• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ಸ್ವಾತಂತ್ರ್ಯ ಸಮಾನತೆಗೆ ಅಂಬೇಡ್ಕರ್ ಕೊಡುಗೆ ಅಪಾರ
ದೇಶದ ಮೂಲೆಮೂಲೆಯಲ್ಲಿರುವ ಮಹಿಳೆಯರಿಗೆ ಶಿಕ್ಷಣ ಹಕ್ಕು, ಆಸ್ತಿಯ ಹಕ್ಕು, ಹೀಗೆ ಹಲವಾರು ಹಕ್ಕುಗಳನ್ನು ಸಂವಿಧಾನದ ಮೂಲಕ ಅಂಬೇಡ್ಕರ್‌ ಅವರು ಕಲ್ಪಿಸಿಕೊಟ್ಟಿದ್ದಾರೆ. ಅವರ ಕನಸು ನನಸಾಗಬೇಕೆಂದರೆ ಈ ಎಲ್ಲ ಹಕ್ಕುಗಳು ಪ್ರತಿ ಮಹಿಳೆಯನ್ನು ತಲುಪಬೇಕು. ಮಹಿಳಾ ಸಬಲೀಕರಣಕ್ಕೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕೊಡುಗೆ ಅಪಾರ, ಹೆಣ್ಣು ಇವತ್ತು ಇಷ್ಟರ ಮಟ್ಟಿಗೆ ಶಿಕ್ಷಣವನ್ನು ಪಡೆಯುತ್ತಿದ್ದಾಳೆ, ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾಳೆ ಎಂದರೆ ಅದಕ್ಕೆ ಮೂಲ ಕಾರಣ ಅಂಬೇಡ್ಕರ್‌‌, ಅವರನ್ನು ಜೀವನಪೂರ್ತಿ ಸ್ಮರಿಸುತ್ತೇನೆ ಎಂದು ಸುಮ ತಿಳಿಸಿದರು.
ಶ್ರೀ ವೀರಭದ್ರೇಶ್ವರ ಸ್ವಾಮಿ ಕೆಂಡೋತ್ಸವ
ಜೀಕನಹಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ಮತ್ತು ಶ್ರೀ ಭದ್ರಾಕಾಳಮ್ಮನವರ ಕೆಂಡೋತ್ಸವ ಮತ್ತು ಬಸವ ಜಯಂತಿ ಜಾತ್ರಾ ಮಹೋತ್ಸವವು ವಿಶೇಷ ಕ್ಷೀರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಹೂವಿನ ಅಲಂಕಾರದೊಂದಿಗೆ ಅದ್ಧೂರಿಯಾಗಿ ನೆರವೇರಿತು. ಸ್ವಾಮಿಯವರ ಜಾತ್ರಾ ಮಹೋತ್ಸವಕ್ಕೆಂದು ಗ್ರಾಮಕ್ಕೆ ಆಗಮಿಸಿದ ಗ್ರಾಮ ದೇವತೆಯಾದ ಶ್ರೀ ಸಪ್ತಮಾತೃಕ ದೇವಿ, ಶ್ರೀ ಪಂಚಲಿಂಗೇಶ್ವರ ಸ್ವಾಮಿ, ಶ್ರೀ ಧೂತರಾಯ ಸ್ವಾಮಿ, ಶ್ರೀ ಮುತ್ತುರಾಯ ಸ್ವಾಮಿಯವರ ದರ್ಶನ ಪಡೆದ ಭಕ್ತರು ಮತ್ತು ಹೆಣ್ಣುಮಕ್ಕಳು ದೇವರುಗಳಿಗೆ ಮಡಿಲಕ್ಕಿ ಹಾಕಿ ಭಕ್ತಿಯಿಂದ ಮನಸ್ಸಿನ ಈಡೇರಿಕೆಗಳನ್ನು ಬೇಡಿಕೊಂಡರು.
ಮಾದಕ ವಸ್ತುಗಳ ಸಾಗಾಣಿಕೆ ಮಾರಾಟ ಪತ್ತೆಗೆ ಕ್ರಮವಹಿಸಿ
ಮಾದಕ ವಸ್ತುಗಳು ಸಮಾಜದ ಮೇಲೆ ಬಹಳ ದುಷ್ಪರಿಣಾಮ ಬೀರುತ್ತಿವೆ. ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಪತ್ತೆ ಮಾಡುವುದರ ಜೊತೆಗೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸದರಿ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ನಿರ್ದೇಶನ ನೀಡಿದರು. ಅಧಿಕಾರಿಗಳು ಕಾಟಾಚಾರಕ್ಕೆ ಕೆಲಸ ಮಾಡಬೇಡಿ, ಯಾವುದೇ ಉದಾಸಿನ ಮಾಡದೆ ಕರ್ತವ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಡೀಸಿ ಎಚ್ಚರಿಕೆ ನೀಡಿದರು.
ಯಗಚಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಒತ್ತಾಸೆಯಿಂದಾಗಿ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 35 ಕೋಟಿ ರು. ಅನುದಾನ ಮೀಸಲಿಡಲಾಗಿದೆ. ವಿಶ್ವವಿಖ್ಯಾತ ಸ್ಥಳ ಇದಾಗಿದ್ದು ಇಂದು ತಾಂತ್ರಿಕ ಸಮಿತಿ ಅಧ್ಯಕ್ಷ ಜಯಪ್ರಸಾದ್ ಅವರ ನೇತೃತ್ವದ ತಂಡ ಸ್ಥಳಕ್ಕೆಬಂದು ಪರಿಶೀಲನೆ ನಡೆಸಿದೆ. ಚತುಷ್ಪಥ ರಸ್ತೆಗೆ ಅನುಗುಣವಾಗಿ ಸೇತುವೆ ನಿರ್ಮಿಸಲಾಗುವುದು. ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದ ನಂತರ ಕೆಲಸ ಆರಂಭಿಸಲಾಗುವುದು. ರಾಷ್ಟ್ರೀಯ ಹೆದ್ದಾರಿಗಿಂತ ಉತ್ತಮ ರೀತಿಯಲ್ಲಿ ನಿರ್ಮಿಸಲಾಗುವುದು. ಹೊಳೆಬೀದಿ ಸರ್ಕಾರಕ್ಕೆ ಸೇರಿದ 93 ಅಡಿ ರಸ್ತೆ ಇದ್ದು ಅಲ್ಪಸ್ವಲ್ಪ ಒತ್ತುವರಿ ಇದ್ದರೂ ಬಿಟ್ಟುಕೊಡಲಿದ್ದಾರೆ. ಎಲ್ಲರ ಸಹಕಾರ ಮುಖ್ಯ.
ಇಡೀ ವಿಶ್ವಕ್ಕೆ ಶಾಂತಿ ಸಂದೇಶ ನೀಡಿದವರು ಬಸವಣ್ಣ
ಕಾಯಕವೇ ಕೈಲಾಸವೆಂಬ ತತ್ವದಡಿ ಜನ ಸಾಮಾನ್ಯರನ್ನು ಪ್ರೇರೇಪಿಸಿ, ಸಣ್ಣ ಕೆಲಸ ಮಾಡುವ ವ್ಯಕ್ತಿಯಿಂದ ಆಡಳಿತ ನಡೆಸುವ ವ್ಯಕ್ತಿಯ ತನಕ ಸಮಾನತೆಯ ಸಂದೇಶ ಸಾರುವ ಜತೆಗೆ ವೃತ್ತಿಯ ಪ್ರಾಮುಖ್ಯತೆಯನ್ನು ತಿಳಿಸಿಕೊಟ್ಟು, ಸಮಾನತೆಯ ಸಾರವನ್ನು ತಿಳಿಸಿಕೊಡುವ ಜತೆಗೆ ವಿಶ್ವಕ್ಕೆ ಅಗತ್ಯವಾದ ವಚನಗಳನ್ನು ನೀಡುವ ಮೂಲಕ ಶ್ರೀ ಜಗಜ್ಯೋತಿ ಬಸವೇಶ್ವರರು ವಿಶ್ವಮಾನವರಾದರು ಎಂದು ಶಾಸಕ ಎಚ್.ಡಿ.ರೇವಣ್ಣ ಅಭಿಪ್ರಾಯಪಟ್ಟರು.
ಪರೀಕ್ಷೆ ಮುಗಿದು ಕಾಲೇಜು ಪ್ರವೇಶಾತಿ ಆರಂಭವಾದರೂ ಮೂಲ ಸೌಕರ್ಯವಿಲ್ಲ
ಈಗಾಗಲೇ ಕಾಲೇಜುಗಳ ಪರೀಕ್ಷೆ ಮುಗಿದು ಪ್ರವೇಶಾತಿ ಆರಂಭವಾದರೂ ಇನ್ನೂ ಕಾಲೇಜಿಗೆ ಮೂಲಭೂತ ಸೌಕರ್ಯವೇ ಇಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆರೋಪಿಸಿದರು. ಪಾರ್ಟ್‌ ಟೈಂ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬಹುದಿತ್ತು. ಯಾವುದೂ ಇಲ್ಲ. ಹಾಗಾದರೇ ಇವರು ಖಾಸಗಿ ಕಾಲೇಜು ಜೊತೆ ಶಾಮೀಲಾಗಿದ್ದಾರಾ ಎನುವ ಅನುಮಾನ ನನಗಿದೆ ಎಂದು ಮಾರ್ಮಿಕವಾಗಿ ಹೇಳಿದರು. ಯಾವ ಹೊಸ ಕೋರ್ಸ್ ಬೇಕು ಕೊಡಬೇಕು. ಅಧಿಕಾರಿಗಳು, ಮಂತ್ರಿಗಳು ಈ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಮೂಲಭೂತ ಸೌಕರ್ಯ ಕೂಡ ಇಲ್ಲ ಇಂತಹ ಪರಿಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮುಖಭಂಗ ನಂಗಲ್ಲ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಎಂದ ರೇವಣ್ಣ
ನಗರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮುಖಭಂಗ ಹೊರತು ನನಗಲ್ಲ. ಜಿಲ್ಲೆಯಲ್ಲಿ ಬಿಜೆಪಿನಾ ಕಾಂಗ್ರೆಸ್‌ಗೆ ಅಡ ಇಟ್ಟಿದ್ದಾರೆ. ನಗರಸಭೆ ಅಧ್ಯಕ್ಷರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಗುಡುಗಿದರು. ನಾನು ಮೂವತ್ತು ವರ್ಷ ರಾಜಕೀಯ ಮಾಡಿದ್ದೀನಿ, ಇಂತಹದ್ದನ್ನೆಲ್ಲಾ ನೋಡಿದ್ದೀನಿ, ನನಗೆ ರಾಜಕೀಯ ಹಿನ್ನಡೆಯಲ್ಲ ಇದು ಬುನಾದಿ. ಆ ಅಧ್ಯಕ್ಷನಿಗೆ ಮಾನ, ಮರ್ಯಾದೆ, ಗೌರವ ಇದೆಯಾ! ಈ ಎರಡು ರಾಷ್ಟ್ರೀಯ ಪಕ್ಷಗಳಿಗೆ ಹೆದರಲ್ಲ ಎಂದು ಗುಡುಗಿದರು.
ಅಗಲಿದ ಪತ್ರಕರ್ತರಿಗೆ ಶ್ರದ್ಧಾಂಜಲಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಹಿರಿಯ ಪತ್ರಕರ್ತರಾದ ಎಸ್.ಕೆ.ಶ್ಯಾಮಸುಂದರ್, ಎಸ್.ಎನ್.ಅಶೋಕ ಕುಮಾರ್ ಮತ್ತು ಉಡುಪಿ ಸಂದೀಪ್ ಕುಮಾರ್ ಅವರಿಗೆ ಏರ್ಪಡಿಸಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪ್ರಜಾವಾಣಿ ನಿವೃತ್ತ ಸಂಪಾದಕರಾದ ಪದ್ಮರಾಜ ದಂಡವತಿ, ಹಿರಿಯ ಪತ್ರಕರ್ತರುಗಳಾದ ಎಸ್.ಕೆ.ಶೇಷಚಂದ್ರಿಕಾ, ಅನಂತ ಚಿನಿವಾರ, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಖಜಾಂಚಿ ವಾಸುದೇವಹೊಳ್ಳ, ಐಎಫ್‌ಡಬ್ಲ್ಯೂಜೆ ಅಧ್ಯಕ್ಷರಾದ ಬಿ.ವಿ. ಮಲ್ಲಿಕಾರ್ಜುನಯ್ಯ ಇದ್ದರು.
ಎಎನ್‌ಎಂ ತರಬೇತಿ ರದ್ದು ನಿರ್ಧಾರ ಹಿಂಪಡೆಯಲು ಆಗ್ರಹ
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಕೇಂದ್ರಗಳ (ಎ.ಎನ್.ಎಂ) ತರಬೇತಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು. ಅವರ ಶಿಕ್ಷಣ ಮತ್ತು ಉದ್ಯೋಗವಕಾಶವನ್ನು ಕಸಿದುಕೊಳ್ಳುವ ಕ್ರಮವಾಗಿದೆ ಎಂದು ದೂರಿದರು.
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮ
ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಶ್ರಮಿಸಲಾಗುತ್ತಿದೆ ಎಂದು ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಹೇಳಿದರು. ಗೃಹಲಕ್ಷ್ಮಿ ಯೋಜನೆಗೆ ಶೇ.99ರಷ್ಟು ಮಹಿಳೆಯರು ಹೆಸರು ನೋಂದಣಿ ಮಾಡಿಸಿದ್ದಾರೆ. ಎರಡು ತಿಂಗಳ ಕಂತು ಶೀಘ್ರದಲ್ಲೇ ಖಾತೆಗೆ ಜಮೆಯಾಗಲಿದೆ. ವಿದ್ಯಾನಿಧಿ ಹಾಗೂ ಗೃಹಜ್ಯೋತಿಯ ವಿಷಯದಲ್ಲಿ ಯಾವುದೇ ತೊಂದರೆ ಎದುರಾಗಿಲ್ಲ ಎಂದು ವಿವರ ನೀಡಿದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved