• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೌಲಗೆರೆ ಟೋಲ್‌ ಇಂದು ಉದ್ಘಾಟನೆ
ಆಲೂರು ತಾಲೂಕಿನ ಚೌಲಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿರ್ಮಿಸಿರುವ ಸುಂಕ ವಸೂಲಿ ಕೇಂದ್ರ ಕಾರ್ಯಾರಂಭಕ್ಕೆ ಎಲ್ಲಾ ಸಿದ್ಧತೆ ಆರಂಭವಾಗಿದೆ. ಸೋಮವಾರ ಇದನ್ನು ಉದ್ಘಾಟಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಿರ್ಧರಿಸಿದ್ದಾರೆ. ಆದರೆ, ಉದ್ಘಾಟನೆಗೂ ಮುನ್ನವೇ ತೀವ್ರ ವಿರೋಧ ವ್ಯಕ್ತವಾಗಿದೆ. ಟೋಲ್‌ ಶುಲ್ಕ ವಸೂಲಿ ಮಾಡಲು ತೋರುತ್ತಿರುವ ಆಸಕ್ತಿ ರಸ್ತೆ ಗುಣಮಟ್ಟ ಕಾಪಾಡುವಲ್ಲಿ ಇಲ್ಲ. ಜತೆಗೆ ಈ ಟೋಲ್‌ನಲ್ಲಿ ಯಾವ ವಾಹನಕ್ಕೆ ಎಷ್ಟು ಸುಂಕ ಎನ್ನುವುದನ್ನು ಈವರೆಗೂ ನಾಮಫಲಕದಲ್ಲಿ ಹಾಕಿಲ್ಲ.
ತಾಯಿಗಿಂತ ದೊಡ್ಡ ಶಕ್ತಿ ಜಗತ್ತಿನಲ್ಲಿಲ್ಲ
ಭಗವಂತನಿಗೂ ಭಕ್ತಿಗೂ ಮಧ್ಯೆ ಇರುವ ಅಜ್ಞಾನ ಮತ್ತು ಅಹಂಕಾರ ಎಂಬ ಪರದೆಯದನ್ನು ಸರಿಸಿದಾಗ ಮಾತ್ರ ದೇವರು ಕಾಣಿಸುತ್ತಾನೆ. ನಂಬಿಕೆಯಿಂದ ಮಾತ್ರ ದೇವರನ್ನು ಕಾಣಲು ಸಾಧ್ಯ ಎಂದು ಸಿದ್ಧಗಂಗಾ ಮಠಾಧೀಶರಾದ ಡಾ. ಶಿವಕುಮಾರಸ್ವಾಮಿಗಳು ಅಭಿಪ್ರಾಯಪಟ್ಟರು. ತಾಯಿ ಮಕ್ಕಳಿಗೆ ಕೊಡುವಂತಹ ಸಂಸ್ಕಾರ ಯಾರಿಂದಲೂ ಕೊಡಲು ಸಾಧ್ಯವಿಲ್ಲ. ತಾಯಿಗಿಂತ ದೊಡ್ಡ ಶಕ್ತಿ, ದೊಡ್ಡ ದೇವರು ಜಗತ್ತಿನಲ್ಲಿ ಕಾಣುವುದಿಲ್ಲ. ದೇವರು ಸೇರಿದಂತೆ ಯಾವುದೇ ಋಣ ತೀರಿಸಬಹುದು. ಆದರೆ ತಾಯಿ ಋಣ ತೀರಿಸಲು ಸಾಧ್ಯವಿಲ್ಲ ಎಂದರು.
ನಿವೃತ್ತರಿಗಾಗಿ ವಿಶ್ರಾಂತಿ ಮನೆ ನಿರ್ಮಾಣಕ್ಕೆ ಚಿಂತನೆ
೬೫ ವರ್ಷಕ್ಕಿಂತ ಮೇಲ್ಪಟ್ಟ ನಿವೃತ್ತ ನೌಕರರ, ನಿವೃತ್ತ ಯೋಧರ, ಸಮಾಜ ಸೇವಕರ ವಿಶ್ರಾಂತಿ ಮನೆ ಪ್ರಾರಂಭಿಸುತ್ತಿದ್ದೇವೆ ಎಂದು ಉದ್ಯಮಿ ಟಿ. ಶಿವಕುಮಾರ್ ತಿಳಿಸಿದ್ದಾರೆ. ಕೆಲವರಿಗೆ ಒಂಟಿತನ ಕಾಡುತ್ತಿದೆ. ಇಂತಹ ಮನಸ್ಥಿತಿಯಿಂದ ಇವರನ್ನು ಹೊರತಂದು ನಿಮ್ಮ ಜೊತೆಗೆ ನಾವಿದ್ದೇವೆ ಎನ್ನುವ ಭರವಸೆ ಮೂಡಿಸಿ, ಇಂತಹವರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ವಿಶ್ರಾಂತಿ ಮನೆ ತೆರೆಯಲಾಗುತ್ತಿದೆ ಎಂದರು.
ಸಮಾಜಮುಖಿ ಸೇವೆ ಕೈಗೊಳ್ಳುವುದೇ ರೆಡ್‌ಕ್ರಾಸ್‌ ಸಂಸ್ಥೆ ಉದ್ದೇಶ
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯು ಸಮಾಜಮುಖಿ ಸೇವೆಯಲ್ಲಿ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಿದೆ ಎಂದು ತಾಲೂಕು ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ಭರತ್ ಕುಮಾರ್‌ ತಿಳಿಸಿದರು. ರೆಡ್‌ಕ್ರಾಸ್ ಸಂಸ್ಥೆಯು ಸಮಾಜಮುಖಿ ಸೇವೆಯಲ್ಲಿ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ. ಅದರಲ್ಲೂ ಜಿಲ್ಲೆಯಲ್ಲಿ ಅತಿ ಹೆಚ್ಚು ಸಂಘಸಂಸ್ಥೆ ಹೊಂದಿರುವ ತಾಲೂಕು ಎಂದರೆ ಅದು ಚನ್ನರಾಯಪಟ್ಟಣ. ತಾಲೂಕಿನಲ್ಲಿ ಅನೇಕ ಸಂಘಸಂಸ್ಥೆಗಳು ತನ್ನದೇ ಆದ ಸಮಾಜಮುಖಿ ಸೇವೆಯನ್ನು ಸಲ್ಲಿಸುತ್ತಿವೆ ಎಂದರು.
ಹಕ್ಕು ಮತ್ತು ಕರ್ತವ್ಯಗಳ ಸರಿಯಾದ ಬಳಕೆಯಾಗುತ್ತಿಲ್ಲ
ಸಂವಿಧಾನದಲ್ಲಿ ನೀಡಿರುವ ಹಕ್ಕು ಹಾಗೂ ಕರ್ತವ್ಯ ಪಾಲಿಸಲು ಜಾಗೃತಿ ಮೂಡಿಸುತ್ತಿದ್ದರೂ ನಾಗರಿಕರು ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳದಿರುವುದು ವಿಷಾದನೀಯ ಎಂದು ಬೇಲೂರು ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ.ಎಸ್. ಶಶಿಕಲಾ ಬೇಸರ ವ್ಯಕ್ತಪಡಿಸಿದರು. ಪ್ರಕೃತಿವಿಕೋಪದಂಥ ಘಟನೆಗಳು ನಡೆಯಲು ಮಾನವನ ದುರಾಸೆಯ ಪರಮಾವಧಿ, ಆಧುನೀಕತೆ ಹೆಸರಿನಲ್ಲಿ ಕಾಡು ಕಡಿಯುವುದು ಎಷ್ಟರ ಮಟ್ಟಿಗೆ ಸರಿ. ಮಾನವ ಹಕ್ಕುಗಳ ಸಂರಕ್ಷಣೆ ಸಂವಿಧಾನ ನೀಡಿದ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪಾಲಿಸಬೇಕು ಎಂದರು.
ದೇವರನ್ನ ನಂಬಿ ಆದರೆ ಮೂಢನಂಬಿಕೆ ಬೇಡ
ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಕುತೂಹಲ ಹಾಗೂ ಪರಿಹಾರವನ್ನು ಕಂಡುಕೊಳ್ಳುವ ದೃಷ್ಟಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಭಾರತ ಜ್ಞಾನ ವಿಜ್ಞಾನ ಸಮಿತಿ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಜಿಲ್ಲಾ ಬಿಜೆಎಸ್‌ವಿ ಉಪಾಧ್ಯಕ್ಷೆ ಸಿ ಸೌಭಾಗ್ಯ ಹೇಳಿದರು. ರಸಪ್ರಶ್ನೆಯ ಮೂಲಕ ಮಕ್ಕಳಲ್ಲಿನ ಹಲವು ಪ್ರಶ್ನೆಗಳಿಗೆ ಕುತೂಹಲವನ್ನು ಸಹ ಪರಿಹಾರ ಮಾಡಿದರಲ್ಲದೆ ತಮ್ಮ ವತಿಯಿಂದ ಮಕ್ಕಳಿಗೆ ಕಿರು ಕಾಣಿಕೆ ನೀಡಿ ಪ್ರೋತ್ಸಾಹಿಸಿದರು.
ಕೃಷ್ಣ ಕಾನೂನು ಕಾಲೇಜಿಗೆ ನ್ಯಾಕ್‌ನಿಂದ ಮಾನ್ಯತೆ
ಎಂ. ಕೃಷ್ಣ ಕಾನೂನು ಕಾಲೇಜಿಗೆ ರಾಷ್ಟ್ರೀಯ ಮೌಲ್ಯಾಂಕನ ಹಾಗೂ ಮೌಲ್ಯಮಾಪನ ನ್ಯಾಕ್ ಪರಿಶೀಲನೆ ನಂತರ ಬಿ ಗ್ರೇಡ್ ಮಾನ್ಯತೆ ನೀಡಿದೆ ಎಂದು ಪ್ರಾಂಶುಪಾಲ ಡಾ. ಶ್ರೀನಿವಾಸ್ ತಿಳಿಸಿದರು. ಈ ಗ್ರೇಡ್ ಮುಂದಿನ 5ವರ್ಷಗಳ ಕಾಲ ಮುಂದುವರಿಯಲಿದ್ದು, ಕಾಲೇಜಿನ ವಾತಾವರಣ, ವಿದ್ಯಾರ್ಥಿಗಳಿಗೆ ಕಾಲೇಜಿನ ಸೌಕರ್ಯಗಳು, ಬೋಧನ ಕೌಶಲ್ಯ, ವಿದ್ಯಾರ್ಥಿಗಳ ಚಟುವಟಿಕೆ, ಗ್ರಂಥಾಲಯ ವ್ಯವಸ್ಥೆ, ಶಿಸ್ತು, ಹಲವಾರು ವಿಚಾರಗಳನ್ನ ಪರಿಶೀಲಿಸಿದ ತಂಡವು ಮೆಚ್ಚುಗೆ ವ್ಯಕ್ತಪಡಿಸಿದೆ.
ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ
ಮನೆಗೆ ನುಗ್ಗಿ 15 ಲಕ್ಷ ರು.ನಗದು ಹಾಗೂ ಸುಮಾರು 7 ಲಕ್ಷ ರು. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಗರದ ಹೊಸ ಬಸ್ ನಿಲ್ದಾಣ ಎದುರು ಕೆ.ಎಚ್.ಬಿ. ಬಡಾವಣೆಯಲ್ಲಿ ಸಂಭವಿಸಿದೆ. ಕಳ್ಳರು ಮನೆ ಪ್ರವೇಶ ಮಾಡಲು ಕಬ್ಬಿಣದ ಆಯುಧದಿಂದ ಮುಂಬಾಗಿಲು ಮೀಟಿ ಕಳ್ಳತನ ಮಾಡಿರುವುದು ಕೇವಲ ನಾಲ್ಕೈದು ಗಂಟೆಗಳಲ್ಲಿ ಮಾತ್ರ ಈ ಘಟನೆ ನಡೆದಿದ್ದು, ನಗದು, ಚಿನ್ನಾಭರಣ ಸೇರಿ ಒಟ್ಟು ಮೌಲ್ಯ 22 ಲಕ್ಷ ರು. ಎಂದು ಅಂದಾಜಿಸಲಾಗಿದೆ. ಚೋರ ಎಲ್ಲವನ್ನು ಬ್ಯಾಗಿನಲ್ಲಿ ಹಾಕಿಕೊಂಡು ಬೈಕ್‌ನಲ್ಲಿ ಪರಾರಿಯಾಗುವ ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಜಯಕರ್ನಾಟಕ ಹೋರಾಟಕ್ಕೆ ಕುಮಾರಸ್ವಾಮಿ ಬೆಂಬಲ
ಕಾಡಾನೆಯಿಂದ ಶಾಶ್ವತ ಪರಿಹಾರಕ್ಕಾಗಿ ನಡೆಸುತ್ತಿರುವ ಐದನೇ ದಿನದ ಹೋರಾಟ ಸ್ಥಳಕ್ಕೆ ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಆಗಮಿಸಿ ಕೆಲ ಸಮಯ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಫೆಬ್ರವರಿ ಒಳಗೆ ಆನೆ ಕಾರಿಡರ್ ಮಾಡುವ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳದಿದ್ದರೇ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಐದನೇ ದಿವಸ ಹೋರಾಟ ಕೊನೆಗೊಳಿಸಿದ ವೇಳೆ ಜಯ ಕರ್ನಾಟಕ ಸಂಘಟನೆ ಎಚ್ಚರಿಕೆ ನೀಡಿದ್ದಾರೆ. ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಜಯಕರ್ನಾಟಕ ಹೋರಾಟದ ಕೊನೆಯ ದಿವಸ ಸ್ಥಳಕ್ಕೆ ಆಗಮಿಸಿ ತಾವು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಪೋಷಕರು ಮಕ್ಕಳಿಗೆ ಕ್ರೀಡೆಗೂ ಪ್ರೋತ್ಸಾಹಿಸಬೇಕು
ಶಾಲೆಗಳಿಗೆ ಮಕ್ಕಳನ್ನು ಕೇವಲ ಅಂಕಗಳಿಕೆಗಾಗಿ ಮಾತ್ರ ಸೇರಿಸುವ ಪೋಷಕರ ಮನಸ್ಥಿತಿ ಬದಲಾಗಬೇಕು. ಪೋಷಕರು ಓದುವುದರ ಜೊತೆಗೆ ಕ್ರೀಡೆಗೂ ಕೂಡ ಸಮಯ ಕೊಡಬೇಕು ಎಂದು ಟೈಮ್ಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿ.ಕೆ. ಗಂಗಾಧರ್ ಸಲಹೆ ನೀಡಿದರು. ತಮ್ಮ ಮಕ್ಕಳು ಹೆಚ್ಚು ಅಂಕ ಪಡೆದು ಪತ್ರಿಕೆಗಳಲ್ಲಿ ಮಕ್ಕಳ ಭಾವಚಿತ್ರ ಬಂದರೆ ಅಷ್ಟೇ ಸಾಧನೆ ಎಂದುಕೊಳ್ಳುತ್ತಾರೆ. ಒಳ್ಳೆಯ ಅಂಕಗಳಿಕೆ ಮಾಡಿದರೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಎಂದು ಭಾವಿಸುತ್ತಾರೆ, ಈ ಕಲ್ಪನೆ ತಪ್ಪು ಎಂದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved