ಮಾದಕ ವಸ್ತುವಿನ ನಿಯಂತ್ರಣ ಅರಿವುಮಾದಕ ವಸ್ತುವಿನ ನಿಯಂತ್ರಣ ಹಾಗೂ ಅರಿವು ಮೂಡಿಸುವ ಒಂದು ದಿನದ ಕಾರ್ಯಾಗಾರವನ್ನು ಕೆಎಸ್ಆರ್ಟಿಸಿ ಚಾಲಕ, ನಿರ್ವಾಹಕ, ಮೆಕ್ಯಾನಿಕ್ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿತ್ತು. ಬಸ್ಸಿನಲ್ಲಿ ಪ್ರಯಾಣಿಸುವ 40ರಿಂದ 50 ಜನರ ಪ್ರಾಣವೂ ಒಬ್ಬ ಬಸ್ಸಿನ ಚಾಲಕ ಮತ್ತು ನಿರ್ವಾಹಕರ ಜವಾಬ್ದಾರಿಯಾಗಿರುತ್ತದೆ. ಆದ್ದರಿಂದ ಇವರು ಸಮಯ ಪ್ರಜ್ಞೆ, ಯಾವುದೇ ದುಶ್ಚಟಗಳಿಗೆ ದಾಸರಾಗದೆ ತಮ್ಮ ಕೆಲಸವನ್ನು ಜವಾಬ್ದಾರಿಯಿಂದ, ಕಾರ್ಯನಿಷ್ಠೆಯಿಂದ ನಿರ್ವಹಿಸಬೇಕೆಂದು ಸಭೆಯಲ್ಲಿ ನೆರೆದಿದ್ದ ಸಿಬ್ಬಂದಿಗೆ ಕಿವಿಮಾತು ಹೇಳಿದರು.