• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಜೆಐ ಮೇಲೆ ಶೂ ಎಸೆತ ಖಂಡಿಸಿ ಪ್ರತಿಭಟನೆ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿಗೆ ವಕೀಲರೊಬ್ಬರು ಶೂ ಎಸೆದು ಅವಮಾನ ಮಾಡಿದ ಘಟನೆಗೆ ಖಂಡನೆ ವ್ಯಕ್ತಪಡಿಸಿ ಗುರುವಾರ ಪಟ್ಟಣದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂವಿಧಾನ ಉಳಿಯಬೇಕಾದರೆ ನಾವು ಒಗ್ಗಟ್ಟಿನಿಂದ ನಿಲ್ಲಬೇಕು. ದೇಶದ ಏಕತೆಯನ್ನು ಹಾಳುಮಾಡುವ ಶಕ್ತಿಗಳ ವಿರುದ್ಧ ಎಚ್ಚರಿಕೆಯಿಂದ ಇರಬೇಕು. ಭಾರತವು ಸರ್ವಧರ್ಮ ಸಮನ್ವಯ ರಾಷ್ಟ್ರವಾಗಿ ಉಳಿಯುವುದು ಎಲ್ಲರ ಹೊಣೆ ಎಂದು ಕರೆ ನೀಡಿದರು. ಭಾರತವು ಸರ್ವಧರ್ಮ ಸಮನ್ವಯ ರಾಷ್ಟ್ರವಾಗಿ ಉಳಿಯುವುದು ಎಲ್ಲರ ಹೊಣೆ ಎಂದು ಕರೆ ನೀಡಿದರು.
ಸಿಜೆಐ ಮೇಲೆ ಶೂ ಎಸೆತ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಬಿ.ಆರ್‌. ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದ ಘಟನೆ ಖಂಡಿಸಿ ಹಾಸನ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು “ನ್ಯಾಯದ ಗೌರವ ಕಾಪಾಡಿ” ಎಂಬ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರು ರಾಕೇಶ್ ಕಿಶೋರ್ ಅವರ ಈ ನಡೆ ಕಾನೂನು ವೃತ್ತಿಯ ಮಾನಹಾನಿಗೆ ಕಾರಣವಾಗಿದ್ದು, ನ್ಯಾಯಾಂಗದ ಗೌರವವನ್ನು ಹಾಳು ಮಾಡುವ ಕಾರ್ಯ ಎಂದು ಆರೋಪಿಸಿದರು. ಅಂತಹ ವರ್ತನೆಗೆ ತಕ್ಕ ಶಿಕ್ಷೆ ನೀಡುವ ಮೂಲಕ ನ್ಯಾಯಾಂಗದ ಗೌರವವನ್ನು ಉಳಿಸಬೇಕೆಂದು ಅವರು ಆಗ್ರಹಿಸಿದರು.
ಹೆಲಿ ಟೂರಿಸಂಗೆ ಜಿಲ್ಲಾ ಮಂತ್ರಿ ಚಾಲನೆ
ಆಗಸದಿಂದ ಹಾಸನ” ಹೆಲಿ ರೈಡ್‌ನಲ್ಲಿ ಭಾಗವಹಿಸುವವರಿಗೆ ಜಿಲ್ಲೆಯ ಶಿಲ್ಪಕಲೆಯ ಮಾಲೆಗಳು ಕಣ್ತುಂಬ ಸಿಗಲಿವೆ. ಬೇಲೂರು ಮತ್ತು ಹಳೇಬೀಡಿನ ಹೊಯ್ಸಳ ಶಿಲ್ಪ ವೈಭವ, ಶ್ರವಣಬೆಳಗೊಳದ ಬಾಹುಬಲಿ ಮಹಿಮೆ, ಮುಂಜಾಬಾದ್ ಕೋಟೆಯ ಪ್ರಾಚೀನತೆ, ಹೇಮಾವತಿ ಹಾಗೂ ಯಗಚಿ ಜಲಾಶಯದ ನೈರ್ಮಲ್ಯ, ಮೂಕನಮನೆ ಜಲಪಾತದ ನೈಸರ್ಗಿಕ ಸೌಂದರ್ಯ ಎಲ್ಲವೂ ಈ ಪ್ರವಾಸದಲ್ಲಿ ಸೇರಿವೆ. ಒಬ್ಬ ಪ್ರಯಾಣಿಕನಿಗೆ ೪,೩೦೦ ರು. ದರ ನಿಗದಿಪಡಿಸಲಾಗಿದೆ.
ಶಾಸ್ತ್ರೋಕ್ತವಾಗಿ ಬಾಗಿಲು ತೆಗೆದ ಹಾಸನಾಂಬೆ ದೇಗುಲ
ಪ್ರತಿ ವರ್ಷದಂತೆ ಈ ವರ್ಷವು ಕೂಡ ವಿಧಿವಿಧಾನದೊಂದಿಗೆ ಗುರುವಾರ ಮಧ್ಯಾಹ್ನ 12.15ಕ್ಕೆ ನಗರದ ಅಧಿದೇವತೆ ಶ್ರೀ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲು ತೆರೆಯಲಾಯಿತು. ಈ ವರ್ಷ ಎಲ್ಲಾ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ತೀರ್ಮಾನ ಮಾಡಲಾಗಿದ್ದು, ಬರುವಂತಹ ಶ್ರೀಸಾಮಾನ್ಯ ಭಕ್ತಾದಿಗಳಿಗೆ ದರ್ಶನದ ಅವಕಾಶ ಸಿಗಬೇಕು. ಸುಗಮ ದರ್ಶನ ಸಿಗಬೇಕು. ಅತಿಗಣ್ಯರ ದರ್ಶನ ಸಮಯ ಬೆಳಿಗ್ಗೆ ೧೦:೩೦ರಿಂದ ೧೨:೩೦ಕ್ಕೆ ನಿಗದಿ ಮಾಡಲಾಗಿದ್ದು, ಜಿಲ್ಲಾಡಳಿತ ವಾಹನದಿಂದ ಕರೆತಂದು ವಿಶೇಷ ದರ್ಶನ ಮಾಡಿಸಲಾಗುವುದು. ಎಲ್ಲರ ಸಹಕಾರ ಮುಖ್ಯ ಎಂದರು.
ಸಿಜೆಐ ಗವಾಯಿ ಮೇಲಿನ ಶೂ ದಾಳಿ ಖಂಡಿಸಿ ಪ್ರತಿಭಟನೆ
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಹಿರಿಯ ವಕೀಲರೊಬ್ಬರು ಶೂ ಎಸೆದು ಅವಮಾನ ಮಾಡಿದ ಘಟನೆ ಖಂಡಿಸಿ, ನಗರದಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಬುಧವಾರ ಆಕ್ರೋಶ ವ್ಯಕ್ತಪಡಿಸಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಧರಣಿ ನಡೆಸಿದರು.ಸಂಘಟನೆಯವರು ಸರ್ಕಾರದಿಂದ ನ್ಯಾಯಾಂಗದ ಗೌರವವನ್ನು ಕಾಪಾಡಲು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಇಂತಹ ಧಾರ್ಮಿಕ ಅಂಧಭಕ್ತಿಯ ಹೆಸರಿನಲ್ಲಿ ನಡೆಯುವ ಹಿಂಸಾತ್ಮಕ ನಡವಳಿಕೆಗಳನ್ನು ತಡೆಗಟ್ಟಬೇಕೆಂದು ಒತ್ತಾಯಿಸಿದರು.
ರಕ್ತದಾನ ಮಾಡಿ ಪ್ರಾಣ ಉಳಿಸಿ ಎಂದ ಶಾಸಕ ಸಿಮೆಂಟ್ ಮಂಜು
ಸಮಯಕ್ಕೆ ಸರಿಯಾಗಿ ರಕ್ತ ಸಿಗದ ಕಾರಣ ಪ್ರತಿವರ್ಷ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಆ ಜೀವಗಳನ್ನು ಉಳಿಸಲು ರಕ್ತದಾನವನ್ನು ಪ್ರೋತ್ಸಾಹಿಸಬೇಕಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಎಷ್ಟೆ ಮುಂದುವರಿದರೂ, ರಕ್ತಕ್ಕೆ ಪರ್ಯಾಯವಿಲ್ಲ. ರಕ್ತವನ್ನು ಕೃತಕವಾಗಿ ತಯಾರಿಸಲು ಅಸಾಧ್ಯ. ಮನುಷ್ಯ ಮಾತ್ರ ಮತ್ತೊಬ್ಬ ಮನುಷ್ಯನಿಗೆ ರಕ್ತದಾನವನ್ನು ಮಾಡಿ ಜೀವ ಉಳಿಸಬಹುದು. ರಕ್ತದಾನ ಮಾಡುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ನಿಯಮಿತ ರಕ್ತದಾನವು ದೇಹದಲ್ಲಿ ಕೊಬ್ಬಿನ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಕ್ತದ ಹರಿವನ್ನು ಹೆಚ್ಚಿಸುತ್ತದೆ ಎಂದರು.
ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಗುದ್ದಾಟಕ್ಕೆ ತೆರೆ
ಕಳೆದ ಕೆಲ ದಿನಗಳ ಹಿಂದೆ ಆಡಳಿತ ಮಂಡಳಿಯಲ್ಲಿ ಒಂದಿಷ್ಟು ಗೊಂದಲಗಳು ಏರ್ಪಟ್ಟಿದ್ದ ಪರಿಣಾಮ ಆಡಳಿತ ಮಂಡಳಿ ಕಚೇರಿಗೆ ಬೀಗ ಹಾಕಿ ಎರಡೂ ಬಣದವರೂ ಪ್ರವೇಶಿಸದಂತೆ ಪೊಲೀಸರು ನಿರ್ಬಂಧ ವಿಧಿಸಿದ್ದರು. ಇಂದು ನಿರ್ಬಂಧ ತೆರವುಗೊಂಡ ಹಿನ್ನೆಲೆಯಲ್ಲಿ ಪದಾಧಿಕಾರಿಗಳು ಬೀಗ ತೆರೆದು ಕಚೇರಿ ಪ್ರವೇಶಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಆರ್‌. ಟಿ. ದೇವೇಗೌಡ ಹಾಗೂ ಕಾರ್ಯದರ್ಶಿ ಜಗದೀಶ್ ಚೌಡುವಳ್ಳಿ ಅವರು, ದಿನಾಂಕ ೧೧-೦೧-೨೦೨೫ರಂದು ೨೦ಜನ ನಿರ್ದೇಶಕರ ಬೆಂಬಲದೊಂದಿಗೆ ಸರ್ವಾನುಮತದಿಂದ ೫ ವರ್ಷಗಳ ಅವಧಿಗೆ ನಾವು ಅಧ್ಯಕ್ಷರು-ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದು, ಇದುವರೆಗೂ ಸಹಕಾರ ಸಂಘದ ರಿಜಿಸ್ಟರ್ ಅವರಿಂದ ಆಗಲೀ, ನ್ಯಾಯಾಲಯದಿಂದಾಗಲೀ ಅಥವಾ ಸರ್ಕಾರದಿಂದಾಗಲೀ ನಮ್ಮ ಆಡಳಿತ ಮಂಡಳಿಯನ್ನು ಪದಚ್ಯತಿಗೊಳಿಸಿರುವುದಾಗಿ ತೀರ್ಪು ಅಥವಾ ಆದೇಶ ಅಧಿಕೃತವಾಗಿ ಪ್ರಕಟವಾಗಿರುವುದಿಲ್ಲ.
ಎಸ್‌ ಎಂ ಕೃಷ್ಣ ನಗರದಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಮಾಡಲು ತಾತ್ಕಾಲಿಕ ಪರವಾನಗಿ ಪಡೆದು ಮಾರಾಟ ಮಾಡುವ ಸಂದರ್ಭದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಸೂಚಿಸಿದ್ದಾರೆ. ಪರವಾನಗಿ ಪಡೆಯದೆ ಕಾನೂನು ಬಾಹಿರವಾಗಿ ಪಟಾಕಿ ಮಾರಾಟ ಮಾಡುವುದು ಕಂಡುಬಂದಲ್ಲಿ ತಕ್ಷಣ ಪ್ರಕರಣ ದಾಖಲಿಸಿ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪಟಾಕಿ ಮಾರಾಟ ಮಾಡಲು ತಾತ್ಕಾಲಿಕ ಪರವಾನಗಿ ಪಡೆಯುವವರು ಎ.ಬಿ.ಸಿ.ಪೌಡರ್ ನಿರ್ವಹಣೆ ಬಗ್ಗೆ ಅಂಗಡಿ ಮಳಿಗೆ ತೆರೆಯುವ ಮುಂಚೆ ಕಡ್ಡಾಯವಾಗಿ ಅಗ್ನಿಶಾಮಕ ಇಲಾಖೆಯಿಂದ ತರಬೇತಿ ಪಡೆಯುವಂತೆ ತಿಳಿಸಿದರು.
ಇಂದಿನಿಂದ ಶ್ರೀ ಹಾಸನಾಂಬೆ ದೇವಿ ದರ್ಶನ
ಶ್ರೀ ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಇಂದಿನಿಂದ (ಅ.9) ಪ್ರಾರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಹಾಸನಾಂಬ ದೇವಿಯ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಅ.23ರಂದು ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ. ಭಕ್ತರಿಗೆ ಅ.10ರಿಂದ ಅ.23ರವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಅ.೧೦ರಿಂದ ಅ.೧೭ ರವರೆಗೆ ಬೆ.೧೦ ರಿಂದ ಮ.೦೧ ಗಂಟೆಯವರೆಗೆ ಮಾತ್ರ ಶಿಷ್ಟಾಚಾರ ದರ್ಶನಕ್ಕೆ ಅವಕಾಶವಿರುತ್ತದೆ. ಅ.18ರಿಂದ ಅ.22ರವರೆಗೆ ಯಾವುದೇ ರೀತಿಯ ಶಿಷ್ಟಾಚಾರ ದರ್ಶನಕ್ಕೆ ಅವಕಾಶ ಇರುವುದಿಲ್ಲ.
ದುಶ್ಚಟಗಳಿಗೆ ದಾಸನಾದರೆ ಸಂಸಾರ ಹಾಳು
ಹಳೇಬೀಡಿನ ಶ್ರೀಬನಶಂಕರಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ರಾಮ ಪಂಚಾಯಿತಿ ಹಳೇಬೀಡು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸಹಯೋಗದೊಂದಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮದ ಸಾನ್ನಿಧ್ಯವನ್ನು ವಹಿಸಿ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದ್ದಾರೆ. ಇಂದು ಗಾಂಧಿ ಜಯಂತಿ ಪ್ರಯುಕ್ತ ಆ ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮ. ಮನುಷ್ಯ ಸಹಜವಾಗಿ ದುಶ್ಚಟಕ್ಕೆ ಬಿದ್ದರೆ ಅವನ ಸಂಸಾರ ಬೀದಿ ಪಾಲು ಎಂದು ತಿಳಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 544
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved