ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿದೆಪಾಶ್ಚಿಮಾತ್ಯ ದೇಶಗಳ ಉಡುಗೆ ತೊಡುಗೆ ಹಾಗೂ ಇತರೆ ಕಾರಣಗಳಿಗೆ ಆಕರ್ಷಿತರಾಗುತ್ತಿರುವ ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿದೆ. ಗುರು, ಹಿರಿಯರು, ತಂದೆ, ತಾಯಿ ಮತ್ತು ಪೋಷಕರಿಗೆ ಹಿಂದಿನಂತೆ ಗೌರವ ಕೊಡುವುದಿಲ್ಲ ಎಂದು ದೊಡ್ಡಕಾಡನೂರು ಜೆಎಸ್ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಚೌಡಯ್ಯ ಕಟ್ನವಾಡಿ ಆತಂಕ ವ್ಯಕ್ತಪಡಿಸಿದರು. ಶಿಬಿರಗಳಲ್ಲಿ ವಿದ್ಯಾರ್ಥಿಗಳು ಬಹಳಷ್ಟು ವಿಷಯಗಳನ್ನು ಕಲಿಯಲು ಅವಕಾಶವಿದೆ ಮತ್ತು ಇಲ್ಲಿ ಕಲಿತಂತಹ ವಿಷಯಗಳನ್ನು ತಾವು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.