• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿದೆ
ಪಾಶ್ಚಿಮಾತ್ಯ ದೇಶಗಳ ಉಡುಗೆ ತೊಡುಗೆ ಹಾಗೂ ಇತರೆ ಕಾರಣಗಳಿಗೆ ಆಕರ್ಷಿತರಾಗುತ್ತಿರುವ ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿದೆ. ಗುರು, ಹಿರಿಯರು, ತಂದೆ, ತಾಯಿ ಮತ್ತು ಪೋಷಕರಿಗೆ ಹಿಂದಿನಂತೆ ಗೌರವ ಕೊಡುವುದಿಲ್ಲ ಎಂದು ದೊಡ್ಡಕಾಡನೂರು ಜೆಎಸ್‌ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಚೌಡಯ್ಯ ಕಟ್ನವಾಡಿ ಆತಂಕ ವ್ಯಕ್ತಪಡಿಸಿದರು. ಶಿಬಿರಗಳಲ್ಲಿ ವಿದ್ಯಾರ್ಥಿಗಳು ಬಹಳಷ್ಟು ವಿಷಯಗಳನ್ನು ಕಲಿಯಲು ಅವಕಾಶವಿದೆ ಮತ್ತು ಇಲ್ಲಿ ಕಲಿತಂತಹ ವಿಷಯಗಳನ್ನು ತಾವು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕಾಡಾನೆಗಳಿಂದ ಮಾನವನ ಸಾವಾಗದಂತೆ ಕ್ರಮ ಕೈಗೊಳ್ಳಿ
ಅರಣ್ಯ ಇಲಾಖೆ ಕಾಡಾನೆ ದಾಳಿಯಿಂದ ಮಾನವನ ಸಾವುಗಳು ಆಗದಂತೆ ನೋಡಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸರ್ಕಾರ ಹಲವು ತಂತ್ರಜ್ಞಾನಗಳನ್ನು ಕಾಡಾನೆ ನಿಯಂತ್ರಣಕ್ಕೆ ಬಳಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕಾಡಾನೆ ನಿಯಂತ್ರಣಕ್ಕೆ ಇರುವ ಸಿಬ್ಬಂದಿ ಸಹ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದು, ಇವರಿಗೂ ಸಹ ಯಾವುದೇ ಸೌಲಭ್ಯಗಳು ಸರಿಯಾಗಿ ದೊರಕುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಸರ್ಕಾರ ಸರಿಯಾದ ಸಲಕರಣೆಗಳನ್ನು ನೀಡಬೇಕು ಹಾಗೂ ಸೂಕ್ತ ಸಂಬಳ ನೀಡಬೇಕು. ಈ ನಿಟ್ಟಿನಲ್ಲಿ ನಾನು ಅಧಿವೇಶನದಲ್ಲಿ ಪ್ರಸ್ತಾವನೆ ಮಾಡುತ್ತೇನೆ ಎಂದರು.
ತ್ಯಾಜ್ಯದ ಪುನರ್ ಬಳಕೆಗೆ ಮುಂದಾದ ನಗರಸಭೆ
ಸಂಗ್ರಹವಾಗುವ ತ್ಯಾಜ್ಯವನ್ನು ಹಸಿ ಮತ್ತು ಒಣ ಕಸವೆಂದು ಪ್ರತ್ಯೇಕವಾಗಿ ವಿಂಗಡಿಸಿ ಹಸಿ ಕಸವನ್ನು 60 ದಿನಗಳ ಕಾಲ ಒಂದೆಡೆ ಸಂಗ್ರಹಿಸಿ ನಂತರ ಈ ಕಸವನ್ನು ಈಗಾಗಲೇ 70 ಲಕ್ಷ ವೆಚ್ಚದಲ್ಲಿ ಅಳವಡಿಸಿರುವ ಯಂತ್ರೋಪಕರಣಗಳ ಸಹಕಾರದಿಂದ ಸಾವಯವ ಗೊಬ್ಬರವನ್ನು ತಯಾರಿಸಿ ರೈತರಿಗೆ ರಿಯಾಯಿತಿ ದರದಲ್ಲಿ ಮಾರುವ ಸಂಕಲ್ಪ ನಗರಸಭೆಯದ್ದಾಗಿದೆ. ನಿತ್ಯ ನಗರದಲ್ಲಿ ಹತ್ತಾರು ಟನ್ ಗಳಷ್ಟು ಸಂಗ್ರಹವಾಗುವ ತ್ಯಾಜ್ಯವನ್ನು ಪುನರ್ ಬಳಕೆ ಮಾಡುವ ನಿಟ್ಟಿನಲ್ಲಿ ನಗರಸಭೆ ಮುಂದಾಗಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಎಪಿಎಂಸಿ ವರ್ತಕರ ಸಮಸ್ಯೆ ಪರಿಹರಿಸುವೆ
ಕೆಲ ವರ್ತಕರು ಇಲ್ಲಿನ ಮಳಿಗೆಯನ್ನು ಬೇರೆಯವರಿಗೆ ಬಾಡಿಗೆ ನೀಡುತ್ತಿದ್ದಾರೆ. ಇನ್ನು ಅರ್ಹರಿಗೆ ಮಳಿಗೆ ಸಿಗುತ್ತಿಲ್ಲ ಎಂದು ದೂರಿದರು. ಎಲ್ಲವನ್ನು ಆಲಿಸಿ ನಂತರ ಎಪಿಎಂಸಿ ಕಚೇರಿಯಲ್ಲಿ ವರ್ತಕರ ಜೊತೆ ಸಭೆ ನಡೆಸಿ ಸಲಹೆ ಸೂಚನೆ ಮತ್ತು ಆಗಬೇಕಾಗಿರುವ ಅಭಿವೃದ್ಧಿ ಕೆಲಸದ ಬಗ್ಗೆ ತಿಳಿಸಿದರು. ಇಡೀ ಜಿಲ್ಲೆಯಿಂದ ಮುಖ್ಯ ವ್ಯಾಪಾರ ಸ್ಥಳವಾದ ಈ ಸ್ಥಳಕ್ಕೆ ಬರುತ್ತಾರೆ. ಇಲ್ಲಿ ಜಾಗ ಕಿರಿದಾಗಿದೆ. ಮಳಿಗೆಗಳ ಸಮಸ್ಯೆಯಿದೆ. ಈ ಬಗ್ಗೆ ಪರಿಶೀಲಿಸಿ ಮುಂದೆ ಏನೇನು ಕ್ರಮ ತೆಗೆದುಕೊಳ್ಳಬಹುದು ಚರ್ಚಿಸಲಾಗಿದ್ದು, ಮುಂದೆ ಹಂತಹಂತವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಗರ್ಭಕಂಠ ಕ್ಯಾನ್ಸರ್‌ ತಡೆಗಟ್ಟಲು ಎಚ್‌ಪಿವಿ ಚುಚ್ಚುಮದ್ದು ನೀಡಿ
ಮಹಿಳಾ ಸಬಲೀಕರಣ ಉತ್ತೇಜಿಸುವ ದೃಷ್ಠಿಯಿಂದ ರಾಷ್ಟ್ರ ಹಾಗೂ ರಾಜ್ಯ ಸರ್ಕಾರಗಳು ಗರ್ಭಕೋಶದ ಕ್ಯಾನ್ಸರ್‌ ತಡೆಗಟ್ಟುವ ನಿಟ್ಟಿನಲ್ಲಿ ಎಚ್‌ಪಿವಿ ಚುಚ್ಚುಮದ್ದನ್ನು ಉಚಿತವಾಗಿ ನೀಡಲೇಬೇಕಿದೆ. ಕುಟುಂಬದಲ್ಲಿ ಹೆಣ್ಣುಮಕ್ಕಳ ಆರೋಗ್ಯ ರಕ್ಷಣೆ ಬಹುಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರಗಳು ಉತ್ತಮ ನಿರ್ಧಾರ ಕೈಗೊಂಡು ಚುಚ್ಚುಮದ್ದು ಕೊಡಿಸಲೇಬೇಕು ಎಂದು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಒತ್ತಾಯಿಸಿದರು.
ಕಾಡಾನೆ ದಾಳಿಗೆ ಬೇಲೂರು ತಾಲೂಕಿನಲ್ಲಿ ಮತ್ತೊಂದು ಬಲಿ
ಮಹಿಳೆಯು ತಮ್ಮ ಮನೆಯ ಹಿಂಭಾಗದ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಶುಕ್ರವಾರ ಬೆಳಗ್ಗೆ 12 ಗಂಟೆಯ ಸಮಯದಲ್ಲಿ ತಮ್ಮ ಮನೆಯ ಹಿಂದಿನ ಕಾಫಿ ತೋಟದಲ್ಲಿ ಕೆಲಸವನ್ನು ಮಾಡುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ಮಾಡಿ ಸೊಂಡಿಲಿನಿಂದ ಎತ್ತಿ ಬಿಸಾಡಿ ತಲೆಯ ಮೇಲೆ ಹೆಜ್ಜೆಯನ್ನಿಟ್ಟು ತುಳಿದು ಬಿಸಾಕಿದೆ. ಈಗಾಗಲೇ ಕಳೆದ ತಿಂಗಳಿನಲ್ಲಿ ಕಾಡಾನೆ ದಾಳಿಯಿಂದ 3 ಅಮಾಯಕರು ಸಾವನ್ನಪ್ಪಿದ್ದು ನಾಲ್ಕನೇ ಸಾವು ಸಂಭವಿಸಿದೆ. ಕಾಡಾನೆ ದಾಳಿಯಿಂದ ಬೆಳೆ ಹಾನಿ ಹಾಗೂ ಪ್ರಾಣ ಹಾನಿ ಬಗ್ಗೆ ನಿರಂತರ ಹೋರಾಟ ಪ್ರತಿಭಟನೆ ನಡೆಸುತ್ತಿದ್ದು ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಅಂಗವಿಕಲ ಮಕ್ಕಳ ನೆರವಿಗೆ ಧಾವಿಸಿದ ಬೇಲೂರು ತಹಸೀಲ್ದಾರ್‌
ಅಂಗ ವೈಫಲ್ಯದಿಂದ ಬಳಲುತ್ತಿರುವ ಅನಾಥ ಮಕ್ಕಳಿಗೆ ಸರ್ಕಾರದಿಂದ ದೊರಕುವಂತಹ ಅಗತ್ಯ ಸೌಲಭ್ಯವನ್ನು ಕೊಡಿಸುವುದಾಗಿ ತಹಸೀಲ್ದಾರ್‌ ಮಮತಾ ಎಂ ಹೇಳಿದರು. ಕಳೆದ ಆರೇಳು ವರ್ಷಗಳ ಹಿಂದೆ ಪೋಷಕರು ಅನಾರೋಗ್ಯದಿಂದ ಮರಣ ಹೊಂದಿದ್ದು ಇಬ್ಬರು ಮಕ್ಕಳ ಜವಾಬ್ದಾರಿಯಯನ್ನು ಅತ್ತೆ ಮಾವಂದಿರು ವಹಿಸಿಕೊಂಡಿದ್ದರು. ಆದರೆ ಇಬ್ಬರೂ ಮಕ್ಕಳ ದಾಖಲೆಗಳಲ್ಲಿ ಆಧಾರ್ ಕಾರ್ಡ್‌ ದಾಖಲೆ ಇಲ್ಲದೆ ಸರ್ಕಾರದ ಹಲವಾರು ಸೌಲಭ್ಯಗಳಿಂದ ವಂಚಿತರಾಗಿದ್ದರು.
ಬೇಸಿಗೆಯಲ್ಲಿ ವಿದ್ಯುತ್‌ ಸಮಸ್ಯೆ ಆಗಬಾರದು
ಟಿಸಿ ಕೊಡುವ ವಿಚಾರದಲ್ಲಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳಿವೆ. ಬೇಸಿಗೆ ಮುಗಿಯುವವರೆಗೂ ಅತೀ ತುರ್ತಾಗಿ ೨೪ ಗಂಟೆಯಲ್ಲಿ ಟಿಸಿ ಕೊಡಬೇಕು. ಮಳೆ ಶುರುವಾಗುವವರೆಗೂ ಇಂಧನ ಇಲಾಖೆಯಿಂದ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಕೆಲಸ ಮಾಡಲು ಸೂಚಿಸಕಲಾಗಿದೆ ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ತಿಳಿಸಿದರು. ಬೇಸಿಗೆ ಮುಗಿಯುವವರೆಗೂ ಅತೀ ತುರ್ತಾಗಿ ೨೪ ಗಂಟೆಯಲ್ಲಿ ಸರಕಾರದ ಸುತ್ತೋಲೆಯಲ್ಲಿ ಏನಿದೆ ಅದೆ ರೀತಿ ವಿದ್ಯುತ್‌ ಅನ್ನು ಕೊಡಬೇಕು. ಈ ಬಗ್ಗೆ ಅಧಿಕಾರಿಗಳು ಕ್ರಮಬದ್ಧವಾಗಿ ಮಾಡುವುದಾಗಿ ಹೇಳಿದ್ದಾರೆ ಎಂದರು.
ನರ್ಸಿಂಗ್‌ ವೃತ್ತಿಯಲ್ಲಿ ಜ್ಞಾನದ ಜತೆಗೆ ಸಹಾನುಭೂತಿಯೂ ಮುಖ್ಯ
ವೈದ್ಯಕೀಯ ಹಾಗೂ ನರ್ಸಿಂಗ್ ಸೇವೆಯಲ್ಲಿ ಜ್ಞಾನ, ಕೌಶಲ್ಯ ಹಾಗೂ ಮಾನವೀಯತೆಯ ಜತೆಗೆ ಸಹಾನುಭೂತಿ ಅತ್ಯಗತ್ಯ. ಕರ್ತವ್ಯದಲ್ಲಿ ಒಲವು, ಕರ್ತವ್ಯದಲ್ಲಿ ಬದ್ಧತೆ ಹಾಗೂ ನ್ಯಾಯ ಒದಗಿಸುವ ಮನೋಭಾವ ಇರಬೇಕು. ಇವುಗಳು ಶುಶ್ರೂಷಕ ವೃತ್ತಿಯಲ್ಲಿ ಆತ್ಮತೃಪ್ತಿ ಮತ್ತು ಸೇವಾ ಕಾರ್ಯದಲ್ಲಿ ಯಶಸ್ಸುಗಳಿಸುವ ಜತೆಗೆ ಕಲಿತ ವಿದ್ಯೆಯಲ್ಲಿ ಪರಿಪೂರ್ಣ ವ್ಯಕ್ತಿ ಆಗಲು ಸಾಧ್ಯವೆಂದು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲರಾದ ಡಾ. ರವಿಕುಮಾರ್ ಬಿ.ಸಿ. ಸಲಹೆ ನೀಡಿದರು.
ವಿವಿಧ ಕಾಮಗಾರಿಗೆ ₹1500 ಕೋಟಿ ಡಿಪಿಆರ್‌ ಸಿದ್ಧ
ಪಟ್ಟಣದ ಪುರಸಭೆ ಅಧ್ಯಕ್ಷ ಎ. ಆರ್‌ ಅಶೋಕ್ ನೇತೃತ್ವದಲ್ಲಿ ಪುರಸಭೆ ಮುಂಭಾಗ ಬಜೆಟ್ ಪೂರ್ವಭಾವಿ ಸಭೆ ನಡೆಯಿತು.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved