• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಯುಮಾಲಿನ್ಯ ತಡೆಗಟ್ಟದಿದ್ದರೆ ಅಪಾಯ ತಪ್ಪಿದ್ದಲ್ಲ
ವಾಯುಮಾಲಿನ್ಯದಿಂದ ಇತ್ತೀಚಿನ ದಿನಗಳಲ್ಲಿ ಹಲವಾರು ರೀತಿಯ ತೊಂದರೆಗಳು ಹೆಚ್ಚಾಗುತ್ತಿದ್ದು ಇದನ್ನು ತಡೆಯದಿದ್ದರೆ ಮುಂದಿನ ದಿನದಲ್ಲಿ ಅಪಾಯ ತಪ್ಪಿದ್ದಲ್ಲ ಮತ್ತು ಶುದ್ಧ ಗಾಳಿಯನ್ನು ಹಣ ನೀಡಿ ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣ ಆಗದಂತೆ ಜವಾಬ್ದಾರಿಯ ವರ್ತನೆ ನಮ್ಮ ಮೇಲಿದೆ ಎಂದು ಪರಿಸರವಾದಿ ರಾಮಚಂದ್ರ ಎಚ್ಚರಿಸಿದರು. ಸರ್ಕಾರ ವಾಯು ಮಾಲಿನ್ಯದ ಅಪಾಯದ ಬಗ್ಗೆ ಎಚ್ಚರಿಸಿದ್ದು, ಎಲ್ಲಾ ಶಾಲೆಗಳಲ್ಲಿ ಅಮ್ಮನ ಹೆಸರಲ್ಲಿ ಒಂದು ಸಸಿ ನೆಟ್ಟು ಬೆಳೆಸಿ ಎಂದು ಹೇಳುತ್ತಿದೆ. ಪರಿಸರ ಸಮತೋಲನಕ್ಕೆ ಶೇ.೬೫ ರಷ್ಟು ಅರಣ್ಯ ಪ್ರದೇಶ ಇರಬೇಕು, ಆದರೆ ಅರಣ್ಯ ಪ್ರದೇಶ ಶೇ.೩೫ರಷ್ಟು ಮಾತ್ರ ಇದ್ದು, ಅಪಾಯವನ್ನು ಸೂಚಿಸುತ್ತಿದೆ ಎಂದರು.
ಎತ್ತಿನಹೊಳೆ ನಾಲೆಗೆ ಹಾರಿ ರೈತ ಆತ್ಮಹತ್ಯೆ
ಎತ್ತಿನಹೊಳೆ ಭೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ರೈತನೊಬ್ಬ ಎತ್ತಿನಹೊಳೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ತಾಲೂಕಿನ ಮಾದೀಹಳ್ಳಿ ಹೋಬಳಿಯ ವಡ್ಡರಹಳ್ಳಿ ಕೊಪ್ಪಲ ಗ್ರಾಮದ ರಂಗಸ್ವಾಮಿ( ೫೫) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಎತ್ತಿನಹೊಳೆ ಕಾಮಗಾರಿ ನಿಲ್ಲಿಸಿ ಸಂಬಂಧಪಟ್ಟ ಅಧಿಕಾರಿಗಳು ಬರುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಆಗ್ರಹಿಸಿದರು.
ನೈತಿಕತೆಯ ಸಮಾಜ ನಿರ್ಮಾಣವಾಗಬೇಕು
ಜಾತಿ, ಉಪಜಾತಿ ಎನ್ನುತ್ತ ಸಂಘಟನೆಗಳೇ ವಿಘಟನೆಯಾಗುತ್ತ ಸಾಗುತ್ತಿವೆ, ಜಾತ್ಯತೀತ ಸಂಘಟನೆ ಇಂದು ಅಗತ್ಯ ಇದೆ ಎಂದು ಹುಬ್ಬಳ್ಳಿ ಆರ್ಷ ವಿದ್ಯಾಕೇಂದ್ರದ ಶ್ರೀ ಸ್ವಾಮಿ ಚಿದ್ರುಪಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ನಾವು ರಾಜಕೀಯದಿಂದ ಬಹು ದೂರ ಇದ್ದೇವೆ. ಸಾಮಾಜಿಕ ಸೇವೆಯೇ ನಮ್ಮ ಗುರಿಯಾಗಿದೆ ನಮ್ಮಲ್ಲಿ ಹಣವಿಲ್ಲ ದಾನಿಗಳ ನೆರವಿನಲ್ಲಿ ಆಶ್ರಮ ನಡೆಯುತ್ತಿದೆ. ನಮ್ಮಲ್ಲಿ ಆರ್ಥಿಕ ದುರ್ಬಲ ವರ್ಗದ ಮತ್ತು ಶಿಕ್ಷಣ ವಂಚಿತ ಮಕ್ಕಳನ್ನು ಆಶ್ರಮಕ್ಕೆ ಕರೆತಂದು 10ನೇ ತರಗತಿಯವರೆಗೆ ವ್ಯಾಸಂಗವನ್ನು ನೀಡುತ್ತಿದ್ದೇವೆ ಎಂದರು.
ದಿನ ಬೆಳಗಾದ್ರೆ ಪ್ರಧಾನಿ ಬೈಯ್ಯುತ್ತಿದ್ದರೆ ಅನುದಾನ ಎಲ್ಲಿಂದ ಬರುತ್ತೆ
ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಬರಬೇಕಾದ ಅನುದಾನ ತರುವಲ್ಲಿ ದೇವೇಗೌಡರು, ಕುಮಾರಸ್ವಾಮಿ ಕಿಂಚಿತ್ತೂ ಪ್ರಯತ್ನ ಮಾಡಿಲ್ಲ ಎಂದು ಆರೋಪ ಮಾಡುವ ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೇಂದ್ರದೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳುವ ಬದಲು ದಿನ ಬೆಳಗಾದರೆ ಪ್ರಧಾನಿಯನ್ನು ಬೈಯ್ಯುವುದರಲ್ಲೇ ಕಾಲಹರಣ ಮಾಡುತ್ತಿದೆ. ತನ್ನ ವೈಫಲ್ಯ ಇಟ್ಟುಕೊಂಡು ಮಾಜಿ ಪ್ರಧಾನಿಗಳಾಗಿ ದೇವೇಗೌಡರ ಸಾಕ್ಷಿಗುಡ್ಡೆ ಏನು ಎಂದು ಪ್ರಶ್ನಿಸುವ ಯಾವ ನೈತಿಕತೆ ಕಾಂಗ್ರೆಸಿಗಿದೆ ಎಂದು ಶಾಸಕ ರೇವಣ್ಣ ಪ್ರಶ್ನಿಸಿದರು.
ಪಠ್ಯಚಟುವಟಿಕೆಗಳ ಜೊತೆಜೊತೆಗೆ ಪ್ರಾಯೋಗಿಕ ಚಟುವಟಿಕೆಗಳು ಮುಖ್ಯ
ಸಸ್ಯಸಂಕುಲ ವಸ್ತು ಪ್ರದರ್ಶನ ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸುವ ಪ್ರಾಯೋಗಿಕ ಕಾರ್ಯ ಪೋಷಕರು ಮತ್ತು ಸಾರ್ವಜನಿಕರಿಂದ ಮೆಚ್ಚುಗೆ ಗಳಿಸಿದೆ ಎಂದು ಭಾಗ್ಯಾವಿದ್ಯಾ ಸಂಸ್ಥೆ ಅಧ್ಯಕ್ಷ ಕೆ.ಎಸ್ ಲಿಂಗೇಶ್ ತಿಳಿಸಿದ್ದಾರೆ. ಶಾಲಾ ಹಂತದಲ್ಲಿ ವಿದ್ಯಾರ್ಥಿಗಳ ಕಲಿಕೆ ಪಠ್ಯಚಟುವಟಿಕೆಗಳ ಜೊತೆಜೊತೆಗೆ ಪ್ರಾಯೋಗಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಜ್ಞಾನಾರ್ಜನೆ ಹೆಚ್ಚಿಸುತ್ತವೆ. ಅಂತಹ ಕಾರ್ಯವನ್ನು ಹರ್ಷ ಕಲ್ಪತರು ಶಾಲೆಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಸಂತೋಷ ತಂದಿದೆ ಎಂದು ತಿಳಿಸಿದರು.
ವಿವಿಧ ಮಳಿಗೆಗಳ ಹರಾಜಿಗೆ ಸಕಲೇಶಪುರ ಪುರಸಭೆ ತೀರ್ಮಾನ
ಪುರಸಭೆಯ ಕೆಲವು ಕಟ್ಟಡಗಳ ಹರಾಜು ಮಾಡಲು ಪುರಸಭೆ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪುರಸಭಾ ಅಧ್ಯಕ್ಷೆ ಜ್ಯೋತಿ ರಾಜ್‌ಕುಮಾರ್ ಹೇಳಿದರು. ಪುರಸಭಾ ವ್ಯಾಪ್ತಿಯೊಳಗೆ ೧೨ ವರ್ಷ ಅವಧಿ ಮುಗಿದಿರುವ ಮಳಿಗೆಗಳು, ಆಜಾದ್ ರಸ್ತೆಯಲ್ಲಿರುವ ಮೀನು ಹಾಗೂ ಕೋಳಿ ಮಾಂಸದ ಮಳಿಗೆಗಳು ಹಾಗೂ ಹಳೇ ಬಸ್ ನಿಲ್ದಾಣದಲ್ಲಿರುವ ಪುರಸಭೆಯ ನೂತನ ಕಟ್ಟಡವನ್ನು ಬಾಡಿಗೆಗಾಗಿ ಹರಾಜು ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಸಕಲೇಶಪುರದಲ್ಲಿ ಕಾಫಿ ಧಾರಣೆ ಏರಿಕೆ: ಬೆಳೆಗಾರರ ಸಂತಸ
ಸಕಲೇಶಪುರದಲ್ಲಿ ಇತಿಹಾಸ ಸೃಷ್ಟಿಸಿರುವ ಕಾಫಿ ಧಾರಣೆ ಕಂಡು ಖುದ್ದು ಕಾಫಿ ಬೆಳೆಗಾರರೇ ಈಗ ದಿಗ್ಮೂಢರಾಗಿದ್ದಾರೆ. ಹೌದು ಕಾಫಿ ಮಾರುಕಟ್ಟೆ ಇತಿಹಾಸದಲ್ಲೇ ಪ್ರಸಕ್ತ ವರ್ಷದ ಮಾರುಕಟ್ಟೆಯ ಆರಂಭದ ಬೆಲೆ ಅಧಿಕವಾಗಿದ್ದು ಮತ್ತಷ್ಟು ಬೆಲೆ ಏರಿಕೆಯಾಗುವ ಎಲ್ಲ ಲಕ್ಷಣಗಳು ದಟ್ಟವಾಗಿದೆ.
ಡಿಸೆಂಬರ್‌ 17ಕ್ಕೆ ಬೆಳಗಾವಿ ಅಧಿವೇಶನದಲ್ಲಿ ಬುದ್ಧಿಮಾಂದ್ಯರ ಸತ್ಯಾಗ್ರಹ: ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಶಂಕರ್
ಶ್ರವಣದೋಷವುಳ್ಳವರು ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ಎಲ್ಲಾ ಜಿಲ್ಲೆಯ ತಾಲೂಕಿನಲ್ಲಿರುವ ಕಿವುಡರು, ಬುದ್ದಿ ಮಾಂದ್ಯರು ಡಿ.೧೭ಕ್ಕೆ ಬೆಳಗಾವಿಗೆ ಬಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಕರ್ನಾಟಕ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಕೆ.ಎಚ್.ಶಂಕರ್ ತಿಳಿಸಿದರು. ಹಾಸನದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ೧೦ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗಿ: ಶಾಸಕ ಎಚ್.ಕೆ.ಸುರೇಶ್ (ಹುಲ್ಲಳ್ಳಿ)
ಕಂದಾಯ ಅದಾಲತ್ ಹಾಗೂ ಜನಸಂಪರ್ಕ ಕಾರ್ಯಕ್ರಮವನ್ನು ಹೋಬಳಿ ಮಟ್ಟದಲ್ಲಿ ಹಮ್ಮಿಕೊಂಡು ರೈತರ ಸಮಸ್ಯೆಗಳನ್ನು ಪರಿಹರಿಸುತ್ತಿರುವುದು ಆತ್ಮ ತೃಪ್ತಿ ತಂದಿದೆ ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ (ಹುಲ್ಲಳ್ಳಿ) ತಿಳಿಸಿದರು. ಅರಸೀಕೆರೆಯಲ್ಲಿ ಕಂದಾಯ ಅದಾಲತ್ ಹಾಗೂ ಜನಸಂಪರ್ಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಮಕ್ಕಳ ಸುಪ್ತ ಮನಸ್ಸನ್ನು ಜಾಗೃತಗೊಳಿಸುತ್ತದೆ: ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ
ವಿದ್ಯಾರ್ಥಿಗಳು ಪ್ರಾಮಾಣಿಕತೆ ಮತ್ತು ಸಭ್ಯತೆಯನ್ನು ಕಲಿಯಬೇಕು. ಇದನ್ನು ಕಲಿಸುವುರಲ್ಲಿ ಪೋಷಕರು ಹಾಗೂ ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು. ಆಗ ಮಾತ್ರ ನಾವು ಉತ್ತಮ ಸಮಾಜವನ್ನು ನಿರ್ಮಿಸಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಹೇಳಿದರು. ಬೇಲೂರಿನಲ್ಲಿ ವಿಜ್ಞಾನ ಮತ್ತು ಕರಕುಶಲ ವಸ್ತುಪ್ರದರ್ಶನವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved