• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆನೆ ದಾಳಿಯಿಂದ ಸಾವಿಗೀಡಾದ ಮಹಿಳೆ ಕುಟುಂಬಕ್ಕೆ ಸಾಂತ್ವನ
ಬಿಕ್ಕೋಡು ಹೋಬಳಿಯ ಅಂಕಿಹಳ್ಳಿ ಗ್ರಾಮದ ಡಾ. ಕರಣ್ ಅವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಗಜೇಂದ್ರಪುರದ ಚಂದ್ರಮ್ಮ ಅವರ ಮೇಲೆ ಏಕಾಎಕಿ ಕಾಡಾನೆ ದಾಳಿ ಮಾಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಶಾಸಕ ಎಚ್ ಕೆ ಸುರೇಶ್ ಮೃತ ಚಂದ್ರಮ್ಮ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೆ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಹರಿಹಾಯ್ದರು. ಆನೆ ದಾಳಿಯಿಂದ ಸಾವಿಗೀಡಾದ ಕೂಲಿ ಕಾರ್ಮಿಕ ಮಹಿಳೆ ಚಂದ್ರಮ್ಮ ನಿವಾಸಕ್ಕೆ ಶಾಸಕ ಹುಲ್ಲಳ್ಳಿ ಸುರೇಶ್ ಭೇಟಿ ನೀಡಿ ಸಾಂತ್ವನ ಹೇಳಿದರು.
ಜಾಕನಹಳ್ಳಿಯಲ್ಲಿ ಗ್ರಾಮದೇವತೆಗಳ ಸಿಡಿ ಜಾತ್ರಾ ಮಹೋತ್ಸವ
ಜಾಕನಹಳ್ಳಿಯಲ್ಲಿ ಗಂಗೆಪೂಜೆ ನೆರವೇರಿಸಿ, ಕಳಸ ಹೊತ್ತ ಸುಮಂಗಲಿಯರು ಗ್ರಾಮದೇವತೆ ಶ್ರೀ ಸೀಗೆಮೆಳ್ಳಿಯಮ್ಮ ದೇವಾಲಯಕ್ಕೆ ಆಗಮಿಸಿದರು. ನಂತರ ಶ್ರೀದೇವಿಯ ಮೂಲ ಮೂರ್ತಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ನೈವೇದ್ಯ ನೆರವೇರಿಸಿ, ಸಂಪ್ರದಾಯದ ಆಚರಣೆಯಂತೆ ಪೂಜಿಸಲಾಯಿತು. ಶನಿವಾರ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ, ಮಂಗಳಾರತಿ ನೆರವೇರಿಸಿ, ದೇವಾಲಯದ ಪ್ರಾಂಗಣದಲ್ಲಿ ಉತ್ಸವ ನಡೆಸಲಾಯಿತು. ಜಾಕನಹಳ್ಳಿಯ ೩ ಸಿಡಿ ರಥಗಳು ಹಾಗೂ ಗುಡ್ಡೇನಹಳ್ಳಿಯ ಒಂದು ಸಿಡಿ ರಥವನ್ನು ವಿಶೇಷವಾಗಿ ಅಲಂಕರಿಸಿ, ಸಂಪ್ರದಾಯದ ಆಚರಣೆಯಂತೆ ೧೦೧ ಎಡೆ ಸಮರ್ಪಿಸಿ ಪೂಜಿಸಲಾಯಿತು.
ಕಾವೇರಿ ನದಿ ನೀರಿನ ಮಟ್ಟ ಏರಿಕೆ
ಮಳೆ ಅರ್ಭಟದಿಂದ ಜನರು ಮನೆಯಿಂದ ಹೊರಹೋಗಲು ಹಿಂದೇಟು ಹಾಕುತ್ತಿದ್ದಾರೆ. ಪಟ್ಟಣದ ಸಂತೆಯಲ್ಲಿ ದಿನವಿಡೀ ಸುರಿದ ಮಳೆಗೆ ವ್ಯಾಪಾರಸ್ಥರು ಸಮಸ್ಯೆ ಅನುಭವಿಸುವಂತಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಕರು ತಮ್ಮ ಜಮೀನಿನಲ್ಲಿ ಬಿತ್ತನೆ ಹಾಗೂ ವ್ಯವಸಾಯ ಮಾಡಲು ಮಳೆ ಅಡ್ಡಿಯಾಗುತ್ತಿದೆ. ಕೆಲವು ರೈತರು ಸುರಿಯುವ ಮಳೆಯಲ್ಲಿಯೇ ಲೆಕ್ಕಿಸದೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದರು. ಈ ಭಾಗದಲ್ಲಿ ಹೆಚ್ಚು ಬೆಳೆಯುವ ತಂಬಾಕು ಮುಸುಕಿನ ಜೋಳ, ರಾಗಿ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ಮಳೆ ಜಲಾವೃತವಾಗಿದ್ದು, ಬೆಳೆಹಾನಿ ಭೀತಿ ಆವರಿಸಿದೆ‌. ಜಮೀನಿನಲ್ಲಿ ನಿತ್ತಿದ್ದ ನೀರು ಹೊರಕಳಿಸಲು ರೈತರು ಹರಸಾಹಸಪಡುವಂತಾಗಿದೆ.
ಮಳೆ ಮುಂದುವರಿದಲ್ಲಿ ಈ ವರ್ಷವೂ ಪ್ರವಾಹ ಗ್ಯಾರಂಟಿ
ಹೊಳೆನರಸೀಪುರ ತಾಲೂಕಿನಲ್ಲಿ ಕಳೆದ ೨೪ ಗಂಟೆಯಲ್ಲಿ ವಾಡಿಕೆಯಂತೆ ೧೫.೪೦ ಮಿ.ಮೀ. ಮಳೆಯಾಗಬೇಕಿತ್ತು, ಆದರೆ ೧೦೩.೮೦ ಮಿ.ಮೀ. ಮಳೆಯಾಗಿದ್ದು, ೬.೭೪ ಪಟ್ಟು ಹೆಚ್ಚು ಮಳೆಯಾಗಿದೆ ಜತೆಗೆ ಸೋಮವಾರ ಮುಂಜಾನೆ ೬ ಗಂಟೆಗೆ ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ೨೮೯೯.೯೦ (೨೮೮೦.೩೧) ಅಡಿಗಳು ಇದ್ದು, ಗರಿಷ್ಠ ಮಟ್ಟ ೨೯೨೨.೦೦ ಅಡಿಗಳಾಗಿದ್ದು, ಇದೇ ರೀತಿ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ್ದಲ್ಲಿ ಈ ವರ್ಷವೂ ಪ್ರವಾಹ ಗ್ಯಾರಂಟಿ, ಆದ್ದರಿಂದ ತಾಲೂಕು ಆಡಳಿತ ಮುಂಜಾಗ್ರತೆ ಕ್ರಮಗಳಿಗೆ ಆದ್ಯತೆ ನೀಡಬೇಕಿದೆ.
ಸಮಾನ ಸೌಲಭ್ಯ ಬೇಡಿಕೆ ಈಡೇರಿಕೆಗೆ ಆಗ್ರಹ
ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು. ೨೯ರಂದು ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತೇವೆ. ೩೦ರಂದು ಜಿಲ್ಲಾಮಟ್ಟದಲ್ಲಿ ತರಗತಿ ಬಹಿಷ್ಕಾರ ಮಾಡುತ್ತೇವೆ. ೩೧ರಂದು ಪಾದಯಾತ್ರೆ ನಡೆಸಿ ಆಯಾ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ಇಷ್ಟಕ್ಕೂ ಸೂಕ್ತ ರೀತಿಯ ಸ್ಪಂದನೆ ಸಿಗದೇ ಹೋದರೆ ಜೂ. ೨ರಿಂದ ರಾಜ್ಯಾದ್ಯಂತ ಡಿಸಿ ಕಚೇರಿಗಳ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನ ಮಾಡಿದ್ದೇವೆ ಎಂದು ವಿವರಿಸಿದರು.
ಕೌಶಲ್ಯದಿಂದ ಮಕ್ಕಳ ಯಶಸ್ಸು ಸಾಧ್ಯ
ಇಂದು ರೊಬೋಟ್‌ಗಳು, ಕೃತಕ ಬುದ್ಧಿಮತ್ತೆಗಳೇ ಜ್ಞಾನದ ಭಂಡಾರವಾಗಿವೆ. ೨೧ನೇ ಶತಮಾನದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಯಲ್ಲಿ ಶಿಕ್ಷಕರು ಸಾಕಷ್ಟು ವಿಷಯಗಳನ್ನು ತಿಳಿದುಕೊಳ್ಳುವುದು ಅವಶ್ಯಕ. ವಿದ್ಯಾರ್ಥಿಗಳಿಗೆ ಹೊಸ ಆವಿಷ್ಕಾರಗಳ ಬಗೆ ತಿಳಿಸಬೇಕಾದರೇ ಅಧ್ಯಯನ ಅಗತ್ಯ, ಪ್ರಪಂಚದ ಯಾವ ದೇಶದಲ್ಲಿ ಏನಾಗುತ್ತಿದೆ ಎಂಬುದರ ಜ್ಞಾನ ತಿಳಿದಿರಬೇಕು. ಆಗ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡುತ್ತಾರೆ ಎಂದರು.
ಜವರಿಕೊಪ್ಪಲು ಮಕ್ಕಳಿಗೆ ಕೊಟ್ಟಿಗೆಯೇ ಅಂಗನವಾಡಿ
ಹೊಳೆನರಸೀಪುರ ತಾಲೂಕಿನ ಜವರಿಕೊಪ್ಪಲು ಗ್ರಾಮದಲ್ಲಿ ಕಳೆದ ಏಳೆಂಟು ವರ್ಷಗಳಿಂದ ಕುಂಟುತ್ತಾ ಸಾಗುತ್ತಿರುವ ಅಂಗನವಾಡಿ ಕಟ್ಟಡವು ಬಣ್ಣದಿಂದ ಕಂಗೊಳಿಸುತ್ತಿದ್ದರೂ, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಉದ್ಘಾಟನೆಯ ಭಾಗ್ಯ ಕಾಣದೇ, ಪುಟ್ಟಮಕ್ಕಳ ಕಲಿಕೆಗೆ ಕೊಟ್ಟಿಗೆ ಭಾಗ್ಯವೇ ಗತಿಯಾಗಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಕಲಿಯುವ ತವಕದ ಪುಟ್ಟಮಕ್ಕಳ ಕೊಟ್ಟಿಗೆ ಭಾಗ್ಯಕ್ಕೆ ಮುಕ್ತಿ ಕಾಣಿಸಲು ಹಿರಿಯ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕಿದೆ.
ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿದರೆ ಮುಂದಿನ ಭವಿಷ್ಯ ಉಜ್ವಲ
ಕಾಲೇಜಿನ ಹಂತಕ್ಕೆ ಮಕ್ಕಳು ಬಂದಾಗ ಪೋಷಕರು ಸ್ನೇಹಿತರಂತೆ ಕಂಡು ಉತ್ತಮ ಸಂಸ್ಕಾರ ಕಲಿಸಿದರೆ ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆ ಆಗುತ್ತಾರೆ. ಜೊತೆಗೆ ಮಕ್ಕಳಲ್ಲೂ ಕೂಡ ಒಂದು ಗುರಿ ಇದ್ದು, ಸಾಧನೆ ಮಾಡುವ ಛಲ ಇದ್ದರೇ ಏನಾದರೂ ಸಾಧನೆ ಮಾಡಲು ಸಾಧ್ಯ ಎಂದು ವಾಗ್ಮಿಗಳಾದ ಜಿ.ಎಸ್. ಮಂಜುನಾಥ್ ಅಭಿಪ್ರಾಯಪಟ್ಟರು. ಪಿಯುಸಿ ಎನ್ನುವ ಮೆಟ್ಟಿಲು ಮಕ್ಕಳಿಗೆ ಮುಖ್ಯವಾಗಿದ್ದು, ಈ ವೇಳೆ ನಿಮ್ಮ ಮನಸ್ಸು ಬೇರೆಡೆಗೆ ತಿರುಗದಂತೆ ಗಮನವಹಿಸಿದರೇ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ ಎಂದು ಸಲಹೆ ನೀಡಿದರು.
ಅವಧಿಗೂ ಮುನ್ನ ಆರಂಭವಾದ ಮಳೆಯಿಂದ ಸಮಸ್ಯೆ
ಕಾಮಗಾರಿ ಕೈಗೆತ್ತಿಕೊಂಡಿರುವ ರಾಜ್‌ಕಮಲ್ ಕಂಪನಿಯ ನೀಡಿರುವ ಗುತ್ತಿಗೆ ಅವಧಿ ೨೦೨೩ ಮಾರ್ಚ್ ಅಂತ್ಯಕ್ಕೆ ಕೊನೆಗೊಂಡಿದ್ದು, ಈ ಅವಧಿಯ ವೇಳೆಗೆ ಸಕಲೇಶಪುರದವರೆಗಿನ ೩೫ ಕಿ.ಮೀ. ಕಾಮಗಾರಿ ಮುಕ್ತಾಯಗೊಂಡಿದ್ದು ಸಕಲೇಶಪುರದಿಂದ- ಹೆಗ್ಗದ್ದೆ ಗ್ರಾಮದವರೆಗಿನ ಕಾಮಗಾರಿ ಸದ್ಯ ಪ್ರಗತಿಯ ಹಂತದಲ್ಲಿದೆ. ಈ ಬಾರಿಯ ಮಳೆಗಾಲದ ವೇಳೆಗೆ ಕಾಮಗಾರಿ ಮುಗಿಸುವ ಗುರಿಯೊಂದಿಗೆ ಬೇಸಿಗೆಯಲ್ಲಿ ಶರವೇಗದಲ್ಲಿ ಕಾಮಗಾರಿ ನಡೆಸಲಾಯಿತಾದರೂ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ.
ಮುಂಜಾಗ್ರತಾ ಸಿದ್ಧತೆಗಳಿಗೂ ಜಡಿಮಳೆ ಅಡ್ಡಿ
ಮುಂಗಾರು ಮಳೆ ಮುನ್ನ ಮಲೆನಾಡಿಗರು ಸಾಕಷ್ಟು ಸಿದ್ಧತೆಮಾಡಿಕೊಳ್ಳಬೇಕಿದೆ. ಸಾಮಾನ್ಯವಾಗಿ ಜೂನ್ ಎರಡನೇ ವಾರದ ನಂತರ ಮುಂಗಾರು ಚುರುಕು ಪಡೆಯುವುದು ವಾಡಿಕೆ. ಆದರೆ, ಈ ಬಾರಿ ಆರಂಭದಿಂದಲೂ ಉತ್ತಮ ಮಳೆಯಾಗುತ್ತಿದ್ದು ಅನಿರೀಕ್ಷಿತವಾಗಿ ಆರಂಭವಾದ ವಾಯುಭಾರ ಕುಸಿತ ಮಳೆಗಾಲದ ನೆನಪು ಸೃಷ್ಟಿಸಿದೆ. ಇದರೊಂದಿಗೆ ಮೇ ೨೮ರಿಂದ ಮುಂಗಾರು ಆರಂಭಗೊಳ್ಳಲಿದೆ ಎಂಬ ಹವಾಮಾನ ಇಲಾಖೆಯ ವರದಿ ಮಲೆನಾಡಿಗರ ಜಂಗಾಬಲವನ್ನೆ ಉಡುಗಿಸಿದೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 551
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved