• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಲೂರು : ಪೊಲೀಸ್ ಬಂದೋಬಸ್ತ್ ನೊಂದಿಗೆ ದೇವಾಲಯಕ್ಕೆ ಶ್ರೀ ಚನ್ನಕೇಶವ ಸ್ವಾಮಿ ಆಭರಣಗಳು
ಶ್ರೀ ಚನ್ನಕೇಶವ ಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ಶ್ರೀ ಸ್ವಾಮಿಗೆ ಧರಿಸುವ ಚಿನ್ನಾಭರಣಗಳನ್ನು ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ದೇವಾಲಯಕ್ಕೆ ತರಲಾಯಿತು.
ಸರ್ಕಾರಿ ಶಾಲೆಗಳಲ್ಲಿ ಸಕಲ ಸೌಲಭ್ಯಗಳಿವೆ ವಿದ್ಯಾರ್ಥಿಗಳು ಬಳಸಿಕೊಳ್ಳಿ
ಬೇಲೂರು ಪಟ್ಟಣದ ವೈಡಿಡಿ ಕಾಲೇಜಿನಲ್ಲಿ ಹೊಸದಾಗಿ ಬಿಸಿಎ ಕೋರ್ಸ್ ಪ್ರಾರಂಭಿಸಲಾಗಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಶಾಸಕ ಎಚ್.ಕೆ ಸುರೇಶ್‌ ಹೇಳಿದರು. ಸರ್ಕಾರ ಕೂಡ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ಆಂದೋಲನ, ಹಳ್ಳಿ ಹಳ್ಳಿಗಳಲ್ಲಿ ಶಿಬಿರಗಳನ್ನು ನಡೆಸುತ್ತಿದ್ದರೂ ಪೋಷಕರ ಮನಸ್ಸು ಖಾಸಗಿ ಶಾಲೆಗಳ ಕಡೆ ಇದೆ. ಉತ್ತಮ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಕಾಲೇಜುಗಳು ಖಾಸಗಿ ಕಾಲೇಜುಗಳ ಜೊತೆ ಪೈಪೋಟಿ ನಡೆಸುತ್ತಿವೆ, ಸರ್ಕಾರಿ ಶಾಲೆ ಕಾಲೇಜುಗಳನ್ನು ಉಳಿಸಿ ಬೆಳೆಸುವ ಕೆಲಸವನ್ನು ಪೋಷಕರು ಮಾಡಬೇಕೆಂದರು.
ಸಕಲೇಶಪುರ ಮುಖ್ಯರಸ್ತೆ ವ್ಯಾಜ್ಯ ಶಮನಕ್ಕೆ ಹೈ ತಾಕೀತು
ಸಕಲೇಶಪುರ ಪಟ್ಟಣದ ಮುಖ್ಯರಸ್ತೆ ಕಿರಿದಾಗಿರುವ ಕಾರಣದಿಂದ ಪಟ್ಟಣದಲ್ಲಿ ಗಂಟೆಗಳ ಕಾಲ ಟ್ರಾಫಿಕ್ ಸಮಸ್ಯೆ ತಲೆದೋರುತ್ತಿದೆ ಎಂದು ೨೦೧೮ರಲ್ಲಿ ಅಂದಿನ ಉಪವಿಭಾಗಾಧಿಕಾರಿಯಾಗಿದ್ದ ಲಕ್ಷ್ಮೀಕಾಂತರೆಡ್ಡಿ ಪಟ್ಟಣದ ಮುಖ್ಯ ರಸ್ತೆಯಲ್ಲಿದ್ದ ಸರ್ಕಾರಿ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸಿದ್ದರು. ಈ ಕಾರ್ಯಾಚರಣೆಯಿಂದ ಬೆದರಿದ ಕೆಲವು ವರ್ತಕರು ತಮ್ಮ ಕಟ್ಟಡಗಳನ್ನು ತಾವೇ ತೆರವುಗೊಳಿಸಿದ್ದರು. ಆದರೆ, ಕೆಲವು ವರ್ತಕರು ತೆರವು ಕಾರ್ಯಾಚರಣೆ ವಿರೋಧಿಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಕಾರಣ ಅಗಲೀಕರಣ ಕಾರ್ಯಾಚರಣೆ ಅರ್ಧಕ್ಕೆ ನಿಲುಗಡೆಯಾಗುವಂತಾಗಿತ್ತು.
ಜಿಪಂ ಸಿಇಒ ಅಮಾನತು ಮಾಡದಿದ್ದರೆ ಪ್ರತಿಭಟನೆ
ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ನಾನಾ ಯೋಜನೆಗಳಡಿ ಕಾಮಗಾರಿಗಳ ಗುತ್ತಿಗೆ ನೀಡುವ ವಿಚಾರದಲ್ಲಿ ಲಂಚ ಪಡೆದು ಲೂಟಿ ಮಾಡಲಾಗುತ್ತಿದ್ದು, ತಕ್ಷಣದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಅವರನ್ನು ಸೇವೆಯಿಂದ ಅಮಾನತು ಮಾಡಿ ತನಿಖೆಗೆ ಒಳಪಡಿಸಬೇಕು. ಇಲ್ಲವಾದರೆ ಪ್ರತಿಭಟನೆ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಎಚ್ಚರಿಸಿದರು. ಇತ್ತೀಚಿಗೆ ಅರಸೀಕೆರೆ ತಾಲೂಕಿನ ಪುರ್ಲೆಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿ ಇಒ, ಸಿಇಒ ಸೇರಿದಂತೆ ಇತರೆ ಮೇಲಧಿಕಾರಿಗಳಿಗೆ ಹಣ ನೀಡಬೇಕು. ಆದ್ದರಿಂದ ಗುತ್ತಿ ಗೆ ನೀಡಲು ಇಂತಿಷ್ಟು ಹಣ ಕಡ್ಡಾಯವಾಗಿ ನೀಡಲೇಬೇಕು ಎಂದು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಎಂದು ದೂರಿದರು.
ಮಂಜುಳಾಗೆ ಕೆಂಗಲ್ ಹನುಮಂತಯ್ಯ ಸದ್ಭಾವನಾ ಪ್ರಶಸ್ತಿ
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಕೊಡಲಾಗುವ ವಿಧಾನಸೌಧ ನಿರ್ಮಾತೃ ಶ್ರೀ ಕೆಂಗಲ್ ಹನುಮಂತಯ್ಯ ಸದ್ಭಾವನ ಪ್ರಶಸ್ತಿಯನ್ನು ತಾಲೂಕಿನ ಕನುವನಘಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳಾ ಡಿ ಇವರಿಗೆ ನೀಡಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಶ್ರೀ ಸರ್ವೇಜನಾ ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.
ಸಾಗುವಳಿ ಪತ್ರಕ್ಕಾಗಿ ಆಲುವಳ್ಳಿ ಗ್ರಾಮಸ್ಥರ ಮೊರೆ
ಸಾಗುವಳಿ ಪತ್ರ ನೀಡಿ ಅಥವಾ ಸಾಯಲು ಬಿಡಿ ಇದು ಶಾಸಕ ಸಿಮೆಂಟ್ ಮಂಜು ಎದುರು ಆಲುವಳ್ಳಿ ಗ್ರಾಮಸ್ಥರ ಮನವಿ ಮಾಡಿದರು. ಸಾಗುವಳಿ ಚೀಟಿ ನೀಡುವ ವೇಳೆ ಅರಣ್ಯ ಇಲಾಖೆಯಿಂದ ನಿರಾಪೇಕ್ಷಣ ಪತ್ರ ತರುವಂತೆ ಕಂದಾಯ ಇಲಾಖೆ ಸೂಚನೆ ನೀಡಿದೆ. ಆದರೆ, ಅರಣ್ಯ ಇಲಾಖೆ ಈ ಭೂಮಿ ತಮ್ಮದೆಂದು ಹೇಳುತ್ತಿದೆ. ಸರ್ವೇ ನಡೆಸದೆ ಭೂಮಿ ತಮ್ಮದೆಂದು ಹೇಳುತ್ತಿರುವ ಅರಣ್ಯ ಇಲಾಖೆಯ ಕ್ರಮದಿಂದ ಬೇಸತ್ತಿದ್ದು ಇಲಾಖೆಗೆ ಸುತ್ತಿಸುತ್ತಿ ಸಾಕಾಗಿದೆ. ಆದ್ದರಿಂದ, ಸಭೆಯಲ್ಲೆ ನಮಗೆ ಹಕ್ಕುಪತ್ರ ನೀಡಿ ಅಥವಾ ಸಾಯಲು ಬಿಡಿ ಎಂದು ಶಾಸಕರಿಗೆ ಕೈಮುಗಿದು ಪಟ್ಟು ಹಿಡಿದ ಗ್ರಾಮಸ್ಥರು ಸಮಸ್ಯೆ ಬಗೆಹರಿಸದ ಹೊರತು ಸ್ಥಳದಲ್ಲಿಂದ ಕದಲುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ಅಂತ್ಯವಾಗಬೇಕು
ಬಾಲಕಾರ್ಮಿಕ ಪದ್ಧತಿ ಸಮಾಜದಲ್ಲಿ ಒಂದು ಕಳಂಕವಾಗಿದೆ. ಈ ವ್ಯವಸ್ಥೆಯಿಂದ ಮಕ್ಕಳನ್ನು ದೂರವಿಟ್ಟು ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಎಲ್ಲ ಜವಾಬ್ದಾರಿಯೊಂದಿಗೆ ಕರ್ತವ್ಯ ಕೂಡ ಆಗಿದೆ ಎಂದು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಿರಣ್ ಕುಮಾರ್ ಡಿ.ವಡಿಗೇರಿ ಹೇಳಿದರು. ಬಾಲಕಾರ್ಮಿಕ ಎಂಬ ಪದ್ಧತಿ ಅನಿಷ್ಟ ಪದ್ಧತಿಯಾಗಿದ್ದು, ಇದನ್ನು ಕೊನೆಗಾಣಿಸಲು ಅನೇಕ ಕಠಿಣ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದರು.
ಬೇಲೂರು ರಥೋತ್ಸವದಲ್ಲಿ ಕುರಾನ್‌ ಪಠಣ ನಿರ್ಬಂಧಿಸಲು ಮನವಿ
ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವ ದಿನದಂದು ಮುಸ್ಲಿಂ ಖಾಜಿಯವರಿಂದ ಕುರಾನ್ ಪಠಣವನ್ನು ನಿರ್ಬಂಧಿಸಬೇಕೆಂದು ರಾಮಧೂತ ಹಿಂದೂ ಸಮಾಜ ಹಾಗೂ ಶ್ರೀ ಚನ್ನಕೇಶವ ಸ್ವಾಮಿ ಭಕ್ತರ ವತಿಯಿಂದ ಶುಕ್ರವಾರ ತಾಲೂಕು ಆಡಳಿತಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು. ದೇಗುಲದ ಮ್ಯಾನ್ಯುಯಲ್‌ನಲ್ಲೂ ಸಹ ಕುರಾನ್ ಪಠಣಕ್ಕೆ ಅವಕಾಶ ಇಲ್ಲ. ಅವರಿಗೆ ಮರ್ಯಾದೆ ನೀಡಿ, ದೇವರಿಗೆ ವಂದನೆ ಸಲ್ಲಿಸಿ ತೆರಳುವ ಉಲ್ಲೇಖವಿದೆ. ಅದನ್ನು ಪಾಲಿಸಲಿ ಎಂದರು.
ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರ
ಮಧುಮೇಹ, ಬಿ.ಪಿ, ಸಂಧಿವಾತ, ನರಗಳ ಸೆಳೆತ, ಸ್ಪಾಂಡಿಲೈಟೀಸ್, ನಿದ್ರಾಹೀನತೆ, ಥೈರಾಯ್ಡ್, ಲಕ್ವಾ, ಬೆನ್ನು ನೋವು ಮುಂತಾದ ಸುದೀರ್ಘ ನೋವುಗಳಿಗೆ ಫೂಟ್ ಥೆರಪಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಡಾ.ರತ್ನಾಕರ ಶೆಟ್ಟಿ ತಿಳಿಸಿದರು. ನಿರ್ದಿಷ್ಟ ಯೋಜನೆಗಳನ್ನು ರೂಪಿಸಿ ಜನರಿಗೆ ಸೇವೆಗಳನ್ನು ತಲುಪಿಸುತ್ತಿರುವ ರೋಟರಿ ನಡೆಯನ್ನು ಸರ್ಕಾರವೂ ಅನುಸರಿಸಬೇಕಿದೆ ರೋಟರಿ ಕ್ಲಬ್ ಆಯೋಜಿಸಿದ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರದಲ್ಲಿ ಇದುವರೆಗೂ ೨೫೦೦ ಜನ ಚಿಕಿತ್ಸೆಯನ್ನು ಪಡೆದಿದ್ದಾರೆ ಎಂದು ತಿಳಿಸಿದರು.
ಸ್ತ್ರೀ ಶೋಷಣೆ ತಪ್ಪಿಸಲು ಹಲವು ಕಾನೂನು ಜಾರಿಯಲ್ಲಿವೆ
ಭಾರತದಲ್ಲಿ ಸ್ತ್ರೀಯರಿಗೆ ಗೌರವ ಹಾಗೂ ಉನ್ನತ ಸ್ಥಾನಮಾನ ನೀಡಿದ್ದು ೧೨ನೇ ಶತಮಾನದಲ್ಲಿ. ಬಸವಣ್ಣನವರು ಹಾಗೂ ಅಕ್ಕಮಹಾದೇವಿಯವರು ಹೆಣ್ಣು ಗಂಡು ಎಂಬ ತಾರತಮ್ಯ ಹೋಗಲಾಡಿಸಲು ಪ್ರಯತ್ನ ಮಾಡುವ ಜತೆಗೆ ಅರಿವನ್ನು ಮೂಡಿಸುತ್ತಿದ್ದರು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತ ಮಹಾಂತೇಶ್ ಮುನವಳ್ಳಿಮಠ್ ತಿಳಿಸಿದರು. ಸ್ತ್ರೀಯರಲ್ಲಿರುವ ವಿಶೇಷ ಗುಣವನ್ನು ಪರಿಗಣಿಸಿಯೇ ಪೂಜ್ಯನೀಯ ಸ್ಥಾನವನ್ನು ನೀಡಲಾಗಿದೆ. ಈ ಕಾರಣದಿಂದಲೇ ಜಗತ್ತಿನ ಎಲ್ಲ ಮಹತ್ವಗಳಿಗೆ ಸ್ತ್ರೀಗೆ ಹೋಲಿಸಲಾಗುತ್ತದೆ ಮತ್ತು ಭಾರತದಲ್ಲಿ ಸ್ತ್ರೀಯರ ಸ್ಥಾನಮಾನ ಉತ್ತಮವಾಗಿದೆ ಎಂದರು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved