• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತನ್ನೂರಿನ ಶಾಲೆಗೆ ಹಣಕಾಸಿನ ನೆರವು ನೀಡಿದ ದಂತ ವೈದ್ಯ
ಬೆಂಗಳೂರಿನಲ್ಲಿ ನೆಲೆಸಿದ್ದರೂ ತಮ್ಮ ಹುಟ್ಟೂರು ಮರೆಯದ ಡಾ. ಜಗದೀಶ್ ಹಾಗೂ ಡಾ. ಸುಧಾ ದಂಪತಿ ತಾಲೂಕಿನ ಅಜ್ಜೂರು ಗ್ರಾಮದ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸಬೇಕು ಎಂಬ ಉದ್ದೇಶದಿಂದ 22 ಲಕ್ಷ ರು. ವೆಚ್ಚದಲ್ಲಿ ಹೊಸದಾಗಿ ಕೊಠಡಿ ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ ಕಂಪ್ಯೂಟರ್ ಹಾಗೂ ಇಂಗ್ಲೀಷ್ ವಿಷಯದಲ್ಲಿ ಮಕ್ಕಳು ಪರಿಣಿತಿ ಸಾಧಿಸಲು ಆನ್‌ಲೈನ್ ತರಗತಿ ನಡೆಸುತ್ತಿದ್ದು ಅದಕ್ಕೆ ಅಗತ್ಯವಾದ ಪರಿಕರಗಳನ್ನು ಒದಗಿಸಿದ್ದಾರೆ. ಡೆಂಟಲ್ ಕೇರ್ ಯಂತ್ರ ಅಳವಡಿಸಿ ವಿದ್ಯಾರ್ಥಿಗಳ ಹಲ್ಲಿನ ಆರೋಗ್ಯದ ಕಾಳಜಿ ವಹಿಸಲಾಗಿದೆ.
ಆರೋಪ ಸಾಬೀತಾದರೂ ಬಾಗೆ ಪಂಚಾಯತ್‌ ಪಿಡಿಓ ಮೇಲೆ ಕ್ರಮವಿಲ್ಲ
ಬಾಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಿನ್ನಸ್ವಾಮಿ ವಿರುದ್ಧ ಭ್ರಷ್ಟಚಾರ ಆರೋಪ ಸಾಬೀತುಗೊಂಡು ತಿಂಗಳು ಕಳೆದರೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ದಟ್ಟವಾಗಿ ಕೇಳಿಬರುತ್ತಿದೆ. ಈ ಸಂಬಂಧ ೨೦೨೩ರ ಜೂನ್ ತಿಂಗಳಿನಲ್ಲಿ ಬಾಗೆ ಗ್ರಾ.ಪಂ ಸದಸ್ಯರೊಬ್ಬರು ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ನಡೆಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭ್ರಷ್ಟಚಾರ ನಡೆದಿರುವುದು ಸತ್ಯ ಎಂಬ ವರಧಿಯನ್ನು ೨೦೨೩ರ ನವಂಬರ್‌ ತಿಂಗಳಿನಲ್ಲಿ ಜಿ.ಪಂ ಕಳುಹಿಸಿಕೊಡಲಾಗಿತ್ತು.
ಯಾವುದೇ ವಸ್ತು ಕೊಂಡರೂ ಬಿಲ್ ಪಡೆಯುವುದನ್ನು ಮರೆಯಬಾರದು
ಪ್ರತಿಯೊಬ್ಬರೂ ಯಾವುದೇ ವಸ್ತುಗಳನ್ನು ಕೊಂಡ ನಂತರ ಸಂಬಂಧಿಸಿದ ಬಿಲ್(ರಸೀತಿ) ಪಡೆಯುವುದನ್ನು ಮರೆಯಬಾರದು ಎಂದು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ. ಎಸ್. ಮಹೇಶ್ ತಿಳಿಸಿದರು.ಗ್ರಾಹಕರು ವಸ್ತುಗಳನ್ನು ಕೊಂಡ ನಂತರ ವ್ಯಾಪಾರಿಗೆ ಹಣ ಸಂದಾಯ ಮಾಡುತ್ತಾರೆ. ಆದರೆ ತಕ್ಕ ಬಿಲ್ ಪಡೆಯುವುದನ್ನು ಮರೆಯುತ್ತಿದ್ದಾರೆ. ವಸ್ತುಗಳು ಲೋಪದಿಂದ ಕೂಡಿದಾಗ ಗ್ರಾಹಕರ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲು ಅಗತ್ಯ ಬಿಲ್ ಹಾಜರುಪಡಿಸಬೇಕು. ಇಲ್ಲದಿದ್ದರೆ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲು ಸಾಧ್ಯವಾಗುವುದಿಲ್ಲ.
ಪುನೀತ್ ಜನ್ಮದಿನ ಅಂಗವಾಗಿ ಬೈಕ್ ರಾಲಿ
ಡಾ. ಪುನೀತ್ ರಾಜ್‌ಕುಮಾರ್ ಅವರ 50 ನೇ ಹುಟ್ಟುಹಬ್ಬದ ಅಂಗವಾಗಿ ತಾಲೂಕಿನ ಸಾಲಗಾಮೆಯಲ್ಲಿ ಸೋಮವಾರ ಡಿ.ಪಿ ಚಂದ್ರಶೇಖರ್ (ಜೆಸಿಬಿ) ಅಭಿಮಾನಿಗಳ ಬಳಗದ ವತಿಯಿಂದ ಸೋಮವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಬೈಕ್ ರ್ಯಾಲಿ ನಡೆಯಿತು. ಪುನೀತ್ ಕೇವಲ ನಟರಾಗಿ ಮಾತ್ರವಲ್ಲದೆ ಎಲೆಮರೆ ಕಾಯಿಯಂತೆ ಜನಸೇವೆಯಲ್ಲಿ ತೊಡಗುವ ಮೂಲಕ ಜನಮನ್ನಣೆ ಗಳಿಸಿದ್ದಾರೆ. ಅವರ ಸೇವಾ ಮನೋಭಾನೆ ಹಾದಿಯಲ್ಲಿ ಎಲ್ಲರೂ ನಡೆಯಬೇಕು ಎಂದರು. ಅವರ ಹಾದಿಯಲ್ಲೇ ಹಲವರು ಜನಸೇವೆಯಲ್ಲಿ ತೊಡಗಿದ್ದಾರೆ ಎಂದರು.
ಬೇಲೂರು ತಾಲೂಕಿನ ಹಳ್ಳಿಗದ್ದೆ ಶಾಂತಿ ಎಸ್ಟೇಟ್‌ನಲ್ಲಿ ಮೊದಲ‌ ದಿನವೇ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ

ಬೇಲೂರು ತಾಲೂಕಿನ ಹಳ್ಳಿಗದ್ದೆ ಶಾಂತಿ ಎಸ್ಟೇಟ್‌ನಲ್ಲಿ ಮೊದಲ ದಿನ ನಡೆದ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಪುಂಡಾನೆಯೊಂದನ್ನು ಸೆರೆ ಹಿಡಿಯಲಾಯಿತು.  

ಹಾಸನದಲ್ಲಿ ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಟಿ.ವಿ. ಶಿವಾನಂದ್ ತಗಡೂರು ಸೂಚನೆಯಂತೆ ಏಪ್ರಿಲ್ ೧೨ ಮತ್ತು ೧೩ರಂದು ನಗರದ ಸರ್ಕಾರಿ ಕಲಾ ಕಾಲೇಜು ಮತ್ತು ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಮೆಂಟ್ ನಡೆಸಲು ಭಾನುವಾರ ಹಾಸನ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಹೊರ ಜಿಲ್ಲೆಯಿಂದ ಬರುವ ಪತ್ರಕರ್ತ ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು
ಸ್ನೇಹಿತರೊಂದಿಗೆ ಕಟ್ಟೆಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ತಾಲೂಕಿನ ಎಂ. ದಾಸಾಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ತಾಲೂಕಿನ ಮರುವನಹಳ್ಳಿ ಗ್ರಾಮದ ಸೋಮಶೇಖರ್ ಹಾಗೂ ಮಣಿ ದಂಪತಿ ಪುತ್ರ ಕಿರಣ್ (೧೪) ಮೃತ ದುರ್ದೈವಿ. ದಾಸಾಪುರದ ನಿರ್ಮಲ ವಿದ್ಯಾ ಶಾಲೆಯಲ್ಲಿ ೯ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಸ್ನೇಹಿತರಾದ ಹೇಮಂತ್ ಹಾಗೂ ಹರ್ಷಿತ್ ಜೊತೆಗೆ ಈಜಲು ಊರ ಹೊರವಲಯದಲ್ಲಿರುವ ಕಟ್ಟೆಗೆ ತೆರಳಿದ್ದ. ಮೂವರಿಗೂ ಪರಿಪೂರ್ಣ ಈಜು ಬರುತ್ತಿರಲಿಲ್ಲ.
ಸಮಾಜದಲ್ಲಿ ಸಮಾನತೆಯಿಂದ ಬದುಕಬೇಕು
ಆಲೂರಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಕಾರ್ಜುವಳ್ಳಿ ಶ್ರೀ ಸಂಸ್ಥಾನ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಬೆಳಿಗ್ಗೆ 11 ಗಂಟೆಗೆ ಆಲೂರು ಪಟ್ಟಣ ಕೆ.ಇ.ಬಿ ವೃತ್ತದಲ್ಲಿರುವ ಶ್ರೀ ಸಂಗಮೇಶ್ವರ ದೇವಾಲದಿಂದ ವೀರಶೈವ ಕಲ್ಯಾಣ ಮಂಟಪದವರೆಗೆ ರೇಣುಕಾಚಾರ್ಯರ ಭಾವಚಿತ್ರ ಹಾಗೂ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಭಾಗವಹಿಸಿದ್ದರು.
ಹಿರೇಕಲ್ಲು ಬೆಟ್ಟದ ಸಿದ್ದೇಶ್ವರ ಸ್ವಾಮಿ ಮಹಾ ರಥೋತ್ಸವ
ಜಯಚಾಮರಾಜಪುರ ಗ್ರಾಮದ ಶ್ರೀ ಹಿರೇಕಲ್ಲು ಬೆಟ್ಟದ ಸಿದ್ದೇಶ್ವರ ಸ್ವಾಮಿಯವರ ಮಹಾ ರಥೋತ್ಸವ ಗೋಧೂಳಿ ಲಗ್ನದಲ್ಲಿ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಭಕ್ತರು ಸಿದ್ದೇಶ ಸಿದ್ದೇಶ ಎಂಬ ಘೋಷದೊಂದಿಗೆ ಹರ್ಷೋದ್ಗಾರದಿಂದ ರಥವನ್ನು ಎಳೆದು ಸಂಭ್ರಮಿಸಿದರು ಹಾಗೂ ರಥಕ್ಕೆ ಬಾಳೆಹಣ್ಣು ಧವನ ಎಸೆದು ಭಕ್ತಿ ಸಮರ್ಪಿಸಿದರು. ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಗ್ರಾಮದ ಚೌಡೇಶ್ವರಿ ದೇವಿಯವರ ಕುಣಿತವು ನೋಡುಗರ ಮನಸೂರೆಗೊಂಡಿತ್ತು.
ವಿವೇಕಾನಂದರ ಆದರ್ಶ ರೂಢಿಸಿಕೊಳ್ಳಿ
ವಿವೇಕಾನಂದರ ವಾಣಿ ಮತ್ತು ಆದರ್ಶಗಳನ್ನು ನೀವು ರೂಢಿಸಿಕೊಳ್ಳಬೇಕು. ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ಕೆಲ ಗುಣಗಳನ್ನು ನಾವು ಅಳವಡಿಸಿಕೊಳ್ಳಬೇಕಾಗುತ್ತದೆ. ಅಂತಹ ಜ್ಞಾನವನ್ನು ಶ್ರೀ ಕೃಷ್ಣ ಗೀತೆಯ ಮೂಲಕ ನೀಡಿದ್ದಾನೆ. ಅಂತಹ ಜ್ಞಾನವನ್ನು ಸಹ ಜೀವನದಲ್ಲಿ ಅನುಸರಿಸಬೇಕು ಎಂದು ಕರೆ ನೀಡಿದರು. ಭಾಷಣ ಮಾಡದೆ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು ಮಕ್ಕಳ ಮನಮುಟ್ಟುವಂತೆ ತಾವು ನೀಡಬೇಕಾದ ಮಾಹಿತಿಯನ್ನು ಕತೆಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved