• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಭಾಷೆಗೆ ತಾಯಿ ಸ್ಥಾನ ಇರಲಿ ಎಂದ ಸಂಸದ ಶ್ರೇಯಸ್‌
ನಮ್ಮ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಸ್ಥಾನ. ಎಲ್ಲಾ ಭಾಷೆಗಳ ಬಗ್ಗೆ ಅಭಿಮಾನ ಇರಲಿ, ಆದರೆ ಕನ್ನಡ ಭಾಷೆಗೆ ತಾಯಿ ಸ್ಥಾನ ಇರಲಿ. ದೇಶ ಆಧುನಿಕತೆಗೆ ತೆರೆದುಕೊಳ್ಳುತ್ತಿರುವ ಇಂದಿನ ದಿನದಲ್ಲಿ ನಮ್ಮ ನಾಡಿನ ಸಂಸ್ಕೃತಿ ಮಾಯವಾಗುತ್ತಿದೆ ಎಂದರು. ನಾಲ್ಕು ದಿನಗಳು ನಡೆಯುತ್ತಿರುವ ರಾಜ್ಯೋತ್ಸವ ಕಾರ್ಯಕ್ರಮಗಳು ಅವಿಸ್ಮರಣೀಯ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಮೆಚ್ಚುಗೆ ವ್ಯಕ್ತಪಡಿಸಿದರು. ಪುನೀತ್ ರಾಜಕುಮಾರ್ ವೇದಿಕೆಯಲ್ಲಿ ಜಿ ಕನ್ನಡ ಸರಿಗಮಪ ತಂಡದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮುದಾಯ ಮತ್ತು ಪೋಷಕರಿಗೆ ಮತದಾನ ಜಾಗೃತಿ ಮೂಡಿಸಿ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ತರ ಪಾತ್ರ ವಹಿಸುವ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ವಿದ್ಯಾರ್ಥಿಗಳಿಂದ ಆಗಬೇಕು ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಶಂಕರ್ ಹೇಳಿದರು. ನೀವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಸಂವಿಧಾನದಂತೆ ಆಡಳಿತವನ್ನು ರೂಪಿಸಲು ಚುನಾವಣೆಯಾಗುತ್ತದೆ, ನಮ್ಮ ಪ್ರತಿನಿಧಿಗಳ ಆಯ್ಕೆಯ ಸಮಯದಲ್ಲಿ ಈ ಹಕ್ಕಿನ ಉದ್ದೇಶವೇನು ಇದರ ಮಹತ್ವವೇನು ಎಂಬುದನ್ನು ನೀವು ತಿಳಿದಿದ್ದರೆ ನಿಮ್ಮ ಪೋಷಕರಿಗೂ ಮತ್ತು ನೆರೆಹೊರೆಯ ಮತದಾರರಲ್ಲಿಯೂ ಜಾಗೃತಿ ಮೂಡಿಸಬಹುದು ಎಂದರು.
ಆರೋಗ್ಯ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ
ಆರೋಗ್ಯ ಇಲಾಖೆಯಲ್ಲಿ ಆಸ್ಪತ್ರೆಗಳ ದುರಸ್ತಿ ಹೆಸರಿನಲ್ಲಿ ಆರೋಗ್ಯಾಧಿಕಾರಿ ಹಾಗೂ ಸಿಇಒ ಸೇರಿ ಕೋಟ್ಯಂತರ ರುಪಾಯಿ ಹಣ ಲೂಟಿಯಾಗಿದೆ ಎಂದು ಸಾಮಾಜಿಕ ಹೋರಾಟಗಾರ ಪ್ರವೀಣ್ ಗೌಡ ಗಂಭೀರವಾಗಿ ಆರೋಪಿಸಿದರು. ಹೋಬಳಿ ಮಟ್ಟದ ಸಮುದಾಯ ಆರೋಗ್ಯ ಕೇಂದ್ರಗಳನ್ನು ದುರಸ್ತಿ ಪಡಿಸಲು ರಾಜ್ಯದ ವಿವಿಧ ಜಿಲ್ಲೆಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಣ ಬಿಡುಗಡೆ ಮಾಡಲಾಗಿದೆ. ಅದರಂತೆ ಹಾಸನ ಜಿಲ್ಲೆಗೂ ಅತೀ ಹೆಚ್ಚು ಬಿಡುಗಡೆ ಮಾಡಲಾಗಿದೆ ಎಂದರು.
ಶೌಚಾಲಯ ನವೀಕರಿಸಿ ಸಾರ್ವಜನಿಕರ ಬಳಕೆಗೆ ಒದಗಿಸಿದ ಪುರಸಭೆ
ನಿಷ್ಕ್ರಿಯವಾಗಿ ಪಾಳು ಬಿದ್ದಿದ್ದ ಶೌಚಾಲಯಗಳನ್ನು ಪುರಸಭೆ ವತಿಯಿಂದ ಪುನಶ್ಚೇತನಗೊಳಿಸಿ ಸಾರ್ವಜನಿಕರು ಉಪಯೋಗಿಸಲು ಯೋಗ್ಯವಾಗುವಂತೆ ಮಾಡಿದ್ದೇವೆ ಎಂದು ಪುರಸಭೆ ಅಧ್ಯಕ್ಷ ಎ.ಆರ್‌. ಅಶೋಕ್ ಹೇಳಿದರು‌. ಪಟ್ಟಣದ ಜನರಿಗೆ ಯಾವುದೇ ಸಮಸ್ಯೆ ಇದ್ದರೂ ನೇರವಾಗಿ ನಮ್ಮ ಬಳಿ ಅಥವಾ ಸದಸ್ಯರ ಬಳಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡರೆ ನಾವು ಅದಕ್ಕೆ ಸ್ಪಂದಿಸಿ ಕೆಲಸ ಮಾಡಿಕೊಡುತ್ತೇವೆ ಎಂದು ಹೇಳಿದರು.
ಶಾಸಕ ಸಿಮೆಂಟ್ ಮಂಜು ವಿರುದ್ಧ ದಲಿತ ಸಂಘಟನೆ ಮುಖಂಡರ ಆಕ್ರೋಶ
ಪರಿಶಿಷ್ಟ ಜಾತಿ, ವರ್ಗದ ಹಿತರಕ್ಷಣಾ ಸಮಿತಿ ತ್ರೈಮಾಸಿಕ ಸಭೆಗೆ ಶಾಸಕ ಸಿಮೆಂಟ್ ಮಂಜುರವರು ಗೈರು ಹಾಜರಾದ್ದರಿಂದ ಕೆರಳಿದ ದಲಿತ ಸಂಘಟನೆ ಮುಖಂಡರು, ಶಾಸಕರು ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಇನ್ನು ಮುಂದೆ ತಾಲೂಕಿನಲ್ಲಿ ನಡೆಯುವ ಪ. ಜಾತಿ, ವರ್ಗದ ಹಿತರಕ್ಷಣಾ ಸಮಿತಿ ಸಭೆಗೆ ಬರುವುದಿಲ್ಲ. ಸಭೆ ನಡೆಸು ಔಚಿತ್ಯವೂ ಇಲ್ಲ ಎಂದು ಸಭೆಯಿಂದ ಹೊರನಡೆದ ಘಟನೆ ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ ಸಂಭವಿಸಿತು.
ನಗರಸಭೆ ಆಯುಕ್ತರ ವಿರುದ್ಧ ತಿರುಗಿ ಬಿದ್ದ ಸದಸ್ಯರು
ನಗರಸಭೆಯಲ್ಲಿ ಅಧಿಕಾರಿ ಸಿಬ್ಬಂದಿಯ ಮಾಡುವೇ ಹೊಂದಾಣಿಕೆ ಇಲ್ಲ ಇದೇ ಕಾರಣಕ್ಕೆ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿವೆ ಎಂದು ಆರೋಪಿಸಿ ಅಧಿಕಾರಿಗಳನ್ನು ಹಿಡಿತದಲ್ಲಿ ಇಟ್ಟುಕೊಳ್ಳುವಂತೆ ಹಾಗೂ ಇನ್ನು ಮುಂದೆ ಎಲ್ಲರ ವಿಶ್ವಾಸ ತೆಗೆದುಕೊಂಡು ಮುಂದಿನ ಚಟುವಟಿಕೆ ನಡೆಸುವಂತೆ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್ ನಗರಸಭೆ ಆಯುಕ್ತ ನರಸಿಂಹಮೂರ್ತಿ ಅವರಿಗೆ ಸೂಚನೆ ನೀಡಿದಕ್ಕೆ ಆಯುಕ್ತರು ಒಪ್ಪಿಕೊಂಡರು.
ದಾರಿ ಬಿಡಿಸಿಕೊಡುವಂತೆ ಅಬ್ಬನ ಗ್ರಾಮಸ್ಥರಿಂದ ತಹಸೀಲ್ದಾರ್‌ಗೆ ಮನವಿ
ಅಬ್ಬನ ಗ್ರಾಮದಲ್ಲಿ ಸ. ನಂ. 79ರಲ್ಲಿ ನಕಾಶೆ ದಾರಿ ಇದೆ. ಸುಮಾರು 50 ದಲಿತ ಕುಟುಂಬಗಳು ತಿರುಗಾಡುವ ರಸ್ತೆ ಇದಾಗಿದೆ. ಆದರೆ ಇತ್ತೀಚೆಗೆ ರಸ್ತೆಯನ್ನು ಅಡ್ಡಗಟ್ಟಿ ಸೋಲಾರ್‌ ಬೇಲಿ ಹಾಕಿದ್ದಾರೆ. ಸೋಲಾರ್ ಬೇಲಿಯಲ್ಲಿ ವಿದ್ಯುತ್ ಪ್ರಸರಿಸುವುದರಿಂದ ತಿರುಗಾಡಲು ಭಯದ ವಾತಾವರಣ ನಿರ್ಮಾಣವಾಗಿದೆ. ತಹಸೀಲ್ದಾರ್, ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿದ್ದರೂ ನಕಾಶೆ ದಾರಿ ಬಿಡಿಸಿಲ್ಲ. ಕೂಡಲೆ ಬಿಡಿಸಿಕೊಡಬೇಕು. ಇಲ್ಲದಿದ್ದರೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನೂ ಭೇಟಿ ಮಾಡುತ್ತೇವೆ ಎಂದರು.
ಸಂಘಟನೆಗಳಿಂದ ಮಾತ್ರ ಸೌಲಭ್ಯಗಳನ್ನು ಪಡೆಯಲು ಸಾಧ್ಯ
ಸಮಾಜದಲ್ಲಿ ಸಂಘಟನೆಗಳಿಂದ ಮಾತ್ರ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಣತಿ ಆನಂದ್ ತಿಳಿಸಿದರು. ಜನರು ಜಾತಿ ಜಾತಿಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಎಲ್ಲರೂ ಒಂದೇ ಎಂಬ ಭಾವನೆ ಅನುಸರಿಸಿ ನಿಜವಾದ ಪ್ರತಿಭಾವಂತರನ್ನು ಬೆಂಬಲಿಸುವ ಕೆಲಸ ಮಾಡಬೇಕು. ಸಂಘಟನೆ ಹೆಚ್ಚು ಬಲ ಪಡೆದುಕೊಂಡರೆ ಸರ್ಕಾರಗಳ ಯೋಜನೆಗಳನ್ನು ಪ್ರಶ್ನಿಸುವ ಮತ್ತು ಸವಲತ್ತುಗಳನ್ನು ಪಡೆಯಲು ಮುಂದಾಗುತ್ತದೆ ಎಂದರು.
ಎಕ್ಸಿಟ್ ಪೋಲ್ ನಂಬಲ್ಲ ಗೆದ್ದೇ ಗೆಲ್ಲುತ್ತೇವೆ
ಬಿಪಿಎಲ್, ಎಪಿಎಲ್‌ ಕಾರ್ಡ್‌ಗಳ ಬಗ್ಗೆ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ತಿಳಿಸಿದ್ದಾರೆ. ಅರಸೀಕೆರೆಯಲ್ಲಿ ಒಂದು ಲಕ್ಷ ಕುಟುಂಬಗಳಿವೆ, ಆದರೆ ಒಂದು ಲಕ್ಷದ ಹತ್ತು ಸಾವಿರ ಕಾರ್ಡ್‌ಗಳಿವೆ. ಇದೇ ರೀತಿ ರಾಜ್ಯದಲ್ಲಿ ಪರಿಶೀಲನೆ ಮಾಡಿದಾಗ ಗೊತ್ತಾಗಿದೆ. ಟ್ಯಾಕ್ಸ್ ಪೇ ಮಾಡುತ್ತಿರುವವರು, ಸರ್ಕಾರಿ ನೌಕರರು ಇರುವುದು ಗೊತ್ತಾಗಿದೆ. ಐಎ‌ಎಸ್, ಐಪಿಎಸ್ ಅಧಿಕಾರಿಗಳ ಮನೆಗೆ ಬಿಪಿಎಲ್ ಕಾರ್ಡ್ ಹೋಗಿದೆ ಎಂದರು.
ಅರಣ್ಯ ಸಿಬ್ಬಂದಿಯ ರೌಡಿ ವರ್ತನೆಗೆ ಶಾಸಕ ಗರಂ
ಏನ್ರೀ ಅರಣ್ಯ ಇಲಾಖೆಯವರು ಮೇಲಿನಿಂದ ಇಳಿದು ಬಂದವರ. ಸಾರ್ವಜನಿಕರ ಸೇವೆಗೆ ನಿಮ್ಮನ್ನು ನೇಮಿಸಿರುವುದು. ಸಾರ್ವಜನಿಕರ ಹಣದಿಂದಲೇ ನಿಮಗೆ ಸಂಬಳ ನೀಡುವುದು. ಹಳ್ಳಿಜನರ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಲು ನಿಮಗ್ಯಾರ್ರಿ ಅಧಿಕಾರ ನೀಡಿದ್ದು. ಗ್ರಾಮಕ್ಕೆ ತೆರಳುವ ವೇಳೆ ದೊಣ್ಣೆ ಹಿಡಿದುಕೊಳ್ಳಬಹುದೇನ್ರಿ. ತಾಲೂಕಿನಲ್ಲಿ ಎಲ್ಲಿ ನೋಡಿದ್ರೂ ನಿಮ್ಮದೆ ಸಮಸ್ಯೆ. ನಿಮ್ಮಿಂದ ತಾಲೂಕಿನ ಅಭಿವೃದ್ಧಿಯೇ ಕುಂಠಿತಗೊಂಡಿದೆ ಎಂದು ಶಾಸಕ ಸಿಮೆಂಟ್‌ ಮಂಜು ಆಕ್ರೋಶ ಹೊರಹಾಕಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 414
  • next >
Top Stories
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved