• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ವಿತರಣೆ
ಎಚ್.ಡಿ. ದೇವೇಗೌಡರ ೯೩ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದೇವೆ ಎಂದು ಪುರಸಭಾಧ್ಯಕ್ಷ ಎಚ್.ಕೆ.ಪ್ರಸನ್ನ ತಿಳಿಸಿದರು. ದೇವೇಗೌಡರ ಜನ್ಮದಿನ ಪ್ರಯುಕ್ತ ತಾಲೂಕು ಜೆಡಿಎಸ್ ವತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣುಗಳು ಹಾಗೂ ಬ್ರೆಡ್ ವಿತರಿಸಿ ಮಾತನಾಡಿದರು. ಗೌಡರಿಗೆ ದೇವರು ಇನ್ನಷ್ಟು ಆರೋಗ್ಯ, ಆಯಸ್ಸು, ನೆಮ್ಮದಿ ಕೊಟ್ಟು ಕಾಪಾಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ ಹಾಗೂ ತಾಲೂಕಿನ ಎಲ್ಲಾ ನಾಗರಿಕ ಪರವಾಗಿ ಜನ್ಮ ದಿನ ಶುಭಾಶಯವನ್ನು ಕೋರುತ್ತೇವೆ ಎಂದರು.
ನಿವೃತ್ತ ಅಂಗನವಾಡಿ ನೌಕರರ ಪೆನ್ಷನ್‌ಗೆ ಆಗ್ರಹಿಸಿ ಪ್ರತಿಭಟನೆ
ಎ.ಐ.ಟಿ.ಯು.ಸಿ. ಜಿಲ್ಲಾಧ್ಯಕ್ಷೆ ಎಸ್.ಎನ್. ಜಯಲಕ್ಷ್ಮಿ ಮಾಧ್ಯಮದೊಂದಿಗೆ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಐ.ಸಿ.ಡಿ.ಎಸ್.ಯಲ್ಲಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚ್ಯುಟಿ ಪಾವತಿ ಕಾಯಿದೆ ೧೯೭೨ರ ಅಡಿಯಲ್ಲಿ ಗ್ರಾಚ್ಯುಟಿ (ನಿವೃತ್ತಿ ಉಪಧನ) ಪಡೆಯಲು ಅರ್ಹರು ಎಂಬುದಾಗಿ ಸುಪ್ರೀಂಕೋರ್ಟ್ ಅತ್ಯಂತ ಮಹತ್ವದ ತೀರ್ಪನ್ನು ನೀಡಿದೆ. ನ್ಯಾಯಪೀಠವು ಅಂಗನವಾಡಿ ನೌಕರರ ಕೆಲಸ-ಕಾರ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ ಅವರ ಕೆಲಸವು ಅರೆಕಾಲಿಕವಲ್ಲ, ಅಂಗನವಾಡಿ ಪೂರ್ಣ ನೌಕರರು ನಿರ್ವಹಿಸುತ್ತಿದ್ದಾರೆಂಬುದನ್ನು ಒತ್ತಿ ಹೇಳಿದ್ದಾರೆ ಎಂದರು.
ಶಿಕ್ಷಣ ಸಚಿವರಿಗೆ ಶಾಸಕ ರೇವಣ್ಣ ತರಾಟೆ
ಬಡವರ ಮಕ್ಕಳನ್ನು ಗೋಳು ಹೊಯ್ದುಕೊಂಡರೆ ನಿಮ್ಮ ಕುಟುಂಬ ನಾಶ ಆಗುತ್ತದೆ. ಮಕ್ಕಳು ನೀಡುವ ಶುಲ್ಕದ್ದಲ್ಲಿಯೂ ಹಣ ಹೊಡೆತ್ತಿದ್ದೀರಲ್ಲ ನಿಮಗೆ ಮಾನ ಮರ್ಯಾದೆ ಇದೆಯೇ ಎಂದು ಶಾಸಕ ಎಚ್.ಡಿ.ರೇವಣ್ಣ ರಾಜ್ಯ ಶಿಕ್ಷಣ ಸಚಿವರ ವಿರುದ್ಧ ಹರಿಹಾಯ್ದರು. ವಿದ್ಯಾರ್ಥಿಗಳ ಪೋಷಕರು ಕೂಲಿ ಮಾಡಿ ಅಷ್ಟಿಷ್ಟು ಕೂಡಿ ಹಾಕಿ ಶಿಕ್ಷಣ ಸಂಸ್ಥೆಗೆ ನೀಡಿದ ಹಣವನ್ನು ನುಂಗಿ ನೀರು ಕುಡಿಯುತ್ತಿದ್ದೀರಿ ಇದು ಎಷ್ಟರ ಮಟ್ಟಿಗೆ ಸರಿ? ಇಂತಹ ಹಣವನ್ನು ನುಂಗಿ ನೀರು ಕುಡಿಯುತ್ತಿರುವ ಸಚಿವರ ವಂಶ ಹೇಗೆ ಉದ್ಧಾರ ಆಗಲು ಸಾಧ್ಯ ಎಂದು ಕಟುವಾಗಿ ಟೀಕಿಸಿದರು.
ಅತ್ಯಂತ ಹೃದಯಪೂರ್ವಕ ಸಹಕಾರ ದೊರೆತಿದೆ
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಪ ಲೋಕಾಯುಕ್ತರ ಕಚೇರಿಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಆಯ್ದ ಪ್ರಕರಣಗಳನ್ನು ಇತ್ಯರ್ಥ ಪಡಿಸಲುವ ಸಂಬಂಧ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಅವರು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹಾರ ಮಾಡಲು ಪ್ರಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಅಭಿನಂದನೆಗಳನ್ನು ತಿಳಿಸಿದರು. ಸುಸೂತ್ರವಾಗಿ ಪ್ರಕರಣಗಳ ವಿಲೇವಾರಿ ಮಾಡಲು ಆತ್ಮೀಯವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಆಕಾಶವಾಣಿಯಲ್ಲಿ ಎಂಸಿಇ ತಂತ್ರಸುಧಾ ಸರಣಿ
ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಚಾರಗಳನ್ನು ಜನಸಾಮಾನ್ಯರಿಗೆ ಸರಳವಾಗಿ ತಿಳಿಸಿಕೊಡುವ ಸಲುವಾಗಿ ಆಕಾಶವಾಣಿ ಹಾಸನ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದಲ್ಲಿ ರೂಪಿಸಿರುವ ’ತಂತ್ರಸುಧಾ’ ತಂತ್ರಜ್ಞಾನ ಸರಣಿ ಮೇ ೧೯ರಿಂದ ಸೋಮವಾರ ಹಾಗೂ ಬುಧವಾರ ಬೆಳಗ್ಗೆ ೮.೩೫ಕ್ಕೆ ಪ್ರಸಾರವಾಗಲಿದೆ. ಒಟ್ಟು ಹದಿನೈದು ಕಂತುಗಳನ್ನು ಈ ಸರಣಿ ಒಳಗೊಂಡಿದೆ.
ಹಟ್ಟಿ ಮಾರಮ್ಮ ನೂತನ ದೇವಾಲಯ ಜೀರ್ಣೋದ್ಧಾರಕ್ಕೆ ಅನುದಾನ
ನುಗ್ಗೇಹಳ್ಳಿ ಹೋಬಳಿಯ ಹೊನ್ನ ಮಾರನಹಳ್ಳಿ ಗ್ರಾಮದ ಹಟ್ಟಿ ಮಾರಮ್ಮ ದೇವಾಲಯದ ಸಮಿತಿ ಸದಸ್ಯರಿಗೆ 1.50 ಲಕ್ಷ ಅನುದಾನದ ಹಣವನ್ನು ಶಾಸಕರ ಪರವಾಗಿ ನೀಡಿ ಮಾತನಾಡಿದರು. ಗ್ರಾಮದ ಹಟ್ಟಿ ಮಾರಮ್ಮ ದೇವಾಲಯದ ನಿರ್ಮಾಣಕ್ಕೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣರವರು ವೈಯಕ್ತಿಕವಾಗಿ ಈಗಾಗಲೇ 75 ಸಾವಿರ ಹಣವನ್ನು ನೀಡಿದ್ದಾರೆ. ಇದರ ಜೊತೆಗೆ ಈಗ ಸರ್ಕಾರದಿಂದ 1.50 ಅನುದಾನವನ್ನು ಬಿಡುಗಡೆ ಮಾಡಿಸಿ ದೇವಾಲಯದ ಸಮಿತಿ ಸದಸ್ಯರಿಗೆ ಹಣವನ್ನು ನೀಡಲಾಗಿದೆ ಎಂದರು.
ಹೇಮಾವತಿ ಸಕ್ಕರೆ ಕಾರ್ಖಾನೆಯಿಂದ ಪೊಲೀಸ್ ಠಾಣೆಗೆ ಹೊಸ ಜೀಪ್
೧೦-೧೨ ವರ್ಷಗಳಷ್ಟು ಹಳೆಯದಾದ ವಾಹನಗಳನ್ನು ಆಶ್ರಯಿಸಿ ಪೊಲೀಸರು ಕಾರ್ಯನಿರ್ವಹಿಸುವ ಪರಿಸ್ಥಿತಿ ಇದೆ. ಗೃಹ ಸಚಿವರು ಆಯಾ ಸರ್ಕಲ್ ಇನ್ಸ್‌ಪೆಕ್ಟರ್‌ ವ್ಯಾಪ್ತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದಿಂದ ಹೊಸ ವಾಹನ ಪಡೆಯುವಂತೆ ಇಲಾಖೆಗೆ ಸೂಚಿಸಿರುವುದರ ಜೊತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾರವರ ಮನವಿ ಮೇರೆಗೆ ಶ್ರೀನಿವಾಸಪುರದಲ್ಲಿರುವ ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ವ್ಯವಸ್ಥಾಪಕರು, ನಿರ್ದೇಶಕರ ಅನುಮತಿ ಪಡೆದು ನೂತನ ಜೀಪನ್ನು ಇಲಾಖೆಗೆ ಹಸ್ತಾಂತರ ಮಾಡಲಾಗುತ್ತಿದೆ ಎಂದರು.
ಸಮೀಕ್ಷೆ ವೇಳೆ ಮೀಸಲಾತಿ ಲಾಭ ಪಡೆಯಲು ನುಸುಳಿದರೆ ಹೋರಾಟ
ಪರಿಶಿಷ್ಟರಲ್ಲದ ಹಲವು ಜಾತಿಗಳು ಒಳಮೀಸಲಾತಿಗಾಗಿ ನಡೆಯುತ್ತಿರುವ ಸಮೀಕ್ಷೆಯಲ್ಲಿ ತಪ್ಪು ಮಾಹಿತಿ ನೀಡಿ ಪ.ಜಾತಿಗೆ ನುಸುಳುವ ಮೂಲಕ ಮೀಸಲಾತಿ ಲಾಭ ಪಡೆಯಲು ಹುನ್ನಾರ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಎಚ್ಚರಿಸಿದರು. ಈ ನಿಟ್ಟಿನಲ್ಲಿ ಸಮೀಕ್ಷೆ ಅವಧಿಯನ್ನು ಇನ್ನಷ್ಟು ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದರು.
ಶಿಕ್ಷಣ ಔದ್ಯೋಗಿಕ ವಲಯದಲ್ಲಿ ವ್ಯಾಪಕ ಬದಲಾವಣೆ
ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ದತ್ತಾಂಶ ವಿಜ್ಞಾನ ಮತ್ತು ಮಾಹಿತಿ ವ್ಯವಸ್ಥೆ ಕುರಿತ ಎರಡು ದಿನಗಳ ಐಇಇಇ (ಇನ್ಸ್‌ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್) ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆ ಪ್ರಸ್ತುತ ಇರುವ ತರಗತಿಗಳು ಮತ್ತು ಕೆಲಸದ ಸ್ವರೂಪವನ್ನು ಬದಲಿಸಲಿದೆ. ಆಸ್ತಿ ಹಾಗೂ ವಿವಾಹ ನೋಂದಣಿ ಮಾಡಿಸುವ ರೀತಿಯಲ್ಲಿಯೇ ಹೊಸ ಆವಿಷ್ಕಾರಗಳನ್ನು ಪೇಟೆಂಟ್ ಕಚೇರಿ ಮೂಲಕ ನೋಂದಣಿ ಮಾಡಿಸುವುದು ಅತ್ಯಗತ್ಯ ಎಂದು ತಿಳಿಸಿದರು.
ಹಾಪ್‌ಕಾಮ್ಸ್‌ನಲ್ಲಿ ಇಲ್ಲ ದರ ಪಟ್ಟಿ
ಹೊಳೆನರಸೀಪುರ ಪಟ್ಟಣದ ಮಾರಾಟ ಮಳಿಗೆಯೂ ಸಾರ್ವಜನಿಕರಿಗೆ ರಾಜ್ಯ ಹಾಪ್‌ಕಮ್ಸ್ ಮಾರಾಟ ನಿಗಮ ಹಣ್ಣುಗಳನ್ನು ನೀಡುವಲ್ಲಿ ಬಹಳಷ್ಟು ಉತ್ತಮ ಸಾಧನೆ ಮಾಡಿದ ಪರಿಣಾಮ ಇಂದು ಹಲವಾರು ವಿಧದ ಗುಣಮಟ್ಟದ ಹಣ್ಣುಗಳು ದೊರೆಯುವ ಜೊತೆಗೆ ತಾಜಾ ಹಣ್ಣುಗಳು ದೊರೆಯುತ್ತಿರುವುದು ವಿಶೇಷ ಎಂದೆ ಹೇಳಬಹುದಾಗಿದೆ. ಆದರೆ ಇಲ್ಲಿನ ಹಾಪ್‌ಕಾಮ್ಸ್ ಮಳಿಗೆಯಲ್ಲಿ ಎಲ್ಲ ವಿಧವಾದ ಹಣ್ಣುಗಳು ದೊರೆಯುತ್ತಿದೆಯಾದರೂ ಹಣ್ಣುಗಳ ಮಾರಾಟದ ನಿಗದಿತ ಬೆಲೆಯ ಪಟ್ಟಿ ಹಾಕದೇ ಮನಬಂದಂತೆ ಬೆಲೆ ನಿಗದಿ ಪಡಿಸಿ, ಗ್ರಾಹಕರನ್ನು ದೋಚಲಾಗುತ್ತಿದೆ.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 551
  • next >
Top Stories
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved