• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ವಿಧಾನ ಸಭೆಯಲ್ಲಿ ಬಿಜೆಪಿ ಪಕ್ಷದ ೧೮ ಶಾಸಕರನ್ನು ಅಮಾನತುಗೊಳಿಸುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದು, ಶಾಸಕರ ಹಕ್ಕನ್ನು ಮೊಟುಕುಗೊಳಿಸುವ ಸ್ಪೀಕರ್ ನಡೆ ಸಂವಿಧಾನ ಬಾಹಿರವಾಗಿದೆ.
ಅಗ್ನಿ ಅವಘಡದಲ್ಲಿ ಮೃತರಾದ ಮಹಿಳೆಯರ ಮನೆಗೆ ಡೀಸಿ ಭೇಟಿ
ಮೃತ ಮಂಗಳ ಅವರ ಮಗ ಚಿರಂತ್ (23) ಬಿಎಸ್ಸಿ ಮುಗಿದಿದೆ. ಮುಂದೆ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಏನು ಸಹಕಾರ ಬೇಕೋ ಖಂಡಿತವಾಗಿ ಮಾಡಿ, ನೈತಿಕವಾಗಿ ಜೊತೆಯಲ್ಲಿ ಇರುತ್ತವೆ ಎಂದು ತಿಳಿಸಿದರು .
ಸಿದ್ಧಗಂಗಾ ಶ್ರೀ ಬದುಕು ಮುಂದಿನ ಪೀಳಿಗೆಗೆ ಮಾರ್ಗದರ್ಶನ: ತೇಜ್ ಪಾಲ
ತ್ರಿವಿಧ ದಾಸೋಹದ ಮೂಲಕ ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಸರ್ವರಿಗೂ ವಿದ್ಯೆ, ವಸತಿ, ದಾಸೋಹ ನೀಡಿದ ಹೆಗ್ಗಳಿಕೆಗೆ ಸಿದ್ಧಗಂಗಾ ಪೂಜ್ಯರು ಪಾತ್ರರಾಗಿದ್ದಾರೆ.
ಪ್ರಸಕ್ತ ಮುಂಗಾರು ಹಂಗಾಮಿನ ತಂಬಾಕು ಬೆಳೆಗೆ ಸಿದ್ಧತೆ
ರಾಮನಾಥಪುರ ತಂಬಾಕು ಮಾರುಕಟ್ಟೆಯಲ್ಲಿ ಅತ್ತ ಹರಾಜು ಪ್ರಕ್ರಿಯೆ ಮುಕ್ತಾಯ ಹಂತ ತಲುಪಿದ್ದರೆ ಇತ್ತ ರೈತರು ಸಕಾಲದಲ್ಲಿ ನಾಟಿ ಮಾಡುವ ಸಲುವಾಗಿ ಸಸಿ ಮಡಿ ಬೆಳೆಸಲು ಉತ್ಸುಕರಾಗಿದ್ದಾರೆ. ಮುಖ್ಯವಾಗಿ ವೈಜ್ಞಾನಿಕವಾಗಿ ಬೆಳೆ ಬೆಳೆದು ಉತ್ತಮ ಇಳುವರಿ ಜತೆಗೆ ಗುಣಮಟ್ಟದ ಉತ್ಪಾದನೆಗೆ ಕೈಗೊಳ್ಳುವ ನಿಟ್ಟಿನಲ್ಲಿ ರೈತರು ಟ್ರೇ ಸಸಿ ಮಡಿ ಬಿತ್ತನೆಗೆ ಒಲವು ತೋರುತ್ತಿರುವುದು ಕಂಡುಬಂದಿದೆ. ಗಿಡಗಳು ತೇವಾಂಶದ ಕೊರತೆ ನೀಗಿ ಬೇಗನೆ ಬೆಳವಣಿಗೆ ಕಾಣಲು ಸಾಧ್ಯವಾಗುತ್ತದೆ ಎಂಬ ಕಾರಣಕ್ಕಾಗಿ ಹೆಚ್ಚಿನ ರೈತರು ಸಸಿ ಮಡಿಗಳನ್ನು ಟ್ರೇನಲ್ಲಿ ಬೆಳೆಸಲು ಮುಂದಾಗಿದ್ದಾರೆ.
ಸಂಘಟನೆ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕು
ಆಲೂರು ತಾಲೂಕಿನ ಪಾಳ್ಯ ಹೋಬಳಿಯ ಸಂಕಲಾಪುರ ಗ್ರಾಮದಲ್ಲಿ ರಾಜ್ಯ ಬೆಳೆಗಾರರ ಒಕ್ಕೂಟ, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘ, ತಾಲೂಕು ಕಾಫಿ ಬೆಳೆಗಾರರ ಸಂಘ ಮತ್ತು ಪ್ರಕೃತಿ ಸಣ್ಣ ಕಾಫಿ ಬಳಗದ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಂಘಟನೆ ಮೂಲಕ ಹೋರಾಡಿ ನಮಗೆ ದೊರಕಬೇಕಾದ ಹಕ್ಕುಗಳನ್ನು ಪಡೆಯಲು ಮುಂದಾಗಬೇಕು ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು. ಪ್ರಸಕ್ತ ಸಾಲಿನಲ್ಲಿ ಕಾಫಿ ಬೀಜಕ್ಕೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ವ್ಯಕ್ತವಾಗಿ ಬೆಳೆಗಾರರ ಕಷ್ಟ ಅಲ್ಪಸ್ವಲ್ಪ ಪರಿಹಾರವಾಗಿದೆ. ಭೂತಾಯಿ ಎಂದಿಗೂ ತನ್ನನ್ನು ನಂಬಿದವರನ್ನು ಕೈ ಬಿಡುವುದಿಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದರು.
ನಿಯಮಾನುಸಾರ ಪಡಿತರ ವಿತರಿಸದಿದ್ದರೆ ಕ್ರಮ
ಚನ್ನರಾಯಪಟ್ಟಣ ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಯಲ್ಲಿ ಕಡ್ಡಾಯವಾಗಿ ದರ ಪಟ್ಟಿಯನ್ನು ನಮೂದಿಸಬೇಕು ಹಾಗೂ ಕಡ್ಡಾಯವಾಗಿ ಎಲೆಕ್ಟ್ರಾನಿಕ್ಸ್ ತಕ್ಕಡಿ ಉಪಯೋಗಿಸಬೇಕು. ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ತೂಕದಲ್ಲಿ ವ್ಯತ್ಯಾಸ ಮಾಡುತ್ತಿರುವುದಾಗಿ ಕೆಲವು ಫಲಾನುಭವಿಗಳು ದೂರು ನೀಡಿದ್ದು, ಇನ್ನುಮುಂದೆ ಸರಿಪಡಿಸಿಕೊಳ್ಳದಿದ್ದಲ್ಲಿ ನ್ಯಾಯಬೆಲೆ ಅಂಗಡಿಗಳ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ವಕೀಲರಾದ ಎಲ್. ಪಿ ಪ್ರಕಾಶ್‌ ಗೌಡ ತಿಳಿಸಿದ್ದಾರೆ.
ಮಾನಸಿಕ ಆರೋಗ್ಯದಿಂದ ಮಾತ್ರ ಸಮಾಜದ ಸ್ವಾಸ್ಥ್ಯ ಸಾಧ್ಯ
ಮಾನಸಿಕ ಆರೋಗ್ಯದಿಂದ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯವಿದ್ದು, ಇದರಿಂದ ಅಪರಾಧ ಮುಕ್ತ ಪರಿಸರ ನಿರ್ಮಾಣ ಮಾಡಬಹುದು ಎಂದು ಜಿಲ್ಲಾ ನ್ಯಾಯಾಧೀಶರಾದ ಹೇಮಾವತಿ ತಿಳಿಸಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀ ವಿಶ್ವವಿದ್ಯಾಲಯದ ಬಾಬಣ್ಣರವರು ಮಾತನಾಡಿ, ಉತ್ತಮ ಹವ್ಯಾಸಗಳಿಂದ ನಮ್ಮಲ್ಲಿರುವ ಕಲ್ಮಶಗಳನ್ನು ತೊಡೆಯಲು ಸಾಧ್ಯವಿದೆ. ನಮ್ಮ ಮಾನಸಿಕ ಸ್ಥಿಮಿತತೆಯಿಂದ ಕೆಟ್ಟ ಆಲೋಚನೆಗಳನ್ನು ನಿಯಂತ್ರಿಸಬಹುದು. ಯೋಗಾಭ್ಯಾಸವು ನಿರಂತರ ಪ್ರಕ್ರಿಯೆಯಾಗಬೇಕು ಎಂದು ಹೇಳಿದರು.
ಆಹಾರ ಸುರಕ್ಷತಾಧಿಕಾರಿಗಳ ಭೇಟಿ ಪರಿಶೀಲನೆ
ಸಾಂಕ್ರಾಮಿಕ ರೋಗಗಳ ತಡೆ ಹಾಗೂ ಆಹಾರ ಸುರಕ್ಷತೆ, ಶುಚಿತ್ವ ಮತ್ತು ಗುಣಮಟ್ಟ ಕುರಿತು ಪಟ್ಟಣದ ಹೋಟೆಲ್‌ಗಳ ಮೇಲೆ ಆಹಾರ ಸುರಕ್ಷಿತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಜನಸಾಮಾನ್ಯರ ಆರೋಗ್ಯ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಮಾಲೀಕರು ಮತ್ತು ವ್ಯಾಪಾರಸ್ಥರು ಗ್ರಾಹಕರಿಗೆ ಉತ್ತಮವಾದ ಮತ್ತು ಶುದ್ಧವಾದ ಒಳ್ಳೆ ಗುಣಮಟ್ಟದ ತಿಂಡಿ ಪದಾರ್ಥ ಮತ್ತು ಆಹಾರವನ್ನು ನೀಡಬೇಕು, ಹೋಟೆಲ್‌ಗಳಲ್ಲಿ ಸಾರ್ವಜನಿಕರಿಗೆ ಶುದ್ಧವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ತಿಳಿಸಿದರು.
ಉತ್ತಮ ಸಮಾಜ ನಿರ್ಮಾಣದಲ್ಲಿ ಸ್ಕೌಟ್ಸ್‌ ಗೈಡ್ಸ್‌ ಪಾತ್ರವಿದೆ
ಸ್ಕೌಟ್ಸ್ ಗೈಡ್ಸ್ ಚಳವಳಿ ಹುಟ್ಟಿರುವುದೇ ಜೀವನ ಮೌಲ್ಯಗಳನ್ನು ಬಿತ್ತಿ ಬದುಕನ್ನು ಉದಾತ್ತವಾಗಿಸುವುದಕ್ಕಾಗಿ, ಸ್ಕೌಟ್ ಅಥವಾ ಗೈಡ್ ಎಂದರೆ ನಂಬಿಕೆಗೆ ಅರ್ಹವಾಗಿರುವುದು, ತಾನು ಭರವಸೆ ನೀಡಿದ್ದನ್ನು ಸಾಧ್ಯವಾದಷ್ಟು ಸಾಧಿಸಲು ಪ್ರಯತ್ನಿಸುತ್ತಾನೆ. ತನ್ನ ನಾಯಕ, ದೇಶಕ್ಕೆ ನಿಷ್ಠನಾಗಿರುವುದು. ಇತರರಿಗೆ ಸಹಾಯ ಮಾಡುವುದು, ಸಮಾಜದ ಇತರೆ ಸಂಗಡಿಗರಿಗೆ ಸಹೋದರ-ಸಹೋದರಿಯ ಸ್ಥಾನಮಾನ ನೀಡಿ ಸಾಮಾಜಿಕ ವರ್ಗದ ವ್ಯತ್ಯಾಸಗಳನ್ನು ಲೆಕ್ಕಿಸದೇ ಸಹಾಯ ಮಾಡುತ್ತಾರೆ. ವಿನಯಶೀಲ ಗುಣವನ್ನು ಹೊಂದಿ ಎಲ್ಲರಿಗೂ ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರಿಗೆ ಸಭ್ಯ ಮತ್ತು ಸಹಾಯಕವಾಗಿರುವುದು.
ಜನಪದ ಸೊಗಡನ್ನು ಉಳಿಸಲು ಯುವಜನಾಂಗ ಮುಂದಾಗಬೇಕು
ಜನಪದ ಕಲೆಗಳು ಈ ಮಣ್ಣಿನ ಸಂಸ್ಕೃತಿಗಳು, ರಂಗಭೂಮಿ, ಜನಪದ ಗೀತೆಗಳು, ಕಲಾ ನೃತ್ಯಗಳು, ಸೋಬಾನೆ ಪದಗಳು, ಹರಿಕಥೆಗಳು, ಸೇರಿದಂತೆ ಮುಂತಾದ ಕಲೆಗಳನ್ನು ಇಂದಿನ ಯುವಸಮೂಹ ಕಲಿಯುವ ಮೂಲಕ ಜನಪದ ಸೊಗಡನ್ನು ಉಳಿಸುವಲ್ಲಿ ಮುಂದಾಗಬೇಕೆಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಆಧುನೀಕತೆಯ ಭರಾಟೆಯಲ್ಲಿ ಜನಪದ ಸಂಸ್ಕೃತಿ ಅಳಿಯಲು ಅವಕಾಶ ನೀಡಬಾರದು. ಜನಪದ ಸಂಸ್ಕೃತಿ ಅಳಿದರೆ ನಮ್ಮತನವನ್ನು ನಾವು ಕಳೆದುಕೊಂಡಂತೆ, ಜನಪದ ಸೊಗಡಿನಲ್ಲೇ ಭಾರತೀಯ ಮೂಲ, ಪರಂಪರೆಯ ಸತ್ಯ ಅಡಗಿದೆ. ಹಾಗಾಗಿ ಆಧುನಿಕತೆ ಭರಾಟೆಗೆ ಸಿಲುಕಿ ಇಂತಹ ಮಾತೃ ಸಂಸ್ಕೃತಿ ಅಳಿಯಲು ಬಿಡಬಾರದು. ಜನಪದ ಸಂಸ್ಕೃತಿ ಉಳಿಸಿ ಪೋಷಿಸಬೇಕು ಎಂದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved