• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಕೆಡಿಪಿ ಸದಸ್ಯೆ
ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಪ್ರಥಮ ಘಟ್ಟವಾಗಿದ್ದು ದಿಟ್ಟತನದಿಂದ ಎದುರಿಸಿದಾಗ ಮಾತ್ರ ಯಶಸ್ಸು ಸಾಧ್ಯ ಎಂದು ಜಿಲ್ಲಾ ಕೆಡಿಪಿ ಸದಸ್ಯೆ ಬಿ.ಎಂ ಸೌಮ್ಯ ಆನಂದ್ ಹೇಳಿದರು. ಗಮನವಿಟ್ಟು ಓದಿದರೆ ಮಾತ್ರ ಯಶಸ್ಸು ನಿಮ್ಮದಾಗುತ್ತದೆ. ಈ ಕಾಲಘಟ್ಟದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಅತ್ಯಂತ ಶ್ರದ್ಧೆಯಿಂದ ಓದಬೇಕು ಹಾಗೂ ಕಠಿಣ ಶ್ರಮ ಪಡಬೇಕು. ನೀವುಗಳು ಉತ್ತಮ ಫಲಿತಾಂಶದ ಜೊತೆಗೆ ಶಾಲೆಗೆ ಹಾಗೂ ನಿಮ್ಮ ಪೋಷಕರಿಗೆ‌ ಕೀರ್ತಿ ತರಲು ಸಾಧ್ಯ ಎಂದರು.
ಕಾಡಾನೆ ಸಮಸ್ಯೆ ಬಗೆಹರಿಸುವ ಬದಲು ಸತ್ತರೆ ಪರಿಹಾರ ಹೆಚ್ಚಿಸಿದ ಬಜೆಟ್‌
ಜಿಲ್ಲೆಯಲ್ಲಿರುವ ಬಹುದೊಡ್ಡ ಸಮಸ್ಯೆ ಎಂದರೆ ಅದುವೇ ಕಾಡಾನೆ ಹಾವಳಿ. ಆಲೂರು, ಬೇಲೂರು ತಾಲೂಕಿನಲ್ಲಿ ಪ್ರತಿನಿತ್ಯ ಆನೆಗಳು ಸದ್ದು ಮಾಡುತ್ತಲೇ ಇವೆ. ಅರೇಹಳ್ಳಿ, ಬಿಕ್ಕೋಡು ಭಾಗದಲ್ಲಿ ಮನೆಯಿಂದ ಹೊರ ಹೋದವರು ಮತ್ತೆ ಬರುತ್ತಾರೆ ಎನ್ನುವ ಗ್ಯಾರಂಟಿ ಇಲ್ಲ ಎನ್ನುವ ಸ್ಥಿತಿ ಇದೆ. ಈವರೆಗೆ ಸಾಕಷ್ಟು ಜನರು ಸಾವನ್ನಪ್ಪಿದ್ದಾರೆ. ಹಾಗಾಗಿ ಇಲ್ಲಿನ ಜನರು ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ ಎನ್ನುವ ಪ್ರಮುಖ ಬೇಡಿಕೆ ಇಟ್ಟಿದ್ದರು. ಆದರೆ ಸರ್ಕಾರ ಸಮಸ್ಯೆ ಬಗೆಹರಿಸುವ ಬದಲಾಗಿ ಸಮಸ್ಯೆಯಿಂದ ಪ್ರಾಣ ಕಳೆದುಕೊಂಡವರಿಗೆ ನೀಡುವ ಪರಿಹಾರದ ಮೊತ್ತವನ್ನು 15 ಲಕ್ಷ ರು.ಗಳಿಂದ 20 ಲಕ್ಷ ರು.ಗಳಿಗೆ ಏರಿಸಿದೆ.
ಬಸ್ ನಿಲ್ದಾಣದ ವ್ಯವಸ್ಥೆ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ
ಸರ್ಕಾರದ ಗ್ಯಾರಂಟಿ ಯೋಜನೆಗಳ ಮೈಸೂರು ವಿಭಾಗದ ಉಪಾಧ್ಯಕ್ಷೆ ಪುಷ್ಪ ಅಮರ್‌ನಾಥ್ ಅವರು ಹಾಸನದ ಕೆ.ಎಸ್.ಆರ್‌.ಟಿ. ಬಸ್ ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಅವರು ಶಕ್ತಿ ಯೋಜನೆ ಕುರಿತು ಮಹಿಳೆಯರನ್ನು ಮಾತನಾಡಿಸಿ, ಬಸ್ ನಿಲ್ದಾಣದ ಹೋಟೆಲ್ ಹಾಗೂ ಫಾಸ್ಟ್ ಫುಡ್ ಮಳಿಗೆಗಳನ್ನು ವೀಕ್ಷಣೆ ಮಾಡಿದರು. ಆಹಾರ ಸೇವನೆಗೆ ಬಳಸುತ್ತಿದ್ದ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಹೋಟೆಲ್‌ಗಳಲ್ಲಿ ಆರೋಗ್ಯಪೂರ್ಣವಾದ ಉತ್ತಮ ಗುಣಮಟ್ಟದ ತಿಂಡಿ ಮತ್ತು ಊಟ ಒದಗಿಸಬೇಕು ಎಂದು ಸೂಚಿಸಿದರು.
ಹೊಳೆನರಸೀಪುರ ಪುರಸಭೆ ಅಧ್ಯಕ್ಷರಾಗಿ ಪ್ರಸನ್ನ ಅವಿರೋಧ ಆಯ್ಕೆ
ಹೊಳೆನರಸೀಪುರ ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷರಾಗಿ ಎಚ್.ಕೆ.ಪ್ರಸನ್ನ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ದೇವೇಗೌಡರ ಆಶೀರ್ವಾದ ಹಾಗೂ ಶಾಸಕ ರೇವಣ್ಣನವರ ಕೃಪೆಯಿಂದ ಅಧ್ಯಕ್ಷನಾಗಿದ್ದೇನೆ ಹಾಗೂ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ. ಪಟ್ಟಣದ ಕುಡಿಯುವ ನೀರು, ಚರಂಡಿ ವ್ಯವಸ್ಥೆ, ಬೀದಿ ದೀಪದ ವ್ಯವಸ್ಥೆ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ಸಮಸ್ಯೆಗಳಿದ್ದರೆ ಪರಿಹರಿಸುತ್ತೇನೆ ಎಂದು ಪ್ರಸನ್ನ ತಿಳಿಸಿದರು.
ಬಜೆಟ್‌ನ ಕಡತದಲ್ಲಿ ಘೋಷಣೆಯಾಗೇ ಉಳಿದ ಘೋಷಣೆಗಳು
ಪ್ರತಿ ವರ್ಷ ಬಜೆಟ್‌ ಮಂಡನೆಯಾಗುತ್ತಲೇ ಇದೆ. ಅದರಲ್ಲಿ ಜಿಲ್ಲೆಗೆ ಘೋಷಣೆಯಾಗುವ ಸವಲತ್ತುಗಳನ್ನು ನೋಡಿದಾಗ ಹಾಸನ ಜಿಲ್ಲೆಯ ಬಗ್ಗೆ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಸ್ಪಷ್ಟವಾಗುತ್ತಿದೆ. ಬಜೆಟ್‌ನಲ್ಲಿ ಆಗುವ ಘೋಷಣೆಗಳೇ ಕಡಿಮೆ. ಅದರಲ್ಲೂ ಅವುಗಳ ಅನುಷ್ಟಾನವಾಗುವುದು ಇನ್ನೂ ವಿರಳ. ಹಾಗೆಯೇ ಕಳೆದ ವರ್ಷದ ಬಜೆಟ್‌ ಇರಲಿ 2023ರಲ್ಲಿ ಆಗಿದ್ದ ಘೋಷಣೆಗಳ ಪೈಕಿಯೇ ಹಲವು ಇನ್ನೂ ಈಡೇರಿಲ್ಲ. ಇಡೀ ಬಜೆಟ್‌ನಲ್ಲಿ ಜಿಲ್ಲೆಯ ಪಾಲಿಗೆ ಘೋಷಣೆಯಾಗಿದ್ದು, ಮೂರೇಮೂರು ಯೋಜನೆಗಳು. ಅವುಗಳ ಪೈಕಿ ಮೊದಲಿನದ್ದರಲ್ಲಿ ಅವರು ಘೊಷಣೆ ಮಾಡಿದ್ದಷ್ಟು ಹಣ ಬಿಡುಗಡೆಯಾಗಿಲ್ಲ. ಇನ್ನು ಉಳಿದ ಎರಡು ಬಜೆಟ್‌ನ ಘೋಷಣೆಗಷ್ಟೇ ಸೀಮಿತವಾಗಿವೆ.
ಹೊಂಡದಲ್ಲಿ ಸಿಲುಕಿದ ಐರಾವತ ಬಸ್
ಬಸ್ ನಿಲ್ದಾಣಕ್ಕೆ ತೆರಳುವ ಮಾರ್ಗದ ಹೊಂಡದಲ್ಲಿ ಸಿಲುಕಿದ ಐರಾವತ ಬಸ್‌ಅನ್ನು ಹೊರ ತೆಗೆಯಲು ಚಾಲಕ ಹಾಗೂ ನಿರ್ವಾಹಕ ಗಂಟೆಗಳ ಕಾಲ ಪರದಾಡಿದರು. ಬುಧವಾರ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವಾಗ ಬಸ್ ನಿಲ್ದಾಣಕ್ಕೆ ಆಗಮಿಸುತ್ತಿದ್ದ ವೇಳೆ ಹೆದ್ದಾರಿ ಬದಿಯಲ್ಲಿ ನಿರ್ಮಾಣವಾಗಿರುವ ಅಡಿಗಳಷ್ಟು ಆಳದ ಹೊಂಡಕ್ಕೆ ಸಿಲುಕಿ ಒಂದು ಗಂಟೆಗೂ ಹೆಚ್ಚಿನ ಕಾಲ ಪರದಾಡುವಂತಾಗಿತ್ತು.
ದೇವಾಲಯಗಳು ಮನುಷ್ಯನ ಬದುಕಿಗೆ ನೆಮ್ಮದಿ ಕರುಣಿಸುತ್ತವೆ
ಸನಾತನ ಧರ್ಮ, ಸಂಸ್ಕೃತಿಯ ಪ್ರತೀಕವಾದ ಮಠಮಾನ್ಯಗಳು ಹಾಗೂ ಧಾರ್ಮಿಕ ಕೇಂದ್ರಗಳಾದ ದೇವಾಲಯಗಳು ಮನುಷ್ಯನ ಬದುಕಿಗೆ ಸುಖ, ಶಾಂತಿ, ನೆಮ್ಮದಿಯನ್ನು ಕರುಣಿಸುವ ಶ್ರದ್ಧಾಕೇಂದ್ರಗಳಾಗಿವೆ ಎಂದು ಶ್ರೀ ಕ್ಷೇತ್ರ ಬೆಳಗೂರು, ಮಾರುತಿ ಪೀಠಾಧಿಪತಿಗಳಾದ ವಿಜಯ ಮಾರುತಿ ಶರ್ಮಾ ಗುರುಗಳು ತಿಳಿಸಿದರು. ಪೂಜೆ, ಪುನಸ್ಕಾರಗಳ ಜತೆಗೆ ಪಂಚಭೂತಗಳಲ್ಲಿ ದೈವೀ ಸಾಕ್ಷಾತ್ಕಾರ ಕಂಡುಕೊಂಡಿರುವುದು ನಮ್ಮೆಲ್ಲರ ಸೌಭಾಗ್ಯವೆಂದರೆ ತಪ್ಪಾಗಲಾರದು. ಪಾಲಕರು ಹಾಗೂ ಗುರುಹಿರಿಯರು ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡುವ ಮೂಲಕ ಭವಿಷ್ಯ ರೂಪಿಸುವ ಹೊಣೆಗಾರಿಕೆ ಪ್ರದರ್ಶಿಸಬೇಕು ಎಂದು ಹೇಳಿದರು.
ಹಾಸ್ಟೆಲ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸ್ವರೂಪ್ ಚಾಲನೆ
ಎಸ್ಸಿ, ಎಸ್ಟಿ ಪೋಸ್ಟ್ ಮೆಟ್ರಿಕ್ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಎರಡು ಕೋಟಿ ರು. ವೆಚ್ಚದ ಹೆಚ್ಚುವರಿ ಕೊಠಡಿಗಳು, ಊಟದ ಹಾಲ್, ಅಡುಗೆ ಮನೆ ಸೇರಿದಂತೆ ಹೆಚ್ಚುವರಿ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಅವರು ಗುದ್ದಲಿ ಪೂಜೆ ಮಾಡುವುದರ ಮೂಲಕ ಚಾಲನೆ ನೀಡಿದರು. ಹೆಚ್ಚುವರಿ ೬ ಕೊಠಡಿ ಮತ್ತು ಡೈನಿಂಗ್ ಹಾಲ್ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆಯನ್ನು ಮಾಡಲಾಗಿದೆ. ಶೀಘ್ರದಲ್ಲಿಯೇ ಕಾಮಗಾರಿ ಮುಗಿದು ಹಾಸ್ಟೆಲಿನ ಮಕ್ಕಳಿಗೆ ಅನುಕೂಲವಾಗಲಿದೆ. ೨ ಕೋಟಿಯಲ್ಲಿ ಈಗಾಗಲೇ ೧ ಕೋಟಿ ರು. ಬಿಡುಗಡೆ ಆಗಿದ್ದು, ಉಳಿದ ಹಣವು ಕೂಡ ಶೀಘ್ರದಲ್ಲಿಯೇ ಬಿಡುಗಡೆ ಆಗಲಿದೆ.
ಪ್ಲೈವುಡ್‌ ಕಾರ್ಖಾನೆಗೆ ಬೆಂಕಿ ಅಪಾರ ಮರಗಳು ನಾಶ
ಹೊಳೆನರಸೀಪುರ ಪಟ್ಟಣದ ಕೈಗಾರಿಕೆ ಪ್ರದೇಶದಲ್ಲಿರುವ ಝಮ್ ಝಮ್ ಟಿಂಬರ್ಸ್‌ ಎಂಬ ಪ್ಲೈವುಡ್‌ ಫ್ಯಾಕ್ಟರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಪ್ರಮಾಣದ ಮರದ ದಿಮ್ಮಿಗಳು ಹಾಗೂ ಕತ್ತರಿಸಿ ಇಟ್ಟಿದ್ದ ಮರದ ತುಂಡುಗಳು ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿದೆ. ಬಿಸಿಲು ಹಾಗೂ ಒಣಗಿದ್ದ ಮರದ ಸಾಮಾನುಗಳಿಗೆ ಕಾಳ್ಗಿಚ್ಚಿನಂತೆ ಕ್ಷಣ ಮಾತ್ರದಲ್ಲಿ ಬೆಂಕಿ ಹರಡಿ ಕಾರ್ಖಾನೆಯಲ್ಲಿದ್ದ ಭಾರಿ ಪ್ರಮಾಣದ ಮರದ ದಿಮ್ಮಿಗಳು ಹಾಗೂ ಕತ್ತರಿಸಿ ಇಟ್ಟಿದ್ದ ಮರದ ದಿಮ್ಮಿಗಳು, ಪ್ಲೈವುಡ್‌ಗಳು ಸುಟ್ಟು ಹೋಗಿವೆ.
ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ
ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಜಮೆ ಮಾಡಬೇಕು ಮತ್ತು ಉಳಿದ ಗ್ಯಾರಂಟಿಗಳನ್ನು ಸಮರ್ಪಕವಾಗಿ ನೀಡುವಂತೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದಿಂದ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿದೆ. ಅಂತೆಯೇ ಪಂಚ ಗ್ಯಾರಂಟಿಗಳಲ್ಲಿ ಯಾವುದೇ ಲೋಪ ಆಗದಂತೆ ಪ್ರತೀ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡುವುದಾಗಿ ಬಣ್ಣದ ಮಾತುಗಳನ್ನೂ ಆಡಿತ್ತು. ಆದರೆ ಆರಂಭದಿಂದಲೂ ಪ್ರತಿ ತಿಂಗಳು ಅರ್ಹ ಫಲಾನುಭವಿಗಳ ಖಾತೆಗೆ ಹಣ ಹಾಕದೇ ಇರುವುದನ್ನು ಖಂಡಿಸುತ್ತೇವೆ ಎಂದರು.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved