• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಟಲ್‌ ಬಿಹಾರಿ ವಾಜಪೇಯಿ ಶ್ರೇಷ್ಠ ಮುತ್ಸದ್ದಿ
ಅಟಲ್ ವಿರಾಸತ್ ಹೆಸರಿನಲ್ಲಿ ಅಟಾಲ್ ಅವರ ಪ್ರತಿ ಜಿಲ್ಲೆಯಲ್ಲಿ ಬಿಜೆಪಿಯಲ್ಲಿದ್ದು, ಅವರ ಜೊತೆ ಕೆಲಸ ಮಾಡಿದ್ದರೂ ಹಾಗೂ ಹತ್ತಿರದಿಂದ ನೋಡಿದ್ದಾರೆ ಅವರನ್ನು ಸನ್ಮಾನಿಸಿ ಗೌರವಿಸುತ್ತಿದ್ದೇವೆ. ಅಟಲ್ ಜೀವನ ನೆನಪು ಮಾಡುವ, ಅವರ, ಜೀವನ, ವ್ಯಕ್ತಿತ್ವ ನಮ್ಮ ಮೇಲೆ ಜೀವಂತವಾಗಿ ಮಾಡಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅಟಲ್ ಜೀವನದಲ್ಲಿ ಲಕ್ಷಾಂತರ ಘಟನೆ ನಡೆದಿದೆ. ಅವರಿಂದ ಪ್ರೇರಣೆಯನ್ನು ಕಾರ್ಯಕರ್ತರು ಪಡೆದಿದ್ದಾರೆ ಎಂದು ವಾಜಪೇಯಿ ಜನ್ಮ ಶತಾಬ್ಧಿ ಸಹ ಸಂಚಾಲಕ ಪಣೀಶ್ ಹೇಳಿದರು.
ಯಾವುದೇ ಕೆಲಸ ಮಾಡಲು ಕೌಶಲ್ಯಗಳು ಅತ್ಯವಶ್ಯಕ
ಹಲವಾರು ದೇಶಗಳಲ್ಲಿ ಮಹಿಳೆ ಮತ್ತು ಮಕ್ಕಳಿಗೆ ಸೇವೆಗಳನ್ನು ಉಚಿತವಾಗಿ ಮಾಡಿಕೊಡಲಾಗುತ್ತಿದೆ. ನಮ್ಮ ದೇಶದಲ್ಲಿ ಇದರ ಬಗ್ಗೆ ಹೆಚ್ಚು ಗಮನ ವಹಿಸಿ ಬಡವರಿಗೆ ಅನುಕೂಲವಾಗುವಂತೆ ಮಾಡಿಕೊಡಬೇಕು. ವಿದ್ಯಾರ್ಥಿಗಳಿಗೆ ವ್ಯಾಪಾರ ಮತ್ತು ಸೂಕ್ಷ್ಮ ಅರ್ಥಶಾಸ್ತ್ರದ ಪರಿಕಲ್ಪನೆಯು ಸಮಾಜಶಾಸ್ತ್ರದಲ್ಲಿ ಹೇಗೆ ಬೆಳಕಾಗುತ್ತದೆ ಮತ್ತು ಮನುಷ್ಯನಿಗೆ ಹಣ ಮಾಡುವುದರ ಬಗ್ಗೆ ಆಯಾಮ ಇರುವುದಿಲ್ಲ. ಇದರಿಂದ ದುರಾಸೆ ಎಂಬುದು ಹೆಚ್ಚಾಗಿ ದೇಶ ಹಾಳಾಗುವಂತಾಗಿದೆ ಎಂದು ಹ ಪ್ರಾಧ್ಯಾಪಕ ಡಾ. ಕೆ. ಬಾಷಾ ತಿಳಿಸಿದರು.
ನನ್ನ ರಕ್ಷಿಸಿ ಆಸ್ತಿ ಉಳಿಸಿಕೊಡಿ ಎಂದು ವೃದ್ಧೆ ಅಳಲು
ಗ್ರಾಮದಿಂದ ಓಡಿಸಿ ನನ್ನ ಆಸ್ತಿ ಲಪಾಟಿಯಿಸುವ ನಿಟ್ಟಿನಲ್ಲಿ ಅನೇಕ ದೇವರ ಕೈಮುಗಿದು ನನಗೆ ಹಿಂಸೆ ಕೊಡುತ್ತಿದ್ದು, ಸ್ಥಳಕ್ಕೆ ಅಧಿಕಾರಿಗಳು ಬಂದು ನ್ಯಾಯ ದೊರಕಿಸಿಕೊಡಬೇಕಾಗಿ ಹಾಗೂ ಜಮೀನನ್ನು ಬಿಡಿಸಿಕೊಡಬೇಕಾಗಿ ವೃದ್ಧೆ ಓರ್ವಳು ಡಿಸಿ ಕಚೇರಿ ಮುಂದೆ ತಹಸೀಲ್ದಾರಲ್ಲಿ ಮನವಿ ಮಾಡಿಕೊಂಡು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ನಂತರ ಮಾನವೀಯತೆ ದೃಷ್ಠಿಯಲ್ಲಿ ಹಾಗೂ ನ್ಯಾಯಕೊಡಿಸುವುದಾಗಿ ಅರಸೀಕೆರೆ ತಹಸೀಲ್ದಾರ್ ಸಂತೋಷ್ ಅವರು ತಮ್ಮ ವಾಹನದಲ್ಲೆ ಕೂರಿಸಿಕೊಂಡು ಆಕೆಯ ಸ್ಥಳಕ್ಕೆ ಕರೆದೊಯ್ದರು.
ಶಾಸಕರ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ
ವಿಧಾನಸಭೆಯಿಂದ ೧೮ ಶಾಸಕರ ಅಮಾನತು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅನುದಾನ ದುರ್ಬಳಕೆ ಖಂಡಿಸಿ ನಗರದಲ್ಲಿ ಗುರುವಾರ ಕಾಂಗ್ರೆಸ್ ವಿರುದ್ಧ ಜಿಲ್ಲಾ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಿ ಅಮಾನತು ವಾಪಸ್ ಪಡೆಯುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ವಿಧಾನಸಭೆಯಲ್ಲಿ ಸಣ್ಣ ಕಾರಣಕ್ಕೆ ೧೮ ಜನ ಶಾಸಕರನ್ನು ರಾಜಕೀಯ ದುರುದ್ದೇಶದಿಂದ ೬ ತಿಂಗಳ ಕಾಲ ಅಮಾನತು ಮಾಡಿ ಸ್ಪೀಕರ್‌ ಆದೇಶ ಹೊರಡಿಸಿರುವುದು ಖಂಡನೀಯ ಎಂದರು.
ಜಾನಪದ ಕಲೆ ಉಳಿಸಲು ಯುವ ಪೀಳಿಗೆಗೆ ಅರಿವು ಮೂಡಿಸಿ
ಜಾನಪದ ಕಲೆ ಉಳಿಸುವ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಾಗೂ ವೈಡಿಡಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹೆಬ್ಬಾಳು ಹಾಲಪ್ಪ ಹೇಳಿದರು. ಜೀವನದಲ್ಲಿ ಸಾಧನೆ ಮಾಡಿದ ಮಹನೀಯರು ಪ್ರೇರಣೆಯಾಗಬೇಕು, ಕಂಸಾಳೆ ಪದ, ಗೀಗಿಪದ, ಕೋಲಾಟದ ಪದ, ರಾಗಿ ಬೀಸೋ ಪದ, ಸುಗ್ಗಿ ಹಾಡುಗಳು, ಹೀಗೆ ಇನ್ನೂ ಅನೇಕ ವಿವಿಧ ಬಗೆಯ ಜಾನಪದ ಗೀತೆಗಳು ಆಯಾ ಪ್ರದೇಶದ ಜನರ ದೈನಂದಿನ ಚಟುವಟಿಕೆಗಳನ್ನು, ಕೌಟುಂಬಿಕ ಜೀವನವನ್ನು ತೆರೆದಿಡುತ್ತವೆ ಎಂದರು.
ಕಾಡಾನೆಗೆ ರೇಡಿಯೋ ಕಾಲರ್‌ ಅಳವಡಿಕೆ ಯಶಸ್ವಿ
ಮಲೆನಾಡು ಭಾಗದಲ್ಲಿ ಬೆಳೆ ಹಾಗೂ ಪ್ರಾಣಹಾನಿಗೆ ಮುಂದಾಗಿದ್ದ ಕಾಡಾನೆಗಳ ಕಾರ್ಯಾಚರಣೆ ಮುಂದುವರೆದಿದ್ದು, ಗುರುವಾರ ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಭುವನೇಶ್ವರಿ ಗುಂಪಿನ ಎರಡು ಗಂಡಾನೆಗಳಿಗೆ ರೇಡಿಯೋ ಕಾಲ‌ರ್ ಅಳವಡಿಸಲಾಯಿತು. ಡಾ.ರಮೇಶ್ ನೇತೃತ್ವದ ತಂಡ ಕಾಡಾನೆಗೆ ಅರವಳಿಕೆ ಮದ್ದು ನೀಡಿ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಈಟಿಎಫ್ ಸಿಬ್ಬಂದಿಯ ಸಹಯೋಗದಲ್ಲಿ ರೇಡಿಯೋ ಕಾಲರ್ ಅಳವಡಿಸಲಾಯಿತು. ಕಾಡಾನೆಗಳ ಪತ್ತೆ ಹಾಗೂ ಅವುಗಳ ಚಲನವಲನದ ಮಾಹಿತಿ ಪಡೆಯಲು ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಕೆಗೆ ಅರಣ್ಯ ಇಲಾಖೆ ಮುಂದಾಗಿದ್ದು ಬೇಲೂರು ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ಭುವನೇಶ್ವರಿ ಗುಂಪಿನ ಗಂಡಾನೆಗೆ ರೇಡಿಯೋ ಕಾಲ‌ರ್ ಅಳವಡಿಕೆ ಯಶಸ್ವಿಯಾಗಿದೆ.
ಹಾಸನ ಎಸ್ಪಿ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಏಕವಚನದಲ್ಲಿ ವಾಗ್ದಾಳಿ

ನಾನೊಬ್ಬ ಎಂಎಲ್‌ಸಿ ಆಗಿ ಪೊಲೀಸ್ ಕಚೇರಿಗೆ ಖುದ್ದಾಗಿ ಹೋಗಿ ಎಸ್‌ಪಿಗೆ ದೂರು ಕೊಟ್ಟರೂ ಸ್ವೀಕರಿಸುವುದಿಲ್ಲ. ಒಂದು ದಿನವಾದರೂ ಎಫ್‌ಐಆರ್ ದಾಖಲಿಸುವುದಿಲ್ಲ. ನನಗೇ ಅನ್ಯಾಯವಾಗಿರುವಾಗ ಜಿಲ್ಲೆಯ ಜನರ ಕಥೆ ಏನು?  

ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿದ ಗ್ರಾಮೀಣ ಭಾಗದ ಕೋಟ್ಯಂತರ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಗಸರಹಳ್ಳಿ ಚಂದ್ರೇಗೌಡ ತಿಳಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದೇಗುಲಗಳ ಜೀರ್ಣೋದ್ಧಾರ ಸಮಿತಿಗೆ ಧನ ಸಹಾಯ, ಶೌಚಾಲಯಗಳ ನಿರ್ಮಾಣ, ಕೆರೆ ಸಂರಕ್ಷಣೆಯಿಂದ ಅಂತರ್ಜಲ ಅಭಿವೃದ್ಧಿ, ಸೌರವಿದ್ಯುತ್ ಘಟಕಗಳ ನಿರ್ಮಾಣ, ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿ ವೇತನ, ಗೋಬರ್ ಗ್ಯಾಸ್ ಗಳ ಬಳಕೆ ಸೌಲಭ್ಯ ನೀಡಲಾಗಿದೆ ಎಂದರು.
ಕ್ಷಯ ರೋಗಿಗಳು ತಪ್ಪದೆ ಆರು ತಿಂಗಳು ಚಿಕಿತ್ಸೆ ಪಡೆಯಲೆಬೇಕು
ಕ್ಷಯ ರೋಗಿಗಳು ತಪ್ಪದೆ ಆರು ತಿಂಗಳು ಚಿಕಿತ್ಸೆ ಪಡೆಯಲೇಬೇಕು. ವೈದ್ಯರ ಸಲಹೆ ಸೂಚನೆಗಳನ್ನು ತಪ್ಪದೆ ಪಾಲಿಸಿದರೆ ರೋಗ ಮುಕ್ತರಾಗಿ ಬದುಕಲು ಅವಕಾಶವಿದೆ. ಕ್ಷಯರೋಗ ಮುಕ್ತ ದೇಶವನ್ನು ಮಾಡಲು ಪಣ ತೊಡೋಣ ಎಂದು ಶಾಸಕ ಸಿಮೆಂಟ್ ಮಂಜು ಕರೆ ನೀಡಿದರು. ರೋಗ ಹತೋಟಿಗೆ ತರಲು ವೈದ್ಯರೊಡನೆ ವೈಯಕ್ತಿಕವಾಗಿ ಸಹಕಾರ ನೀಡುತ್ತೇನೆ. ದೇಹದಲ್ಲಿ ಸದಾ ರೋಗ ನಿರೋಧಕ ಶಕ್ತಿ ಇರುವಂತೆ ಪ್ರತಿಯೊಬ್ಬರೂ ಜಾಗ್ರತೆ ವಹಿಸಬೇಕು ಎಂದರು.
ಏಡ್ಸ್ ಎಂದರೆ ಭಯಬೇಡ ಜಾಗ್ರತೆ ವಹಿಸಿ
ಯುವಜನತೆಯು ಆದಷ್ಟು ಜಾಗರೂಕರಾಗಿ ಹೆಜ್ಜೆ ಇಡಬೇಕು. ಭಾರತದಲ್ಲಿ ೨.೪ ಮಿಲಿಯನ್ ಎಚ್‌ಐವಿ ಸೋಂಕಿತರಿದ್ದಾರೆ. ಇದು ನಿಜವಾಗಿಯೂ ದುರ್ದೈವದ ಸಂಗತಿಯಾಗಿದೆ. ರಕ್ತದಾನ ಮಹಾದಾನ, ಆದರೆ ಇತರರಿಂದ ರಕ್ತವನ್ನ ಪಡೆಯುವುದಕ್ಕಿಂತ್ತ ಮುಂಚಿತವಾಗಿ ರಕ್ತದ ಪರೀಕ್ಷೆ ಮಾಡಿಸುವುದು ಸೂಕ್ತ. ಏಡ್ಸ್ ಕಾಯಿಲೆ ಮಾನವರಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಕುಗ್ಗಿಸುತ್ತದೆ. ವೈರಸ್‌ನ ತೀವ್ರತೆ ಅತಿರೇಕಕ್ಕೆ ತಲುಪಿದರೆ ಸೋಂಕಿತ ವ್ಯಕ್ತಿಯು ಸಾವನ್ನಪ್ಪುವ ಸಾಧ್ಯತೆ ಹೆಚ್ಚಿರುತ್ತದೆ.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved