• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನರಾಯಪಟ್ಟಣದಲ್ಲಿ ಶ್ರೀಕೃಷ್ಣ ಸಂಧಾನ ನಾಟಕ ಪ್ರದರ್ಶನ
ಸಮಾಜದಲ್ಲಿ ಮನಷ್ಯ ಸಂಬಂಧವನ್ನು ಮಾನವಿಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುವುದರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ, ಮಾನವೀಯ ಸಂಬಂಧಗಳು ನೆಲೆಗೊಳ್ಳಲು ನಾಟಕಗಳನ್ನು ನಡೆಸುತ್ತಾ ಬಂದಿದ್ದು ಕಲೆಯನ್ನು ಬೆಳೆಸುವುದು ಎಲ್ಲರ ಕರ್ತವ್ಯವಾಗಿದೆ. ಡಿ.೨ರಂದು ಬೆಳಗ್ಗೆ ೧೧.೩೦ಕ್ಕೆ ಶ್ರೀಕೃಷ್ಣ ಸಂಧಾನ ಅಥವಾ ಛಲದೋಳ್ ದುರ್ಯೋಧನ ಎಂಬ ಸುಂದರ ಪೌರಾಣಿಕ ನಾಟಕವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಪನ್ಯಾಸಕ ದಮ್ಮನಿಂಗಲ ಮಂಜುನಾಥ್ ತಿಳಿಸಿದರು.
ಬೆಳೆಗಾರರಿಗೆ ಕೊಂಚ ನೆಮ್ಮದಿ ತಂದ ಕಾಡಾನೆಗಳ ವಲಸೆ
ಕಾಡಾನೆಗಳ ಸಮಸ್ಯೆಯಿಂದ ತೀವ್ರವಾಗಿ ನಲುಗಿದ್ದ ಸಕಲೇಶಪುರ, ಆಲೂರು ತಾಲೂಕಿನ ಜನರಿಗೆ ಕಾಡಾನೆಗಳ ವಲಸೆ ಅಲ್ಪಪ್ರಮಾಣದ ನೆಮ್ಮದಿ ತಂದಿದೆ. ಸಕಲೇಶಪುರ ತಾಲೂಕಿನಲ್ಲಿದ್ದ ಕಾಡಾನೆಗಳು ಚಿಕ್ಕಮಗಳೂರಿನಲ್ಲಿ ಸದ್ದು ಮಾಡುತಿದ್ದು ಇಂತಹದೊಂದು ಬೆಳವಣಿಗೆ ಜಿಲ್ಲೆಯ ಆಲೂರು, ಸಕಲೇಶಪುರ ತಾಲೂಕಿನ ಜನರ ಸಂಭ್ರಮಕ್ಕೆ ಕಾರಣವಾಗಿದೆ. ಚಿಕ್ಕಮಗಳೂರು ಅರಣ್ಯ ಇಲಾಖೆ ಕಾಡಾನೆಗಳು ಹಿಂಡು ಜಿಲ್ಲೆ ಪ್ರವೇಶಿದಂತೆ ತಡೆಯುವ ಸಾಕಷ್ಟು ಪ್ರಯತ್ನ ನಡೆಸಿತಾದರೂ ಪ್ರಯತ್ನ ವಿಫಲಗೊಂಡಿದ್ದು ಸದ್ಯ ಚಿಕ್ಕಮಗಳೂರು ತಾಲೂಕಿನ ಹಲವು ಗ್ರಾಮಗಳಲ್ಲಿ ಸದ್ಯ ಕಾಡಾನೆಗಳ ಕಾಟ ಆರಂಭವಾಗಿದೆ.
ಕನ್ನಡ ಭಾಷೆ ಇತ್ತೀಚಿಗೆ ಅನ್ಯಭಾಷೆಗಳ ವ್ಯಾಮೋಹದಿಂದ ಕುಗ್ಗುತ್ತಿದೆ
ಆಟೋ ಚಾಲಕರು ತಮ್ಮ ವಾಹನಗಳಿಗೆ ಕನ್ನಡದ ಹಿರಿಮೆ ಸಾರುವ ಸಂದೇಶಗಳನ್ನು, ಚಿತ್ರಗಳನ್ನು ಬರೆಸುವ ಮೂಲಕ ಕನ್ನಡಾಭಿಮಾನವನ್ನು ಮೆರೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಗ್ರಾನೈಟ್ ರಾಜಶೇಖರ್ ಹೇಳಿದರು. ಪಟ್ಟಣದ ಜೂನಿಯರ್‌ ಕಾಲೇಜು ಆವರಣದಲ್ಲಿ ಹೊಯ್ಸಳ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ಹಮ್ಮಿಕೊಂಡ ಅದ್ಧೂರಿ ಕನ್ನಡ ರಾಜ್ಯೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ತಾಲೂಕಿನ ಹಲ್ಮಿಡಿಯಲ್ಲಿ ಲಭ್ಯವಾದ ಶಿಲಾಶಾಸನದಿಂದ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದೆ. ಜಗತ್ತಿನ ಸಾವಿರಾರು ಭಾಷೆಯಲ್ಲಿ ಲಿಪಿಯನ್ನು ಹೊಂದಿರುವ ಹೆಗ್ಗಳಿಕೆ ಕನ್ನಡ ಭಾಷೆಗಿದೆ ಎಂದರು.
ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ದುರ್ಮರಣ
ಹೊಳೆನರಸೀಪುರ ವಿಭಾಗದ ಡಿವೈಎಸ್ಪಿಯಾಗಿ ನಿಯೋಜನೆಗೊಂಡಿದ್ದ ಹರ್ಷಬರ್ದನ್‌ ಮೈಸೂರಿನಲ್ಲಿ ದಕ್ಷಿಣ ವಲಯದ ಐಜಿ ಬೋರಲಿಂಗಯ್ಯ ಅವರನ್ನು ಭೇಟಿ ಮಾಡಿ ಹಾಸನದಲ್ಲಿ ಎಸ್ಪಿ ಸುಜೀತಾ ಅವರ ಬಳಿ ಕೆಲಸಕ್ಕೆ ವರದಿ ಮಾಡಿಕೊಳ್ಳಲು ಬರುತ್ತಿದ್ದರು. ಈ ಸಂದರ್ಭದಲ್ಲಿ ಅವರು ಬರುತ್ತಿದ್ದ ಇಲಾಖೆಯ ಬೊಲೇರೋ ಜೀಪಿನ ಟಯರ್‌ ಸಿಡಿದು ಅಪಘಾತ ಸಂಭವಿಸಿತ್ತು. ಈ ವೇಳೆ ಹರ್ಷಬರ್ದನ್‌ ತಲೆಗೆ ಗಂಭೀರ ಸ್ವರೂಪದ ಪೆಟ್ಟಾಗಿತ್ತು. ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ಬೇರೆ ಭಾಷೆಗಳನ್ನು ಕಲಿತರೂ ಕೂಡ ಕನ್ನಡವನ್ನು ಬಿಡಬಾರದು
ಕನ್ನಡ ಭಾಷಾ ಅಭಿಮಾನ ಕೇವಲ ನವೆಂಬರ್‌ ತಿಂಗಳಿಗೆ ಸೀಮಿತವಾಗದೆ ಪ್ರತಿದಿನ ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕು ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಕೆ. ಸುರೇಶ್ ಹೇಳಿದರು. ಅನ್ಯ ಭಾಷಿಗರನ್ನು ಗೌರವಿಸುವ ಜೊತೆಗೆ ಕನ್ನಡದ ಬಗ್ಗೆ ಪ್ರೀತಿ ಇರಬೇಕು. ಅನಿವಾರ್ಯ ಕಾರಣಗಳಿಗಾಗಿ ಬೇರೆ ಭಾಷೆಗಳನ್ನು ಕಲಿತರೂ ಕೂಡ ಕನ್ನಡವನ್ನು ಬಿಡಬಾರದು ಎಂದು ಹೇಳಿದರು. ಪಟ್ಟಣದ ವೈಡಿಡಿ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಕಾಲೇಜಿನ ವಿವಿಧ ಸಮಿತಿಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು.
ಅಂಗವಿಕಲ ಯುವತಿಗೆ ಸಿಗದ ಸರ್ಕಾರಿ ಸೌಲಭ್ಯ
ಅಶಕ್ತ, ದೀನ, ದುರ್ಬಲ, ಶೋಷಿತ ಮಹಿಳಾ ಸಮುದಾಯಕ್ಕೆ ಸವಲತ್ತುಗಳನ್ನು ತಲುಪಿಸುವುದು ಸರ್ಕಾರ ಹಾಗೂ ಅಧಿಕಾರಿಗಳ ಮೊದಲ ಆದ್ಯತೆಯಾಗಿದೆ. ಆದರೆ ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಹಾಸಿಗೆ ಹಿಡಿದಿರುವ ತಾಲೂಕಿನ ಕಣಕಟ್ಟೆ ಹೋಬಳಿ ಕಿತ್ತನಕೆರೆ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಅಂಗವಿಕಲ ಪದವೀಧರ ಯುವತಿ ಶ್ರುತಿ ಇಂತಹ ಎಲ್ಲ ಬಗೆಯ ಸೌಕರ್ಯಗಳಿಂದ ವಂಚಿತಳಾಗಿದ್ದಾಳೆ. ವಾಸ್ತವ ಮನಗಂಡು ತಕ್ಷಣವೇ ಯುವತಿ ನೆರವಿಗೆ ಧಾವಿಸಬೇಕು ಎನ್ನುವ ಒತ್ತಾಯ ಸಾಮಾಜಿಕ ಕಾರ್ಯಕರ್ತ ವೀರಭದ್ರಪ್ಪ ಅವರಿಂದ ಕೇಳಿಬಂದಿದೆ.
ಮೊಬೈಲ್‌ ವ್ಯಾಮೋಹದಿಂದ ಓದುವ ಹವ್ಯಾಸ ಕಡಿಮೆಯಾಗಿದೆ
ಇಂಗ್ಲೀಷ್ ವ್ಯಾಮೋಹ ಬಿಟ್ಟು ಹಲವಾರು ಶತಮಾನಗಳಿಂದ ಬಳಕೆಯಲ್ಲಿರುವ ಜತೆಗೆ ಜೀವಂತ ಭಾಷೆಯಾಗಿರುವ, ನಮ್ಮ ನಾಡು, ನುಡಿ, ಸಂಸ್ಕೃತಿಯ ಪ್ರತೀಕವಾದ ಕನ್ನಡ ಭಾಷೆ ಬಳಕೆಯಿಂದ ಮುಂದಿನ ತಲೆಮಾರಿಗೆ ಕನ್ನಡದ ಹಿರಿಮೆಯನ್ನು ಪಸರಿಸಲು ಸಾಧ್ಯವೆಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಧನಶೇಖರ್ ಅಭಿಪ್ರಾಯಪಟ್ಟರು. ಇಂದಿನ ಮೊಬೈಲ್ ವ್ಯಾಮೋಹದಿಂದ ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಶ್ರೇಷ್ಠ ಕೃತಿಗಳ ಬಗ್ಗೆ ಅಧ್ಯಯನ ಮತ್ತು ಚರ್ಚೆ ಪ್ರತಿ ಮನೆಯಲ್ಲೂ ನಡೆಯಬೇಕಿದೆ ಎಂದು ಸಲಹೆ ನೀಡಿದರು.
ರಾಮನಾಥಪುರದಲ್ಲಿ ಗೂಡಂಗಡಿಗಳ ತೆರವು
ರಾಮನಾಥಪುರ ಶ್ರೀ ಪ್ರಸನ್ನ ಸುಬ್ರಮಣ್ಯಸ್ವಾಮಿ ಮಹಾರಥೋತ್ಸವ ಡಿಸೆಂಬರ್ 7ರಂದು ಶನಿವಾರ ನಡೆಯುವುದರಿಂದ ರಸ್ತೆ ಬದಿಯಲ್ಲಿ ಬೇಕಾಬಿಟ್ಟಿ ಹಾಕಿಕೊಂಡಿದ್ದ ಗೂಡಂಗಡಿಗಳನ್ನು ತೆರವು ಮಾಡಿಸಿ ಮತ್ತೆ ಅದೇ ಜಾಗದಲ್ಲಿ ಉತ್ತಮ ರೀತಿಯಲ್ಲಿ ಅಂಗಡಿಗಳನ್ನು ನಿರ್ಮಾಣ ಮಾಡಿಕೊಳ್ಳಲು ಅವರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ ಹೇಳಿದರು. ಶ್ರೀ ಸುಬ್ರಮಣ್ಯೇಶ್ವರಸ್ವಾಮಿ, ಅಗಸ್ಥೇಶ್ವರಸ್ವಾಮಿ ಮುಂತಾದ ದೇವಾಲಯಗಳ ಅಕ್ಕಪಕ್ಕದಲ್ಲಿ ಇಷ್ಟ ಬಂದಂತೆ ಸ್ವಚ್ಛತೆ ಇಲ್ಲದೆ ಕಟ್ಟಿಕೊಂಡಿದ್ದ ಗೂಡಂಗಡಿಗಳನ್ನು ತೆರವು ಮಾಡಲಾಯಿತು.
ರಂಗಕಲೆ ಮನರಂಜನಾ ಮಾಧ್ಯಮವಾಗಿ ಜೀವಂತಿಕೆ ಉಳಿಸಿಕೊಂಡಿದೆ
ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ ಆಯೋಜಿಸಿರುವ ಒಂಬತ್ತು ದಿನಗಳ ನಾಟಕೋತ್ಸವದ ೨ನೇ ದಿನವಾದ ಶನಿವಾರ ಹಾಸನದ ಶ್ರೀ ಮೇಲುಕೋಟೆ ಚಲುವನಾರಾಯಣಸ್ವಾಮಿ ಕಲಾಸಂಘದ ಕಲಾವಿದರು ಕೆ.ಆರ್‌. ಬಾಲಕೃಷ್ಣ ಕಟ್ಟಾಯ, ಕಲ್ಲಯ್ಯ (ಕುಶಾಲ್), ದೇವರಾಜು ಗೊರೂರು, ಎಚ್.ಎಂ.ಪ್ರಭಾಕರ್, ಟಿ.ಆರ್‌.ಪ್ರಕಾಶ್, ಎಸ್.ಎಲ್.ಚಂದ್ರಶೇಖರ್ ನೇತೃತ್ವದಲ್ಲಿ ಸೀಗೆನಾಡು ಪಾಲಾಕ್ಷಾಚಾರ್ ನಿರ್ದೇಶನದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶಿಸಿದರು.
ಕಾರ್ಜುವಳ್ಳಿ ಮಠದಲ್ಲಿ ವೀರಭದ್ರಸ್ವಾಮಿ ಕಲ್ಯಾಣ ಮಹೋತ್ಸವ
ಶ್ರೀಮದ್ ರಂಭಾಪುರಿ ವೀರ ಸಿಂಹಾಸನ ಶಾಖೆಯಾದ ಕಾರ್ಜುವಳ್ಳಿಯ ಹಿರೇಮಠದಲ್ಲಿ ಡಿ.16ರಿಂದ 20ರವರೆಗೆ ಲಿಂಗೈಕ್ಯ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಅವರ 46ನೇ ವರ್ಷದ ಪುಣ್ಯ ಸ್ಮರಣೋತ್ಸವ, ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ ಅವರ ಪಟ್ಟಾಧಿಕಾರದ 4ನೇ ವಾರ್ಷಿಕೋತ್ಸವ ವರ್ಧಂತಿ ಮಹೋತ್ಸವ ಹಾಗೂ ವೀರಭದ್ರಸ್ವಾಮಿ ಕಲ್ಯಾಣ ಮಹೋತ್ಸವ ಹಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved