• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಗೆ 6ನೇ ಸ್ಥಾನ
ಎಸ್ಸೆಸ್ಸೆಲ್ಸಿಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಕ್ಕೆ ಹಾಸನ ಜಿಲ್ಲೆ 6ನೇ ಸ್ಥಾನ ಪಡೆದಿದೆ. ಇನ್ನು ನಗರದ ವಿಜಯ ಶಾಲೆಯ ವಿದ್ಯಾರ್ಥಿ ಉತ್ಸವ್ ಪಟೇಲ್ ೬೨೫ಕ್ಕೆ ೬೨೫ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಬಾರಿಯ ಫಲಿತಾಂಶದಲ್ಲಿ ನಗರದ ಚಿಕ್ಕಹೊನ್ನೇನಹಳ್ಳಿ ಬಳಿ ಇರುವ ವಿಜಯ ಶಾಲೆಯ ವಿದ್ಯಾರ್ಥಿಗಳೇ ಬಹುಪಾಲು ಸ್ಥಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮೊದಲ ಸ್ಥಾನದ ಉತ್ಸವ್‌ ಪಟೇಲ್‌ ಹಾಗೂ ಎರಡನೇ ಸ್ಥಾನದ ಚೇತನ್‌ ಅಷ್ಟೇ ಅಲ್ಲದೆ ಕಿರಣ್‌ ಗೌಡ ಕೂಡ 625ಕ್ಕೆ 624 ಅಂಕ ಪಡೆದಿದ್ದಾನೆ. ಹೇಮಶ್ರೀ 623 ಅಂಕ, ತ್ರಿಭುವನ್‌ ಎಸ್‌. ಗೌಡ 622 ಅಂಕ ಪಡೆದಿದ್ದಾನೆ. ಈ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಪುಂಡಾನೆಗಳನ್ನು ಹದಗೊಳಿಸಲು ಸಾಫ್ಟ್‌ ರಿಲೀಫ್‌ ಸೆಂಟರ್‌
ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾ ಅರಣ್ಯ ವ್ಯಾಪ್ತಿಯಲ್ಲಿ ಸಾಫ್ಟ್‌ ರಿಲೀಫ್‌ ಸೆಂಟರ್ ಆರಂಭಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ಕಾಡಾನೆ ಮಾನವ ಸಂಘರ್ಷ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ ಇಡಿ ದೇಶದಲ್ಲೆ ಈ ಸಮಸ್ಯೆ ಇದ್ದು ಸಂಕಿರ್ಣ ಸಮಸ್ಯೆ ಪರಿಹಾರಕ್ಕೆ ತನ್ನದೆ ಸಮಯ ಹಿಡಿಯಲಿದೆ. ಸಮಸ್ಯೆ ಪರಿಣಾಮಕಾರಿಯಾಗಿ ಪರಿಹರಿಸುವ ನಿಟ್ಟಿನಲ್ಲಿ ಮೇ ತಿಂಗಳ ಅಂತ್ಯದಲ್ಲಿ ಬೆಳೆಗಾರರು, ತಜ್ಞರು ಹಾಗೂ ಅಧಿಕಾರಿಗಳನ್ನೊಳಗೊಂಡ ಸಭೆ ನಡೆಸಿದ ನಂತರ ಕಾಡಾನೆ ಪೀಡಿತ ಕ್ಷೇತ್ರದ ಶಾಸಕರೊಂದಿಗೆ ದೆಹಲಿಗೆ ನಿಯೋಗ ತೆರಳಿ ಕೇಂದ್ರ ಅರಣ್ಯ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಸಮೀಕ್ಷೆಯಲ್ಲಿ ವಡ್ಡರ್ ಬೋವಿ ಎಂದಷ್ಟೇ ನಮೂದಿಸಿ
ರಾಜ್ಯದ ಬೋವಿ ವಡ್ಡರ್ ಜನಾಂಗವನ್ನು ಸಮೀಕ್ಷೆ ವೇಳೆ ಅನುಸರಿಸಬೇಕಾದ ಕ್ರಮದ ಕುರಿತಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವ ವೇಳೆ ಪಟ್ಟಣದ ಪ್ರವಾಸಿಮಂದಿರಕ್ಕೆ ಭೇಟಿ ನೀಡಿದ ಅವರು, ಮಾಧ್ಯಮಾದೊಂದಿಗೆ ಮಾತನಾಡಿ, ಪರಿಶಿಷ್ಟ ಜಾತಿಯ ಪೈಕಿ 101 ಉಪಜಾತಿಗಳಿದ್ದು, ಆ ಸಮುದಾಯಗಳಿಗೆ ಒಳಮೀಸಲಾತಿ ಅಥವಾ ಉಪ ವರ್ಗೀಕರಣ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಅಯೋಗ ರಚಿಸಿ ರಾಜ್ಯದೆಲ್ಲೆಡೆ ಮುಂದಿನ 5ನೇ ತಾರೀಖಿನಿಂದ ಮನೆ, ಮನೆಗೆ ತೆರಳಿ ಸಮೀಕ್ಷೆಯ ಮೂಲಕ ದತ್ತಾಂಶ ಸಂಗ್ರಹಕ್ಕೆ ಮುಂದಾಗಿದೆ.
ಹಳೆ ವಿದ್ಯಾರ್ಥಿಗಳೊಂದಿಗೆ ಗಿರಿ ದೇವನೂರು ಸಂವಾದ ಸರಣಿ
ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ ಹಾಗೂ ರೋಬೋಟಿಕ್ಸ್‌ಗೆ ಸಂಬಂಧಿಸಿದ ವಿಷಯಗಳನ್ನು ಅರಿಯಲು ಹೆಚ್ಚಿನ ಒತ್ತು ನೀಡಬೇಕು ಎಂದು ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಮತ್ತು ರೀ ಆಲ್ಫಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರಿ ದೇವನೂರು ಅವರು ಸಲಹೆ ನೀಡಿದರು. ಕಂಪ್ಯೂಟರ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿರುವವರು ಕೃತಕ ಬುದ್ಧಿಮತ್ತೆ ಹಾಗೂ ಮೆಕ್ಯಾನಿಕಲ್‌ನಂತಹ ಕೋರ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿರುವವರು ರೋಬೋಟಿಕ್ಸ್ ಮೇಲೆ ಗಮನ ಕೇಂದ್ರೀಕರಿಸುವುದು ಸೂಕ್ತ ಎಂದು ತಿಳಿಸಿದರು.
ಕಾಡು ಕಡಿಮೆಯಾಗುತ್ತಿರುವುದರಿಂದ ಆನೆಗಳು ನಾಡಿಗೆ
ಹಾಸನ ಜಿಲ್ಲೆಯಲ್ಲಿ ಆನೆಗಳ ದಾಳಿಯಿಂದ ಕಳೆದ ವರ್ಷ ೭ ಹಾಗೂ ಈ ವರ್ಷ ಒಂದು ಸಾವು ಸಂಭವಿಸಿದೆ. ಈ ಬಗ್ಗೆ ನಮಗೆ ವಿಷಾದ ಇದೆ. ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದು, ಕಾಡಿನಲ್ಲಿನ ಪ್ರಾಣಿಗಳು ನಾಡಿಗೆ ಬರಲು ಪ್ರಾರಂಭಿಸಿವೆದೆ. ಹಾಸನ ಜಿಲ್ಲೆಯ ಆಲೂರು, ಬೇಲೂರು, ಬಿಕ್ಕೋಡು, ಸಕಲೇಶಪುರದ ಭಾಗಗಳಲ್ಲಿ ಕಾಡಾನೆಗಳು ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿವೆ. ಪ್ರಾಣಹಾನಿ ಮಾಡಿವೆ. ಈ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ಇದ್ದು, ಆನೆಗಳ ಹಾವಳಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ತಿಳಿಸಿದರು.
ಬೇಲೂರು ಪುರಸಭೆ ಅವಿಶ್ವಾಸದಲ್ಲಿ ಅಶೋಕ್‌ಗೆ ವಿಜಯ
ಪುರಸಭೆ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ನಿರ್ಣಯ ಗೊತ್ತುವಳಿ ಸಭೆಯಲ್ಲಿ ಸದಸ್ಯರು ಮುಖ್ಯಾಧಿಕಾರಿ ವಿರುದ್ಧ ಹರಿಹಾಯ್ದರಲ್ಲದೆ ಕುರ್ಚಿಗಳನ್ನು ಪುಡಿ ಮಾಡಿದ್ದು ಇದನ್ನು ಸಂಸದರು ಹಾಗೂ ಶಾಸಕರು ಮೂಕಪ್ರೇಕ್ಷಕರಾಗಿ ನೋಡುವಂತಾಯಿತು. ಕೆಲ ಕೈ ಸದಸ್ಯರು ವೇದಿಕೆಯತ್ತ ದೌಡಾಯಿಸಿ ಸುಜಯ್ ಅವರ ಕೊರಳಪಟ್ಟಿ ಹಿಡಿದು ಎಳೆದಾಡಿದರು. ಪುರಸಭೆ ಸಭಾಂಗಣದಿಂದ ಮುಖ್ಯಾಧಿಕಾರಿಯನ್ನು ಹೊರದಬ್ಬಿದರು. ಇನ್ನೂ ಕೆಲವರು ಕುರ್ಚಿ, ಮೇಜುಗಳನ್ನು ಎಳೆದಾಡಿ ಮುರಿದು ಹಾಕಿ ಮೈಕನ್ನು ಧ್ವಂಸಗೊಳಿಸಿದರು. ಅವಿಶ್ವಾಸ ನಿರ್ಣಯ ಸಭೆಯಲ್ಲಿ ಮುಖ್ಯಾಧಿಕಾರಿ ಹಿಡಿದು ಎಳೆದಾಡಿದ ಕೈ ಸದಸ್ಯರು ಸಭೆ ನಡೆಸಲು ಮುಖ್ಯ ಅಧಿಕಾರಿಗೆ ಯಾವುದೇ ಅಧಿಕಾರವಿಲ್ಲ ಎಂದು ಆಕ್ರೋಶ ಹೊರ ಹಾಕಿದರು.
ಚಿರತೆ ಹಾವಳಿಗೆ ಮುಧೋಳ ನಾಯಿ ಬಲಿ
ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸುಮಾರು ಕೇವಲ ೧೦೦ ಅಡಿಯ ದೂರದ ಕೃಷ್ಣಮೂರ್ತಿ ಅವರ ಮನೆಯಲ್ಲಿ ಮಧ್ಯರಾತ್ರಿ ೧-೨೫ಕ್ಕೆ ಈ ಘಟನೆ ನಡೆದಿದೆ. ಎಂದಿನಂತೆ ಮುಂಜಾನೆ ಬಾಗಿಲು ತೆಗೆದು ಮನೆಯಿಂದ ಹೊರಗಡೆ ಬಂದ ಕೃಷ್ಣಮೂರ್ತಿಯರು ನೋಡಿದಾಗ ನಾಯಿ ಇಲ್ಲದೆ ರಕ್ತ ಚೆಲ್ಲಿದ್ದು ಕಂಡು ಗಾಬರಿಯಿಂದ ಸಿಸಿಟಿವಿ ಪರೀಕ್ಷೆ ನಡೆಸಿದಾಗ ಚಿರತೆಯೊಂದು ನಾಯಿಯನ್ನು ಎಳೆದೊಯ್ದಿರುವುದು ಗೊತ್ತಾಗಿದೆ. ತದನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದರೂ ಕೂಡ ಸ್ಥಳಕ್ಕೆ ಬಾರದೆ ಅಲ್ಲಿ ಬೋನ್ ಕೂಡ ಇಟ್ಟಿಲ್ಲ. ಚಿರತೆ ಓಡಾಡಿದ ಹೆಜ್ಜೆ ಗುರುತುಗಳು ಕಂಡುಬಂದಿದ್ದು ಕುಟುಂಬದವರು ಭಯಭೀತರಾಗಿದ್ದಾರೆ.
ಚೆಸ್ಕಾಂ ನೌಕರರು ಹಾಗೂ ಕುಟುಂಬಸ್ಥರಿಗೆ ಹೆಲ್ತ್‌ ಕಾರ್ಡ್‌

ಚೆಸ್ಕಾಂನ  ಅಧಿಕಾರಿಗಳು, ನೌಕರರು ಹಾಗೂ ಕುಟುಂಬ ಸದಸ್ಯರಿಗೆ ಆರೋಗ್ಯ ವಿಮೆ ಕಾರ್ಡ್ 

ಪುನೀತ್ ರಾಜ್‌ಕುಮಾರ್‌ ಪ್ರತಿಮೆ ಸುತ್ತ ಫ್ಲೆಕ್ಸ್ ಹಾವಳಿ
ಎನ್.ಆರ್‌. ವೃತ್ತದಲ್ಲಿರುವ ಪುನೀತ್ ರಾಜಕುಮಾರ್ ಪ್ರತಿಮೆಯ ಸುತ್ತ ಫ್ಲೆಕ್ಸ್, ಬ್ಯಾನರ್‌ಗಳ ಹಾವಳಿ ಹೆಚ್ಚಾಗಿದ್ದು, ತರೆವುಗೊಳಿಸುವಂತೆ ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್, ಶಿವರಾಜಕುಮಾರ್, ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಪ್ರತಿಮೆ ಸುತ್ತ ಪ್ಲೆಕ್ಸ್‌ಗಳಿಂದ ತುಂಬಿ ಹೋಗಿದ್ದು, ಸುಂದರವಾದ ಪ್ರತಿಮೆಯಲ್ಲಿ ಒಳ್ಳೆಯ ಸಂದೇಶವಿದೆ.. ಅದನ್ನ ಇತರರು ನೋಡಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಶನಿದೇವರ ದೇವಸ್ಥಾನ ಲೋಕಾರ್ಪಣೆ
ಕೇರಳಾಪುರ ಗ್ರಾಮದ ಕಾವೇರಿ ಎಡದಂಡೆಯ ಮೇಲೆ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ಶನೇಶ್ವರದೇವರ ಶಿಲೆ ಹಾಗೂ ನೂತನ ದೇವಾಲಯ ಲೋಕಾರ್ಪಣೆ ಹಾಗೂ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮವುಜರುಗಿತು. ದೇವಸ್ಥಾನ ಪ್ರವೇಶದ ನಂತರ ಪೂಜಾದಿ ಕೈಂಕರ್ಯ, ನೂತನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ನಂತರ ರುದ್ರಬೀಷೆಕ, ಹೂವಿನ ಅಲಂಕಾರ, ಮಹಾಮಂಗಳಾರತಿ, ಹವನ, ಹೋಮ, ಅಷ್ಟದೇವರ ಪೂಜೆ ಇತ್ಯಾದಿಗಳನ್ನು ಅರ್ಚಕರಾದ ಅರುಣ್ ಕುಮರ್ ಶಾಸ್ತ್ರಿಗಳು ಮತ್ತು ತಂಡದವರು ನೇರವೇರಿಸಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved