸಮಾಜದಲ್ಲಿ ಶಾಂತಿ, ನೆಮ್ಮದಿ, ಇರುತ್ತದೆ ಎಂದರು.
ಬೇಡಿಕೆ ಈಡೇರಿಕೆಗಾಗಿ ಬಿಸಿಯೂಟ ನೌಕರರ ಪ್ರತಿಭಟನೆ
ದೇಶದ ಬಿಸಿಯೂಟ ಕಾರ್ಮಿಕರಿಗೆ ಕನಿಷ್ಠ ವೇತನ ನಿಗಧಿ ಮತ್ತು ಸಾಮಾಜಿಕ ಭದ್ರತೆ ಸೇರಿದಂತೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ಸೋಮವಾರ ನಗರದಲ್ಲಿರುವ ಸಂಸದರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ೧೧.೨೦ ಲಕ್ಷಕ್ಕೂ ಹೆಚ್ಚು ಶಾಲೆಗಳಲ್ಲಿ ೧೧.೮೦ ಕೋಟಿ ಮಕ್ಕಳಿಗೆ ಈ ಬಿಸಿಯೂಟ ಸೇವೆ ನೀಡಲಾಗುತ್ತಿದೆ ಎಂದರು.
ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ
ಮಕ್ಕಳು ಶಾಲಾ ಹಂತದಲ್ಲಿ ಪಠ್ಯ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣ ಗೊಳಿಸುವಂತೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಆರ್‌. ಪೂರ್ಣಿಮಾ ತಿಳಿಸಿದ್ದಾರೆ. ಹಾಸನ ಜಿಲ್ಲೆಯ ಮಕ್ಕಳು ತಮ್ಮ ಪ್ರತಿಭೆಯನ್ನು ಉತ್ತಮವಾಗಿ ಪ್ರಸುತ್ತಪಡಿಸುವ ಮೂಲಕ ರಾಜ್ಯಮಟ್ಟದಲ್ಲಿ ಹಾಸನ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ಸ್ವಯಂ ಪ್ರೇರಿತ ಅರಸೀಕೆರೆ ಬಂದ್ ಸಂಪೂರ್ಣ
ವಕ್ಫ್‌ ಹೋರಾಟ ಸಮಿತಿ ಮತ್ತು ಹಿರಿಯ ನಾಗರಿಕರ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಕರೆ ನೀಡಲಾಗಿದ್ದ ಸ್ವಯಂಪ್ರೇರಿತ ಅರಸೀಕೆರೆ ಬಂದ್ ಸಂಪೂರ್ಣ ಯಶಸ್ವಿಯಾಯಿತು. ವಕ್ಫ್‌ಗೆ ರೈತನ ಜಮೀನು ಮಠಮಾನ್ಯಗಳು, ಆಸ್ತಿ, ಕಟ್ಟಡ, ನಿವೇಶನ, ದೇವಾಲಯಗಳ ಆಸ್ತಿಗಳು, ಹಳ್ಳಿಗಳು, ಸ್ಮಶಾನಗಳು , ಸರ್ಕಾರಿ ಕಟ್ಟಡ ಸರ್ಕಾರಿ ಆಸ್ತಿಯನ್ನು ಕಬಳಿಸುವ ಕಾನೂನಿನ ಅಧಿಕಾರವನ್ನು ಹಿಂದಿನ ಕಾಂಗ್ರೆಸ್ ಸರ್ಕಾರಗಳು ನೀಡಿದೆ ಎಂದು ರಂಗಭೂಮಿ ಕಲಾವಿದ ಕರಿಯಪ್ಪ ಆರೋಪಿಸಿದರು.
ವಿರೋಧದ ನಡುವೆಯೂ ಟೋಲ್‌ ಸಂಗ್ರಹಕ್ಕೆ ಚಾಲನೆ
ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿ ಸಂಪೂರ್ಣ ಮುಗಿಯುವ ಮುನ್ನವೇ ಟೋಲ್ ಸಂಗ್ರಹಕ್ಕೆ ಮುಂದಾಗಿದ್ದ ಹೆದ್ದಾರಿ ಪ್ರಾಧಿಕಾರದವರ ಕ್ರಮವನ್ನು ಖಂಡಿಸಿ ಸೋಮವಾರ ಕರವೇ ಸೇರಿದಂತೆ ವಿವಿಧ ಸಂಘಟನೆಗಳು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಚೌಲಗೆರೆ ಬಳಿ ಪ್ರತಿಭಟನೆ ನಡೆಸಿದವು.ಆಲೂರು ಬಳಿಯ ಚೌಲಗೆರೆ ಗ್ರಾಮದ ಸುಂಕ ವಸಲಾತಿ ಕೇಂದ್ರದಲ್ಲಿ ವಾಹನಗಳಿಂದ ಟೋಲ್ ಹಣವನ್ನ ಸಂಗ್ರಹಿಸುವ ಪ್ರಕ್ರಿಯೆ ಪ್ರಾರಂಭವಾಯಿತು.
ಕಾಫಿ ಎಸ್ಟೇಟ್‌ ಕಾರ್ಮಿಕರ ಮೇಲೆ ಕಾಡಾನೆ ದಾಳಿ
ಕಾಫಿ ಕೊಯ್ಲಿನ ಕೆಲಸ ಮಾಡುತ್ತಿರುವಾಗ ಒಂಟಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಶಬಾನ (45 ವರ್ಷ) ಎಂಬುವವರಿಗೆ ಕಾಲಿಗೆ ಹಾಗೂ ಜಯಂತಿ(47 ವರ್ಷ) ಎಂಬುವವರಿಗೆ ಬೆನ್ನಿಗೆ ತೀವ್ರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಲೂಕಿನ ಅರೇಹಳ್ಳಿ ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳೆ ಹಾನಿ ಜೊತೆಗೆ ಮಾನವರ ಮೇಲೂ ದಾಳಿ ನಡೆಸುತ್ತಿರುವುದು ಹೆಚ್ಚಳವಾಗುತ್ತಿದೆ.
ಅಂಕಗಳ ಹಿಂದೆ ಬೀಳದೇ ಸಮಗ್ರ ಶಿಕ್ಷಣ ಪಡೆಯಿರಿ
ಮಕ್ಕಳು ಕೇವಲ ಅಂಕಗಳಿಸುವ ಯಂತ್ರಗಳಂತೆ ಶಿಕ್ಷಣ ಕಲಿತರೆ ಸಾಲದು, ಮಕ್ಕಳು ಸಮಗ್ರವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಎಲ್ಲಾ ರಂಗಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಶಿಕ್ಷಣವನ್ನು ಕಲಿಯಬೇಕು ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಾದ ಕಾಂತರಾಜು ತಿಳಿಸಿದರು. ಪ್ರಾಪಂಚಿಕ ವಿಷಯಗಳ ಬಗ್ಗೆ ಅರಿವನ್ನು ಹೊಂದಬೇಕು ಮತ್ತು ಸಮಾನತೆ ಭ್ರಾತೃತ್ವ ಹಾಗೂ ಸಮಾಜದಲ್ಲಿ ಶಿಕ್ಷಣದಿಂದ ಉನ್ನತವಾದ ಹುದ್ದೆಗಳ ಅಲಂಕರಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ಬಾಲ್ಯದಿಂದಲೇ ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಸಲಹೆ
ಬಾಲ್ಯದಿಂದಲೇ ನಿಯಮಿತವಾಗಿ ಆಟೋಟಗಳಲ್ಲಿ ಪಾಲ್ಗೊಳ್ಳುವುದರಿಂದ ದೇಹ ಆರೋಗ್ಯವಾಗಿರುತ್ತದೆ. ಮಾನಸಿಕ ಆರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ತಿಳಿಸಿದರು. ಮಕ್ಕಳು ಎಲ್ಲಾ ಕ್ರೀಡೆಗಳಲ್ಲಿ ಎಲ್ಲರೂ ಭಾಗವಹಿಸಿ, ಸೋಲು- ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳಿ ಎಂದು ಕಿವಿಮಾತು ಹೇಳಿ, ಚಿಕ್ಕವರಿದ್ದಾಗಲೇ ಕ್ರೀಡೆಯನ್ನು ಜೀವನದಲ್ಲಿ ರೂಪಿಸಿಕೊಂಡರೆ ಮುಂದೆ ದೇಹ ಆರೋಗ್ಯವಾಗಿರುತ್ತದೆ. ಮಾನಸಿಕ ಆರೋಗ್ಯ ಕೂಡ ಉತ್ತಮವಾಗಿರುತ್ತದೆ, ಸಂತ ಫಿಲೋಮಿನ ಶಾಲೆಯ ಏನೇ ಸಮಸ್ಯೆ ಇದ್ದರೂ ಅದನ್ನು ಬಗೆಹರಿಸುವ ಕೆಲಸ ನಾನು ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡ ನಟೇಶ್ ಕುಮಾರ್‌ಗೆ ನುಡಿನಮನ
ಕೆಲ ದಿನಗಳ ಹಿಂದಷ್ಟೇ ಅಗಲಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಹಾಸನ ಜಿಲ್ಲಾ ಬಿಜೆಪಿ ಮಾಜಿ ಸಂಘಟನಾ ಪ್ರಧಾನ ಕಾರ್ಯದರ್ಶಿ ನಟೇಶ್ ಕುಮಾರ್‌ ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಸಾಮಾನ್ಯರು ಸುಂದರ ಜಗತ್ತಿನಲ್ಲಿ ಬದುಕುತ್ತಾರೆ. ಆದರೆ, ಶ್ರೇಷ್ಠರು ತಾನು ಬದುಕಿದ ಸಮಾಜವನ್ನು, ಜಗತ್ತನ್ನು ಸುಂದರವಾಗಿಸುತ್ತಾರೆ. ಹಾಗೆಯೇ ನಟೇಶ್ ಅವರು ತಾನು ಬದುಕಿದ ಸಮಾಜವನ್ನು, ಜಗತ್ತನ್ನು ಸುಂದರವಾಗಿಸಿದ್ದಾರೆ ಎಂದು ಜನಸೇವಾ ಶಿಕ್ಷಣದ ಮುಖಂಡ ನಿರ್ಮಲ್ ಕುಮಾರ್‌ ಅವರು ಹೇಳಿದರು.
ವಿದ್ಯೆ ಜತೆಗೆ ಸಾಮಾಜಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ
ಮಕ್ಕಳಿಗೆ ವಿದ್ಯೆಯೊಂದಿಗೆ ನಮ್ಮ ಸಂಸ್ಕೃತಿ, ಸಂಸ್ಕಾರ ಹಾಗೂ ಸಾಮಾಜಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವಲ್ಲಿ ಶಿಕ್ಷಕರ ಹಾಗೂ ಪೋಷಕರ ಪಾತ್ರ ಮಹತ್ತರದ್ದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಹೇಳಿದರು. ಇತ್ತೀಚಿನ ದಿನಗಳಲ್ಲಿನ ಜಂಜಾಟದ ಒತ್ತಡದ ಬದುಕಿನಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಹಳುಹಿಸಿದರೆ ಸಾಕು ಎನ್ನುತ್ತಾರೆ. ನಾವು ಮಕ್ಕಳಿಗೆ ಏನು ಕೊಡಬೇಕೆಂಬುದನ್ನು ಬಿಟ್ಟು ದುಡಿಮೆಯಲ್ಲೆ ತೊಡಗುತ್ತೇವೆ. ಮನೆಯೇ ಮೊದಲ ಪಾಠಶಾಲೆ, ತಾಯಿ ಮೊದಲ ಗುರುವಾದರೆ ಶಾಲೆಯಲ್ಲಿ ಶಿಕ್ಷಕರು ಎರಡನೇ ತಾಯಿಯಾಗಿರುತ್ತಾರೆ ಎಂಬುದನ್ನು ಪ್ರತಿಯೊಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved