• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕದಾಳು ಸೊಸೈಟಿ ಅಧ್ಯಕ್ಷರಾಗಿ ಕಬ್ಬಿನಳ್ಳಿ ಜಗದೀಶ್‌ ಆಯ್ಕೆ
ಆಲೂರು ತಾಲೂಕಿನ ಕದಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಚ್.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಜಗದೀಶ್ ಕಬ್ಬಿನಹಳ್ಳಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರಿ ಕ್ಷೇತ್ರ ಸಾಕಷ್ಟು ವಿಶಾಲವಾಗಿ ಬೆಳೆದು ಹೆಚ್ಚು ಸವಲತ್ತುಗಳನ್ನು ನೀಡುವ ಮೂಲಕ ಸಾರ್ವಜನಿಕರನ್ನು ತನ್ನೆಡೆಗೆ ಸೆಳೆಯುತ್ತಿದೆ. ರೈತರು ಮತ್ತು ಸಾರ್ವಜನಿಕರು ಆದಷ್ಟು ಸಹಕಾರ ಬ್ಯಾಂಕುಗಳಲ್ಲಿ ತಮ್ಮ ಆರ್ಥಿಕ ವ್ಯವಹಾರಗಳನ್ನು ಮಾಡುವುದರೊಂದಿಗೆ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕೆಲಸದ ಒತ್ತಡವನ್ನು ಮನೆಗೆ ಒಯ್ಯಬೇಡಿ
ಮಹಿಳೆಗೆ ಮನೆ ಹಾಗೂ ಕೆಲಸ ಮಾಡುವ ಸ್ಥಳಗಳಲ್ಲಿ ಜವಾಬ್ದಾರಿ ಹೆಚ್ಚಿರುತ್ತದೆ. ಆ ಸಂದರ್ಭದಲ್ಲಿ ತೊಂದರೆಗಳು ಅಥವಾ ಒತ್ತಡವನ್ನು ಕೊಂಡೊಯ್ಯದೇ, ಅದೇ ಸ್ಥಳಗಳಲ್ಲಿ ಬಿಟ್ಟು ಮುನ್ನಡೆಯುವ ಮನಸ್ಥಿತಿಯನ್ನು ರೂಢಿಸಿಕೊಳ್ಳಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿಮಠ್ ಅಭಿಪ್ರಾಯಪಟ್ಟರು. ಪ್ರತಿದಿನ ಮಹಿಳೆ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಾರೆ, ಈ ರೀತಿಯ ಕಾರ್ಯಕ್ರಮಗಳು ಒಂದು ಸಮ್ಮಿಲನಕ್ಕೆ ಸಾಕ್ಷಿಯಾಗುತ್ತದೆ ಎಂದರು.
ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರ ಕೊಡುಗೆ ಅಪಾರ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಲ್ಲಿನ ನಗರಸಭೆಯು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಅಭಿನಂದಿಸಿತು. ಹಿಂದೆ ಮಹಿಳೆಯರು ಹೆಚ್ಚು ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಇಂದಿನ ದಿನಗಳಲ್ಲಿ ಎಲ್ಲಾ ಸೌಲಭ್ಯಗಳು ದೊರೆಯುತ್ತಿದ್ದು, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯೂ ದುಡಿಯುತ್ತಿದ್ದಾರೆ, ಸರ್ಕಾರ ಮಹಿಳೆಯರಿಗಾಗಿ ಮಹಿಳಾ ದಿನವನ್ನು ಸಹ ಜಾರಿಗೆ ತಂದಿದೆ, ನಮ್ಮ ನಗರಸಭೆಯಲ್ಲಿಯೂ ಅನೇಕ ಮಹಿಳೆಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಮಾರ್ಚ್‌ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಎಂದು ಘೋಷಣೆಯಾಗಿದೆ ಎಂದರು.
ವಕೀಲರ ಸಂಘದಿಂದ ವಿಶೇಷ ಪೂಜೆ
ಹೊಳೆನರಸೀಪುರ ಪಟ್ಟಣದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದ ಬ್ರಹ್ಮ ರಥೋತ್ಸವ ಮಾರ್ಚ್ ೧೩ರ ಗುರುವಾರ ನಡೆಯುವ ಪ್ರಯುಕ್ತ ನ್ಯಾಯಾಲಯ ಹಾಗೂ ವಕೀಲರ ಸಂಘದ ಸೇವಾರ್ಥದಲ್ಲಿ ವಿಶೇಷ ಪೂಜಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದ ಶ್ರೀ ಸ್ವಾಮಿಯ ಮೂಲಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ನೈವೇದ್ಯ, ತಧಿ ಆರಾಧನೆ ಸೇವೆ, ಸಹಸ್ರ ನಾಮಾರ್ಚನೆ, ಮಂಗಳಾರತಿ ನೆರವೇರಿಸಿ, ಪಲ್ಲಕ್ಕಿ ಉತ್ಸವದ ಅಡ್ಡೆಯಲ್ಲಿ ಪರಿವಾರ ಸಮೇತ ಶ್ರೀಮನ್ ನಾರಾಯಣ ಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಸಂಪ್ರದಾಯದ ಆಚರಣೆಯಂತೆ ಪೂಜಾ ಕೈಂಕರ್ಯ ನೆರವೇರಿಸಲಾಯಿತು.
ಚೀಟಿ ಹಣ ಕೊಡದ ಕೊಡಚಾದ್ರಿ ಚಿಟ್‌ ಫಂಡ್‌ ವಿರುದ್ಧ ಪ್ರತಿಭಟನೆ
ಕೊಡಚಾದ್ರಿ ಫೈನಾನ್ಸ್‌ನವರು ಪಿಗ್ನಿ ರೂಪದಲ್ಲಿ ಸಂಗ್ರಹಿಸಿರುವ ಹಣವನ್ನು ಬಡ್ಡಿ ಸಮೇತ ವಾಪಸ್‌ ಕೊಡದಿದ್ದರೆ ಬ್ಯಾಂಕಿಗೆ ಬೀಗ ಹಾಕುವುದಾಗಿ ಸಿಐಟಿಯು ಮುಖಂಡ ಮಂಜುನಾಥ್ ಹಾಗೂ ತಾಲೂಕು ರೈತ ಸಂಘದ ಅಧ್ಯಕ್ಷ ಸಿ. ಜಿ. ರವಿ ತಿಳಿಸಿದರು. ಜನರ ಹಣ ಪಡೆದ ಬ್ಯಾಂಕ್‌ಗಳು ಜನರು ಕೇಳಿದಾಗ ವಾಪಸ್ ಹಣ ನೀಡದೆ ಮೇಲಧಿಕಾರಿಗಳ ಅನುಮತಿ ಬಂದಿಲ್ಲ, ನೀವು ಸರಿಯಾದ ಸಮಯಕ್ಕೆ ಹಣ ಕಟ್ಟಿಲ್ಲ ಹೀಗೆ ಅನೇಕ ಕಾರಣಗಳನ್ನು ನೀಡಿ ಬಡ ಜನರು ಸಾಲ ಸೋಲ ಮಾಡಿ ಒಂದೊಂದು ರುಪಾಯಿಗಳನ್ನು ಕೂಡಿಸಿ ಬ್ಯಾಂಕಿಗೆ ಬಂದು ಹಣ ಕಟ್ಟಿದ್ದನ್ನು ವಾಪಸ್ ನೀಡದೆ ಜನರಿಗೆ ತೊಂದರೆ ನೀಡುವ ಇಂತಹ ಬೇಜವಾವ್ದಾರಿ ಅಕ್ರಮ ಬ್ಯಾಂಕ್‌ಗಳಿಗೆ ಬೀಗ ಹಾಕಬೇಕು ಎಂದು ಆಗ್ರಹಿಸಿದರು.
ಈ ಬಾರಿ ಬಜೆಟ್‌ನಲ್ಲಿ ಹಾಸನ ಜಿಲ್ಲೆಯನ್ನು ಮರೆತಿದ್ದಾರೆ
ಈ ಬಾರಿ ರಾಜ್ಯದ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಹಾಸನ ಜಿಲ್ಲೆಯನ್ನು ಮರೆತಿದ್ದಾರೆ. ಅಭಿವೃದ್ಧಿಗಳ ಬದಲಿಗೆ ನಮ್ಮ ಜಿಲ್ಲೆಗೆ ಎಣ್ಣೆ, ಜೂಜು, ಮಟ್ಕಾ, ಗಾಂಜಾ ಗ್ಯಾರಂಟಿ ಕೊಟ್ಟಿದ್ದಾರೆ. ಹಾಸನ ಜಿಲ್ಲೆಯು ಕರ್ನಾಟಕ ಬಜೆಟ್ ಪುಸ್ತಕದಲ್ಲಿ ಇಲ್ಲ. ದೆಹಲಿ ಬಜೆಟ್‌ ಬುಕ್‌ನಲ್ಲಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಟೀಕಿಸಿದರು. ನಮ್ಮ ಜಿಲ್ಲೆಗೆ ಹೆಚ್ಚುವರಿಯಾಗಿ ಜೂಜು, ಎಣ್ಣೆ, ಮಟ್ಕಾ ಗಾಂಜಾ ಗ್ಯಾರಂಟಿ ಕೊಟ್ಟಿದ್ದಾರೆ. ಜಿಲ್ಲೆಯ ಜನ ಸರ್ಕಾರಕ್ಕೆ ಧನ್ಯವಾದ ಹೇಳಬೇಕು ಎಂದು ವ್ಯಂಗ್ಯವಾಡಿದರು. ಗೌರವಸ್ಥ ಕುಟುಂಬಗಳು ಬದುಕಲು ಆಗುತ್ತಿಲ್ಲ. ಮಟ್ಕಾ, ಜೂಜು, ಮದ್ಯ ಸೇವನೆಯಿಂದ ಜನರ ಮನೆಗಳ ಹೆಣ್ಣುಮಕ್ಕಳು ಒಡವೆ ಮಾರಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬಡ ಕುಟುಂಬಗಳಿಗೆ ಉಚಿತ ಔಷಧಿ ವಿತರಣೆ
ಸ್ನೇಹಿತರ ಬಳಗದಿಂದ ಪ್ರತಿ ತಿಂಗಳು ವಾರ್ಡ್ ನಂ. ೩೦, ೩೧ನೇ ವಾರ್ಡ್‌ಗಳಲ್ಲಿರುವ ಬಡ ಕುಟುಂಬಗಳನ್ನು ಗುರುತಿಸಿ ಅನಾರೋಗ್ಯದಿಂದ ಬಳಲುತ್ತಿದ್ದರೇ ಉಚಿತ ಔಷಧಿಗಳನ್ನು ನೀಡುವ ಕಾರ್ಯವನ್ನು ೨೦೨೧ರಿಂದ ಮಾಡಿಕೊಂಡು ಬರುತ್ತಿದ್ದೇವೆ. ಅದೇ ರೀತಿ ನಗರದ ೧ನೇ ಮತ್ತು ೧೭ನೇ ವಾರ್ಡ್‌ನಲ್ಲಿ ಈ ತಿಂಗಳಿನಿಂದ ಪ್ರಾರಂಭಿಸಲಾಗಿದೆ. ಅಲ್ಲದೇ ಈ ವಾರ್ಡ್‌ನಲ್ಲಿ ಯಾರಾದರೂ ಮೃತರಾದರೇ ಅವರ ಅಂತ್ಯಸಂಸ್ಕಾರಕ್ಕಾಗಿ ೫ ಸಾವಿರ ಸಹಾಯಧನವನ್ನು ಕೊಡುವಂತಹ ಯೋಜನೆಯನ್ನು ಸಹ ನಾವು ಮಾಡಿದ್ದೇವೆ ಎಂದು ಸಮಾಜ ಸೇವಕ ರಮೇಶ್ ತಿಳಿಸಿದರು.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
ದೈಹಿಕ ಆಕರ್ಷಣೆಯಿಂದ ವಿದ್ಯಾರ್ಥಿಗಳು ವಿಚಲಿತರಾಗದೇ ಅನ್ಯ ವಿಚಾರಗಳಿಂದ ದೂರವಿದ್ದು ಮುಂಬರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯಲು ಶ್ರಮವಹಿಸಬೇಕು ಎಂದು ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲಾ ವ್ಯವಸ್ಥಾಪಕ ಫಾ.ಕಿರಣ್ ಮೆಲ್ವಿನ್ ಹೇಳಿದರು. ವಿದ್ಯಾರ್ಥಿ ಜೀವನದಲ್ಲಿ ಅಂಕಗಳು ಕಲಿಕೆಯ ಮಾನದಂಡವಾದ್ದರಿಂದ ಕಲಿಕೆಯಲ್ಲಿ ಏರುಪೇರಾದರೆ ಯಾವುದೇ ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳಬಾರದು. ಉತ್ತಮ ಕಲಿಕೆಗೆ ನಿಸ್ವಾರ್ಥ ಸೇವೆ ಸಲ್ಲಿಸಿದ ಶಿಕ್ಷಕರನ್ನು, ಶಾಲೆಯನ್ನು ಹಾಗೂ ತಂದೆ ತಾಯಿಯರನ್ನು ಗೌರವಿಸಬೇಕಾಗಿರುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯ. ಮಾನವ ಧರ್ಮದ ತತ್ವದ ಆಧಾರದ ಮೇಲೆ ನಾವೆಲ್ಲ ಬದುಕಿ ಬಾಳಬೇಕು ಎಂದರು.
ಆಲೂರು ತಾಲೂಕಿನಾದ್ಯಂತ ವಿದ್ಯುತ್ ವ್ಯತ್ಯಯ ಖಂಡಿಸಿ ಪ್ರತಿಭಟನೆ
ಆಲೂರು ತಾಲೂಕಿನಲ್ಲಿ ಪ್ರತಿನಿತ್ಯ ವಿದ್ಯುತ್ ವ್ಯತ್ಯಯವಾಗುತ್ತಿದ್ದು ಕೃಷಿ ಜಮಿನಿಗೆ ನೀರನ್ನು ಹರಿಸಲು ಸಮರ್ಪಕ ವಿದ್ಯುತ್ ಸರಬರಾಜು ಮಾಡದೇ ಬಿತ್ತನೆ ಮಾಡಿರುವ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘದ ವತಿಯಿಂದ ಪಟ್ಟಣದ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು. ರೈತರಿಗೆ ಕೃಷಿ ಜಮೀನಿನಲ್ಲಿ ಬೆಳೆ ಬೆಳೆಯಲು ನೂತನ ವಿದ್ಯುತ್ ತಂತಿ ಮಾರ್ಗವನ್ನು ಕೂಡಲೇ ಸಕ್ರಿಯಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಅಲ್ಲದೆ ಉಪ ವಿಭಾಗ ಕೇಂದ್ರಗಳಲ್ಲಿ ಸುಟ್ಟು ಹೋಗುವ ಪರಿವರ್ತಗಳನ್ನು ಕೂಡಲೇ ಬದಲಾಯಿಸಿ ಕೊಡಬೇಕು ಎಂದು ಆಗ್ರಹಿಸಿದರು.
ಕಾರ್ಮಿಕರ ಸಾವಿಗೆ ಸ್ಪಂದಿಸದ ಜಿಲ್ಲಾಡಳಿತ
ಬೇಲೂರು ಬಸ್ ನಿಲ್ದಾಣ ಮುಂಭಾಗ ಖಾಸಗಿ ವಾಣಿಜ್ಯ ಕಟ್ಟಡದ ಸಜ್ಜಾ ಕುಸಿದು ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ಬಗ್ಗೆ ಸೋಮವಾರ ಅಧಿವೇಶನದ ಶೂನ್ಯ ವೇಳೆಯಲ್ಲಿ ಬೇಲೂರು ಶಾಸಕ ಎಚ್ ಕೆ ಸುರೇಶ್ ವಿಷಯ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರಲ್ಲದೆ ಆ ಸಮಯದಲ್ಲಿ ಸೂಕ್ತವಾಗಿ ಸ್ಪಂದಿಸದ ಜಿಲ್ಲಾಡಳಿತದ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಿಲ್ಲಾಧಿಕಾರಿ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಮೌನವಾಗಿದ್ದಾರೆ. ಜಿಲ್ಲಾ ಸಚಿವರಂತೂ ಹೊರಗಡೆ ಇರುತ್ತಾರೆ, ಆದರೆ ಜಿಲ್ಲೆಯಲ್ಲಿ ಇದ್ದ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಯಾಕೆ ಭೇಟಿ ನೀಡಲಿಲ್ಲ, ರಾಜ್ಯ ಸರ್ಕಾರದವರು ಹಾಸನ ಜಿಲ್ಲೆಯನ್ನು ಹೊರಗಿಟ್ಟು ರಾಜ್ಯಭಾರ ಮಾಡುತ್ತಿದ್ದೀರಾ ಎಂದು ಕಿಡಿಕಾರಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved