• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲರು ವೃತ್ತಿ ಪಾವಿತ್ರ್ಯತೆ ಕಾಯ್ದುಕೊಳ್ಳಲಿ
ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಡುವ ವಕೀಲ ವೃತ್ತಿ ಅತ್ಯಂತ ಘನತೆಯ ವೃತ್ತಿಯಾಗಿದ್ದು, ವಕೀಲರು ವೃತ್ತಿ ಪಾವಿತ್ರ್ಯತೆ ಕಾಯ್ದುಕೊಳ್ಳಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಬಿ. ಕೆ. ನಾಗೇಶ ಮೂರ್ತಿ ತಿಳಿಸಿದರು. ವಕೀಲರ ಸಂಘ ಏರ್ಪಡಿಸಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ನ್ಯಾಯ ದೊರಕಿಸಿ ಕೊಡುವ ಜತೆಗೆ ಸಾರ್ವಜನಿಕ ಹಕ್ಕುಗಳ ರಕ್ಷಣೆಯನ್ನೂ ವಕೀಲರು ಮಾಡಬೇಕಿದೆ. ವಕೀಲರು ಎಲ್ಲ ವಿಷಯಗಳ ಕುರಿತು ಜ್ಞಾನ ಹೊಂದಲು ನಿರಂತರ ಅಧ್ಯಯನ ನಡೆಸಬೇಕು ಎಂದರು.
ಬೀಳುವ ಹಂತದಲ್ಲಿ ಅಂಗನವಾಡಿ ಕಟ್ಟಡಗಳು
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಕ್ಕಳಿಗೆ ಅಂಗನವಾಡಿ ನಡೆಸಲು ಸ್ವಂತ ಕಟ್ಟಡವಿಲ್ಲದೆ ಬಿದ್ದು ಹೋಗುವ ಸ್ಥಿತಿಯಲ್ಲಿರುವ ಕಟ್ಟಡಗಳಲ್ಲಿ ಬಾಡಿಗೆ ಅಧಾರದ ಮೇಲೆ ಪಡೆದು ಶಾಲೆ ನಡೆಸುತ್ತಿರುವುದು ಜನರ ದುರ್ದೈವದ ಸಂಗತಿಯಾಗಿದೆ ಎಂದು ಬಿಜೆಪಿ ಮುಖಂಡ ಕೆಂಪುಸಾಗರ ಶಿವರಾಜ್‌ ಕುಮಾರ್‌ ವಿಷಾದ ವ್ಯಕ್ತಪಡಿಸಿದರು. ಮಲ್ಲೇಶ್ವರ ನಗರದಲ್ಲಿರುವ ಅಂಗನವಾಡಿ ಕಟ್ಟಡ ಸೇರಿದಂತೆ ಹಲವು ಕಟ್ಟಡಗಳು ಬಿದ್ದು ಹೋಗುವ ಸ್ಥಿತಿಯಲ್ಲಿದೆ. ಶಾಲಾ ಅವಧಿಯಲ್ಲಿ ಏನಾದರೂ ಆದರೆ ಏನು ಗತಿ ಎಂಬುದನ್ನು ಅರಿಯುವ ಶಾಸಕರು ಇವರಾಗಬೇಕಿದೆ ಎಂದರು.
ನಾವೆಲ್ಲರೂ ಸೇರಿ ಜೆಡಿಎಸ್‌ ಕಟ್ಟೋಣ
ಹಾಸನದ ಕೃಷ್ಣಾ ನಗರದಲ್ಲಿ ನಡೆದ ಕಾಂಗ್ರೆಸ್‌ನ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡುವ ವೇಳೆ "ನಾವೆಲ್ಲಾ ಸೇರಿ ಜೆಡಿಎಸ್ಸನ್ನು ಕಟ್ಟೋಣ " ಎಂದು ಶಾಸಕರಾದ ಕೆ.ಎಂ. ಶಿವಲಿಂಗೇಗೌಡರು ಹೇಳಿದ್ದಾರೆ.ಕಳೆದ ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿ ರಾಜ್ಯ ಗೃಹ ಮಂಡಳಿ ಅಧ್ಯಕ್ಷರೂ ಆಗಿದ್ದಾರೆ. ಆದರೂ ಅಭ್ಯಾಸಬಲ ಎನ್ನುವಂತೆ ಅವರ ಬಾಯಿಂದ ಜೆಡಿಎಸ್‌ ಇನ್ನೂ ದೂರಾಗಿಲ್ಲ.
ರಾಮನಾಥಪುರ ಜಾತ್ರೆಗೆ ಸಜ್ಜಾಗುತ್ತಿದೆ ತೇರು
ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ ಮಹಾ ರಥೋತ್ಸವ ಡಿ.7ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಸುಮಾರು 40 ಅಡಿ ಎತ್ತರದ ಸುಬ್ರಹ್ಮಣ್ಯಸ್ವಾಮಿ ತೇರನ್ನು ಕಾರ್ಮಿಕರು ಸಜ್ಜುಗೊಳಿಸುತ್ತಿದ್ದಾರೆ ಎಂದು ದೇವಾಲಯದ ದಿವಾನರಾದ ಬಾಬಣ್ಣ ಹಾಗೂ ಪಾರುಪತ್ತೇಗಾರ್ ರಮೇಶ್ ಭಟ್ ತಿಳಿಸಿದರು. ಡಿಸೆಂಬರ್ 7ರಂದು ಶನಿವಾರ ಹಗಲು 12 ಗಂಟೆಗೆ ಶ್ರೀ ಪ್ರಸನ್ನ ಶ್ರೀ ಸುಬ್ರಮಣ್ಯಸ್ವಾಮಿ ಮಹಾ ರಥೋತ್ಸವ ಸಂಭ್ರಮದಿಂದ ಅದ್ಧೂರಿಯಾಗಿ ನಡೆಯಲಿದೆ.
ಅರಸೀಕೆರೆ ಆಸ್ಪತ್ರೆ ಆವರಣದಲ್ಲಿ ಉಪಯೋಗಕ್ಕೆ ಬಾರದ ಪಾರ್ಕ್
ಜಯಚಾಮರಾಜೇಂದ್ರ ಆಸ್ಪತ್ರೆ ಆವರಣದಲ್ಲಿ ರೋಗಿಗಳು ಹಾಗೂ ಅವರ ಸಹಾಯಕರಿಗೆ ಕೆಲ ಹೊತ್ತು ವಿಶ್ರಮಿಸಿಕೊಳ್ಳಲು ಆಸ್ಪತ್ರೆ ಆವರಣದಲ್ಲಿ ನಗರಸಭೆ ಉದ್ಯಾನವನ್ನು ನಿರ್ಮಿಸಿ ಕೊಟ್ಟಿದೆ. ಇದು ನಿರ್ಮಾಣವಾಗಿ ಹಲವು ವರ್ಷಗಳಾದರೂ ಆಸ್ಪತ್ರೆ ಆಡಳಿತ ಇದನ್ನು ಸಾರ್ವಜನಿಕರಿಗೆ ಮುಕ್ತವಾಗಿ ತೆರೆಯದೆ ಗೇಟ್ ಬಂದ್ ಮಾಡಿದ್ದಾರೆ. ಪಾರ್ಕ್ ಗಿಡಗಂಟಿಗಳಿಂದ ಆವೃತಗೊಂಡಿದ್ದು, ವಾಕ್ ಪಾತ್‌ನಲ್ಲಿ ಸಿಮೆಂಟ್ ಚಿಪ್ಸ್‌ಗಳ ಮೇಲೆ ಗಿಡಗಂಟೆಗಳು ಬೆಳೆದಿವೆ.
ವಕ್ಫ್ ವಿರುದ್ಧದ ಬಿಜೆಪಿ ಹೋರಾಟ ರಾಜಕೀಯ ದುರುದ್ದೇಶದ್ದು
ರಾಜಕೀಯ ದುರುದ್ದೇಶದಿಂದಲೇ ವಕ್ಫ್ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ ಎಂದು ಮುಖಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಒತ್ತುವರಿಯಾಗಿರುವ ವಕ್ಫ್ ಆಸ್ತಿಯನ್ನು ವಾಪಸ್‌ ಕೊಡಿಸುವುದಾಗಿ ಹೇಳಿಕೆ ನೀಡಿದ್ದರು. ಅಲ್ಲದೆ ಬಿಜೆಪಿ ಅಧಿಕಾರದಲ್ಲಿ ಇದ್ದ ಅವಧಿಯಲ್ಲೇ ವಕ್ಫ್ ಆಸ್ತಿ ತೆರವು ಮಾಡಲು ಮೊದಲು ರೈತರಿಗೆ ನೋಟಿಸ್ ನೀಡಿದ್ದೇ ಬಿಜೆಪಿಯವರು. ಅವರ ಕಾಲದಲ್ಲೇ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿದೆ. ಆದರೆ ಈಗ ಅದರ ಬಗ್ಗೆ ಅವರು ಮಾತನಾಡುವುದೇ ಇಲ್ಲ ಎಂದರು.
ಪ್ಲಾಸ್ಟಿಕ್‌ ಬಳಸದಂತೆ ಬೀದಿ ಬದಿ ವರ್ತಕರಿಗೆ ಸೂಚನೆ
ಚನ್ನರಾಯಪಟ್ಟಣ ಪಟ್ಟಣ ಏಳು ಕಿಲೋಮೀಟರ್ ಮುಖ್ಯರಸ್ತೆಯನ್ನು ಹೊಂದಿದ್ದು, ಬೀದಿ ಬದಿ ವ್ಯಾಪಾರಿಗಳೇ ರಸ್ತೆಗಳಲ್ಲಿ ಪ್ರಭುತ್ವ ಸಾಧಿಸಿದ್ದಾರೆ. ಅವರು ರಸ್ತೆಗೆ ಕಸ ಹಾಕಬಾರದು. ರಸ್ತೆಯನ್ನು ಒತ್ತುವರಿ ಮಾಡಬಾರದು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಘನತಾಜ್ಯ ನಿರ್ವಹಣೆಗಾಗಿ ನಲ್ಲೂರಿನಲ್ಲಿ ಸಂಸ್ಕರಣಾ ಘಟಕ ನಿಯೋಜನೆ ಮಾಡಲಾಗಿದೆ. ಕಸ ಹಾಕುವ ಬಗ್ಗೆ ಎಂಟು ದೂರುಗಳು ವಿವಿಧ ಶಾಲಾ ಇಲಾಖೆಗಳಿಂದ ಬಂದಿವೆ. ಸ್ವಚ್ಛತೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ.
ಗೌಡರ ಕುಟುಂಬದ ಮೇಲೆ ಮುಗಿಬಿದ್ದ ಕಾಂಗ್ರೆಸ್ಸಿಗರು
ಕಾಂಗ್ರೆಸ್ಸಿನ ಜನಕಲ್ಯಾಣ ಸಮಾವೇಶದ ಆರಂಭದಿಂದಲೂ ಕಡೆವರೆಗೂ ಸ್ವತಃ ಸಿಎಂ ಸಿದ್ಧರಾಮಯ್ಯ ಅವರಿಂದ ಹಿಡಿದು ಉಪ ಮುಖ್ಯಮಂತ್ರಿ ಡಿಕೆಶಿ ಹಾಗೂ ಹಲವು ಸಚಿವರು ಕೂಡ ಜೆಡಿಎಸ್‌ ವರಿಷ್ಠರಾದ ಎಚ್‌.ಡಿ. ದೇವೇಗೌಡರು ಹಾಗೂ ಅವರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದರೊಂದಿಗೆ ಈ ಸಮಾವೇಶ ಹಾಸನದಲ್ಲಿಯೇ ಏಕೆ ನಿಗದಿಯಾಯಿತು ಎನ್ನುವುದು ಸ್ಪಷ್ಟವಾದಂತಾಗಿದೆ.
ವಕೀಲರ ಸಂಘದಲ್ಲಿ ಆರೋಗ್ಯ ತಪಾಸಣೆ
ವಕೀಲ ದಿನಾಚರಣೆಯ ಪ್ರಯುಕ್ತ ವಕೀಲರ ಸಂಘದಲ್ಲಿ ರೋಟರಿ ಕ್ಲಬ್ ವಿಷನ್ ಮತ್ತು ಲಯನ್ಸ್ ಕ್ಲಬ್ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ವಕೀಲರು ತಮ್ಮ ವೃತ್ತಿ ಜೀವನದಲ್ಲಿ ಎಷ್ಟೇ ಒತ್ತಡವಿದ್ದರೂ ಸಹ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ವೈದ್ಯಾಧಿಕಾರಿ ಡಾ. ಮಹೇಶ್ ಅವರು ಏಡ್ಸ್ ಜಾಗೃತಿಯ ಬಗ್ಗೆ ಹಾಸನದ ನಾಲ್ಕನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಜಗದೀಶ್ ಅರಿವು ಮೂಡಿಸಿದರು.
ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ಬಾಂಗ್ಲಾ  ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ವಿರೋಧಿ ನೀತಿ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆ ಹಾಗೂ ಬಿಜೆಪಿಯಿಂದ ಬುಧವಾರ ನಗರದಲ್ಲಿ ಬೃಹತ್ ಜನಾಂದೋಲನ ಜಾಥಾ ನಡೆಸಿದಲ್ಲದೇ ನಗರದ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿ ಬಾಂಗ್ಲಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved