• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಯೋಧ್ಯೆಯಲ್ಲಿ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನ
ಉತ್ತರ ಪ್ರದೇಶದ ರಾಮಜನ್ಮ ಸ್ಥಳ ಅಯೋಧ್ಯೆಯ ರಾಮಕಥಾ ಪಾರ್ಕ್‌ನಲ್ಲಿ ಚನ್ನರಾಯಪಟ್ಟಣ ಹಾಗೂ ಕೆ. ಆರ್. ಪೇಟೆ ತಾಲೂಕಿನ ಜನತೆ ಸೇರಿ ಆನೆಗೋಳ ಗ್ರಾಮ ದೇವತೆ ಶ್ರೀ ಆನೆಗೋಳದಮ್ಮ ಹಾಗೂ ಶ್ರೀ ಆಂಜನೇಯ ಸ್ವಾಮಿ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ಸಂಪೂರ್ಣ ರಾಮಾಯಣ ಅಥವಾ ಶ್ರೀ ರಾಮ ರಾವಣನ ಯುದ್ಧ ಎಂಬ ಪೌರಾಣಿಕ ನಾಟಕವು ಬೋಳಮಾರನಹಳ್ಳಿ ಗ್ರಾಮದ ನಿವೃತ್ತ ಎಂಜಿನಿಯರ್ ಜಯಲಿಂಗೇಗೌಡ, ಬಿ.ಎಸ್. ಮಂಜುನಾಥ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.
ಸಾಧನೆ ಮಾಡಲು ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಿ
ಮಹಿಳೆಯರು ರಾಜಕೀಯ ಸೇರಿಂತೆ ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬರಲು ಆತ್ಮ ಸ್ಥೈರ್ಯ ತುಂಬಲು ಎಲ್ಲರೂ ಮುಂದಾಗಬೇಕೆಂದು ಪುರಸಭೆ ಅಧ್ಯಕ್ಷ ಎ. ಆರ್. ಅಶೋಕ್ ಹೇಳಿದರು. ಮಹಿಳೆ ಸ್ವಾವಲಾಂಬಿಯಾಗಿ ಬದುಕಲು ಸರ್ಕಾರ ಹಲವಾರು ಯೋಜನೆ ರೂಪಿಸಿದ್ದು ಸದುಪಯೋಗಪಡಿಸಿಕೊಳ್ಳಬೇಕು. ಮಹಿಳೆ ಒಂದು ಕ್ಷೇತ್ರಕ್ಕೆ ಸೀಮಿತರಾಗದೆ ಎಲ್ಲಾ ಕ್ಷೇತ್ರದಲ್ಲಿ ಪಾದಾರ್ಪಣೆ ಮಾಡಿ ಯಶಸ್ಸು ಪಡೆಯಬೇಕು. ಪ್ರತಿಯೊಬ್ಬರೂ ಮಹಿಳೆಯರಿಗೆ ಗೌರವ ಕೊಡಬೇಕು ಎಂದರು.
ಬಾಹ್ಯಾಕಾಶದವರೆಗೂ ಮಹಿಳೆಯರ ಸಾಧನೆ ಇದೆ
ಮಹಿಳೆಗೆ ಅಪಾರವಾದ ಶಕ್ತಿ ಇದೆ, ಹಿಂದೆ ಸತಿ ಸಹಗಮನ ಪದ್ಧತಿಯಂತಹ ಮೂಢನಂಬಿಕೆಗಳಿಂದ ಮಹಿಳೆಯರನ್ನು ಶೋಷಣೆ ಮಾಡಲಾಗುತ್ತಿತ್ತು, ಆದರೆ ಇಂದು ಮಹಿಳೆ ಎಲ್ಲಾ ಸಂದರ್ಭಗಳನ್ನು ನಿಭಾಯಿಸುವಂತಹ ಶಕ್ತಿ ಹೊಂದಿದ್ದಾಳೆ, ಪ್ರತಿಯೊಬ್ಬ ಮಹಿಳೆಯೂ ನಿಮಗೆ ನೀವೇ ನಿಮ್ಮ ಆತ್ಮಸ್ಥೈರ್ಯ ವೃದ್ಧಿಸಿಕೊಳ್ಳಿ, ಅತ್ತೆ, ಸೊಸೆ ಎಂದು ಭೇದಭಾವ ಮಾಡದೇ ಕೌಟುಂಬಿಕ ಸಾಮರಸ್ಯವನ್ನು ಕಾಪಾಡಿಕೊಳ್ಳಿ ಎಂದು ಕಿವಿಮಾತು ಹೇಳಿದರು. ಮನೆಯಲ್ಲಿ ಅತ್ತೆ ಸೊಸೆ ಚೆನ್ನಾಗಿದ್ದಾರೆ ಎಂದರೇ ತಮ್ಮ ಜವಾಬ್ದಾರಿ ತಿಳಿದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಹೇಳಿದರು.
ಹಾರನಹಳ್ಳಿ ರಸ್ತೆ ದುರಸ್ತಿ ಕಾಮಗಾರಿ ವಿಳಂಬ
ಅರಸೀಕೆರೆ-ಹಾಸನ ಮುಖ್ಯ ರಸ್ತೆಯ ಹಾರನಹಳ್ಳಿ ವ್ಯಾಪ್ತಿಯ ಆಂಜನೇಯ ದೇವಾಲಯದಿಂದ ಜಾವಗಲ್ ರಸ್ತೆವರೆಗೆ ಚತುಷ್ಪಥ ರಸ್ತೆಗಾಗಿ ಲೋಕೋಪಯೋಗಿ ಇಲಾಖೆಯಿಂದ 15 ತಿಂಗಳುಗಳ ಹಿಂದೆ ಆರಂಭವಾದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಗುಣಮಟ್ಟದ ಲೈಟುಗಳನ್ನು ಅಳವಡಿಸಲಿ. ಗುತ್ತಿನಕೆರೆ ಹೋಗುವ ಸರ್ಕಲ್ ಜಾವಗಲ್ ತಿರುವು ಸರ್ಕಲ್‌ಗಳನ್ನು ಅಗಲ ಮಾಡಲಿ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜನ ಸ್ವಾಮಿ ಆಗ್ರಹಿಸಿದ್ದಾರೆ.
ಶಿಕ್ಷಕಿಯರು ಸಕಲ ರೀತಿ ಮಕ್ಕಳನ್ನ ಸಜ್ಜುಗೊಳಿಸಿ
ಶಿಕ್ಷಕಿಯರ ಮೇಲೆ ಬಹಳ ಜವಾಬ್ದಾರಿ ಇದೆ. ನೀವು ಮಕ್ಕಳನ್ನು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸಜ್ಜುಗೊಳಿಸಿದರೆ ಆ ಹೆಣ್ಣುಮಕ್ಕಳು ಎಂತಹ ಸಂದರ್ಭವನ್ನು ಸಹ ಎದುರಿಸುವಂತಹ ಸಬಲರಾಗುತ್ತಾರೆ. ನೀವುಗಳು ಒಂದೊಂದು ಶಾಲೆಯನ್ನೇ ನಡೆಸುತ್ತಿದ್ದೀರಿ, ನೂರಾರು ಮಕ್ಕಳು ಇರುತ್ತವೆ, ಅವರಲ್ಲಿ ಆತ್ಮಸ್ಥೈರ್ಯವನ್ನು ತುಂಬುವಂತ ಕಾರ್ಯವು ಶಿಕ್ಷಣದೊಂದಿಗೆ ನಿಮ್ಮಿಂದ ಆಗಬೇಕು ಎಂದು ವಿಶ್ವ ಮಹಿಳೆಯರ ದಿನ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸಂತೋಷ್ ಕುಮಾರ್ ಹೇಳಿದರು.
ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕ ಅನುಚಿತ ವರ್ತನೆ
ಹೊಳೆನರಸೀಪುರ ತಾಲೂಕಿನ ಮಲ್ಲಪ್ಪನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರೇಮ್‌ ಕುಮಾರ್ ಅವರು ವಿದ್ಯಾರ್ಥಿನಿಯರ ಜತೆಗೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಮುಂದಿನ ಆದೇಶದವರೆಗೆ ಅಮಾನತುಮಾಡಲಾಗಿದೆ. ಸಹ ಶಿಕ್ಷಕ ಪ್ರೇಮ್‌ ಕುಮಾರ ಅವರ ಅನುಚಿತ ವರ್ತನೆ ಬಗ್ಗೆ ವಿದ್ಯಾರ್ಥಿನಿಯರು ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡರಿಗೆ ಲಿಖಿತ ದೂರು ನೀಡಿದ್ದಾರೆ.
ಶ್ರೀ ಕಾಲಭೈರವೇಶ್ವರ ಸ್ವಾಮಿ ನೂತನ ರಥ ಲೋಕಾರ್ಪಣೆ
ಅರಸೀಕೆರೆ ಬಾಣಾವರದ ಸಮೀಪದ ಮನಕತ್ತೂರು ಗ್ರಾಮದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿಯವರ ನೂತನ ರಥವನ್ನು ಲೋಕಾರ್ಪಣೆ ಮಾಡಿ ನಂತರ ರಥದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿಯನ್ನು ಕೂರಿಸಿ ವಿಜೃಂಭಣೆಯಿಂದ ರಥೋತ್ಸವವನ್ನು ನೆರವೇರಿಸಲಾಯಿತು. ರಥೋತ್ಸವದ ಅಂಗವಾಗಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಅವರ ಸನ್ನಿಧಿಯಲ್ಲಿ ಶಿವರಾತ್ರಿ ಹಬ್ಬದ ದಿನದಿಂದ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನಡೆಸಿ ಶುಕ್ರವಾರ ಬೆಳಗ್ಗೆ ಶ್ರೀ ವೀರಭದ್ರೇಶ್ವರ ಸ್ವಾಮಿ ಅವರ ಕೆಂಡೋತ್ಸವವನ್ನು ನಡೆಸಿ ನಂತರ ರಥಕ್ಕೆ ಪೂಜೆಯನ್ನು ಸಲ್ಲಿಸಿ ರಥೋತ್ಸವ ನಡೆಸಲಾಯಿತು.
ಟೆಂಡರ್‌ ವಿಚಾರದಲ್ಲಿ ಶಾಸಕ ರೇವಣ್ಣ ತಾಪಂ ಇಒ ವಾಗ್ವಾದ
ಹೊಳೆನರಸೀಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ತಾ.ಪಂ. ತಾಲೂಕು ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ತಾಲೂಕಿನ ಗ್ರಾಮ ಪಂಚಾಯಿತಿ ಪಿಡಿಒಗಳ ಉಪಸ್ಥಿತಿಯಲ್ಲಿ ನಡೆಸಿದ ಸಭೆಯಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿದರು. ತಾಲೂಕು ಪಂಚಾಯಿತಿಯಲ್ಲಿ ಕಂಪ್ಯೂಟರ್ ನಿರ್ವಹಣೆಗಾಗಿ ನಲವತ್ತು ಲಕ್ಷ ರು. ಗಳ ಟೆಂಡರ್ ಕರೆಯಾಗಿದೆ. ಆದರೆ ಟೆಂಡರ್ ಪ್ರಕ್ರಿಯೆ ಮಾಡಿರುವ ಅಧಿಕಾರಿಗಳು ನಲವತ್ತು ಲಕ್ಷದ ಟೆಂಡರ್‌ಗೆ ನಾಲ್ಕು ಕೋಟಿ ವ್ಯವಹಾರದ ವಹಿವಾಟು ತೋರಿಸಬೇಕೆಂದು ಟೆಂಡರ್‌ದಾರರಿಗೆ ತಾಕೀತು ಮಾಡಿ ಅವರ ಟೆಂಡರ್‌ ಅನ್ನು ಮೂಲೆಗುಂಪು ಮಾಡಿದ್ದಾರೆ ಎಂದು ತಾಪಂ ಅಧಿಕಾರಿಯನ್ನು ತೀವ್ರವಾಗಿ ತರಾಟೆ ತಗೆದುಕೊಂಡರು.
ಪ್ರಮುಖ ಬೇಡಿಕೆಗಳಿಗೆ ರಾಜ್ಯ ಬಜೆಟ್‌ ಸ್ಪಂದನೆ
ಹಾಸನ ಜಿಲ್ಲೆಯ ಪ್ರಮುಖ ಬೇಡಿಕೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಮನ್ನಣೆ ಸಿಕ್ಕಿದೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಪ್ರಮುಖವಾಗಿ ಬೇಲೂರು ಸೇರಿದಂತೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಿತಿ ಮೀರಿರುವ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯವ ಸಂಬಂಧ, ಭದ್ರಾ ಅಭಯಾರಣ್ಯದಲ್ಲಿ ಆನೆಧಾಮ ನಿರ್ಮಾಣಕ್ಕೆ ಆರಂಭಿಕವಾಗಿ ಸಿಎಂ ಸಿದ್ದರಾಮಯ್ಯ ಅವರು ೨೦ ಕೋಟಿ ರು. ಅನುದಾನ ನೀಡಿದ್ದಾರೆ.
ತ್ಯಾಜ್ಯ ವಿಲೇವಾರಿಗೆ ವಾಹನಗಳನ್ನು ಖರೀದಿಸಿದ ಬೇಲೂರು ಪುರಸಭೆ
ತ್ಯಾಜ್ಯ ವಿಲೇವಾರಿಗೆ ಎರಡು ಟ್ರ್ಯಾಕ್ಟರ್, ಒಂದು ಆಟೋ ಟಿಪ್ಪರ್ ಅನ್ನು 15ನೇ ಹಣಕಾಸು ಯೋಜನೆಯಡಿಯಲ್ಲಿ ಖರೀದಿಸಿದ್ದು, ಸುಮಾರು 40 ಲಕ್ಷ ರುಪಾಯಿ ವೆಚ್ಚವಾಗಿದ್ದು, ಪಟ್ಟಣ ಬೆಳೆದಂತೆ ಜನಸಂಖ್ಯೆಯು ಹೆಚ್ಚಾಗುತ್ತಿದೆ. ಜನಸಂಖ್ಯೆ ಜಾಸ್ತಿಯಾದರೆ ಮನೆಯಲ್ಲಿ ಕಸವು ಜಾಸ್ತಿಯಾಗುತ್ತದೆ. ನಮ್ಮ ಕಚೇರಿಯಲ್ಲಿ ಎರಡು ಟ್ರ್ಯಾಕರ್, ಒಂದು ಆಟೋ ಟಿಪ್ಪರ್ ಇದ್ದು, ಕಸ ಸಂಗ್ರಹಣೆ ಮಾಡಲು ಕಷ್ಟವಾಗುತ್ತಿತ್ತು, ಇದನ್ನು ಮನಗಂಡು ವಾಹನ ಖರೀದಿಸಲಾಗಿದೆ. ಪುರಸಭೆ ನಾಗರಿಕರು ನಿಮ್ಮ ಮನೆ ಬಾಗಿಲಿಗೆ ಬರುವ ವಾಹನಕ್ಕೆ ಕಸವನ್ನು ಹಾಕಿ ನಗರವನ್ನು ಸ್ವಚ್ಛವಾಗಿಡಬೇಕು ಎಂದು ಅಧ್ಯಕ್ಷ ಅಶೋಕ್‌ ಹೇಳಿದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved