• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಅಗತ್ಯ
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡಬೇಕಾದರೆ ಇಂತಹ ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗುತ್ತದೆ ಎಂದು ಗೌರಮ್ಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಧನಂಜಯಮೂರ್ತಿ ಅಭಿಪ್ರಾಯಪಟ್ಟರು. ನಾವು ವೈಜ್ಞಾನಿಕವಾಗಿ ನೋಡಿದಾಗ ಅಲ್ಲಿ ವಿಜ್ಞಾನ ಕಾಣುತ್ತದೆ. ವಿಜ್ಞಾನ ಎಂದರೆ ವಿಶೇಷವಾದ ಜ್ಞಾನ. ವೈಜ್ಞಾನಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಜ್ಞಾನಿಗಳ ಕೊಡುಗೆ ಬಹಳವಾಗಿದೆ. ಪ್ರಯೋಗಗಳ ಮೂಲಕ ಮಕ್ಕಳು ಅಧ್ಯಯನ ಮಾಡಿದ್ದು ಬಹಳ ಕಾಲ ನೆನಪಿನಲ್ಲಿ ಇರುತ್ತದೆ, ಇದು ಒಂದು ವಿಧದಲ್ಲಿ ಪರಿಣಾಮಕಾರಿ ಬೋಧನೆ ಕೂಡ ಎಂದರು.
ಹೊಳೆನರಸೀಪುರ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ
ಹೊಳೆನರಸೀಪುರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಚ್.ಬಿ.ವೆಂಕಟೇಶ್, ಕಾರ್ಯದರ್ಶಿಯಾಗಿ ಎ.ರಾಮಕೃಷ್ಣ, ಖಜಾಂಚಿಯಾಗಿ ಎಚ್.ವಿ. ರವಿಕುಮಾರ್, ಉಪಾಧ್ಯಕ್ಷರಾಗಿ ಡಿ.ಕೆ.ವಸಂತಯ್ಯ ಹಾಗೂ ಕೆ.ಎ.ರವಿಕುಮಾರ್, ಸಹ ಕಾರ್ಯದರ್ಶಿಯಾಗಿ ವೆಂಕಟೇಶ ಅವಿರೋಧವಾಗಿ ಆಯ್ಕೆಯಾದರು. ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಸುರೇಶ್ ಕುಮಾರ್, ಉಪಾಧ್ಯಕ್ಷರಾದ ವಿಶ್ವನಾಥ್, ಎಚ್.ಸಿ.ಎನ್.ಚಂದ್ರು, ಕೃಷ್ಣ, ಅಭಿಲಾಷ್, ಭಾನುಮತಿ, ರಂಗಸ್ವಾಮಿ, ಧನಂಜಯ, ಚಂದ್ರಶೇಖರ್, ನಾಜಿರ್ ನೂತನ ಕಾರ್ಯಕಾರಿ ಮಂಡಳಿ ಸದಸ್ಯರಿಗೆ ಶುಭಕೋರಿದರು.
ಹೆಣ್ಣು ಅಕ್ಷರಸ್ಥಳಾದರೂ ಸ್ವಾವಲಂಬಿಯಾಗುವಲ್ಲಿ ಹಿಂದೇಟು ಹಾಕುತ್ತಿದ್ದಾಳೆ
ಆರೋಗ್ಯವಂತ ಸಮ ಸಮಾಜ ನಿರ್ಮಾಣ ಹೆಣ್ಣಿಗೆ ಕೊಡುವ ಅವಕಾಶಗಳಿಂದ ಮಾತ್ರ ಸಾಧ್ಯ ಎಂದು ಖ್ಯಾತ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ.ಎ.ಸಾವಿತ್ರಿ ತಿಳಿಸಿದರು. ನಮ್ಮ ಹೆಣ್ಣುಮಕ್ಕಳು ಕೂಡ ಎಲ್ಲಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತಿದ್ದಾರೆ. ಅಲ್ಲದೆ ಎಲ್ಲಾ ಹಂತದ ವಿದ್ಯೆಯನ್ನು ಪಡೆದವರೇ ಆಗಿದ್ದಾರೆ. ಇಷ್ಟೊಂದು ಪ್ರಬುದ್ಧತೆಯನ್ನು ಹೊಂದಿದ್ದರೂ ಕೂಡ ಸ್ವಾವಲಂಬಿಗಳಾಗಿ ಜೀವನ ರೂಪಿಸಿಕೊಳ್ಳಲು ಹಿಂದೇಟು ಹಾಕುತ್ತಿರುವುದು ಸಹ ಕಂಡುಬಂದಿದೆ. ಸ್ವಾತಂತ್ರ್ಯ ಭಾರತದಲ್ಲಿ ಸಮಾನವಾದ ಸಂವಿಧಾನದ ಹಕ್ಕುಗಳನ್ನು ಹೊಂದಿದ್ದೇವೆ. ಇವುಗಳನ್ನು ಬಳಕೆ ಮಾಡಿಕೊಂಡು ಎದುರಾಗುವ ಸಮಸ್ಯೆ, ಶೋಷಣೆಗಳನ್ನು ಮೆಟ್ಟಿನಿಲ್ಲಬೇಕಿದೆ ಎಂದು ಹೇಳಿದರು.
ಸಾಧಿಸಬೇಕೆಂಬ ಛಲ ದೃಢವಾಗಿದ್ದರೆ ಬಡತನ ಅಡ್ಡಿಯಾಗುವುದಿಲ್ಲ
ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ನಗರದ ಎಸ್.ಜೆ.ಪಿ. ರಸ್ತೆಯಲ್ಲಿರುವ ವಿಗ್ಯಾನ್ ಗ್ಲೋಬಲ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ವ್ಯವಸ್ಥಿತವಾಗಿ ನಡೆಯಿತು. ಮಕ್ಕಳಿಗೆ ಪಾಠ ವಿಷಯ ಜ್ಞಾನದ ಜೊತೆಗೆ ದೈಹಿಕ ಚಟುವಟಿಕೆಗಳು ಅತ್ಯಗತ್ಯವಾಗಿದ್ದು, ಮಕ್ಕಳು ನಿಯಮಿತವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು. ಕಾರ್ಯಕ್ರಮದ ಕೊನೆಯಲ್ಲಿ ಉತ್ತಮ ವಿಜ್ಞಾನದ ಮಾದರಿಗಳಿಗೆ ಬಹುಮಾನ ವಿತರಿಸಲಾಯಿತು.
ಆನೆಧಾಮಕ್ಕಾಗಿ ಎರಡು ಸಾವಿರ ಹೆಕ್ಟೇರ್ ಭೂಮಿ
ಚಿಕ್ಕಮಗಳೂರು, ಹಾಸನ ಮತ್ತು ಮಡಿಕೇರಿ ಜಿಲ್ಲೆಗೆ ಸಂಬಂಧಿಸಿದಂತೆ ಆನೆಧಾಮಕ್ಕಾಗಿ ಎರಡು ಸಾವಿರ ಹೆಕ್ಟೇರ್ ಭೂಮಿ ಮೀಸಲಿಟ್ಟಿದ್ದು, ಈ ಭಾರಿಯ ಬಜೆಟ್‌ನಲ್ಲಿ 100 ಕೋಟಿ ರು. ಆಯವ್ಯಯ ಹಣ ನೀಡಲಾಗುತ್ತದೆ ಎಂದು ಅರಣ್ಯ ಜೀವಿಶಾಸ್ತ್ರ ಹಾಗೂ ಪರಿಸರ ಮಂತ್ರಿ ಈಶ್ವರ್ ಬಿ ಖಂಡ್ರೆ ಹೇಳಿದರು. ಆನೆಗಳ ಕಾರಿಡಾರ್ ನಿರ್ಮಿಸಿ ಆನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೋಳಿ ಮಾರಾಟ ಅಂಗಡಿಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಡೀಸಿ ಸೂಚನೆ
ಜಿಲ್ಲೆಯಲ್ಲಿ ಯಾವುದೇ ಹಕ್ಕಿ ಜ್ವರ ಪ್ರಕರಣಗಳು ಕಂಡುಬಂದಿಲ್ಲ. ಜನರು ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪೌಲ್ಟ್ರಿ ಫಾರಂಗಳಲ್ಲಿ ಕರ್ತವ್ಯ ನಿರ್ವಹಿಸುವ ಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ ಸುರಕ್ಷತಾ ಸಲಕರಣೆಗಳನ್ನು ನೀಡುವಂತೆ ಮಾಲೀಕರಿಗೆ ತಿಳಿಸಿದರಲ್ಲದೆ, ಪೌಲ್ಟ್ರಿ ಮಾಲೀಕರೆಲ್ಲರಿಗೂ ಅರಿವು ಮೂಡಿಸಿ, ತಮ್ಮ ತಮ್ಮ ಫಾರಂಗಳಲ್ಲಿ ಕಡ್ಡಾಯವಾಗಿ ಜೈವಿಕ ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ತಿಳಿಸಿದರು.
ಶೌಚಾಲಯದ ನಿರ್ವಹಣೆಯನ್ನೇ ಕೈಬಿಟ್ಟ ಪುರಸಭೆ
ನಿತ್ಯ ನೂರಾರು ಜನರು ಬಳಸುವ ಸಾರ್ವಜನಿಕರ ಶೌಚಗೃಹ ಕಾಲಿಡಲಾಗದಷ್ಟು ಗಬ್ಬೆದ್ದು ನಾರುತ್ತಿದೆ. ಒಂದು ವರ್ಷಗಳ ಕಾಲ ವಾರಕ್ಕೊಮ್ಮೆ ಸ್ವಚ್ಛತೆ ನಡೆಸುತ್ತಿದ್ದ ಪುರಸಭೆ ಆಡಳಿತ ಕಳೆದೊಂದು ವರ್ಷದಿಂದ ಸ್ವಚ್ಛತೆ ಮಾಡುವುದನ್ನು ಕೈಬಿಟ್ಟಿದೆ. ಪರಿಣಾಮ ಶೌಚಗೃಹದ ನೀರಿನ ಪೈಪ್ ಒಡೆದು ಅಡಿಗಳಷ್ಟು ನೀರು ಶೌಚಗೃಹದೊಳಗೆ ಸಂಗ್ರಹವಾಗಿರುವ ಕಾರಣ ಶೌಚಗೃಹಕ್ಕೆ ಕಾಲಿಡದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಶೌಚಾಲಯದ ಆಧೋಗತಿಯ ಪರಿಣಾಮ ಉಪವಿಭಾಗಾಧಿಕಾರಿಗಳ ಕಚೇರಿ, ಪುರಸಭೆ, ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ಎಸ್.ಬಿ.ಐ ಬ್ಯಾಂಕ್‌ಗೆ ಬರುವ ಸಾರ್ವಜನಿಕರು ದೇಹಬಾಧೆ ತೀರಿಸಿಕೊಳ್ಳಲು ಪರದಾಡುವಂತಾಗಿದೆ.
ಎಲ್ಲ ವಾರ್ಡ್‌ಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಆಯವ್ಯಯ ಮಂಡನೆ
ಪುರಸಭೆ ೨೦೨೫-೨೦೨೬ನೇ ಸಾಲಿಗೆ ಪುರಸಭಾಧ್ಯಕ್ಷ ಸಿ.ಎನ್.ಮೋಹನ್ ಅವರು ಪುರಸಭೆಯ ಆಯ ವ್ಯಯವನ್ನು ಮಂಡನೆ ಮಾಡಿದ್ದು, ಅಳೆದು ತೂಗಿ ಪ್ರಸಕ್ತ ವರ್ಷಕ್ಕೆ ಅವರು ೪೧ ಲಕ್ಷ ೫೯ ಸಾವಿರ ರು.ಗಳ ಉಳಿತಾಯ ಬಜೆಟ್ ಮಂಡನೆ ಮಾಡಿದರು. ದಿನದಿಂದ ದಿನಕ್ಕೆ ಬೆಳವಣಿಗೆ ಹೊಂದುತ್ತಿರುವ ನೂತನ ಬಡಾವಣೆಗಳು ಸೇರಿದಂತೆ ಎಲ್ಲಾ ಬಡಾವಣೆಗಳಿಗೂ ಮೂಲಸೌಕರ್ಯ ಕಲ್ಪಿಸಲು ವಿಶೇಷ ಅನುದಾನವನ್ನು ಮೀಸಲಿಡಲು ಹಾಗೂ ಪುರಸಭೆಯ ಆಧಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.
ಆನೆಧಾಮದಿಂದ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ
ವನ್ಯಜೀವಿ ಸಂರಕ್ಷಣಾ ಕಾಯಿದೆ ಬಂದ ನಂತರ ಪ್ರಾಣಿಬೇಟೆ ನಿಷೇಧಿಸಲಾಗಿದೆ. ವನ್ಯ ಜೀವಿಗಳ ಸಂರಕ್ಷಣೆ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆದರೆ ಅದಕ್ಕೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗುತ್ತಿಲ್ಲ. ಇದು ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣವಾಗಿದೆ ಎಂದರು. ಕೊಡಗು, ಹಾಸನ ಮತ್ತು ಚಿಕ್ಕಮಗಳೂರಿನ ಅರಣ್ಯದ ಹೊರಗೆ ನೆಲೆಸಿರುವ 200 ಆನೆಗಳನ್ನು ಹಿಡಿದು, ಭದ್ರಾ ಅಭಯಾರಣ್ಯದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಆನೆಧಾಮಕ್ಕೆ ಕಳುಹಿಸಿದಲ್ಲಿ ಈ ಮೂರು ಜಿಲ್ಲೆಗಳ ಆನೆ ಸಮಸ್ಯೆಗೆ ಶಾಶ್ವತ ಪರಿಹಾರ ಲಭಿಸುತ್ತದೆ ಎಂದರು.
ಸಿನಿಮಾ ನಟರು ಖಾಸಗಿ ವ್ಯಕ್ತಿಗಳಾಗಿದ್ದು ಯಾವ ಪಕ್ಷಕ್ಕೂ ಸೇರಿದವರಲ್ಲ : ಬಿಜೆಪಿ ಸಂಸದ ಯದುವೀರ್ ಒಡೆಯರ್
ಸಿನಿಮಾ ನಟರು ಖಾಸಗಿ ವ್ಯಕ್ತಿಗಳಾಗಿದ್ದು, ಹೋರಾಟದಲ್ಲಿ ಭಾಗವಹಿಸಬೇಕೊ, ಬೇಡವೋ ಎಂಬ ತೀರ್ಮಾನವನ್ನು ಅವರೇ ಮಾಡಬೇಕು, ಹೋರಾಟದಲ್ಲಿ ಭಾಗವಹಿಸಿಲ್ಲ ಎಂದು ಪ್ರಶ್ನೆ ಮಾಡುವುದು ಸೂಕ್ತವಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಬಿಜೆಪಿ ಸಂಸದ ಯದುವೀರ್ ಒಡೆಯರ್ ಖಂಡಿಸಿದರು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved