• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್ ಬೋರ್ಡ್‌ ಬಿಲ್ ತಿದ್ದುಪಡಿಗೆ ಆಗ್ರಹಿಸಿ ಸೋಮವಾರ ಪ್ರತಿಭಟನೆ
ಅಸಂವಿಧಾನಿಕ ವಕ್ಫ್ ಬೋರ್ಡ್‌ ಬಿಲ್ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಡಿ. 16ರ ಸೋಮವಾರ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ನವಲಗುಂದ್ ತಿಳಿಸಿದರು. ಗ್ರಾಮದೇವತೆ ಶ್ರೀ ಕರಿಯಮ್ಮ ದೇವಾಲಯದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಲಿದ್ದು ನಗರದ ಪಿ.ಪಿ. ವೃತ್ತದಲ್ಲಿ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ನಿಗಮಗಳಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ನಿಗಮಗಳಿಗೆ ಈ ಹಿಂದೆ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ೧೬೦೦ ಕೋಟಿ ರು. ಗಳನ್ನು ಕೂಡಲೇ ಬಿಡುಗಡೆ ಮಾಡಿ, ಇಲ್ಲವಾದರೆ ನಿಗಮಗಳನ್ನು ಮುಚ್ಚಿಬಿಡಿ ಎಂದು ಆಗ್ರಹಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಘಟಕದಿಂದ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಲಕ್ಕಾಗಿ ೬೦೬೫ ಅರ್ಜಿಗಳು ಸಲ್ಲಿಕೆಯಾದರೂ ಒಂದು ಪೈಸೆ ಹಣವು ಕೂಡಾ ಬಿಡುಗಡೆ ಮಾಡದೇ ಇರುವುದು ಈ ರೀತಿ ಹಿಂದುಳಿದ ವರ್ಗಗಳ ಮಕ್ಕಳಿಗೆ ಮಾಡಿರುವ ಅನ್ಯಾಯವನ್ನು ಬಿಜೆಪಿ ಹಾಸನ ಜಿಲ್ಲೆ ಹಿಂದುಳಿದ ವರ್ಗಗಳ ಮೋರ್ಚಾ ಬಲವಾಗಿ ಖಂಡಿಸುತ್ತದೆ ಎಂದರು.
ಬೇಲೂರು ಪುರಸಭೆ ಅಧ್ಯಕ್ಷ ವಿರುದ್ಧ ವಾಮಾಚಾರ
ನಾನು ಯಾರಿಗೂ ಕೇಡು ಬಗೆಯುವನಲ್ಲ, ನನ್ನ ಪಕ್ಷದವರೇ ನನ್ನ ವಿರುದ್ಧ ಮಾತನಾಡುತ್ತಿದ್ದು ಅಭಿವೃದ್ಧಿ ಕೆಲಸಗಳಿಗೂ ನನ್ನ ಪಕ್ಷದ ಸದಸ್ಯರೇ ಅಡ್ಡಗಾಲು ಹಾಕುತ್ತಿದ್ದಾರೆ. ಇಂತಹ ಮಾಟ ಮಂತ್ರಗಳಿಗೆ ಹೆದರುವವನು ನಾನಲ್ಲ. ಭಗವಂತನ ಆಶೀರ್ವಾದ ನನಗಿದೆ. ಇದಕ್ಕೆಕಾಲವೇ ಉತ್ತರ ಕೊಡುತ್ತದೆ. ತಮ್ಮ ಕೊಠಡಿ ಸಮೀಪ ಇರುವ ಮರಕ್ಕೆ ಮಂತ್ರಿಸಿದ ನಿಂಬೆಹಣ್ಣು, ತಾಯತ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಾಕಿದ್ದು, ವಾಮಾಚಾರ ನಡೆಸಲಾಗಿದೆ ಎಂದು ಪುರಸಭೆ ಅಧ್ಯಕ್ಷ ಎ.ಆರ್ ಅಶೋಕ್ ದೂರಿದ್ದಾರೆ.
ಗೋಬಿ ಮಾರುವ ವ್ಯಕ್ತಿಗೆ ಇರುವಷ್ಟು ನೆಮ್ಮದಿ ನಮಗೆ ಸರ್ಕಾರಿ ನೌಕರರಿಗೆ ಇಲ್ಲ
ಅಧಿಕಾರಿಗಳ ಒತ್ತಡದಿಂದ ಹೆಂಡತಿ, ಮಕ್ಕಳನ್ನು ದೇವಾಲಯಕ್ಕೂ ಕರೆದುಕೊಂಡು ಹೋಗುವಷ್ಟು ಯೋಗ್ಯತೆ ಇಲ್ಲವಾಗಿದೆ. ಗೋಬಿ ಮಂಚೂರಿ ಮಾರಾಟ ಮಾಡುವ ವ್ಯಕ್ತಿಗೆ ಇರುವಷ್ಟು ನೆಮ್ಮದಿ ಇಂದು ನಮಗೆ ಸರ್ಕಾರಿ ನೌಕರರಿಗೆ ಇಲ್ಲವೆಂದು ಬೇಸರ ಹಾಗೂ ಅಸಹಾಯಕತೆಯಿಂದ ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ನುಡಿದರು. ಜಿಲ್ಲಾ ನೌಕರರ ಸಮಸ್ಯೆ ಕುರಿತು ದನಿ ಎತ್ತಿ ಸಮರ್ಪಕವಾಗಿ ಮಾತಾಡಬೇಕು ಮತ್ತು ಸರ್ಕಾರಿ ನೌಕರರ ನೋವು, ಅನುಭವಿಸುತ್ತಿರುವ ಸಂಕೀರ್ಣತೆ, ಬೇಡಿಕೆ ಹಾಗೂ ಅವರುಗಳ ಹಿತವನ್ನು ಸಮರ್ಪಕವಾಗಿ ಕಾಯಬೇಕು ಎಂದು ನೂತನ ಸದಸ್ಯರಿಗೆ ಸಲಹೆ ನೀಡಿದರು.
ಜನರು ಎಚ್ಐವಿ ಕಾಯಿಲೆ ಹರಡದಂತೆ ಜಾಗೃತರಾಗಿರಬೇಕು
ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾಕ್ಕೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಚಂಪಾಶ್ರೀ, 2ನೇ ಅಧಿಕ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಎಂ.ರಘು, ತಾಲೂಕು ಆರೋಗ್ಯ ಅಧಿಕಾರಿ ಡಾ. ಪುಷ್ಪಲತಾ ಅವರು ಚಾಲನೆ ನೀಡಿದರು. ಶುದ್ಧೀಕರಿಸಿರುವಂತ ಹೊಸದಾದ ಸೂಜಿಯನ್ನು ಬಳಸಬೇಕು. ಪರೀಕ್ಷಿಸಿದ ರಕ್ತವನ್ನು ಸ್ವೀಕರಿಸಬೇಕು. ಈ ಎಲ್ಲಾ ವಿಧಾನಗಳನ್ನು ಅಳವಡಿಸುವುದರಿಂದ ಎಚ್ಐವಿ ಕಾಯಿಲೆಯನ್ನು ತಡೆಗಟ್ಟಬಹುದು ಎಂದು ತಿಳಿಸಿದರು.
ಯಾರಿಗೂ ನೋವಾಗದಂತೆ ಎಸ್‌ ಎಂ ಕೃಷ್ಣ ರಾಜಕಾರಣ
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಮುಖಂಡರು ಎರಡು ನಿಮಿಷ ಮೌನ ಆಚರಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವುದರ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡರಾದ ಇ. ಎಚ್. ಲಕ್ಷ್ಮಣ್ ಮಾತನಾಡಿ, ನಮ್ಮ ರಾಜ್ಯದಲ್ಲಿ ಎರಡು ಜನ ಸರಳ ಸಜ್ಜನಿಕೆಯ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ ಮತ್ತು ಎಸ್.ಎಂ. ಕೃಷ್ಣ ಇಬ್ಬರಲ್ಲೂ ಕೂಡ ಒಂದು ರೀತಿಯ ಹೊಂದಾಣಿಕೆ ಇದ್ದವರು. ಯಾವತ್ತು ಕೂಡ ಯಾರಿಗೂ ನೋವಾಗದ ರೀತಿ ರಾಜಕಾರಣ ಮಾಡಿಕೊಂಡವರು ಎಂದರು.
ಆಲೂರು ನಿಲ್ದಾಣದಲ್ಲಿ ರೈಲು ನಿಲುಗಡೆ ರದ್ದು
ಕಳೆದ ಹಲವು ವರ್ಷಗಳ ಸಾರ್ವಜನಿಕರ ಹಾಗೂ ವಿವಿಧ ಸಂಘ ಸಂಸ್ಥೆಗಳ ನಿರಂತರ ಹೋರಾಟದ ಫಲವಾಗಿ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಪ್ಯಾಸೆಂಜರ್‌ ರೈಲುಗಳ ನಿಲುಗಡೆ ಮಾಡಲಾಗಿತ್ತು. ಆದರೆ ಕಳೆದ ಮೂರು ನಾಲ್ಕು ದಿನಗಳಿಂದ ಇಲಾಖೆಯವರು ಟಿಕೆಟ್ ಸಂಗ್ರಹದ ಹಣ ಕಡಿಮೆ ಆಯಿತು ಎಂಬ ಕಾರಣಕ್ಕೆ ರೈಲುಗಳ ನಿಲುಗಡೆಯನ್ನು ರದ್ದುಗೊಳಿಸಿದ್ದಾರೆ. ಆದರೆ ಆಲೂರಿನಲ್ಲಿ ನಿಲುಗಡೆ ರದ್ದುಗೊಳಿಸಿರುವುದು ರೈಲ್ವೆ ಇಲಾಖೆಯವರಿಗೆ ತಿಳಿದಿದೆಯೋ ಇಲ್ಲವೋ ಅಥವಾ ಇಲಾಖೆಯವರಲ್ಲಿಯೇ ಸಂವಹನ ಇಲ್ಲವೇ ಎಂಬುದು ತಿಳಿಯದಾಗಿದೆ.
ಹಿಂದೂ ಸಮಾಜಕ್ಕೆ ಗಟ್ಟಿಯಾಗಿ ನಿಲ್ಲುವ ಶಕ್ತಿ ಇದೆ
ಹಿಂದೂ ಸಮಾಜ ಈ ಹಿಂದಿಗಿಂತಲೂ ಜಾಗೃತವಾಗಿದ್ದರು ಸಹ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ ಸವಾಲುಗಳನ್ನು ಎದುರಿಸಿ ಗಟ್ಟಿಯಾಗಿ ನಿಲ್ಲುವ ಶಕ್ತಿ ಹಿಂದೂ ಸಮಾಜಕ್ಕಿದೆ ಎಂದು ಪ್ರಾಂತ ಧರ್ಮ ಪ್ರಸಾರ ಪ್ರಮುಖ್ ಸುನೀಲ್ ಕಾರ್ಕಳ ಹೇಳಿದರು. ದೇಶದಲ್ಲಿ ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಭಯೋತ್ಪಾದನೆಗಳು ನಡೆಯುತ್ತಿದ್ದು ಜೊತೆಗೆ ಮತಾಂತರ ಸಹ ಮಾಡಲಾಗುತ್ತಿದೆ. ಈ ಎಲ್ಲಾ ಸವಾಲುಗಳನ್ನು ಎದುರಿಸಬೇಕಾದ ಅನಿವಾರ್ಯತೆ ಇಂದು ಹಿಂದೂ ಸಮಾಜಕ್ಕಿದೆ ಎಂದರು.
ಶ್ರೀ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ
ಹನುಮ ಜಯಂತಿ ಪ್ರಯುಕ್ತ ನಗರದ ರೈಲ್ವೆ ನಿಲ್ದಾಣದ ಎದುರು ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶುಕ್ರವಾರ ಬೆಳಿಗ್ಗಿನಿಂದ ಸಂಜೆವರೆಗೂ ವಿವಿಧ ಸೇವಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆಯನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಸಂಜೆ ೭:೩೦ಕ್ಕೆ ಮಾರುತಿ ಉತ್ಸವ ನಗರದಲ್ಲಿ ಸಾಗಿತು. ರಾತ್ರಿ ೯:೩೦ಕ್ಕೆ ಮಹಾಮಂಗಳಾರತಿ ಹಾಗೂ ಲಾಲಿ ಕಾರ್ಯಕ್ರಮ ನೆರವೇರಿಸಲಾಯಿತು.
ಬೆಂಬಲ ಬೆಲೆಯಡಿ ರಾಗಿ ಮಾರುವವರು ಡಿ.31ರೊಳಗೆ ನೋಂದಾಯಿಸಿಕೊಳ್ಳಿ
ಪ್ರಸಕ್ತ ಸಾಲಿಗೆ ಕನಿಷ್ಠ ಬೆಂಬಲ ಬೆಲೆಯಡಿ ಗುಣಮಟ್ಟದ ರಾಗಿ ಖರೀದಿಗಾಗಿ ತಾಲೂಕಿನ ರೈತರು ಡಿ.೩೧ರೊಳಗೆ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ರೈತರು ತಾಲೂಕು ಕೇಂದ್ರ ಸೇರಿದಂತೆ ನುಗ್ಗೇಹಳ್ಳಿ, ಉದಯಪುರ, ಶ್ರವಣಬೆಳಗೊಳ, ಬಾಗೂರು, ಮತ್ತು ಹಿರೀಸಾವೆಯ ಹೋಬಳಿಗಳಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ ಮತ್ತು ರೈತಸಂಪರ್ಕ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೇ ೫೦೭ ರೈತರು ನೋಂದಣಿ ಮಾಡಿಸಿಕೊಂಡಿದ್ದು, ಡಿ.೩೧ರವರೆಗೂ ನೋಂದಣಿಗೆ ಅವಕಾಶವಿದ್ದು, ಶೀಘ್ರು ನೋಂದಣಿಗೆ ಮುಂದಾಗಬೇಕು ಎಂದರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved