• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಳೆಬೆಳ್ಳೂರು ಸೊಸೈಟಿಯಲ್ಲಿ ಕಬ್ಬಿನಳ್ಳಿ ಜಗದೀಶ್‌ ಬಣ ಮೇಲುಗೈ
ಹೊಳೆಬೆಳ್ಳೂರು ಗ್ರಾಮದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಕ್ರಮವಾಗಿ ಎಚ್.ಜಿ.ಪ್ರವೀಣ್ ಕುಮಾರ್ ಮತ್ತು ಭೈರೇಶ್ ನಾಮಪತ್ರ ಸಲ್ಲಿಸಿದರು. ಇವರನ್ನು ಅಭಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಹಾಸನ ಸಹಕಾರ ಇಲಾಖೆಯ ಅಧಿಕಾರಿ ವಾಸಿಮ್ ಘೋಷಣೆ ಮಾಡಿದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಘೋಷಣೆ ಆಗುತ್ತಿದ್ದಂತೆ ಸಹಕಾರ ಸಂಘದ ನಿರ್ದೇಶಕರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಗ್ರಾಮೀಣರ ಆರೋಗ್ಯ ಕಾಪಾಡುವಲ್ಲಿ ವೈದ್ಯರ ನಿಸ್ವಾರ್ಥ ಸೇವೆ ಅಗತ್ಯ
ತಂತ್ರಜ್ಞಾನದ ಪ್ರಯೋಜನಗಳ ಜತೆಗೆ ವಿನೂತನ ಅವಿಷ್ಕಾರಗಳು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಕಾರ್ಯಗಳನ್ನು ನಿರ್ವಹಿಸುತ್ತಿದ್ದು, ರೈತಾಪಿ ವರ್ಗದ ಗ್ರಾಮೀಣ ಜನರ ಬದುಕಿನಲ್ಲಿ ಅಗತ್ಯ ಸಮಯದಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ತೊಂದರೆಯಾಗದಂತೆ ಅವರ ಸಮಸ್ಯೆಗೆ ಸ್ಪಂದಿಸುವ ಕಾರ್ಯದಲ್ಲಿ ವೈದ್ಯರ ನಿಸ್ವಾರ್ಥ ಸೇವೆ ಅಗತ್ಯವಾಗಿದೆ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಸಲಹೆ ನೀಡಿದರು.
ಪರೀಕ್ಷೆಯ ಭಯ ಬಿಟ್ಟು ಆತ್ಮವಿಶ್ವಾಸದಿಂದ ಬರೆಯಿರಿ
ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗಿದೆ. ಅದರಂತೆ ವಿದ್ಯಾರ್ಥಿಗಳು ಯಾವುದೇ ಭಯ ಆತಂಕವಿಲ್ಲದೆ ಪರೀಕ್ಷೆ ಬರೆಯಬೇಕು. ವಿದ್ಯಾರ್ಥಿಗಳು ತಮ್ಮೊಳಗೆ ಇರುವ ಭಯ ಹೋಗಲಾಡಿಸಬೇಕು. ಶಿಕ್ಷಣ ಎಂಬುದು ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತದೆ. ಜಗತ್ತನ್ನು ಗೆಲ್ಲಲು ಅಗತ್ಯವಾದ ಕೌಶಲ್ಯ ಜ್ಞಾನದೊಂದಿಗೆ ನಮ್ಮನ್ನು ಸಜ್ಜುಗೊಳಿಸುತ್ತದೆ. ಯಶಸ್ಸನ್ನು ಸಾಧಿಸಲು ಮತ್ತು ಮುಂದೆ ಒಳ್ಳೆಯ ಹುದ್ದೆ ಪಡೆಯಲು ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಮುಖ ಘಟ್ಟವಾಗಿದೆ ಎಂದು ಪುರಸಭೆ ಅಧ್ಯಕ್ಷ ಎ. ಆರ್. ಅಶೋಕ್ ಶುಭ ಹಾರೈಸಿದರು.
ಸರ್ಕಾರಿ ಭೂಮಿ ಒತ್ತುವರಿ ಮಾಡಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ
ದೇಖ್ಲಾ ಗ್ರಾಮದಲ್ಲಿ ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಾಮಧೂತ ಹಿಂದೂ ಮಹಾಗಣಪತಿ ಸಮಿತಿ ವತಿಯಿಂದ ತಹಸೀಲ್ದಾರ್‌ ಅರವಿಂದ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಸ್ಥಳಪರಿಶೀಲನೆ ಮಾಡಿ ವರದಿ ಪಡೆದು ಒತ್ತುವರಿ ಮಾಡಿರುವವರನ್ನು ತೆರವುಗೊಳಿಸಬೇಕು ಇಲ್ಲದಿದ್ದಲ್ಲಿ ನೂರಾರು ಕಾರ್ಯಕರ್ತರು ಸ್ಥಳಕ್ಕೆ ನುಗ್ಗಿ ನಾವು ಸಹ ಒತ್ತುವರಿ ಮಾಡಬೇಕಾಗುತ್ತದೆ ಎಂದಿದ್ದಾರೆ.
ಮಹಿಳೆಯರ ಮೇಲೆ ದೌರ್ಜನ್ಯ ಸಲ್ಲದು
ನಮಗೆ ತಾಯಿಯಾಗಿ, ತಂಗಿಯಾಗಿ, ಗೆಳತಿಯಾಗಿ ಹೆಣ್ಣು ಬೇಕು. ಆದರೆ ಅದೇ ಹೆಣ್ಣು ಮಗುವನ್ನು ಸ್ವೀಕರಿಸಲು ಮನಸ್ಸು ಒಪ್ಪದೇ ಹೆಣ್ಣು ಭ್ರೂಣ ಹತ್ಯೆಯನ್ನು ಮಾಡುತ್ತಿರುವುದು ಅವರ ಮೇಲೆ ಎಸಗುತ್ತಿರುವ ಪ್ರಮುಖ ದೌರ್ಜನ್ಯವಾಗಿದೆ. ಹೆಣ್ಣು ಇಂದು ಬರೀ ಅಡುಗೆ ಮನೆಗೆ ಸೀಮಿತವಾಗಿರದೆ ಬಾಹ್ಯಾಕಾಶಯಾನ ಮಾಡುತ್ತಿರುವುದು ಸಮಾಜದಲ್ಲಿ ಕಂಡು ಬರುತ್ತಿರುವ ಅತ್ಯುತ್ತಮ ಬೆಳವಣಿಗೆಯಾಗಿದೆ ಎಂದು ದೇಶಭಕ್ತಬಳಗದ ಅಧ್ಯಕ್ಷ ಡಾ. ಸಂತೋಷ್ ಹೇಳಿದರು.
ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಗ್ರಾಪಂ ಅಧ್ಯಕ್ಷೆ
ಬಾಣಾವರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀಣಾ ವಿಶ್ವನಾಥ್ ಅವರು ಭೇಟಿ ನೀಡಿ ಪರೀಕ್ಷೆ ಬರೆಯುತ್ತಿರುವಂತಹ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸವನ್ನು ತುಂಬುವುದರ ಜೊತೆಗೆ ಶುಭಹಾರೈಸಿದರು. ಎಸ್ ಎಸ್ ಎಲ್ ಸಿ ಎಂಬುದು ವಿದ್ಯಾರ್ಥಿ ಜೀವನದಲ್ಲಿ ಒಂದು ತಿರುವಿನ ಘಟ್ಟವಾಗಿದ್ದು ಇದು ವಿದ್ಯಾರ್ಥಿ ಜೀವನದ ಮುಂದಿನ ಭವಿಷ್ಯಕ್ಕೆ ಭದ್ರಾ ಬುನಾದಿಯಾಗಿದೆ ಎಸ್ಸೆಸ್ಸೆಲ್ಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳು ಮುಂದಿನ ವ್ಯಾಸಂಗಕ್ಕೆ ಉತ್ತಮವಾದ ಆಯ್ಕೆಯನ್ನು ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದರು.
ವಿದ್ಯಾರ್ಥಿಗಳಿಗೆ ತಹಸೀಲ್ದಾರ್ ಮಮತಾ ಸ್ವಾಗತ
ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ಬೇಲೂರು ತಾಲೂಕು ದಂಡಾಧಿಕಾರಿಗಳಾದ ಮಮತಾ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ಹಾಗೂ ನೀರನ್ನು ನೀಡುವ ಮೂಲಕ ಸ್ವಾಗತಿಸಿ ಶುಭ ಕೋರಿದರು. ಹಳೇಬೀಡು ಸರ್ಕಾರಿ ಕೆಪಿಎಸ್ ಶಾಲೆಯ ಆವರಣದಲ್ಲಿ ಮಾತನಾಡುತ್ತ, ವಿದ್ಯಾರ್ಥಿಗಳು ನಿರಂತರ ಸಾಧನೆ ಮಾಡಿದರೆ ಜೀವನದಲ್ಲಿ ಒಳ್ಳೆಯ ಹಂತಕ್ಕೆ ಬರುತ್ತೀರಾ. ವಿದ್ಯೆ ಹಿಂದೆ ಒಳ್ಳೆಯ ಸಂಸ್ಕೃತಿ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಪುನೀತ್ ರಾಜಕುಮಾರ್ ಅವರು ಒಂದು ಅದ್ಭುತ ಶಕ್ತಿ
ಡಾ. ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಡಾ.ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಆಟೋ ಸಂಘದ ವತಿಯಿಂದ ಹಳೆ ಬಸ್ ನಿಲ್ದಾಣ ಸಹಯೋಗದೊಂದಿಗೆ ಬೃಹತ್‌ ರಕ್ತದಾನ ಶಿಬಿರ ಹಾಗೂ ನೇತ್ರದಾನ ನೋಂದಣಿ ಶಿಬಿರ ಆಯೋಜಿಸಲಾಯಿತು. ಪುನೀತ್‌ ರಾಜ್‌ಕುಮಾರ್ ಅವರ ಹುಟ್ಟುಹಬ್ಬಕ್ಕೆ ಒಂದು ಸಾರ್ಥಕತೆ ತಂದುಕೊಟ್ಟಿದ್ದು ಭೂಮಿ ಇರುವವರೆಗೂ ಪುನೀತ್ ಹೆಸರು ಉಳಿಯಲಿದೆ ಅವರ ಮಾರ್ಗದರ್ಶನದಲ್ಲಿ ಎಲ್ಲರೂ ನಡೆಯಬೇಕು ಎಂದರು.
ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಗುಲಾಬಿ ನೀಡಿ ಶುಭಹಾರೈಕೆ
ಸಂಸದರು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳಿಗೆಲ್ಲಾ ಗುಲಾಬಿ ನೀಡಿ ಪರೀಕ್ಷಾ ಹಬ್ಬದ ರೀತಿ ತೆಗೆದುಕೊಂಡು ಪರೀಕ್ಷೆಯನ್ನು ಧೈರ್ಯದಿಂದ ಬರೆಯುವಂತೆ ಮಕ್ಕಳಿಗೆ ಶುಭ ಹಾರೈಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಈಗಾಗಲೇ ರಾಜ್ಯಾದ್ಯಂತ ಪ್ರಾರಂಭವಾಗಿದ್ದು, ಇದನ್ನು ಪರೀಕ್ಷಾ ಹಬ್ಬ ಎಂದು ಕರೆಯಬಹುದು. ನಮ್ಮ ಜಿಲ್ಲೆಯಲ್ಲೂ ಕೂಡ ಸುಮಾರು ೭೭ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಸುಮಾರು ೨೦ ಸಾವಿರಕ್ಕೂ ಹೆಚ್ಚು ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಮೊದಲ ಪರೀಕ್ಷೆಯನ್ನು ಪ್ರಥಮ ಭಾಷೆ ಕನ್ನಡ ಬರೆಯುತ್ತಿದ್ದು, ಜಿಲ್ಲಾ ಡಿಡಿಪಿಐ, ಎಲ್ಲಾ ಬಿಇಒಗಳು ಪರೀಕ್ಷೆ ಬರೆಯಲು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದಾರೆ ಎಂದರು.
ಕಾಂಕ್ರೀಟ್‌ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಬಾಲಕೃಷ್ಣ ಚಾಲನೆ
ಪಟ್ಟಣದಲ್ಲಿ ಜನಸಂಖ್ಯೆ ಹೆಚ್ಚಳವಾದಂತೆ ಸೌಲಭ್ಯಗಳೂ ಹೆಚ್ಚಾಗಬೇಕು. ಅದಕ್ಕಾಗಿ ಪಟ್ಟಣದ ಎಲ್ಲಾ ವಾರ್ಡ್‌ಗಳಲ್ಲಿ ಕಾಂಕ್ರೀಟ್ ರಸ್ತೆ, ಚರಂಡಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved