• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೂವನಹಳ್ಳಿ ಸೊಸೈಟಿಗೆ ಬೊಮ್ಮೇಗೌಡ ನೂತನ ಅಧ್ಯಕ್ಷ
ಇದೇ ಮೊದಲ ಬಾರಿಗೆ ಸಾಲಗಾರರಲ್ಲದ ಕ್ಷೇತ್ರದಿಂದ ಸ್ಪರ್ಧಿಸಿ ಕೇವಲ ೧ ಮತದ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದ ಬಿ.ಆರ್‌.ಬೊಮ್ಮೇಗೌಡ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದರು. ಚುನಾವಣೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಒಟ್ಟು ೧೧ ಸದಸ್ಯ ಬಲದ ಸಂಘದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ.ಆರ್‌.ಬೊಮ್ಮೇಗೌಡ ಹಾಗೂ ಗಣೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಂದ್ರಮ್ಮ ಹಾಗೂ ವಿಜಯಲಕ್ಷ್ಮಿ ಎಂಬುವರು ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಬಿ.ಆರ್‌. ಬೊಮ್ಮೇಗೌಡ ಹಾಗೂ ವಿಜಯಲಕ್ಷ್ಮಿ ಅವರು ತಲಾ ೬ ಮತ ಪಡೆದು ಆಯ್ಕೆಯಾದರು.
ಬೇಲೂರು ಪುರಸಭೆ ವಾಣಿಜ್ಯ ಮಳಿಗೆ ಮರು ಟೆಂಡರ್‌ ಕರೆಯಲು ಮನವಿ
ಬೇಲೂರು ಪುರಸಭೆ ಮಳಿಗೆಯಲ್ಲಿ ಅಕ್ರಮವಾಗಿ ನಡೆದಿದ್ದ ಇ -ಟೆಂಡರ್ ಹರಾಜು ಪ್ರಕ್ರಿಯೆ ಸರಿಇಲ್ಲ ಎಂದು ಸಾಮಾಜಿಕ ಹೋರಾಟಗಾರರಾದ ವೆಂಕಟೇಶ್, ಸತೀಶ್, ತೊಟೇಶ್ ಸೇರಿದಂತೆ ಇತರರು ನ್ಯಾಯಾಲಯದಲ್ಲಿ ಹೊಸದಾಗಿ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅದರಂತೆ ನ್ಯಾಯಾಲಯದ ಆದೇಶದ ಮೇರೆಗೆ ತೀರ್ಪು ಹೊರಬಂದಿದ್ದು, ಹಿಂದೆ ನಡೆದ ಇ ಟೆಂಡರ್ ಪ್ರಕ್ರಿಯೆ ಸರಿಇಲ್ಲದೆ ಇರುವುದರಿಂದ ಅದನ್ನು ರದ್ದುಮಾಡಲಾಗಿ ಮರು ಹೊಸ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಮನವಿ ಮಾಡಿದ್ದಾರೆ.
ದೇವರ ದಾಸಿಮಯ್ಯ ಬಸವಾದಿ ಶರಣರಿಗೂ ಮಾರ್ಗದರ್ಶಕರು
ನೇಯ್ಗೆ ಕಾಯಕದ ಅವತಾರ ಪುರುಷ ದೇವರ ದಾಸಿಮಯ್ಯ ಅವರಾಗಿದ್ದಾರೆ, ಇವರು ಬಸವಾದಿ ಶರಣರಿಗೂ ಮಾರ್ಗದರ್ಶಕರಾಗಿದ್ದವರು, ನೇಯ್ಗೆ ವೃತ್ತಿಯಿಂದ ಕಾಯಕಕ್ಕೆ ಬುನಾದಿ ಹಾಕಿದವರು, ವಚನ ಸಾಹಿತ್ಯಕ್ಕೆ ಪೀಠಿಕೆ ಬರೆದು ಮುನ್ನುಡಿ ಹಾಕಿದವರು ದೇವರ ದಾಸಿಮಯ್ಯ, ಶರಣರ ತತ್ವಗಳನ್ನು ಪ್ರಚಾರ ಮಾಡಿದವರಾಗಿದ್ದಾರೆ. ಬಸವಣ್ಣನವರು ಕೂಡ ಇವರ ಕುರಿತು ವಚನಗಳಲ್ಲಿ ಹಾಡಿ ಹೊಗಳಿದ್ದಾರೆ. ದೇವರ ದಾಸಿಮಯ್ಯ ಅವರು ಕೇವಲ ಒಂದು ಜಾತಿ ಧರ್ಮಕ್ಕೆ ಸೀಮಿತವಾಗದೆ ಸಮಸ್ತ ಕುಲ ಕೋಟಿಗೆ ಸೇರಿದವರಾಗಿದ್ದಾರೆ. ಇವರು ವಚನ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದು ಎಂದು ನಗರಸಭೆಯ ಅಧ್ಯಕ್ಷ ಚಂದ್ರೇಗೌಡ ಅವರು ತಿಳಿಸಿದ್ದಾರೆ.
ಸ್ಥಗಿತಗೊಂಡಿದ್ದ ಎತ್ತಿನಹೊಳೆ ನಾಲೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಹಸಿರು ನಿಶಾನೆ
ಹಬ್ಬನಘಟ್ಟ ರೈಲ್ವೆ ನಿಲ್ದಾಣ ಹಾಗೂ ಮೈಲನಹಳ್ಳಿ ಗ್ರಾಮದ ಕೂಗಳತೆ ದೂರದಲ್ಲಿ ಸ್ಥಗಿತಗೊಂಡಿದ್ದ ಎತ್ತಿನಹೊಳೆ ನಾಲೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿದೆ. ಸದ್ಯದ ಬೆಳವಣಿಗೆಯಿಂದಾಗಿ ಬಹುಕಾಲದಿಂದ ನೆನಗುದಿಗೆ ಬಿದ್ದಿದ್ದ ದೊಡ್ಡಮಟ್ಟದ ಕೆಲಸ ಮೊದಲ ಹಂತದಲ್ಲಿ ಹಬ್ಬನಘಟ್ಟ ಬಳಿ ಮಂಗಳವಾರ ಆರಂಭವಾಗಿದೆ. ಅರಸೀಕೆರೆ, ಹಾಸನ ಮಾರ್ಗವಾಗಿ ಮೈಸೂರು ಹಾಗೂ ಅರಸೀಕೆರೆ- ಬೆಂಗಳೂರು ಸಂಪರ್ಕಿಸುವ ರೈಲ್ವೆ ಮಾರ್ಗದಲ್ಲಿ ನಾಲೆ ಹಾದು ಹೋಗಬೇಕಿದ್ದ ಹಿನ್ನಲೆಯಲ್ಲಿ ಅನುಮತಿ ಪಡೆಯವುದು ಕಡ್ಡಾಯವಾಗಿತ್ತು.
ದಾಸಿಮಯ್ಯ ಮೆರವಣಿಗೆಗೆ ಚಾಲನೆ
ಶ್ರೀ ದೇವರ ದಾಸಿಮಯ್ಯ ಜಯಂತಿಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಾಸಕರಾದ ಸ್ವರೂಪ್ ಪ್ರಕಾಶ್ ಹಾಗೂ ಜಿಲ್ಲಾಧಿಕಾರಿ ಸತ್ಯಭಾಮ ಸಿ ಅವರು ದೇವರ ದಾಸಿಮಯ್ಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು ಜಯಂತಿಗೆ ಹೆಚ್ಚು ಮಹಿಳೆಯರು ಬಂದಿರುವುದು ವಿಶೇಷವಾಗಿದೆ, ನೇಕಾರ ಸಮಾಜ ಆರ್ಥಿಕವಾಗಿ, ರಾಜಕೀಯವಾಗಿ ಬೆಳೆಯಲಿ ಎಂದು ಆಶಿಸಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.
ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಸಮೀಕ್ಷೆ ತಂಡ ಭೇಟಿ
ಬಸವಾಪಟ್ಟಣ ಆರೋಗ್ಯ ಕೇಂದ್ರದಲ್ಲಿ ದೊರೆಯುತ್ತಿರುವ ಹೆರಿಗೆ ಸೌಲಭ್ಯ ಹೊರರೋಗಿಗಳ ವಿಭಾಗದ ಚಿಕಿತ್ಸೆ ಸಿಬ್ಬಂದಿ ವರ್ಗದವರ ಮಾಹಿತಿ, ಕಡತಗಳ ಪರೀಶಿಲನೆ ಆರೋಗ್ಯಕೇಂದ್ರದಲ್ಲಿ ಸ್ವಚ್ಛತೆ ಮೊದಲಾದ ಅಂಶಗಳನ್ನು ತಂಡವು ಅವಲೋಕಿಸಿದ್ದು, ಆರೋಗ್ಯ ಕೇಂದ್ರವನ್ನು ಉತ್ತಮವಾಗಿ ನಿರ್ವಹಣೆ ಮಾಡಲಾಗಿದ್ದು, ಭೇಟಿ ನೀಡಿದ ತಂಡವು ಆರೋಗ್ಯ ಕೇಂದ್ರಾಡಳಿತ ಅಧಿಕಾರಿಗಳಿಗೆ ಕೇಂದ್ರ ಸೂಚನೆಗಳನ್ನು ಸಹ ನೀಡಿತು. ಉತ್ತಮ ನಿರ್ವಹಣೆ ಎಂದು ಆರೋಗ್ಯ ಕೇಂದ್ರತಂಡವು ಅಭಿಪ್ರಾಯ ವ್ಯಕ್ತಪಡಿಸಿತು.
ಬೇಲೂರು ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನೂತನ ಅಧ್ಯಕ್ಷರ ಪದಗ್ರಹಣ
ಬೇಲೂರು ಪಟ್ಟಣದ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಅಧಿಕಾರ ಸ್ವೀಕರಿಸಿ ಮಾತನಾಡಿ, ಬೇಲೂರು ಅರ್ಬನ್ ವ್ಯಾಪ್ತಿಯಲ್ಲಿ ಪ್ರತಿಷ್ಠಿತ ಬ್ಯಾಂಕ್ ಆಗಿ ಹೆಸರುಗಳಿಸಿದ್ದು ಷೇರುದಾರರ ಹಾಗೂ ನಿರ್ದೇಶಕರು ಸೇರಿದಂತೆ ಸಿಬ್ಬಂದಿಯ ಸಹಕಾರದೊಂದಿಗೆ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ನೂತನ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಪೈಂಟ್ ರವಿ ತಿಳಿಸಿದರು.
ಹೆಬ್ಬಾಳು ಗ್ರಾಪಂ ಅವ್ಯವಹಾರ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ
ಹೆಬ್ಬಾಳು ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ಕೇಳಲು ಹೋದರೆ ಅಧ್ಯಕ್ಷ ಮತ್ತು ಪಿಡಿಒ ಸಾರ್ವಜನಿಕರೊಂದಿಗೆ ಉಡಾಫೆ ಉತ್ತರ ನೀಡುತ್ತಿದ್ದು, ಇಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಪಿಡಿಒ ಅವರನ್ನು ಅಮಾನತು ಮಾಡಬೇಕು ಎಂದು ದೊಡ್ಡಬ್ಯಾಡಿಗೆರೆ ಗ್ರಾಮಸ್ಥರು ಪಂಚಾಯಿತಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿ ಆಡಳಿತ ಮಂಡಳಿ ಮತ್ತು ಅಧಿಕಾರಿಗಳಿಗೆ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬೆಲೆ ಏರಿಕೆ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ
ಸರ್ಕಾರದ ಜನ ವಿರೋಧಿ ಬೆಲೆ ಏರಿಕೆ ವಿರೋಧಿಸಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಕಾರ್ಯಕರ್ತರು ಬುಧವಾರ ಕೊಣನೂರಿನ ಸಿದ್ದಾಪುರ ಗೇಟ್‌ನಲ್ಲಿ ರಸ್ತೆ ಮಧ್ಯೆ ನಿಂತು ಪ್ರತಿಭಟನೆ ನಡೆಸಿದರು. ಒಂದೇ ಬಾರಿಗೆ ಒಂದು ಲೀಟರ್‌ಗೆ ನಾಲ್ಕು ರು. ಹೆಚ್ಚಿಸಿದ್ದಾರೆ. ಒಟ್ಟಾರೆ ಒಂದೇ ವರ್ಷದಲ್ಲಿ ಹಾಲಿಗೆ ಒಂದು ಲೀಟರ್‌ಗೆ 9 ರು. ಹೆಚ್ಚಿಸಿದ್ದಾರೆ. ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಿಸಿದ್ದಾರೆ. ಇದರಿಂದ ಸಣ್ಣ, ಮಧ್ಯಮ ವರ್ಗದ ಜನ ಜೀವನ ಮಾಡಲು ಸಾಧ್ಯವಿಲ್ಲದೆ ಉಸಿರುಗಟ್ಟುವ ಸ್ಥಿತಿ ಬಂದಿದೆ. ನೋವು ಅನುಭವಿಸುತ್ತಿರುವ ಜನಪರ ನಿಲ್ಲುವ ಪರಿಸ್ಥಿತಿ ಉದ್ಭವವಾಗಿದೆ ಎಂದರು.
ಬೇಲೂರು ರಥೋತ್ಸವದ ಹಿನ್ನೆಲೆ ಮುಂಜಾಗ್ರತಾ ಕ್ರಮಗಳು
ಶ್ರೀ ಚನ್ನಕೇಶವ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈಗ ಬೇಸಿಗೆ ಕಾಲವಾಗಿರುವುದರಿಂದ ನೀರು ಮತ್ತು ಆಹಾರದಿಂದ ಹರಡುವ ಕಾಯಿಲೆಗಳಾದ ಅತಿಸಾರಭೇದಿ, ಕಾಲರ, ವಿಷಮಶೀತ ಜ್ವರ, ಆಮಶಂಕೆ, ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತ ಕ್ರಮವಹಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕೋರಲಾಯಿತು. ಭಕ್ತಾದಿಗಳಿಗೆ ಅನ್ನದಾಸೋಹ ನೀಡುವ ಸಮಯದಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಹಾಗೂ ಅಡುಗೆ ಸಿಬ್ಬಂದಿಯವರಿಗೆ ಅಡುಗೆಗೆ ಬಳಸುವ ಪಾತ್ರೆಗಳು ನೀರು ಇನ್ನಿತರೆ ದಿನಸಿ ಸಾಮಗ್ರಿಗಳನ್ನು ಬಳಸುವಾಗ ಸ್ವಚ್ಛತೆಯನ್ನು ಕಾಪಾಡುವಂತೆ ತಿಳಿಸಿದರು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved