• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯ ಆರು ಶಾಲಾ ವಿದ್ಯಾರ್ಥಿಗಳಿಗೆ ಗವರ್ನರ್ ಅವಾರ್ಡ್ ಪ್ರದಾನ
ಸಂತ ಫಿಲೋಮಿನ ಆಂಗ್ಲ ಮಾಧ್ಯಮ ಶಾಲೆಯ ಸಾಹಿತ್ಯ ಕೆ. ಉಪ್ಪಾರ್ ಸೇರಿದಂತೆ ಜಿಲ್ಲೆಯ ವಿವಿಧ ಆರು ವಿದ್ಯಾರ್ಥಿಗಳಿಗೆ ೨೦೨೪-೨೫ನೇ ಸಾಲಿನ ಗವರ್ನರ್ ಅವಾರ್ಡ್ ಪ್ರದಾನ ಮಾಡಲಾಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಪ್ರತಿವರ್ಷ ಹಮ್ಮಿಕೊಳ್ಳುವ ರಾಜ್ಯಮಟ್ಟದ ರಾಜ್ಯ ಪುರಸ್ಕಾರ್ ಪರೀಕ್ಷೆಯಲ್ಲಿ ಉತ್ತೀರ್ಣವಾದ ಪ್ರತಿ ವಿಭಾಗದಿಂದ ಆಯ್ದ ಒಬ್ಬ ವಿದ್ಯಾರ್ಥಿಗೆ ರಾಜಭವನದಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸುವ ಅವಕಾಶ ಕಲ್ಪಿಸಲಾಗುತ್ತದೆ.
ನೋಟಿಸ್‌ ನೀಡದೆ ಜಮೀನು ಹರಾಜಿಗೆ ಮುಂದಾದ ಕೆನರಾ ಬ್ಯಾಂಕ್‌
ರೈತರೊಬ್ಬರು ಜಮೀನಿನ ಮೇಲೆ ಪಡೆದಿದ್ದ ಸಾಲ ಮರುಪಾವತಿಸದ ಕಾರಣ ಕನಿಷ್ಠ ನೋಟೀಸನ್ನೂ ನೀಡದೆ ಜಮೀನು ಹರಾಜಿಗೆ ಮುಂದಾದ ಕೆನರಾ ಬ್ಯಾಂಕ್‌ ನಡೆಯನ್ನು ಖಂಡಿಸಿ ರೈತ ಸಂಘದ ಶಾಂತಕುಮಾರ್ ನೇತೃತ್ವದಲ್ಲಿ ಎಚ್ಚರಿಸಿ ನಗರದರುವ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಪ್ರಬಂಧಕರಿಗೆ ಮನವಿ ಸಲ್ಲಿಸಿದರು. ಒತ್ತೆ ಇಟ್ಟಿರುವ ಜಮೀನಿನ ಪೈಕಿ ಆಲೂರು ತಾಲೂಕು ಕುಂದೂರು ಹೋಬಳಿ ಕಾರಿಗನಹಳ್ಳಿ ಗ್ರಾಮದ ಸರ್ವೆ ನಮ. ೬೬/೪ ನ್ನು ಮಾತ್ರ ೨೦೨೫ ಮಾರ್ಚ್ ೨೫ರಂದು ಹರಾಜಿಗೆ ಇಡಲಾಗಿದೆ. ಆದರೆ ರೈತರಿಗೆ ಹರಾಜಿನ ಯಾವುದೇ ರೀತಿಯ ನೋಟಿಸ್‌ ನೀಡಿರುವುದಿಲ್ಲ ಎಂದು ದೂರಿದರು.
ಕನ್ನಡ ಭಾಷೆ ಉಳಿಸುವ ಸಲುವಾಗಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ
ಹಿಂದಿಯ ವಿರುದ್ಧದ ಹೋರಾಟದಲ್ಲಿ ಇಂಗ್ಲಿಷ್ ಭಾಷೆಯಿಂದ ದೇಶದ ಭಾಷೆಗಳಿಗೆ ಆಗುತ್ತಿರುವ ಹಾನಿಯ ಬಗ್ಗೆ ನಾವು ಎಚ್ಚರ ತಪ್ಪಬಾರದು. ಮಾತೃಭಾಷೆಯಲ್ಲಿ ಉನ್ನತ ಶಿಕ್ಷಣವನ್ನು ಕಡ್ಡಾಯ ಮಾಡಿ, ಕನ್ನಡ ಭಾಷೆ ಉಳಿವಿಗಾಗಿ ಗಂಭೀರವಾದ ಚಿಂತನೆ ಅಗತ್ಯವಿದ್ದು, ಇಲ್ಲವಾದರೆ ತಮಿಳುನಾಡಿಗೆ ಆದ ಗತಿ ಕರ್ನಾಟಕಕ್ಕೆ ಬರಬಹುದು. ಈ ಸವಾಲನ್ನು ಸ್ವೀಕಾರ ಮಾಡೋಣ ಎಂದು ಸಾಮಾಜಿಕ ಹೋರಾಟಗಾರ ಆರ್‌.ಪಿ. ವೆಂಕಟೇಶ್ ಮೂರ್ತಿ ಎಚ್ಚರಿಸಿದರು.
ಮಹಿಳೆಯ ಸಾಧನೆ ಭೂಮಿಯಿಂದ ಆಕಾಶದವರೆಗೂ ಚಾಚಿದೆ
ಮಹಿಳೆ ಕೇವಲ ಕುಟುಂಬಕ್ಕೆ ಸೀಮಿತವಾಗಿಲ್ಲ. ನಾಡಿಗೆ ದೇಶಕ್ಕೆ ಜಗತ್ತಿಗೆ ಕೀರ್ತಿ ತರುವಂತಹ ಸಾಧನೆ ಮೆಟ್ಟಿಲನ್ನು ಏರುತ್ತಿದ್ದಾಳೆ. ಇಂದು ಮಹಿಳೆಯರು ದೇಶದ ಪ್ರಥಮ ಪ್ರಜೆಯಾಗಿ ರಾಷ್ಟ್ರಪತಿ ಎಂಬ ದೇಶದ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ಮಹಿಳೆಯರ ಸಾಧನೆ ಅಪರಿಮಿತ, ಮಹಿಳೆ ದೇಶದ ಘನತೆ ಗೌರವನ್ನು ಹೆಚ್ಚಿಸುವಲ್ಲಿ ಹಿಂದೆ ಬಿದ್ದಿಲ್ಲ. ಮಹಿಳೆಯರು ಇಂದು ಭೂಮಿಯಿಂದ ಆಕಾಶದವರೆಗೂ ತನ್ನ ಛಾಪನ್ನು ಮೂಡಿಸುತ್ತಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಅಸಾಮಾನ್ಯ ಸಾಧನೆಗೈಯ್ಯುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕುಸುಮ ಬಾಲಕೃಷ್ಣ ತಿಳಿಸಿದರು.
ಎರಡನೇ ದಿನವೂ ಆಪರೇಷನ್‌ ವಿಕ್ರಾಂತ್‌ ವಿಫಲ
ಕಾನನಹಳ್ಳಿ ಕಾಫಿತೋಟದ ಸಮೀಪ ಗುಂಪಿನಿಂದ ಬೇರ್ಪಟ್ಟ ಪುಂಡಾನೆ ವಿಕ್ರಾಂತ್‌ನನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯ ಆಪರೇಷನ್ ವಿಕ್ರಾಂತ್ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ವಿಕ್ರಾಂತ್ ಇರುವ ಸ್ಥಳವನ್ನು ಪತ್ತೆಹಚ್ಚಿರುವ ಇಟಿಎಫ್ (ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿ, ಕಾರ್ಯಾಚರಣೆ ಆರಂಭಿಸಿದ್ದಾರೆ. ಬುಧವಾರ ಇಟಿಎಫ್ ತಂಡವು ವಿಕ್ರಾಂತ್‌ನನ್ನು ಕಾಡಾನೆಗಳ ಗುಂಪಿನಿಂದ ಬೇರ್ಪಡಿಸುವಲ್ಲಿ ಯಶಸ್ವಿಯಾಗಿದೆ. ಪ್ರಸ್ತುತ ವಿಕ್ರಾಂತ್ ಅರಣ್ಯದೊಳಗೆ ಒಂಟಿಯಾಗಿ ನಿಂತಿದ್ದು, ವೈದ್ಯರು ಸಾಕಾನೆಗಳೊಂದಿಗೆ ಕಾಡಿನೊಳಗೆ ತೆರಳಿ ಅರವಳಿಕೆ ಚುಚ್ಚುಮದ್ದು ನೀಡುವ ಪ್ರಯತ್ನದಲ್ಲಿದ್ದಾರೆ.
ಮಹಿಳೆ ಎಂದಿಗೂ ಆತ್ಮಹತ್ಯೆ ದಾರಿ ಹಿಡಿಯಬಾರದು
ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರ "ಗೃಹಭಂಗ " ಕಾದಂಬರಿಯಲ್ಲಿನ ನಂಜಮ್ಮ ಅನುಭವಿಸುವ ಕಷ್ಟಗಳನ್ನು ನಾವು ಜೀವನದಲ್ಲಿ ಅನುಭವಿಸುತ್ತಿಲ್ಲ. ಆದರೂ ಸಾಕಷ್ಟು ಮಹಿಳೆಯರು ಆತ್ಮಸ್ಥೈರ್ಯ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದು ತರವಲ್ಲ ಎಂದು ಚಿತ್ರನಟಿ ಮಾಳವಿಕಾ ಅವಿನಾಶ್ ತಿಳಿಸಿದರು. ಜೀವನ ನಡೆಸುವ ಬಗ್ಗೆ ಮಹಾನಗರದಲ್ಲಿ ಸಾಕಷ್ಟು ಮಂದಿ ಮಾರ್ಗದರ್ಶನ ನೀಡುತ್ತಾರೆ, ಇದನ್ನು ಹಣಕೊಟ್ಟು ಕೇಳುತ್ತಾರೆ, ಇದರ ಬದಲಾಗಿ ಭಗವದ್ಗೀತೆ ಓದಿದರೆ ಯಾವ ರೀತಿಯಲ್ಲಿ ಬದುಕಬೇಕು ಎನ್ನುವುದು ತಿಳಿಯುತ್ತದೆ ಎಂದರು.
ಕರ್ನಾಟಕ ಬಂದ್‌ಗೆ ಕರವೇ ಪ್ರವೀಣ್ ಶೆಟ್ಟಿ ಬಣ ವಿರೋಧ
ಮಾ.22ರಂದು ವಾಟಾಳ್ ನಾಗರಾಜ್ ಅವರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕರವೇ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ವಿ. ಎಸ್. ಬೋಜೇಗೌಡ ವಿರೋಧ ವ್ಯಕ್ತಪಡಿಸಿದ್ದು ಯಾವುದೇ ಕಾರಣಕ್ಕೂ ಬೇಲೂರು ಬಂದ್ ಮಾಡದಂತೆ ವರ್ತಕರಲ್ಲಿ ಮನವಿ ಮಾಡಿದ್ದಾರೆ. ಬಂದ್ ಮಾಡುವುದರಿಂದ ಸರ್ಕಾರಕ್ಕೆ ಹಾಗೂ ಸಾರ್ವಜನಿಕರಿಗೆ ನಷ್ಟವಾಗುವುದು ಬಿಟ್ಟರೆ ಯಾವುದೇ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ. ಹಾಗಾಗಿ ಈ ಬಂದ್‌ಗೆ ಸಂಘಟನೆಗಳು, ವರ್ತಕರು, ಹೋಟೆಲ್ ಮಾಲೀಕರು, ಆಟೋ ಮಾಲೀಕರು, ಶಾಲಾ-ಕಾಲೇಜುಗಳು ಬೆಂಬಲ ಕೊಡಬಾರದೆಂದು ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಮನವಿ ಮಾಡಿದ್ದಾರೆ.
ನಗರದಲ್ಲಿ ಗಾಂಜಾ ಮತ್ತು ಡ್ರಗ್ಸ್‌ ಮೇಲೆ ನಿಯಂತ್ರಣ ಹಾಕಿ
ಹಾಸನ ನಗರದಲ್ಲಿ ಗಾಂಜಾ, ಡ್ರಗ್ಸ್ ಸೇರಿದಂತೆ ಇನ್ನಿತರೆ ಚಟುವಟಿಕೆ ನಡೆಸಲಾಗುತ್ತಿದ್ದು, ಇದಕ್ಕೆ ಯುವಕರು ಹಾಳಾಗುತ್ತಿದ್ದಾರೆ. ಕೂಡಲೇ ಪೊಲೀಸ್ ವರಿಷ್ಠಾಧಿಕಾರಿಗಳು ಇತ್ತ ಕಡೆ ಗಮನಹರಿಸಿ ಒಂದು ತಂಡ ರಚಿಸಿ ತಡೆಹಿಡಿಯಬೇಕು ಎಂದು ಯಂಗ್ ಇಂಡಿಯಾ ಯೂತ್‌ ಅಧ್ಯಕ್ಷ ಮೆಹರಾಜ್ ಪಾಷಾ ಮನವಿ ಮಾಡಿದರು. ಹಲವಾರು ಸಣ್ಣ ಯುವಕರು ೧೫ ವರ್ಷ, ೧೬ನೇ ಯುವ ವಯಸ್ಸಿನ ಯುವಕರು ಹಾಳಾಗುತ್ತಿದ್ದಾರೆ. ಯುವಕರ ಭವಿಷ್ಯ ನಿಮ್ಮ ಕೈಲಿ ಇದೆ ಎಂದು ಎಚ್ಚರಿಸಿದರು.
ಕುಸಿಯುವ ಹಂತದಲ್ಲಿ ಸಂಸ್ಕೃತ ವೇದ ಪಾಠಶಾಲೆಯ ಗೋಡೆ
ವಿಶ್ವವಿಖ್ಯಾತ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ಐತಿಹಾಸಿಕ ಆನೆ ಬಾಗಿಲಿಗೆ ಹೊಂದಿಕೊಂಡಿರುವ ಸಂಸ್ಕೃತ ವೇದ ಪಾಠಶಾಲೆಯ ಬೃಹತ್ ಗೋಡೆ ಯಾವ ಸಮಯದಲ್ಲಾದರೂ ಕುಸಿದು ಬೀಳುವ ಹಂತದಲ್ಲಿದೆ.ಆನೆ ಬಾಗಿಲಿನ ಬಳಿ ಸಾರ್ವಜನಿಕರು ಪ್ರವಾಸಿಗರು ನೆರಳಿಗಾಗಿ ವಿಶ್ರಾಂತಿಗೆಂದು ಇದೇ ಜಾಗಲ್ಲಿ ನಿಲ್ಲುತ್ತಾರೆ. ಕೆಲವರು ನಿದ್ರೆಗೆ ಜಾರುತ್ತಾರೆ. ಈ ಸಂದರ್ಭದಲ್ಲಿ ಗೋಡೆ ಕುಸಿದು ಬಿದ್ದರೆ ಅಮಾಯಕರು ಬಲಿಯಾಗುತ್ತಾರೆ. ಇತ್ತೀಚೆಗಷ್ಟೇ ಬೇಲೂರಿನ ಬಸ್ ನಿಲ್ದಾಣದ ಸಮೀಪ ಹಳೆ ಕಟ್ಟಡದ ಸಜ್ಜೆ ಕುಸಿದು ಸ್ಥಳದಲ್ಲಿಯೇ ಇಬ್ಬರು ಸಾವನಪ್ಪಿದ್ದು, ಹಲವು ದಿನಗಳ ನಂತರ ಗಾಯಗೊಂಡಿದ್ದ ಮಹಿಳೆ ಒಬ್ಬರು ಆಸ್ಪತ್ರೆಯಲ್ಲಿ ನಿಧಾನವಾಗಿದ್ದಾರೆ. ಆದರೂ ಜನಪ್ರತಿನಿಧಿಗಳು ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಳ್ಳದೆ ಯಾವುದೇ ಮುಂಜಾಗ್ರತೆ ಕ್ರಮಕ್ಕೆ ಮುಂದಾಗುತ್ತಿಲ್ಲ.
ತರಕಾರಿ ಬೆಲೆ ನಿಗದಿ ಮಾಡಿ ರೈತರನ್ನು ಉಳಿಸಿ
ತರಕಾರಿಗಳ ಬೆಲೆ ಕುಸಿತದಿಂದ ರೈತರು ಕಂಗಲಾಗಿದ್ದು, ಕೇರಳ ಸರ್ಕಾರದ ಮಾದರಿಯಲ್ಲಿ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ತರಕಾರಿ ಬುಟ್ಟಿಗಳನ್ನು ತಲೆ ಮೇಲೆ ಹೊತ್ತುತಂದು ಜಿಲ್ಲಾಧಿಕಾರಿಗಳಿಗೆ ತರಕಾರಿ ಬುಟ್ಟಿ ನೀಡುವ ಮೂಲಕ ವಿನೂತನವಾದ ಪ್ರತಿಭಟನೆ ಮಾಡಿ ಗಮನ ಸೆಳೆದರು. ಜಿಲ್ಲಾಧಿಕಾರಿಗಳು ತರಕಾರಿ ಬೇಡ ಎಂದರೂ ರೈತರು ಬಲವಂತವಾಗಿ ಕೊಡಲು ಮುಂದಾದರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved