• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಬಲು ಗ್ರಾಪಂ ಅಧ್ಯಕ್ಷರಾಗಿ ವನಿತಾ ಅವಿರೋಧ ಆಯ್ಕೆ
ಆಲೂರು ತಾಲೂಕಿನ ಮಡಬಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ವನಿತಾ ಮಂಜುನಾಥ್, ಉಪಾಧ್ಯಕ್ಷರಾಗಿ ಪುಷ್ಪವತಿ ಮಂಜೇಗೌಡ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯನ್ನು ತಾಲೂಕು ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ನೆರವೇರಿಸಿ ನೂತನ ಅಧ್ಯಕ್ಷರಾಗಿ ವನಿತಾ ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಪುಷ್ಪಾವತಿ ಮಂಜೇಗೌಡ ಅವಿರೋಧವಾಗಿ ಆಯ್ಕೆ ಆಗಿರುವುದಾಗಿ ಘೋಷಣೆ ಮಾಡಿದರು.
ವಿದ್ಯೆಯೊಂದಿಗೆ ವಿನಯ ಇದ್ದರೆ ಜೀವನದಲ್ಲಿ ಮುಂದೆಬರಲು ಸಾಧ್ಯ
ಇಂದಿನ ಕಾಲೇಜು ಮಟ್ಟದ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಸಾಂಸ್ಕೃತಿಕ ಮತ್ತು ಮನೋರಂಜನೆ ಕಾರ್ಯಕ್ರಮಗಳನ್ನು ಹೆಚ್ಚಾಗಿ ನೀಡಿದರೆ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಯಲು ಸಾಧ್ಯ ಎಂದು ಕೆ.ಪಿ.ಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾರ್ಯಾಧ್ಯಕ್ಷ ಬಿ.ಎಸ್ ಸೋಮಶೇಖರ್ ತಿಳಿಸಿದರು. ಮೊಬೈಲ್‌ಗಳನ್ನು ಬಿಟ್ಟು ಕ್ರೀಡೆಯಲ್ಲಿ ಭಾಗವಹಿಸಿ ಈ ಕಾಲೇಜನ್ನು ಹೆಚ್ಚಿನ ಸ್ಥಾನಕ್ಕೆ ಬೆಳೆಸಿ. ಇದಕ್ಕೆ ಪೋಷಕರು ಸಹಕಾರ ನೀಡಬೇಕು. ಮಕ್ಕಳ ಬಗ್ಗೆ ಹೆಚ್ಚು ಗಮನ ನೀಡಬೇಕೆಂದು ಎಂದು ತಿಳಿಸಿದರು.
ದೇವಸ್ಥಾನದ ಎಂಟು ಎಕರೆ ಭೂಮಿ ಪರರ ಪಾಲು
ಅರುವನಹಳ್ಳಿ ಗ್ರಾಮದ ಉದ್ಭವ ಬಸವಣ್ಣ ದೇವಸ್ಥಾನದ ೮ ಎಕರೆ ಮೀಸಲಿಟ್ಟ ಜಮೀನನ್ನು ಬೇರೆಯವರಿಗೆ ಖಾತೆ ಮಾಡಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ದೇವಸ್ಥಾನಕ್ಕೆ ಸಂಬಂಧಪಟ್ಟ ೮ ಎಕರೆ ಜಮೀನನ್ನು ದೇವಸ್ಥಾನಕ್ಕೆ ಉಳಿಸಿಕೊಡಬೇಕೆಂದು ಮನವಿ ಮಾಡಿದರು. ಹಾಗೇನಾದರೂ ಜಮೀನನ್ನು ನೀಡದೆ ಹೋದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಜನ್ಮಸ್ಮರಣೆ
ಮಹಾವೀರ ವೃತ್ತದ ಬಳಿ ಶ್ರೀ ಮಸವತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಯವರ ೧೦೯ನೇ ಜನ್ಮಸ್ಮರಣೆಯ ಅಂಗವಾಗಿ ಸುತ್ತೂರು ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ಸೇರಿದಂತೆ ವಿವಿಧ ಮಠದ ಸ್ವಾಮೀಜಿಗಳು ಸ್ವಾಮೀಜಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ದಾಸೋಹಕ್ಕೆ ಚಾಲನೆ ನೀಡಿದರು. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಯವರು ಸಮಾಜದಲ್ಲಿ ಶಾಂತಿ ನೆಲೆಸಲಿ. ಅಭಿವೃದ್ಧಿ ಆಗಲೆಂದು ಶಿಕ್ಷಣ ಸಂಸ್ಥೆ ಸ್ಥಾಪಿಸಿದರು.
ಮಹಿಳಾ ಆಯೋಗದಂತೆ ಪುರುಷ ಆಯೋಗ ರಚನೆಯಾಗಲಿ
ಮಹಿಳೆಯರ ಸಮಸ್ಯೆ ಹೇಳಿಕೊಳ್ಳಲು ಮಹಿಳಾ ಆಯೋಗ, ಮಕ್ಕಳ ಸಮಸ್ಯೆ ಹೇಳಲು ಮಕ್ಕಳ ಆಯೋಗ ಇರುವಂತೆ ಪುರುಷರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಸಂವಿಧಾನಾತ್ಮಕವಾಗಿ ಪುರುಷ ಆಯೋಗ ರಚನೆ ಆಗಲೇಬೇಕೆಂದು ಓಡನಹಳ್ಳಿ ನ್ಯಾನೋ ಫುಡ್ ಪಾರ್ಕ್ ಸಿಇಒ ಅಶೋಕ್ ಒತ್ತಾಯಿಸಿದರು. ಹುಡುಗ ಮೋಸ ಮಾಡಿದರೆ ಯುವತಿ ಮಹಿಳಾ ಆಯೋ ಅಥವಾ ಪೊಲೀಸ್‌ ಠಾಣೆ ಮೆಟ್ಟಿಲೇರುತ್ತಾಳೆ. ಆದರೆ, ಮೋಸಕ್ಕೊಳಗಾದ ಯುವಕರ ಗೋಳನ್ನು ಕೇಳುವವರೇ ಇಲ್ಲ ಎಂದರು.
ಕೆಂಚಾಂಬ ದೇವಸ್ಥಾನದ ಕಲ್ಯಾಣಿ ಸ್ವಚ್ಛಗೊಳಿಸಲು ಶಾಸಕ ಮಂಜು ಸಂಕಲ್ಪ
ಬಿಜೆಪಿ ಕಾರ್ಯಕರ್ತರೆಲ್ಲರೂ ಒಂದು ದಿನ ಶ್ರೀ ಕೆಂಚಾಂಬದೇವಿ ಕಲ್ಯಾಣಿಯನ್ನು ಸ್ವಚ್ಛಗೊಳಿಸಲು ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಸಿಮೆಂಟ್ ಮಂಜು ಭರವಸೆ ನೀಡಿದ್ದಾರೆ ಎಂದು ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್. ಡಿ. ಗೋಪಾಲ್ ತಿಳಿಸಿದರು. ಶಾಸಕರು ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಲ್ಯಾಣಿಯಲ್ಲಿ ಕೊಳಕು ನಿರ್ಮಾಣವಾಗಿರುವುದನ್ನು ಗಮನಿಸಿ, ಪಕ್ಷದ ಎಲ್ಲ ಕಾರ್ಯಕರ್ತರು ಒಂದು ದಿನ ಕಲ್ಯಾಣಿಯನ್ನು ಶುಚಿಗೊಳಿಸೋಣ ಎಂದು ಕರೆ ನೀಡಿದರು.
ನಬಾರ್ಡ್ ರೈತರಿಗೆ ಸಾಲ ವಿತರಿಸಲು ಮುಂದಾಗಬೇಕು
ಗ್ರಾಮೀಣ ಪ್ರದೇಶಗಳಲ್ಲಿ ರೈತರುಗಳಿಗೆ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖಾಂತರ ಬೆಳೆ ಸಾಲ, ಅಭಿವೃದ್ಧಿ ಸಾಲಗಳನ್ನು ವಿತರಿಸಿ ಅನುಕೂಲ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ಕೇಂದ್ರ ಸರ್ಕಾರದ ಅಸಹಕಾರ ನೀತಿಯಿಂದ ನಬಾರ್ಡ್ ವತಿಯಿಂದ ಸಾಲ ಸೌಲಭ್ಯ ದೊರೆಯದೆ ರೈತರಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರ ಈ ಧೋರಣೆ ಕೈ ಬಿಟ್ಟು ರೈತರಿಗೆ ಸಾಲ ವಿತರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಸಂವಿಧಾನ ದೇಶದ ಪ್ರತೀ ಪ್ರಜೆಗೂ ಸರ್ವ ಸಮಾನತೆ ಕಲ್ಪಿಸಿದೆ
ಅರಸೀಕೆರೆ ನಗರದ ಹೊರವಲಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ಭಾರತ ಸಂವಿಧಾನವು ದೇಶದ ಸಾರ್ವಭೌಮತೆಯನ್ನು ಎತ್ತಿ ಹಿಡಿಯುವುದರ ಜೊತೆಗೆ ಭಾರತದ ಪ್ರತಿಯೊಬ್ಬ ಪ್ರಜೆಗೂ ಸರ್ವ ಸಮಾನತೆಯನ್ನು ಕಲ್ಪಿಸಿಕೊಟ್ಟಿದೆ. ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ಪಾತ್ರ ಮಹತ್ವದ್ದಾಗಿದೆ ಎಂದರು.
ವಕ್ಫ್ ತಿದ್ದುಪಡಿಯಾದರೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತೆ ವಹಿಸಿ
ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಏನಾದರೂ ಸ್ವೀಕಾರಗೊಂಡರೆ ಮುಂದೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಬಹುದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಮುಂಜಾಗ್ರತೆ ವಹಿಸುವಂತೆ ಆಗ್ರಹಿಸಿ ಶ್ರೀರಾಮಸೇನೆಯಿಂದ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಸಲ್ಲಿಸಿದರು. ತಾವು ಜಿಲ್ಲೆಯಾದ್ಯಂತ ತಕ್ಷಣ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಿ ಪ್ರಚೋದನೆ ನೀಡುವವರನ್ನು, ಸಮಾಜ ಘಾತುಕರನ್ನು ಬಂಧಿಸಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲು ಮನವಿ ಸಲ್ಲಿಸಿದರು.
ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ದರ ಪಡೆಯದಂತೆ ನಿಗಾ ವಹಿಸಿ
ಕೃಷಿ ಯಂತ್ರೋಪಕರಣಗಳನ್ನು ನಿಗದಿತ ದರದಲ್ಲಿ ಕೃಷಿ ಚಟುವಟಿಕೆಗಳಿಗೆ ನೀಡಬೇಕು. ಏಜೆಸ್ಸಿಗಳು ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯದಂತೆ ನಿಗಾ ವಹಿಸುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಸೂಚನೆ ನೀಡಿದರು. ಪರಿಶಿಷ್ಟ ಪಂಗಡಗಳ ಜನರಿಲ್ಲ ಎಂದು ಇತರೆ ಸಮುದಾಯಕ್ಕೆ ವೆಚ್ಚ ಮಾಡಲು ಅವಕಾಶ ಇರುವುದಿಲ್ಲ. ಆದ್ದರಿಂದ ಹಣ ವರ್ಗಾವಣೆಯಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved