• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಕೆಗೆ ಚಾಲನೆ
ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ರೇಡಿಯೊ ಕಾಲರ್ ಅಳವಡಿಕೆ ಕಾರ್ಯಾಚರಣೆ ಆರಂಭಿಸಿದ್ದು, ಬಿಕ್ಕೋಡು ಆನೆ ಕ್ಯಾಂಪ್ ಬಳಿ ಬಂದಿರುವ ಸಾಕಾನೆಗಳಿಗೆ ಶಾಸಕ ಎಚ್ ಕೆ ಸುರೇಶ್ ಪೂಜೆ ಸಲ್ಲಿಸಿದರು. ಈ ತಿಂಗಳಿಂದ ನಡೆಯುವ ಅಧಿವೇಶನದಲ್ಲಿ ಇದರ ಬಗ್ಗೆ ಸದನದಲ್ಲಿ ಚರ್ಚಿಸುವುದರ ಜೊತೆಗೆ ಶಾಶ್ವತವಾಗಿ ನಮಗೆ ಪರಿಹಾರ ಸಿಗುವಂತೆ ಸಂಬಂಧಪಟ್ಟ ಅಧಿಕಾರಿಗಳ ಹಾಗೂ ಸಚಿವರ ಜೊತೆ ಚರ್ಚಿಸುವುದಾಗಿ ತಿಳಿಸಿದರು.
ವಿವಿಧತೆಯಲ್ಲಿ ಏಕತೆ ತೋರಿದ ಮಹಾನ್ ಪುರುಷ ಅಂಬೇಡ್ಕರ್
ಎಲ್ಲರೂ ಭಾರತೀಯರು ಎಂಬ ಧ್ಯೇಯದೊಂದಿಗೆ, ಯಾವುದೇ ತಾರತಮ್ಯವಿಲ್ಲದೇ ವಿವಿಧತೆಯಲ್ಲಿ ಏಕತೆಯನ್ನು ತೋರಿದ ಮಹಾನ್ ಪುರುಷ ಡಾ. ಬಿ.ಆರ್‌.ಅಂಬೇಡ್ಕರ್ ಅವರು ಎಂದು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯ ಆಯುಕ್ತರಾದ ಡಾ. ಸಿ.ಟಿ.ಮೂರ್ತಿ ಸ್ಮರಿಸಿದರು. ಡಾ. ಬಿ.ಆರ್.ಅಂಬೇಡ್ಕರ್ ಅವರ ೬೯ನೇ ಪರಿದಿಬ್ಬಾಣದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇವೇಗೌಡರ ಕುಟುಂಬದ ವಿರುದ್ಧ ಅಬ್ಬರಿಸಿದ್ದ ಸಿಎಂ ಸಿದ್ದರಾಮಯ್ಯ ಟೀಕೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿರುಗೇಟು

  ದೇವೇಗೌಡರ ಕುಟುಂಬದ ವಿರುದ್ಧ ಅಬ್ಬರಿಸಿದ್ದ ಸಿಎಂ ಸಿದ್ದರಾಮಯ್ಯ ಟೀಕೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿರುಗೇಟು.   ದೇವೇಗೌಡರ ಯಾವ್ಯಾವ ಸಾಕ್ಷಿ ಗುಡ್ಡೆ ಇದೆ ಎಂಬುದನ್ನು ಕಾಲ ಬಂದಾಗ ಹೇಳ್ತೀನಿ. ಅವರು ಬಂದರೆ ಕರೆದುಕೊಂಡು ಹೋಗಿ ಎಲ್ಲೆಲ್ಲಿ ಸಾಕ್ಷಿ ಗುಡ್ಡೆ ಇದೆ ಅಂತ ತೋರುಸ್ತೀನಿ ಎಂದಿದ್ದಾರೆ.  

ತಗಡೂರು ಸೊಸೈಟಿ ಅಧ್ಯಕ್ಷರಾಗಿ ಜಯರಾಮ್ ಆಯ್ಕೆ
ನುಗ್ಗೇಹಳ್ಳಿ ಹೋಬಳಿಯ ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ. ಸಿದ್ದರಹಟ್ಟಿ ಗ್ರಾಮದ ಎಸ್. ಜಿ. ಜಯರಾಮ್, ಉಪಾಧ್ಯಕ್ಷರಾಗಿ ಕಲ್ಲು ಮಲ್ಲೇನಹಳ್ಳಿ ಗ್ರಾಮದ ಕೆ. ಸಿ. ಪ್ರತೀಪ್‌, ಗುರುವಾರ ಅವಿರೋಧವಾಗಿ ಆಯ್ಕೆಯಾದರು. ನೂತನ ಜೆಡಿಎಸ್ ಬೆಂಬಲಿತ ಅಧ್ಯಕ್ಷ, ಉಪಾಧ್ಯಕ್ಷರನ್ನು ಶಾಸಕ ಸಿ. ಎನ್. ಬಾಲಕೃಷ್ಣ ಅಭಿನಂದಿಸಿದರು.
ಕುಂದೂರು ಮಠದಲ್ಲಿ ಪುನರ್‌ ನಿರ್ಮಾಣಗೊಂಡ ದೇವಾಲಯಗಳ ಲೋಕಾರ್ಪಣೆ
ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿಯಲ್ಲಿನ ಶ್ರೀ ಕುಂದೂರು ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಕುಂದೂರು ಗ್ರಾಮದ ಆದಿದೇವತೆಗಳಾದ ಶ್ರೀ ವಿಶ್ವನಾಥ ಸ್ವಾಮಿ ಮತ್ತು ಶ್ರೀ ರಂಗನಾಥಸ್ವಾಮಿ ಮತ್ತು ಪರಿವಾರ ದೇವತೆಗಳ ಪುನರ್ ನಿರ್ಮಾಣಗೊಂಡ ದೇವಾಲಯಗಳ ಲೋಕಾರ್ಪಣೆ ಕಾರ್ಯ ಹಾಗೂ ಕುಂಭಾಭಿಷೇಕ ಮತ್ತು ಧರ್ಮಧ್ವಜ ಸ್ಥಾಪನೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಶ್ರದ್ಧೆ, ಜ್ಞಾನದಿಂದ ಕೂಡಿರುವ ಮನಸನ್ನು ಮಲೀನವಾಗದಂತೆ ನೋಡಿಕೊಳ್ಳಲು ದೇವರ ಆರಾಧನೆ ಮುಖ್ಯವಾಗುತ್ತದೆ ಎಂದರು.
ಉತ್ತಮ ಜೀವನಕ್ಕೆ ಅಂಬೇಡ್ಕರ್‌ ಆದರ್ಶಗಳು ಗಟ್ಟಿಯಾದ ಅಡಿಪಾಯ
ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಕೊಡುಗೆ ಸ್ಮರಣೀಯವಾಗಿದ್ದು, ಉತ್ತಮ ಜೀವನ ರೂಪಿಸಿಕೊಳ್ಳಲು ಹಾಕಿಕೊಟ್ಟ ಆದರ್ಶಪ್ರಾಯ ಅಡಿಪಾಯ ಮಹತ್ವದ್ದಾಗಿದೆ ಹಾಗೂ ಇಂದಿನ ಕಾರ್ಯಕ್ರಮ ಔಚಿತ್ಯಪೂರ್ಣವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿಮಠ್ ಅಭಿಪ್ರಾಯಪಟ್ಟರು. ಅವರು ನಮ್ಮ ಪೀಳಿಗೆಗೆ ನೀಡಿದ ವಿಚಾರಧಾರೆಗಳು, ಆದರ್ಶಗಳು ಹಾಗೂ ವ್ಯಕ್ತಿತ್ವದ ಪಾಲನೆ ಮಾಡೋಣವೆಂದರು.
ಪಂಚೇಂದ್ರಿಯಗಳು ಬಹಳ ಮುಖ್ಯ ಎಂದ ಗೂಗಲ್‌ ವೈದ್ಯ ನವನ್ನೆ ಚಂದ್ರಪ್ಪ
ಚನ್ನರಾಯಪಟ್ಟಣ ಪಟ್ಟಣದ ವಾಸವಿ ವಿದ್ಯಾಶಾಲೆಯಲ್ಲಿ ಸುಮಾರು ೩೫೦ ಮಕ್ಕಳು ಹಾಗೂ ಪೋಷಕರ ಆರೋಗ್ಯ ತಪಾಸಣಾ ಕಾರ್ಯ ನಡೆಸಿ ಮಾತನಾಡಿದರು. ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರಗಳ ಸೇವನೆ ಮಾಡಬೇಕು, ಮೊಬೈಲ್‌ ಗೀಳನ್ನು ಮಕ್ಕಳು ಬಿಡಬೇಕು. ಬೆಳಕಿನಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವಿರಲಿ, ಕಣ್ಣಿಗೆ ಹೆಚ್ಚು ಆಯಾಸ ನೀಡಬಾರದು. ಸಿಹಿ ಪದಾರ್ಥಗಳ ಸೇವನೆಯ ಮೇಲೆ ಮಿತಿ ಇರಲಿ, ಕಣ್ಣು ಸೂಕ್ಷ್ಮವಾದ ಅಂಗವಾಗಿದ್ದು, ಹೆಚ್ಚು ಜಾಗ್ರತೆ ಅಗತ್ಯ ಎಂದು ಗೂಗಲ್ ಕಂಪನಿ ತಜ್ಞ ವೈದ್ಯ ಹಾಗೂ ಪಿಜಿಶಿಯನ್ ಡಾ. ನವನ್ನೆ ಚಂದ್ರಪ್ಪ ಹೇಳಿದರು.
ಆಯುಷ್ಮಾನ್ ಭಾರತ್ ಕಾರ್ಡ್‌ ನೋಂದಣಿ ಕಾರ್ಯಕ್ಕೆ ಚಾಲನೆ
೭೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಐದು ಲಕ್ಷ ರುಪಾಯಿ ಆರೋಗ್ಯ ವಿಮೆ ಸೌಲಭ್ಯ ಯೋಜನೆ ರೂಪಿಸಲಾಗಿದ್ದು, ಎಪಿಎಲ್ ಅಥವಾ ಬಿಪಿಎಲ್ ಎಂಬ ತಾರತಮ್ಯವಿಲ್ಲದೇ, ಆದಾಯ ಲೆಕ್ಕಿಸದೇ ಪ್ರತಿಯೊಬ್ಬ ಹಿರಿಯ ನಾಗರಿಕರು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ. ಜತೆಗೆ ನೋಂದಣಿ ಮುಖ್ಯವಾಗಿರುತ್ತದೆ ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಧನಶೇಖರ್‌ ಸಲಹೆ ನೀಡಿದರು. ಆಯುಷ್ಮಾನ್ ಭಾರತ್ ಕಾರ್ಡ್‌ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಚಾರುಕೀರ್ತಿ ಭಟ್ಟಾರಕರ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ
ಶ್ರವಣಬೆಳಗೊಳದಲ್ಲಿ ಶುಕ್ರವಾರ ಸಮಾಧಿಸ್ತರಾದ ಕರ್ಮಯೋಗಿ ದಿಗಂಬರ ಜೈನ ಮಹಾಸಂಸ್ಥಾನ ಮಠದ ಚಾರುಕೀರ್ತಿ ಭಟ್ಟಾರಕರ ನಿಷಿಧಿ ಮಂಟಪ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದಗಂಗಾ ಮಠಕ್ಕೂ ಭಟ್ಟಾರಕ ಸ್ವಾಮಿಗಳಿಗೂ ಅವಿನಾಭಾವ ಸಂಬಂಧವಿತ್ತು, ಚಾರುಕೀರ್ತಿಗಳು ಮಾನವೀಯತೆ ಗುಣ ಹೊಂದಿದ್ದರು. ಸಮಾಜದಲ್ಲಿ ಎಲ್ಲರನ್ನು ಒಂದೇ ಎಂದು ಕಾಣುತ್ತಿದ್ದ ಚಾರುಕೀರ್ತಿಗಳ ಮಾನವೀಯ ಗುಣ ಶ್ರೇಷ್ಠವಾದದ್ದು. ವಿಶೇಷವಾಗಿ ಜ್ಞಾನಾರ್ಜನೆಯಲ್ಲೆ ಕಾಲ ಕಳೆದರೂ ಅವರಿಗೆ ಯಾವುದಕ್ಕೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅಷ್ಟರಮಟ್ಟಿಗೆ ಚಾರುಕೀರ್ತಿ ಮಹಾತ್ಮರಾದವರು ಎಂದರು.
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಇರುವ ಬೇರೆ ಬೇರೆ ವೃತ್ತಿಗಳಿಗಿಂತ ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು ಎಂದು ದಂಡಿಗನಹಳ್ಳಿ ಹೋಬಳಿ ಕುಂಬೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹೇಶ್ ಬಾಬು ಎಸ್ ಅಭಿಪ್ರಾಯಪಟ್ಟರು. ಶಿಕ್ಷಕರು ತಮ್ಮ ಅಪಾರವಾದ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆದು ಅವರಿಗೆ ತಮ್ಮ ಜೀವನ ರೂಪಿಸಿಕೊಳ್ಳುವ ಮಾರ್ಗವನ್ನು ತೋರಿಸಿ ಉತ್ತಮ ಮಾರ್ಗದರ್ಶನ ಮಾಡಿ ತನ್ಮೂಲಕ ಮಾರ್ಗದರ್ಶಿ ಗಳಾಗಿದ್ದಾರೆ ಎಂದು ತಿಳಿಸಿದರು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved