• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಕಲಾವಿದರಿಂದ ಕುರುಕ್ಷೇತ್ರ ನಾಟಕ ಪ್ರದರ್ಶನ
ಕಾವೇರಿ ಸಾಂಸ್ಕೃತಿಕ ಮಹಿಳಾ ಕಲಾ ಸಂಘ ಮಾರಗೌಡನಹಳ್ಳಿ ವತಿಯಿಂದ ನಂಜುಂಡೇಶ್ವರ ಡ್ರಾಮಸೀನ್ಸ್‌ರ ದಿಂಡಗೂರು ಮೀನ್‌ರಾಜಣ್ಣರವರ ಸೀನರಿಯಲ್ಲಿ ನಡೆದ ಕುರುಕ್ಷೇತ್ರ ಅಥವಾ ಗದಾಯುದ್ಧ ಎಂಬ ಮಹಿಳಾ ಕಲಾವಿದರು ಅಭಿನಯಿಸಿರುವ ಪೌರಾಣಿಕ ನಾಟಕದ ಉದ್ಘಾಟನೆಯನ್ನು ಮಾಜಿ ಶಾಸಕ ಎಂ. ಎ. ಗೋಪಾಲಸ್ವಾಮಿರವರ ಪತ್ನಿ ಕಾಂಗ್ರೆಸ್ ಮುಖಂಡರಾದ ಗೀತಾ ಗೋಪಾಲಸ್ವಾಮಿ ತಿಳಿಸಿದರು. ಮಹಿಳೆಗೆ ಯಾವಾಗ ವಂಚನೆಗಳು ನಡೆಯುತ್ತವೋ ಆಗ ದೇವರು ಎಂದೂ ಕೈಬಿಡುವುದಿಲ್ಲ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹೆಚ್ಚು ಮಹಿಳಾ ನಾಟಕೋತ್ಸವಗಳು ನಡೆಯಲಿ ನಮ್ಮ ಸಹಕಾರ ಸದಾ ಇರುತ್ತದೆ ಎಂದರು.
ಹೊರಗುತ್ತಿಗೆ ನೌಕರರ ಬೇಡಿಕೆ ಬಗ್ಗೆ ಸದನದಲ್ಲಿ ಚರ್ಚೆ
ಹೊರಗುತ್ತಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಬಗ್ಗೆ ಸದನದಲ್ಲಿ ಚರ್ಚೆಗೆ ತರಲಾಗುವುದು. ಹೊರಗುತ್ತಿಗೆ ಕೆಲಸಕ್ಕೆ ತೆಗೆದುಕೊಳ್ಳುವಾಗ ಯಾರಾದರೂ ಹಣ ಕೇಳಿದರೆ ಕೊಡಬೇಡಿ. ನಮ್ಮ ಗಮನಕ್ಕೆ ತಂದರೇ ಇದನ್ನ ದೊಡ್ಡಮಟ್ಟದಲ್ಲಿ ತೆಗೆದುಕೊಂಡು ಹೋಗಿ ಕಡಿವಾಣ ಹಾಕಲಾಗುವುದು ಎಂದು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಖಡಕ್ ಎಚ್ಚರಿಕೆ ನೀಡಿದರು. ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಸದನದಲ್ಲಿ ಚರ್ಚೆ ಮಾಡುವ ಕೆಲಸವನ್ನು ಖಂಡಿತವಾಗಿ ಮಾಡಲಾಗುವುದು. ನಿಮ್ಮ ನ್ಯಾಯಯುತವಾದ ಬೇಡಿಕೆಗೆ ನ್ಯಾಯ ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಎಂದರು.
ಚಾರುಕೀರ್ತಿ ಭಟ್ಟಾರಕರ ನಿಷಿಧಿ ಮಂಟಪ ಲೋಕಾರ್ಪಣೆ
ಜೈನಕಾಶಿ ಶ್ರೀ ಶ್ರವಣಬೆಳಗೊಳದ ಪ್ರಾತಃಸ್ಮರಣೀಯರಾದ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ನೆನಪಿಗಾಗಿ ಶ್ರವಣಬೆಳಗೊಳದ ಚಿಕ್ಕಬೆಟ್ಟದ ಪಕ್ಕದಲ್ಲೇ ಇರುವ ನಿಷಿಧಿ ಬೆಟ್ಟದಲ್ಲಿ "ನಿಷಿಧಿ ಮಂಟಪ " ನಿರ್ಮಾಣ ಮಾಡಲಾಗಿದ್ದು, ಡಿಸೆಂಬರ್‌ ೬ರಂದು ಈ ಮಂಟಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಶ್ರವಣಬೆಳಗೊಳ ಜೈನ ಮಠದ ಅಭಿನವ ಚಾರುಕೀರ್ತಿ ಭಟ್ಟಾರಕರು ತಿಳಿಸಿದರು.
ಸಂವಿಧಾನ ಉಳಿದಿದೆ ಎಂದ್ರೆ ಪ್ರಧಾನಿ ಮೋದಿ ಸರ್ಕಾರದಿಂದ
ಬಿಜೆಪಿಯನ್ನು ಮತ್ತು ಪಕ್ಷದ ಮುಖಂಡರನ್ನು ಯಾವುದೇ ಆಧಾರಗಳಿಲ್ಲದೇ ಸಂವಿಧಾನ ವಿರೋಧಿಗಳೆಂದು ಕಾಂಗ್ರೆಸ್ ಪಕ್ಷದವರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಸ್ತುತದಲ್ಲಿ ಸಂವಿಧಾನಕ್ಕೆ ಏನಾದರೂ ಗೌರವ ಉಳಿದಿದ್ದರೇ ಅದು ಬಿಜೆಪಿಯ ಮೋದಿ ಸರ್ಕಾರದಿಂದ ಮಾತ್ರ ಎಂದು ಬಿಜೆಪಿ ವಕ್ತಾರ ವಿಕಾಸ್ ಪುತ್ತೂರು ತಿಳಿಸಿದರು. ಮೋದಿಯವರು ಪ್ರಧಾನಿ ಆಗುವ ಮೊದಲೇ ಗುಜರಾತಿನಲ್ಲಿ ಮುಖ್ಯಮಂತ್ರಿಯಾದ ವೇಳೆ ಆನೆ ಅಂಬಾರಿ ಮೇಲೆ ಸಂವಿಧಾನವನ್ನಿಟ್ಟು ಮೆರವಣಿಗೆ ಮಾಡಿದ್ದರು. ನವೆಂಬರ್ ೨೬ರೆಂದರೇ ಶ್ರೇಷ್ಠವಾದ ದಿನವಾಗಿದೆ. ಅಧಿಕೃತ ಭಾರತದ ಸಂವಿಧಾನವಾಗಿ ೧೯೫೦ರ ಜನವರಿ ೨೬ಕ್ಕೆ ಆಗಿದೆ.
ಆಟೋ ಚಾಲಕರ ವಿರುದ್ಧ ಸಿಎಂಗೆ ಪತ್ರ ತನಿಖೆಗೆ ಒತ್ತಾಯ
ವಿದ್ಯಾರ್ಥಿನಿ ಮೇಲೆ ಲೈಗಿಂಕ ದೌರ್ಜನ್ಯ ನಡೆಸಲಾಗಿದೆ ಎಂದು ಮುಖ್ಯಮಂತ್ರಿಗೆ ಬರೆದಿರುವ ಪತ್ರ ದುರದ್ದೇಶದಿಂದ ಕೂಡಿದ್ದು ಸಮಗ್ರ ತನಿಖೆ ನೆಡೆಸಬೇಕು ಎಂದು ಆಟೋ ಚಾಲಕರ ಸಂಘದಿಂದ ಶನಿವಾರ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು. ಹೊಸ ಬಸ್ ನಿಲ್ದಾಣದ ಎದುರು ನಿಲುಗಡೆ ಮಾಡಲಾಗುವ ಆಟೋ ಚಾಲಕರು ಹಾಗೂ ಕಾರು ಚಾಲಕರು ವಿದ್ಯಾರ್ಥಿನಿಯೊಬ್ಬರನ್ನು ಮಾನಸಿಕವಾಗಿ ಘಾಸಿಗೊಳಿಸಿ ಮೈಮುಟ್ಟಿ ಎಳೆದಾಡುವ ಮೂಲಕ ಹಿಂಸೆ ನೀಡಿದ್ದಾರೆ. ಆದ್ದರಿಂದ ಇಲ್ಲಿರುವ ಆಟೋ ಹಾಗೂ ಕಾರು ನಿಲ್ದಾಣವನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿನಿ ಹೆಸರಿನಲ್ಲಿ ಅನಾಮಧೇಯವಾಗಿ ಬರೆದಿರುವ ಪತ್ರ ರಾರಾಜಿಸುತ್ತಿದೆ.
ಕನ್ನಡ ಭಾಷೆಯನ್ನು ಬೆಳೆಸಬೇಕು ಎಂದ ಶಿವರಾಮು
ಕನ್ನಡ ಭಾಷೆ ಅಕ್ಷರ ಮಾತ್ರವಲ್ಲ, ಕನ್ನಡಿಗರ ನರನಾಡಿಗಳಲ್ಲಿ ಇರುವ ಭಾಷೆ ಕನ್ನಡ ಎಂದು ನಾಗಶ್ರೀ ಆಂಗ್ಲ ಮಾಧ್ಯಮ ಶಾಲೆಯ ಬಿ.ಎಸ್ ಶಿವರಾಮು ಹೇಳಿದರು. ಟೈಮ್ಸ್‌ ಪಿಯು ಕಾಲೇಜು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ, ಸಂಪ್ರದಾಯಕ ದಿನ, ಪ್ರಯೋಗ ಶಾಲೆ ಹಾಗೂ, ಸವಿರುಚಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಕನ್ನಡಕ್ಕೆ ಸಂದಿವೆ. ಕನ್ನಡ ಭಾಷೆಯನ್ನು ಬೆಳೆಸಬೇಕು. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಗೆ ಸಿದ್ಧರಾಗಬೇಕು. ಪದವಿಪೂರ್ವ ಕಾಲೇಜು ಹಂತ ವಿದ್ಯಾರ್ಥಿಗಳ ಪಾಲಿಗೆ ಪ್ರಮುಖ ಘಟ್ಟವಾಗಿದೆ ಎಂದರು.
ಶಾಂತಿಯುತವಾಗಿ ನಡೆದ ಗಣೇಶೋತ್ಸವದ ಮೆರವಣಿಗೆ
ಗಣೇಶೋತ್ಸವದ ಮೆರವಣಿಗೆ ೨ನೇ ದಿನವಾದ ಶನಿವಾರವೂ ಶಾಂತಿಯುತವಾಗಿ, ಸಡಗರ, ಸಂಭ್ರಮದಿಂದ ಮುಂದುವರಿದಿದ್ದು, ೨೫ಸಾವಿರಕ್ಕೂ ಹೆಚ್ಚು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ೨೫ಕ್ಕೂ ಹೆಚ್ಚಿನ ಸಾಂಸ್ಕೃತಿಕ ಕಲಾ ತಂಡಗಳು ಜನಮನಸೂರೆಗೊಂಡರೆ, ಭಾರಿ ಮದ್ದು ಗುಂಡುಗಳ ಪ್ರದರ್ಶನ ನೆರೆದಿದ್ದ ಜನರನ್ನು ನಿಬ್ಬೆರಗಾಗಿಸುವಂತೆ ಮಾಡಿದೆ. ಹಿಂದೂ-ಮುಸಲ್ಮಾನ್‌ ಲೋಡರ್ಸ್‌ ಮಜ್ದೂರ್ ಯೂನಿಯನ್ ವತಿಯಿಂದ ಗಣಪತಿಗೆ ಭಾರಿ ಗಾತ್ರದ ಹಾರ ಸಮರ್ಪಿಸಿದರು. ಅಲ್ಲದೇ ಅಂಗಡಿಯ ಪ್ರತಿಯೊಬ್ಬ ವರ್ತಕರೂ ವಿಶೇಷ ಪೂಜೆ ಸಲ್ಲಿಸಿದರು.
ಶಾಸಕ ಅಥವಾ ಸಂಸದನಾಗಬೇಕೆಂದು ನಾನೆಂದೂ ಹಪಹಪಿಸಿಲ್ಲ
ನಾನು ಸಂಸದ, ಶಾಸಕನಾಗಲು ಎಂದು ಕೂಡ ಹಪಹಪಿಸಿಲ್ಲ. ಹಾಗಿದ್ದರೆ ನಾನು ಚಿತ್ರರಂಗಕ್ಕೆ ಹೋಗುತ್ತಿರಲಿಲ್ಲ, ರಾಜಕಾರಣಕ್ಕೆ ಬರುತ್ತಿದ್ದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಹಲವಾರು ಸಂದರ್ಭದಲ್ಲಿ ಅಖಾಡ ಸಿದ್ಧವಾಗಿತ್ತು, ಬಹಳ ಸುಲಭವಾಗಿ ಶಾಸಕನಾಗಬಹುದಿತ್ತು. ಆದರೆ ಇಲ್ಲಿಯವರೆಗೂ ನಾನು ನಮ್ಮ ಪಕ್ಷ ಸಂಕಷ್ಟದಲ್ಲಿತ್ತು, ಆ ಸಂದರ್ಭದಲ್ಲಿ ಒಬ್ಬ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ ಎಂದು ಹೇಳಿದರು.
ನಿವೃತ್ತ ಶಿಕ್ಷಣಾಧಿಕಾರಿ ತಮಣ್ಣಗೌಡರಿಗೆ ಸನ್ಮಾನ
ಜಿಲ್ಲಾ ವಸತಿ ಶಾಲೆಗಳ ಒಕ್ಕೂಟದಿಂದ ತಾಲೂಕಿನ ದೊಡ್ಡಮಗ್ಗೆ ಡಾ.ಬಿ.ಆರ್‌.ಅಂಬೇಡ್ಕರ್‌ ವಸತಿ ಶಾಲೆಯಲ್ಲಿ ಶುಕ್ರವಾರ ಹಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ ಜೆ.ಬಿ.ತಮಣ್ಣಗೌಡ ಅವರನ್ನು ಸನ್ಮಾನಿಸಲಾಯಿತು. ತಮಣ್ಣಗೌಡ ಅವರು ಶಿಕ್ಷಣ ಕ್ಷೇತ್ರದಲ್ಲಿ ಗುರುತರ ಸೇವೆ ಸಲ್ಲಿಸಿದ್ದು, ಮಕ್ಕಳಿಗಾಗಿ ತಮ ಜೀವನವನ್ನೇ ಸಮರ್ಪಣೆ ಮಾಡಿದ್ದಾರೆ. ಕಂದಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ೨೦ ವರ್ಷ ಪ್ರಾಂಶುಪಾಲರಾಗಿದ್ದ ಅವರು ತಮಗೆ ಬರುತ್ತಿದ್ದ ಸಂಬಳದ ಬಹುಪಾಲನ್ನು ವಿದ್ಯಾರ್ಥಿಗಳಿಗೆ ಮೀಸಲಿಟ್ಟಿದ್ದರು.
ಕುಂದೂರು ಗ್ರಾಪಂ ಅಧ್ಯಕ್ಷರಾಗಿ ಮಧು ಆಯ್ಕೆ
ದಂಡಿಗನಹಳ್ಳಿ ಹೋಬಳಿ ಕುಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾದ ಕರಡೇವು ಡಿ. ಎಲ್. ಮಧುರವರು ಚುನಾಯಿತರಾದರು. ಉಪಾಧ್ಯಕ್ಷರಾಗಿ ಜಕ್ಕೇನಹಳ್ಳಿ ಗ್ರಾಮದ ನಂಜಮ್ಮನವರು ಆಯ್ಕೆಯಾದರು. ಚುನಾವಣೆಯಲ್ಲಿ ಎಂಟು ಮತಗಳನ್ನು ಪಡೆದು ಡಿ ಎಲ್ ಮಧು ಅಧ್ಯಕ್ಷರಾಗಿ ಮತ್ತು ೯ ಮತಗಳನ್ನು ಪಡೆದ ನಂಜಮ್ಮನವರು ಉಪಾಧ್ಯಕ್ಷರಾಗಿ ಚುನಾವಣೆಯಲ್ಲಿ ಜಯ ಸಾಧಿಸಿದರು. ಚುನಾವಣಾಧಿಕಾರಿಗಳಾಗಿ ತಾಲೂಕು ಪಂಚಾಯಿತಿ ನಿರ್ವಹಣಾಧಿಕಾರಿಯಾದ ಜಿ ಆರ್ ಹರೀಶ್ ಕಾರ್ಯನಿರ್ವಹಿಸಿದ್ದರು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved