• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಣಬಲ- ತೋಳ್ಬಲದ ನಡುವೆ ಸರ್ಕಾರಿ ನೌಕರರ ಸಂಘದ ಚುನಾವಣೆ: ಶಿವಸ್ವಾಮಿ
ಈ ಬಾರಿಯ ಸರ್ಕಾರಿ ನೌಕರರ ಸಂಘದ ಚುನಾವಣೆ ಬಂಡವಾಳ ಶಾಹಿಗಳು ಹಾಗೂ ಸ್ವಾಭಿಮಾನಿಗಳ ನಡುವೆ ನಡೆಯುತ್ತಿರುವ ಚುನಾವಣೆಯಾಗಿದೆ.
ಮಹಾಬೋಧಿ ಮಹಾವಿಹಾರದ ಆಡಳಿತ ಬೌದ್ಧರಿಗೆ ನೀಡುವಂತೆ ಆಗ್ರಹ
ಬಿಹಾರ ರಾಜ್ಯದ ಬುದ್ಧಗಯಾ ಜಗತ್ತಿನ ಎಲ್ಲಾ ಬೌದ್ಧರಿಗೆ ಪವಿತ್ರವಾದ ಸ್ಥಳ. ಕ್ರಿ.ಪೂ. ೬ನೇ ಶತಮಾನದಲ್ಲಿ ರಾಜಕುಮಾರ ಸಿದ್ಧಾರ್ಥ ಗೌತಮನು ತನ್ನ ೩೫ನೇ ವಯಸ್ಸಿನಲ್ಲಿ ಜ್ಞಾನೋದಯ ಪಡೆದು ಭಗವಾನ್ ಬುದ್ಧರಾದ ಪುಣ್ಯಸ್ಥಳ. ಈ ಸ್ಥಳ ಆ ಕಾಲದಿಂದ ಪೂಜನೀಯವಾಗಿದೆ.
ಕಲಾವಿದರ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಬೇಕು
ಕಲಾವಿದರ ಪ್ರಾಯೋಜನ ಕಾರ್ಯಕ್ರಮಗಳಿಗೆ ಈ ವರ್ಷದ ಅನುದಾನವನ್ನು ಸರ್ಕಾರ ನೀಡಿರುವುದಿಲ್ಲ. ಕೂಡಲೇ ಬಿಡುಗಡೆ ಮಾಡಬೇಕು ಎಂದು ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಚೆಲುವನಹಳ್ಳಿ ಶೇಖರಪ್ಪ ಮತ್ತು ಅಧ್ಯಕ್ಷ ರವಿಕುಮಾರ್ ಆಗ್ರಹಿಸಿದರು.ಕಲಾವಿದರಿಗೆ ಮಾಸಾಶನ ಕೊಡುವುದಾಗಿ ಸರಕಾರ ಹೇಳಿದ್ದು, ಆದೇಶ ಬಂದಿರುವುದಿಲ್ಲ. ಹೇಳಿಕೆ ನೀಡಿರುವುದಕ್ಕೆ ನಾವು ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಧನ್ಯವಾದ ಎಂದರು.
ಆಶಾ ಕಾರ್ಯಕರ್ತರನ್ನು ನೇಮಕ ಮಾಡಿ ಜನರ ಆರೋಗ್ಯದ ಕಾಳಜಿ ವಹಿಸಿ
ಆಲೂರು ಪಟ್ಟಣದ ಪಂಚಾಯಿತಿ ವ್ಯಾಪ್ತಿಯಲ್ಲಿ ೭೦೦೦ ಜನಸಂಖ್ಯೆ ಇದೆ. ಕೇವಲ ಒಬ್ಬರು ಆಶಾ ಕಾರ್ಯಕರ್ತರಿದ್ದಾರೆ. ೧೦೦೦ ಜನಕ್ಕೊಬ್ಬರು ಆಶಾ ಕಾರ್ಯಕರ್ತರನ್ನು ನೇಮಕ ಮಾಡಿಕೊಂಡು ಜನಸಾಮಾನ್ಯರ ಆರೋಗ್ಯ ಬಗ್ಗೆ ಕಾಳಜಿ ವಹಿಸಬೇಕು ಎಂದು ನಾಮ ನಿರ್ದೇಶಿತ ಸದಸ್ಯ ಶಿವಣ್ಣ ಒತ್ತಾಯಿಸಿದರು. ಸರ್ಕಾರದೊಡನೆ ಚರ್ಚಿಸಿ ಅನುಮತಿ ಕೊಡುವಂತೆ ಪ್ರಯತ್ನ ಮಾಡುತ್ತೇನೆ. ಆಸ್ಪತ್ರೆಗಳಲ್ಲಿ ಸಮಸ್ಯೆ ಇದ್ದರೆ ತನ್ನ ಗಮನಕ್ಕೆ ತರಬೇಕು ಎಂದು ಶಾಸಕ ಸಿಮೆಂಟ್‌ ಮಂಜು ಸೂಚಿಸಿದರು.
ಮೈಲ್‌ಸ್ಟೋನ್ ಶಾಲೆಯಿಂದ ಕನ್ನಡ ರಾಜ್ಯೋತ್ಸವ
ಕೆ.ಎನ್.ಎ. ಮೈಲ್‌ಸ್ಟೋನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕನ್ನಡ ಧ್ವಜ ಬಣ್ಣದ ಸಮವಸ್ತ್ರ ಹಾಗೂ ಕನ್ನಡ ನಾಡಿನ ಹಿರಿಮೆಯನ್ನು ಸಾರುವ ಯಕ್ಷಗಾನ, ಹುಲಿ ವೇಷ ಕುಣಿತ, ಪೂಜಾ ಕುಣಿತದ ವೇಷ ತೊಟ್ಟು ಪ್ರಮುಖ ವೃತ್ತಗಳಲ್ಲಿ ಡಿಜೆ ಸೌಂಡಿನ ಕನ್ನಡದ ಹಾಡುಗಳಿಗೆ ನೃತ್ಯ ಮಾಡಿ ಗಮನ ಸೆಳೆದರು. ಪ್ರಮುಖ ವೃತ್ತ ಹಾಗೂ ಬೀದಿಗಳಲ್ಲಿ ನೃತ್ಯ ಮಾಡುತ್ತಾ ಸಾಗಿ ಗಮನ ಸೆಳೆದರು. ದಾರಿ ಉದ್ದಕ್ಕೂ ಭಾರತ್‌ ಮಾತಾಕಿ ಜೈ, ಕನ್ನಡಾಂಭೆಗೆ ಜೈ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎನ್ನುವ ಘೋಷಣೆ ಕೂಗಿ ಸಾರ್ವಜನಿಕರ ಗಮನ ಸೆಳೆದರು.
ಕಾಂಗ್ರೆಸ್ಸೇತರ ಶಾಸಕರ ಕ್ಷೇತ್ರಗಳಿಗೆ ಈ ಸರ್ಕಾರ ಅನುದಾನವನ್ನೇ ಕೊಡುತ್ತಿಲ್ಲ
ರಾಜ್ಯದ ಅಭಿವೃದ್ಧಿ ಕೆಲಸವನ್ನು ಸಂಪೂರ್ಣ ಕಡೆಗಣಿಸಿರುವ ಜತೆಗೆ ಬೇರೆ ಪಕ್ಷದ ಶಾಸಕರು ಇರುವ ತಾಲೂಕುಗಳಿಗೆ ಹಣವನ್ನೇ ಕೊಡುತ್ತಿಲ್ಲವೆಂದು ಶಾಸಕ ಎಚ್.ಡಿ. ರೇವಣ್ಣ ದೂರಿದರು. ಇಡೀ ಊರಿಗೆ ಹೊಸದಾಗಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ೯೦ ಕೋಟಿ ಬಿಡುಗಡೆ ಮಾಡಿಸಿದ್ದೆ. ಆ ಹಣ ಹಣಕಾಸು ಇಲಾಖೆಯ ಅನುಮೋದನೆಗೆ ಹೋಗಿದ್ದು ಕಾಂಗ್ರೆಸ್ ಸರ್ಕಾರ ಹಣವನ್ನು ತಡೆ ಹಿಡಿದಿದ್ದು, ಅಲ್ಲಿಂದ ಅನುಮೋದನೆ ಆಗಿ ಬಂದಿಲ್ಲ. ಅವರು ಕೊಡದಿದ್ದರೆ ನಾನು ಬಿಡುವುದಿಲ್ಲ. ಹೋರಾಟ ಮಾಡಿಯಾದರೂ ಈ ಹಣ ತರುತ್ತೇನೆ ಎಂದು ಹೇಳಿದರು.
ಕಟ್‌ ಆದ ಬಸ್ಸಿನ ಸ್ಟೀರಿಂಗ್‌ ಜಾಯಿಂಟ್‌
ಚಲಿಸುತ್ತಿದ್ದ ಕೆ.ಎಸ್.ಆರ್‌.ಟಿ.ಸಿ. ಬಸ್ ಸ್ಟೇರಿಂಗ್ ದಿಢೀರ್ ಕೈಕೊಟ್ಟು ನಿಯಂತ್ರಣ ತಪ್ಪಿದಾಗ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಬಸ್ ಅನ್ನು ರಸ್ತೆ ಮಧ್ಯೆ ನಿಲ್ಲಿಸಿದ ಘಟನೆ ಸೋಮವಾರ ಸಂಜೆ ನಗರದ ಹೇಮಾವತಿ ಪ್ರತಿಮೆ ಮುಂಭಾಗ, ಡೇರಿ ಬೂತ್ ಎದುರು ನಡೆದಿದೆ. ಈ ವೇಳೆ ಯಾವ ಪ್ರಾಣಾಪಾಯ ಸಂಭವಿಸಿಲ್ಲ. ಎವಿಕೆ ಕಾಲೇಜು ರಸ್ತೆ ಕಡೆಗೆ ತಿರುಗುವಾಗ ಸ್ಟೇರಿಂಗ್ ಜಾಯಿಂಟ್ ಕಟ್‌ ಆಗಿ ಚಾಲಕನ ನಿಯಂತ್ರಣಕ್ಕೆ ಸಿಗಲಿಲ್ಲ.ಬಸ್ ನಲ್ಲಿ ಇದ್ದ ಪ್ರಯಾಣಿಕರನ್ನು ತಕ್ಷಣ ಕೆಳಗೆ ಇಳಿಸಿ ಅವರನ್ನು ಬದಲಿ ಬಸ್ ಮೂಲಕ ಕಳುಹಿಸಿಕೊಟ್ಟರು.
ಹೊಳೆನರಸೀಪುರಕ್ಕೆ ಈಗ ಸ್ವಾತಂತ್ರ್ಯ ಬಂದಿದೆ
ಹೊಳೆನರಸೀಪುರದಲ್ಲಿ ಬದಲಾವಣೆಯ ಪರ್ವ ಪ್ರಾರಂಭಗೊಂಡಿದೆ. ಜತೆಗೆ ತಾಲೂಕಿನ ದಿಕ್ಕು, ದೆಸೆ, ವಾಸ್ತು ಎಲ್ಲವೂ ಬದಲಾಗುತ್ತಿದ್ದು, ಒಂದರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ. ಇಲ್ಲಿಯ ತನಕ ಯಾವುದೇ ಕಾರ್ಯಕ್ರಮದಲ್ಲಿ ಪಟ್ಟಣದ ಯಾವುದೋ ಮನೆ ಅಥವಾ ತೋಟದ ಮನೆಯಲ್ಲಿ ಮಾತ್ರ ವಿದ್ಯುತ್ ದೀಪಗಳು ಉರಿಯುತ್ತಿತ್ತು. ಇಂದು ಪಟ್ಟಣವೆಲ್ಲ ದೀಪಾಲಂಕಾರದಿಂದ ಬೆಳಗುತ್ತಿದೆ. ನಿಮ್ಮೂರಿಗೆ ಹೊಸ ಮೆರುಗು ತಂದಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪ್ರೀತಂ ಜೆ.ಗೌಡ ಅವರು ಶಾಸಕ ಎಚ್.ಡಿ.ರೇವಣ್ಣ ಅವರ ಕಾರ್ಯವೈಖರಿಯನ್ನು ಟೀಕಿಸಿದರು.
ಮದಲಾಪುರ ಡೇರಿ ಕಾರ್ಯದರ್ಶಿ ಮೇಲೆ ಭ್ರಷ್ಟಾಚಾರದ ಆರೋಪ
ಕಳೆದ ಹಲವು ವರ್ಷಗಳಿಂದ ಸಂಘದ ಕಾರ್ಯದರ್ಶಿಯಾಗಿರುವ ಲತಾ ತಮ್ಮ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದು, ರೈತರ ಹಾಲಿನ ಗುಣಮಟ್ಟ ಅಳತೆ ಮಾಡಲು ತಾರತಮ್ಯ ನಡೆಸುತ್ತಿದ್ದಾರೆ. ಅಲ್ಲದೆ ಸಂಘದ ಬೈಲ ಸೇರಿದಂತೆ ಹಲವು ಲೆಕ್ಕಪತ್ರ ದಾಖಲೆಗಳನ್ನು ಕಚೇರಿಯಲ್ಲಿ ಸಂಗ್ರಹಿಸಿಟ್ಟಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಉಡಾಫೆಯಿಂದ ವರ್ತಿಸುತ್ತಾರೆ. ಕಳೆದ ಮೂರು ತಿಂಗಳಿನಿಂದ ಹಾಲಿನ ಹಣವನ್ನು ನೀಡಿಲ್ಲ. ಆದ್ದರಿಂದ ಈ ಕಾರ್ಯದರ್ಶಿಯ ವಿರುದ್ಧ ಕ್ರಮ ಕೈಗೊಂಡು ಹೊಸ ಕಾರ್ಯದರ್ಶಿಯನ್ನು ನೇಮಕ ಮಾಡಬೇಕು ಎಂಬ ಮನವಿ ಮಾಡಿದರು.
ಕಾರು ಪಲ್ಟಿಯಾಗಿ ತಂದೆ ಸಾವು ಮಗಳಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಸ್ಥಳದಲ್ಲಿ ತಂದೆ ಸಾವನ್ನಪ್ಪಿ ಮಗಳ ಸ್ಥಿತಿ ಗಂಭೀರವಾದ ಘಟನೆ ಸೋಮವಾರ ಬೆಳಗ್ಗೆ ತಾಲೂಕಿನ ಕೊರಟಗೆರೆ ಗ್ರಾಮದ ಬಳಿ ನಡೆದಿದೆ. ಪಟ್ಟಣದ ಬಟ್ಟೆ ವ್ಯಾಪಾರಿ ದುರ್ಗ ಪ್ಯಾಷನ್ ಸ್ಟೋರ್‌ ದಯಾನಂದ್(46) ತಮ್ಮ ಮಗಳು ನಿಶ್ಮಿತಾ(6) ಇವರನ್ನು ಚಿಕ್ಕಮಗಳೂರಿನಿಂದ ಬೇಲೂರಿಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಕೊರಟಿಗೆರೆ ಬಳಿ ತಾವು ಬರುತ್ತಿದ್ದ ಕಾರು ಪಲ್ಟಿ ಹೊಡೆದು ಅಪಘಾತವಾದ ಹಿನ್ನೆಲೆಯಲ್ಲಿ ದಯಾನಂದ್ ಸ್ಥಳದಲ್ಲೇ ಸಾವನ್ನಪ್ಪಿದರು. ಇನ್ನು ಮಗಳು ನಿಶ್ಮಿತಾ ಚಿಕ್ಕಪುಟ್ಟ ಗಾಯಗಳಿಂದ ಪಾರಾಗಿದ್ದು ಸ್ಥಳೀಯರು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved