• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೃದಯಾಘಾತದಿಂದ ಬಿಕಾಂ ವಿದ್ಯಾರ್ಥಿನಿ ಸಾವು

ಹೃದಯಾಘಾತದಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ.

ಬೇಡಿಕೆ ಈಡೇರಿಸದಿದ್ದರೆ ಕುಡಿಯುವ ನೀರು ಬಂದ್ ಎಚ್ಚರಿಕೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರಸಭೆ ಆವರಣದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪೌರನೌಕರರ ಮುಷ್ಕರವು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ನಮ್ಮ ಬೇಡಿಕೆ ಈಡೇರಿಸದಿದ್ದರೆ ಕುಡಿಯುವ ನೀರನ್ನು ಕೂಡ ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ. ಪೌರ ಕಾರ್ಮಿಕರ ಸಮಾನ ಕೆಲಸಕ್ಕೆ ಸಮಾನ ವೇತನ, ನೌಕರರನ್ನು ಕಾಯಂ ಮಾಡುವುದು ಹಾಗೂ ಎಲ್ಲಾ ನೌಕರರಿಗೆ ಎಸ್.ಎಫ್.ಸಿ. ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಹರಿಪ್ರಸಾದ್‌ ಸಿಎಂ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ
ಎಂ.ಎಲ್.ಸಿ. ಹರಿಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ಮಾಡುವುದರಲ್ಲಿ ವಿಶೇಷ ಏನಿದೆ? ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರು ನಮ್ಮ ಮನೆಗೆ ಬರುತ್ತಾರೆ. ನಾನು ಪರಮೇಶ್ವರ್ ಮನೆಗೆ ಹೋಗ್ತೀನಿ. ಅದಕ್ಕೆ ರಾಜಕೀಯ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದರು. ಬದಲಾವಣೆ ಆಗುತ್ತಲೇ ಇರುತ್ತದೆ. ನಾನು ಮಂತ್ರಿ ಅಷ್ಟೇ. ಈ ಪ್ರಶ್ನೆನಾ ನಮ್ಮ ಹತ್ರ ಕೇಳಬಾರದು ಬೆಂಗಳೂರಿನಲ್ಲಿ ಕೇಳಿದರೇ ನಿಮ್ಮ ಉತ್ತರ ಅಲ್ಲಿ ಸಿಗುತ್ತದೆ ಎಂದು ಹೇಳಿದರು.
ಮಳೆಗೆ ಕಳಚುತ್ತಿವೆ ರಾಮೇಶ್ವರ ದೇಗುಲ ಗೋಪುರದ ಗೊಂಬೆಗಳು
ಕಾವೇರಿ ನದಿ ದಂಡೆಯಲ್ಲಿರುವ ಶ್ರೀ ರಾಮೇಶ್ವರಸ್ವಾಮಿ ದೇವಾಲಯದ 5 ಯುಗಗಳ ಕಾಲದಾಗಿದ್ದು, ಕೃತಯುಗದಲ್ಲಿ ಸಂವರ್ತಕೇಶ್ವರ, ತ್ರೇತಾಯುಗದಲ್ಲಿ ವಾಸುಕೀಶ್ವರ, ದ್ವಾಪರಯುಗದಲ್ಲಿ ವಹ್ನಿಶ್ವರ ಹಾಗೂ ಈ ಕಲಿಯುಗದಲ್ಲಿ ರಾಮೇಶ್ವರಸ್ವಾಮಿ ಎಂದು ಕರೆಸಿಕೊಳ್ಳುತ್ತಿರುವ ( ಹಿಂದೆ ಅಗ್ನಿಯಿಂದ ಪೂಜಿಸಲ್ಪಟ್ಟ ) ಈ ಶಿವಲಿಂಗವೂ ಚತುರ್ಯುಗಮೂರ್ತಿ ಎಂದೇ ಪ್ರಖ್ಯಾತ. ಮಹರ್ಷಿ ಭೃಗುಗಳ ಶಾಪಕ್ಕೆ ಗುರಿಯಾದ ಅಗ್ನಿಯನ್ನು ಸಾನುರಾಗದಿಂದ ಪೊರೆದ ಶ್ರೀ ರಾಮೇಶ್ವರನ ಮಹಿಮೆ ಇರುವ ಇಂತಹ ದೇವಾಲಯದ ಜಿರ್ಣೋದ್ಧಾರದ ಪ್ರಗತಿಗೆ ಸಹಕರಿಸುವಂತೆ ದೇವಾಲಯದ ಸಮಿತಿ ಮಾಜಿ ಸದಸ್ಯ ರಘು ಒತ್ತಾಯಿಸಿದರು.
ದೇಶಕ್ಕಾಗಿ ತ್ಯಾಗ ಮಾಡಿದವರು ನಮಗೆ ಹೀರೋಗಳಾಗಬೇಕು
ಭಾರತದ ಗಡಿಯಲ್ಲಿ ವೀರ ಮರಣವನ್ನಪ್ಪುವ ಹಾಗೂ ವೀರಯೋಧರ ತಾಯಂದಿರು, ದೇಶ ಕಾಯುವ ವೀರ ಸೈನಿಕರು, ಮಣ್ಣಲ್ಲಿ ಮಣ್ಣಾಗಿ, ಮೈ ಬಣ್ಣ ಮಣ್ಣಿಗೆ ಕೊಟ್ಟು, ಮಣ್ಣಿನ ಬಣ್ಣ ತಾನು ತೆಗೆದುಕೊಳ್ಳುವ ಅನ್ನದಾತ ರೈತರು, ರಾಷ್ಟ್ರದ ಏಳಿಗೆ ಬಯಸಿ ರಾಷ್ಟ್ರಕ್ಕಾಗಿ ದುಡಿಯುವ ನಾಯಕರು ಹಾಗೂ ದೇಶವೇ ಹೆಮ್ಮೆಪಡುವಂತೆ ಮಾಡುವ ವಿಜ್ಞಾನಿಗಳು ನಮ್ಮ ಬದುಕಿನ ಹೀರೋಗಳಾಗಬೇಕೆಂದು ಮಲ್ಲದೇವರಪುರ ವಿರಕ್ತ ಮಠದ ಶ್ರೀ ಮಹಾಂತ ಬಸವಲಿಂಗ ಸ್ವಾಮೀಜಿ ಸಲಹೆ ನೀಡಿದರು.
ಮದುವೆಗೆ ಮುನ್ನ ಪರೀಕ್ಷೆ ಬರೆದ ವಧು
ಸ್ಥಳೀಯ ನಗರಸಭೆ ಮಾಜಿ ಸದಸ್ಯ ಸಿ.ಯೂನಸ್ ಸಾಬ್ ಹಾಗೂ ಹಾಲಿ ಸದಸ್ಯೆ ರೇಷ್ಮಾ ಬಾನು ದಂಪತಿ ಪುತ್ರಿ ಆಲ್ಫಿಯಾ ಬಾನು ಮತ್ತು ರುಹಿತ್‌ಪಾಷ ನಡುವೆ ಇಂದು ಮದುವೆ ನಿಗದಿಯಾಗಿತ್ತು. ಆದರೆ ಇದೇ ದಿನ ವಧುವಿಗೆ ವಾರ್ಷಿಕ ಪರೀಕ್ಷೆಯೂ ನಿಗದಿಯಾಗಿತ್ತು. ಆಲ್ಫಿಯಾ ಬಾನು ನಗರದ ರಾಯಲ್ ಇನ್ಸ್ಟಿಟ್ಯೂಟ್ ಆಫ್ ಕಾರ್ಮಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ಓದುತ್ತಿದ್ದು, ೬ನೇ ಸೆಮಿಸ್ಟರ್ ಪರೀಕ್ಷೆ ಗುರುವಾರವೇ ಇತ್ತು. ಮದುವೆ ಕಾರಣಕ್ಕೆ ಪರೀಕ್ಷೆಗೆ ತಪ್ಪಿಸಿಕೊಳ್ಳದ ವಧು, ನಿಖಾಗೂ ಮುನ್ನವೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ಪರೀಕ್ಷೆ ಬರೆದಳು. ನಂತರ ಶಾದಿ ಮಹಲ್‌ಗೆ ತೆರಳಿ, ಮಾಂಗಲ್ಯ ಧಾರಣೆ ಮಾಡಿಸಿಕೊಂಡು ವೈವಾಹಿಕ ಜೀವನಕ್ಕೆ ಅಡಿ ಇಟ್ಟಳು.
ಕ್ಷಮೆ ಕೋರಲು ಕಮಲ್‌ ಹಾಸನ್‌ಗೆ ಆಗ್ರಹ
ತಮಿಳು ನಟ ಕಮಲ ಹಾಸನ್ ತಮ್ಮ ಚಿತ್ರದ ಬಿಡುಗಡೆ ಪ್ರಚಾರ ಸಂದರ್ಭದಲ್ಲಿ ತಮಿಳಿನಿಂದ‌ ಕನ್ನಡ‌ ಹುಟ್ಟಿತು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ಕನ್ನಡ ಜನತೆಗೆ ಮಾಡಿದ ಅವಮಾನವಾಗಿದ್ದು, ಈ ಕೂಡಲೇ ಸಾರ್ವತ್ರಿಕವಾಗಿ ಅವರು ಕ್ಷಮಯಾಚನೆ ಮಾಡಬೇಕು ಎಂದು ತಾಲೂಕು ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ವಿ ಎಸ್ ಭೋಜೇಗೌಡ ಆಗ್ರಹಿಸಿದ್ದಾರೆ. "ಥಗ್ ಲೈಫ್ " ಅನ್ನೋ ತಮಿಳು ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಈ ರೀತಿ ಹೇಳಿಕೆ ನೀಡಿರುವುದು ಸರಿಯಾದ ಕ್ರಮವಲ್ಲ ಎಂದರು.
ಶಿರಾಡಿ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಹೊಣೆ ಕೇಂದ್ರದ್ದು
ರಾಷ್ಟ್ರೀಯ ಹೆದ್ದಾರಿ 75ರ ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇರವಾಗಿ ಕೇಂದ್ರಸರ್ಕಾರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಾಮಗಾರಿ ಗುತ್ತಿಗೆ ನೀಡುವುದರಿಂದ ಹಿಡಿದು ಮೇಲ್ವಿಚಾರಣೆಯನ್ನು ಕೇಂದ್ರ ಸರ್ಕಾರವೇ ನಡೆಸುತ್ತಿದೆ. ಆದ್ದರಿಂದ, ಇಲ್ಲಿನ ಎಲ್ಲ ಅವಘಡಗಳಿಗೂ ಕೇಂದ್ರವೇ ಹೊಣೆ. ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ವಹಿಸುವಂತೆ ಹಾಗೂ ವೇಗವಾಗಿ ಮುಗಿಸುವಂತೆ ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬಹುದೇ ಹೊರತು ಮತ್ಯಾವ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದರು.
ಐರವಳ್ಳಿ ಸೊಸೈಟಿ ಮಾಲೀಕನಿಗೆ ತಹಸೀಲ್ದಾರ್‌ ಎಚ್ಚರಿಕೆ
ಪಡಿತರ ದಾಸ್ತಾನು ಅಕ್ಕಿ ವಿತರಣೆ ವಿಳಂಬಕ್ಕೆ ಗ್ರಾಮಸ್ಥರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಹಸೀಲ್ದಾರ್‌ ಎಂ ಮಮತಾ ಭೇಟಿ ನೀಡಿ, ಪರಿಶೀಲಿಸಿ ಆಹಾರ ವಿತರಣೆ ದಾಸ್ತಾನು ಮಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದರು. ತಾಲೂಕಿನ ಐರವಳ್ಳಿ ಗ್ರಾಮದಲ್ಲಿದಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರ ನಿಗದಿಪಡಿಸಿದ ಸಮಯದಲ್ಲಿ ಬಾಗಿಲು ತೆಗೆಯದೆ ನ್ಯಾಯಬೆಲೆ ಅಂಗಡಿ ಮಾಲೀಕ ಶಾಂತಕುಮಾರ್ ವಿತರಿಸಿರುವ ಅಕ್ಕಿ ಸರಿಯಾದ ಸಮಯಕ್ಕೆ ಕೊಡದೆ ವಿಳಂಬ ಮಾಡುತ್ತಿದ್ದು, ಇದರಿಂದ ಗ್ರಾಮೀಣ ಭಾಗದ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಅಕ್ಕಿ ಇದ್ದರೂ ಕೊಡದೆ ಸತಾಯಿಸುತ್ತಿದ್ದಾರೆ ಎಂದು ಐರವಳ್ಳಿ ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಅನಾರೋಗ್ಯದಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವ ಪತ್ತೆ
ಜೋಡಿಗುಬ್ಬಿ ಮೀಸಲು ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜೋಡಿಗುಬ್ಬಿ ಗ್ರಾಮದ ನಿವಾಸಿ ರಾಜೇಗೌಡ ಬಿನ್ ಸುಬ್ಬೇಗೌಡ(64) ಸಾವನ್ನಪ್ಪಿದ ವ್ಯಕ್ತಿ. ಇವರು ಗಂಟಲು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, 2 ತಿಂಗಳಿಂದ ಕಾಣೆಯಾಗಿದ್ದರು. ಕುಟುಂಬದವರು ಸಂಬಂಧಿಕರ ಮನೆ ಎಲ್ಲೆಡೆ ಹುಡುಕಿದರೂ ಪತ್ತೆಯಾಗಿರಲಿಲ್ಲ. ಈ ಕುರಿತು ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಬುಧವಾರ ಅರಣ್ಯ ಇಲಾಖೆ ಸಿಬ್ಬಂದಿ ಅರಣ್ಯವನ್ನು ಸುತ್ತುತ್ತಿದ್ದ ವೇಳೆ ಮರದ ಬಳಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 551
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved