• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳ್ಳಿಗಾಡಿನ ಜನರಿಗೂ ಗುಣಮಟ್ಟದ ರಸ್ತೆ ಸಿಗಬೇಕು
ಎತ್ತಿನಹೊಳೆ ಯೋಜನೆಯಡಿ ೫೦ ಲಕ್ಷ ರು.ವೆಚ್ಚದಲ್ಲಿ ತಾಲೂಕಿನ ಬಾಗಿಲ ಘಟ್ಟದಿಂದ ಜೋಯಿಸರ ಕೊಪ್ಪಲಿನವರಗೆ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಸ್ಥಳೀಯ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಗುರುವಾರ ಚಾಲನೆ ನೀಡಿದರು. ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸಿ ಸಂಚಾರ ಸುಗಮವಾಗಿಸಲು ಈ ರಸ್ತೆ ನಿರ್ಮಿಸಲಾಗುತ್ತಿದೆ ಎಂದರು.
ವಿವಾಹ ನೆನಪಿಗಾಗಿ 26 ಶಾಲೆಗಳಿಗೆ ನೀರಿನ ಫಿಲ್ಟರ್‌ ಕೊಡುಗೆ
ಯುವ ಎಂಜಿನಿಯರ್‌ ಒಬ್ಬರು ತಮ್ಮ ವಿವಾಹದ ನೆನಪಿಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು 5 ಲಕ್ಷ ರು.ವೆಚ್ಚದ ಕುಡಿಯುವ ನೀರಿನ ಯಂತ್ರಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಶಿವಕುಮಾರ್ ತಮ್ಮ ವಿವಾಹದ ನೆನಪಿಗಾಗಿ ಕಸಬಾ ಹೋಬಳಿಯ 26 ಸರ್ಕಾರಿ ಶಾಲೆಗಳಿಗೆ 5 ಲಕ್ಷ ರು. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಯಂತ್ರಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಅಂಬೇಡ್ಕರ್ ಭವನಕ್ಕೆ ಜಾಗಕ್ಕಾಗಿ ಡೀಸಿಗೆ ಮನವಿ
ಚಂದ್ರಗುಪ್ತ ಮೌರ್ಯ ದಲಿತ ಹೋರಾಟಗಾರರ ಒಕ್ಕೂಟದ ವತಿಯಿಂದ ಕೆ.ಗೋಪನಹಳ್ಳಿ ಅಲೆಮಾರಿ ಹಂದಿ ಜೋಗಿ ಕಾಲೋನಿಗೆ ಡಾ. ಬಿ ಆರ್‌ ಅಂಬೇಡ್ಕರ್‌ ಸಮುದಾಯ ಭವನ ನಿರ್ಮಾಣ ಮಾಡಲು 1 ಎಕರೆ ಜಾಗವನ್ನು ಮಂಜೂರು ಮಾಡಿಕೊಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅಂಬೇಡ್ಕರ್‌ ಭವನ ಮತ್ತು ಉದ್ಯಾನವನ ನಿರ್ಮಾಣ ಮಾಡಲು ಮುಂದಾಗಲು ಸಿಜಿಎಂ ದಲಿತ ಹೋರಾಟಗಾರರ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ ಎಂದರು.
ಮಹಾವೀರ ವೃತ್ತದಲ್ಲಿ ಹಣ್ಣಿನ ಅಂಗಡಿ ತೆರವಿಗೆ ನಗರಸಭೆ ಗಡುವು
ಮಹಾವೀರ ವೃತ್ತದ ಪಾದಚಾರಿ ಮಾರ್ಗದಲ್ಲಿ ನಿಗದಿ ಮಾಡಿರುವ ಜಾಗ ಬಿಟ್ಟು ಪಾದಚಾರಿಗಳು ತಿರುಗಾಡುವ ಸ್ಥಳವನ್ನು ಒತ್ತುವರಿ ಮಾಡಿಕೊಂಡ ಹಣ್ಣಿನ ಅಂಗಡಿಗಳನ್ನು ಕೂಡಲೇ ತೆರವು ಮಾಡಬೇಕು. ಇಲ್ಲದಿದ್ದರೆ ನಗರಸಭೆ ವತಿಯಿಂದಲೇ ತೆರವು ಮಾಡಿಸುವುದಾಗಿ ನಗರಸಭೆ ಆಯುಕ್ತರಾದ ನರಸಿಂಹ ಮೂರ್ತಿ ಅವರು ಗಡುವು ನೀಡಿದ್ದಾರೆ. ತಕ್ಷಣದಲ್ಲಿ ನಿಮಗೆ ನೀಡಿರುವ ಸ್ಥಳದಲ್ಲೆ ವ್ಯಾಪಾರ ಮಾಡದಿದ್ದರೇ ನಾವೆ ತೆರವು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದಾಗ ಕೆಲ ಸಮಯ ವ್ಯಾಪಾರಸ್ಥರೊಂದಿಗೆ ವಾಗ್ವಾದ ನಡೆಯಿತು.
ರೀಲ್ಸ್‌ಗಾಗಿ ಪೆಟ್ರೋಲ್‌ ಬಾಂಬ್‌ ಸಿಡಿಸಿದ ವಿದ್ಯಾರ್ಥಿಗಳು
ಚನ್ನಪಟ್ಟಣ ಬೈಪಾಸ್‌ ಬಳಿ ಇರುವ ರಾಜೀವ್ ಆರ್ಯುವೇದ ಕಾಲೇಜಿನ ವಿದ್ಯಾರ್ಥಿಗಳು ರೀಲ್ಸ್ ಮಾಡುವ ಉದ್ದೇಶದಲ್ಲಿ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಪ್ರದರ್ಶನ ಮಾಡಿದ್ದಾರೆ. ಸಾಲದ್ದಕ್ಕೆ ಅದನ್ನು ವೀಡಿಯೋ ಮಾಡಿ ಇನ್ಸ್ಟಾಗ್ರಾಮಿನಲ್ಲಿ ಅಪ್‌ಲೋಡ್‌ ಮಾಡಿ ತೀವ್ರ ಟೀಕೆಗೆ ಒಳಗಾಗಿದ್ದಾರೆ. ಪೊಲೀಸರು ಮೂವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು ಮಾಡಿ ಮೂವರನ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಿ ದಂಡ ವಿಧಿಸಲಾಗಿದೆ.
ಜಮೀರ್‌ ವಿರುದ್ಧ ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ರಾತ್ರಿ ಪ್ರಚಾರದ ವೇಳೆ ಬಹಿರಂಗ ಸಭೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಬಗ್ಗೆ ಅವಹೇಳನಕಾರಿ ಪದಬಳಕೆ ಮಾಡಿ, ವರ್ಣಭೇದ ತಾರತಮ್ಯ ಎಸಗಿದ್ದಾರೆ. ಅಲ್ಲದೇ, ಒಂದು ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜಮೀ‌ರ್ ಜನರನ್ನು ಪ್ರಜೋದಿಸಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಜಮೀರ್‌ ಅಹಮ್ಮದ್ ಖಾನ್ ವಿರುದ್ಧ ಪಟ್ಟಣದಲ್ಲಿ ಬುಧವಾರ ಯುವ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಕ್ಕೋಡಿನ ಶಾಲೆಯ ಬಳಿ ಭೀಮ ವಾಕಿಂಗ್‌
ಬೇಲೂರು ತಾಲೂಕಿನ ಬಿಕ್ಕೋಡು ಕೋಡಿ ಮಠದ ಶಾಲೆಯ ಬಳಿ "ಭೀಮ " ಎಂಬ ಹೆಸರಿನ ಒಂಟಿ ಕಾಡಾನೆ ಮಂಗಳವಾರ ಮಧ್ಯಾಹ್ನ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಂಗಳವಾರ ಬಿಕ್ಕೋಡಿನಲ್ಲಿ ವಾರದ ಸಂತೆ ನಡೆಯುವುದರಿಂದ ಕಾಡಾನೆಯ ಸಂಚಾರದ ಬಗ್ಗೆ ಸುದ್ದಿ ತಿಳಿದ ಸುತ್ತಮುತ್ತ ಗ್ರಾಮಗಳ ನಿವಾಸಿಗಳು ಆತಂಕದಿಂದ ಸಂತೆಗೆ ತೆರಳಿ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದರು. ಈ ವೇಳೆ ಆನೆ ಬಂದಿದೆ ಎಂಬ ಸುದ್ದಿ ತಿಳಿದು ಜನ ಹೆದರಿದ್ದಾರೆ. ಭೀಮ ಆನೆಯ ಗಂಭೀರ ನಡಿಗೆಯ ದೃಶ್ಯವನ್ನು ಕೆಲವರು ಮೊಬೈಲ್‌ನಲ್ಲಿ ಸೆರೆ ಹಿಡಿದರು.
ಬ್ಯಾಲದಕೆರೆಯಲ್ಲಿ ಗಂಡು ಚಿರತೆ ಸೆರೆ
ಕಳೆದ ೧೫-೨೦ ದಿನಗಳಿಂದ ಗ್ರಾಮದ ಸುತ್ತಮುತ್ತಲಿನ ತೋಟಗಳಲ್ಲಿ ಚಿರತೆ ಹಲವು ಬಾರಿ ಕಾಣಿಸಿಕೊಂಡಿದ್ದು ಜಾನುವಾರು ಹಾಗೂ ಸಾಕು ನಾಯಿಗಳ ಮೇಲೆ ದಾಳಿ ಮಾಡಿತ್ತು. ಪರಿಣಾಮ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು. ಈ ಚಿರತೆಯನ್ನು ಬ್ಯಾಲದಕೆರೆ ಗ್ರಾಮದಲ್ಲಿ ಅರಣ್ಯ ಇಲಾಖೆ ಸೆರೆ ಹಿಡಿದಿದೆ. ಜನರು ದೂರು ನೀಡಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ವಲಯ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದರು.
ವಕ್ಫ್‌ ಅಧಿಕಾರ ಮೊಟಕುಗೊಳಿಸಲು ಆಗ್ರಹ
ದೇವಸ್ಥಾನ ಮತ್ತು ಮಠಮಾನ್ಯಗಳ ಮೇಲೆ ವಕ್ಫ್‌ ನೀಡಿರುವ ನೋಟಿಸ್‌ ಅನ್ನು ಕೂಡಲೇ ಹಿಂಪಡೆದು, ರೈತರ ಪಹಣಿಗಳಲ್ಲಿ ನಮೂದಾಗಿರುವ ವಕ್ಫ್ ಆಸ್ತಿ ಎಂಬುದನ್ನು ರದ್ದುಗೊಳಿಸಬೇಕು. ವಕ್ಫ್‌ಗೆ ನೀಡಿರುವ ಈ ಅಧಿಕಾರದ ಆದೇಶವನ್ನೇ ಹಿಂಪಡೆಯಬೇಕೆಂದು ಆಗ್ರಹಿಸಿ ಕನ್ನಡಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಡಿಸಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಕಬ್ಬಳಿ ಬಸವೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ
ಹಿರಿಸಾವೆ ಹೋಬಳಿಯ ಕಬ್ಬಳಿ ಬಸವೇಶ್ವರಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಕಾರ್ತಿಕ ಸೋಮವಾರದ ರಾತ್ರಿ ಸರ್ಪೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಮತ್ತು ಕಲ್ಯಾಣಿಯಲ್ಲಿ ತೆಪ್ಪೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಮುತ್ತಿನ ಪಲ್ಲಕ್ಕಿಯ ಮೆರವಣಿಗೆಯೂ ಮಂಗಳವಾದ್ಯ, ಮಹಿಳಾ ವೀರಗಾಸೆ, ಡೊಳ್ಳು ಕುಣಿತ, ಕೋಲಾಟ, ಚಂಡವಾದ್ಯ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ನಡೆಯಿತು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 414
  • next >
Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved