• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನ್ಯಾಳು ಗ್ರಾಪಂ ಮಾಜಿ ಉಪಾಧ್ಯಕ್ಷ ರಾಮಚಂದ್ರು ಹೆಸರಿನಲ್ಲಿ ಸಭಾಭವನ
ರಾಮನಾಥಪುರ ಹೋಬಳಿಯ ಹನ್ಯಾಳು ಗ್ರಾಮದಲ್ಲಿ ನೂತನವಾಗಿ ೩೬ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಗ್ರಾಪಂ ನೂತನ ಕಟ್ಟಡ ಮತ್ತು ಸಭಾ ಭವನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಊರಿನಲ್ಲಿ ಗ್ರಾಪಂ ಕಟ್ಟಡ ನಿರ್ಮಾಣಕ್ಕೆ ಜಾಗವೇ ಇರಲಿಲ್ಲ. ದೂರದೃಷ್ಠಿಯಿಂದ ಗ್ರಾಮದಿಂದ ಸ್ವಲ್ಪದೂರದಲ್ಲಿ ನೂತನ ಕಟ್ಟಡ ಆಗಿದೆ. ಇದರಿಂದ ಈ ಭಾಗದಲ್ಲಿ ಹೆಚ್ಚು ಅಭಿವೃದ್ಧಿಯಾಗಲಿದೆ. ಕಟ್ಟಡ ಅಚ್ಚುಕಟ್ಟಾಗಿ ಮೂಡಿಬಂದಿದೆ. ಇದಕ್ಕೆ ಎಲ್ಲಾ ಸದಸ್ಯರು, ಪಿಡಿಒ, ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.
ಕಾಶ್ಮೀರ ಹತ್ಯಾಕಾಂಡಕ್ಕೆ ಸಕಲೇಶಪುರದಲ್ಲಿ ಮೇಣದಬತ್ತಿ ಹಿಡಿದು ಖಂಡನೆ
ಮಾನವ ಕುಲ ಅಸಹ್ಯಪಡುವಂತ ಘಟನೆ ಇದಾಗಿದ್ದು, ಸ್ಥಳೀಯರ ಸಹಾಯವಿಲ್ಲದೆ ಕೃತ್ಯ ನಡೆಯಲು ಸಾಧ್ಯವಿಲ್ಲ. ಅದರಲ್ಲೂ ಪ್ರತಿ ಪ್ರವಾಸಿಗರನ್ನು ನೀನು ಮುಸ್ಲಿಮನೆ ಎಂದು ಕೇಳಿ ಅವರು ಮುಸ್ಲಿಮರಲ್ಲ ಹಿಂದೂಗಳು ಎನ್ನುವುದು ಖಾತ್ರಿಯಾಗುತ್ತಿದ್ದಂತೆ ಅವರಿಗೆ ಗುಂಡಿಕ್ಕಿ ಕೊಲ್ಲಲಾಗಿದೆ. ಅಲ್ಲಿಗೆ ಇದು ಹಿಂದೂಗಳನ್ನೇ ಗುರಿಯಾಗಿಸಿಕೊಂಡು ನಡೆದಿರುವ ಭಯೋತ್ಪಾದಕ ದಾಳಿಯಾಗಿದೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್‌ 370 ರದ್ಧುಗೊಳಿಸಿದ ನಂತರದಲ್ಲಿ ಭಯೋತ್ಪಾದಕರ ಹಾವಳಿ ನಿಂತಿತ್ತು ಎಂದರು.
ಭಯೋತ್ಪಾದನೆ ಮೂಲ ಕಿತ್ತೊಗೆಯುವಂತೆ ಎಬಿವಿಪಿ ಮನವಿ
ಇತ್ತೀಚೆಗೆ ವಲಸೆ ಕಾರ್ಮಿಕರ ಮೇಲಿನ ದಾಳಿಗಳು ಮಾರುಕಟ್ಟೆಗಳಲ್ಲಿ ದಾಳಿಗಳು ಹಾಗೂ ಇಂದು ನಡೆದಿರುವ ಪ್ರವಾಸಿಗರ ಮೇಲಿನ ದಾಳಿ ಗಮನಿಸುವುದಾದರೆ ಕಾಶ್ಮೀರದ ಶಾಂತಿ ಮತ್ತು ಭಾರತದೊಂದಿಗಿನ ಏಕತೆಗೆ ಉಗ್ರರು ಅರ್ಥಾತ್ ಪ್ರತ್ಯೇಕವಾದಿಗಳು ತೀವ್ರ ಸವಾಲು ಒಡ್ಡುತ್ತಿರುವುದು ಕಳವಳಕಾರಿಯದ ಸಂಗತಿಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಉಗ್ರದ ವಿರುದ್ಧ ವ್ಯಾಪಕ ಕಠಿಣ ಕ್ರಮಗಳನ್ನು ಕೈಗೊಂಡು ತಕ್ಕ ಉತ್ತರವನ್ನು ನೀಡಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ. ಭಯೋತ್ಪಾದಕರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವವರಿಗೆ ಹಾಗೂ ಹತ್ಯೆಗೊಳಗಾಗಿರುವವರಿಗೆ ವಿದ್ಯಾರ್ಥಿ ಪರಿಷತ್ ಸಂತಾಪವನ್ನು ಸೂಚಿಸುತ್ತದೆ ಎಂದರು.
ಡಿಸೆಂಬರ್‌ ಒಳಗೆ ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ಕೆಲಸ ಮುಗಿಸಿ
ಸಾರ್ವಜನಿಕರಿಗೆ ತೊಂದರೆಯಾಗದಂತೆ ಸರ್ಕಾರ ನಿಗದಿಪಡಿಸಿದ ಷರತ್ತುಗಳು ಹಾಗೂ ಗುಣಮಟ್ಟ ಪಾಲನೆಯ ಜತೆಗೆ ಡಿಸೆಂಬರ್ ತಿಂಗಳ ಒಳಗೆ ಕಾಮಗಾರಿ ಮುಗಿಸಬೇಕಾದ್ದು ಗುತ್ತಿಗೆದಾರರ ಜವಾಬ್ದಾರಿಯಾಗಿದೆ. ಕಾರ್ಮಿಕರ ಕೊರತೆ ಅಥವಾ ವೈಯಕ್ತಿಕ ಕಾರಣಗಳಿಗೆ ವಿಳಂಬ ಮಾಡುತ್ತಿರುವ ಗುತ್ತಿಗೆದಾರರ ಕಾರ್ಯದಿಂದ ವೈಯಕ್ತಿಕವಾಗಿ ಬೇಸರವಾಗಿದ್ದು, ಮಳೆಗಾಲದ ಒಳಗೆ ಮೇಜರ್ ಕೆಲಸಗಳನ್ನು ಮುಗಿಸಲು ಸೂಚಿಸಿದ್ದೇವೆ ಎಂದ ಸಂಸದ ಶ್ರೇಯಸ್ ಎಂ.ಪಟೇಲ್ ತಿಳಿಸಿದರು.
ಡಿಜಿಟಲ್‌ ಗ್ರಂಥಾಲಯ ಉದ್ಘಾಟನೆ
ಪಂಚಾಯತಿಯು ಸಾರ್ವಜನಿಕರಿಗೆ ಸದುಪಯೋಗವಾಗಬೇಕು. ನಾವು ಶಾಶ್ವತವಲ್ಲ, ನಾವು ಮಾಡುವ ಕೆಲಸವೇ ಶಾಶ್ವತ. ಜುನಾಯಿತ ಪ್ರತಿನಿಧಿಗಳು ತಮಗೆ ಸಿಕ್ಕಂತಹ ಅವಕಾಶದಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಹಾಗೂ ಗ್ರಾಮಗಳಿಗೆ ಶಾಶ್ವತವಾದಂತಹ ಕೆಲಸಗಳನ್ನು ಮಾಡಬೇಕು. ನನ್ನ ಅವಧಿಯಲ್ಲಿ ಜಲಜೀವನ್ ಮೂಲಕ ಇಡೀ ತಾಲೂಕಿನ ಮನೆಮನೆಗೂ ನೀರು ಒದಗಿಸುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.
ಮನೆಕಂದಾಯ ಕಟ್ಟಲು ಆಕ್ಸಿಸ್‌ ಬ್ಯಾಂಕ್‌ನಲ್ಲಿ ಅವ್ಯವಸ್ಥೆ
ನಗರಸಭೆಯಲ್ಲಿ ಸಂಜೆ ೬ ಗಂಟೆಯವರೆಗೂ ಮನೆ ಕಂದಾಯ ಕಟ್ಟಲು ಅವಕಾಶ ನೀಡಿದ್ದರೇ ಎಕ್ಸಿಸ್ ಬ್ಯಾಂಕ್ನಲ್ಲಿ ಕೇವಲ ಮಧ್ಯಾಹ್ನ ೧ ಗಂಟೆಯವರೆಗೂ ಅವಕಾಶ ಕೊಟ್ಟಿರುವುದು ಸಮಸ್ಯೆ ಆಗಿದೆ. ಇನ್ನು ಈ ಬ್ಯಾಂಕಿನಲ್ಲಿ ಎರಡು ಕೌಂಟರ್ ಇದ್ದು, ಇದರಲ್ಲಿ ಬ್ಯಾಂಕ್ ಗ್ರಾಹಕರಿಗೆ ಒಂದು ಕೌಂಟರ್ ಮತ್ತೊಂದು ಕೌಂಟರ್ ನಗರಸಭೆ ಮನೆ ಕಂದಾಯ ಕಟ್ಟಲು ನಿಗದಿ ಮಾಡಿದ್ದಾರೆ. ಒಂದು ಕೌಂಟರ್ ನೀಡಿರುವುದರಿಂದ ಸರದಿ ಸಾಲು ಬ್ಯಾಂಕ್ ಒಳಗಿನಿಂದ ಹೊರಗೆ ಬಂದು ಜನರು ಕ್ಯೂನಲ್ಲಿ ನಿಂತಿದ್ದಾರೆ. ಕೂಡಲೇ ಇನ್ನಷ್ಟು ಬ್ಯಾಂಕುಗಳಲ್ಲಿ ಹಣ ಕಟ್ಟಲು ಅವಕಾಶ ಮಾಡಿಕೊಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.
ನಮ್ಮನಮ್ಮಲ್ಲೇ ಒಡಕುಂಟುಮಾಡುವವರ ಬಗ್ಗೆ ಎಚ್ಚರದಿಂದ ಇರಬೇಕು
ನಮ್ಮನಮ್ಮಲ್ಲೇ ಬಿರುಕು ಉಂಟುಮಾಡುವ ಅನೇಕ ಶಕ್ತಿಗಳು ಸಮಾಜದಲ್ಲಿವೆ. ಅವೆಲ್ಲವನ್ನೂ ಮೆಟ್ಟಿ ನಿಂತು ಒಗ್ಗಟ್ಟಾಗಿರಬೇಕು ಹಾಗೂ ಎಲ್ಲರೂ ಒಂದೇ ಎಂಬಂತೆ ಸಾಮರಸ್ಯದಿಂದ ಸಹೋದರರಂತೆ ಜೀವನ ನಡೆಸಬೇಕು ಎಂದು ಎಸ್.ಸಿ, ಎಸ್.ಟಿ. ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಕ್ಷರ ಸಂಘದ ಜಿಲ್ಲಾಧ್ಯಕ್ಷ ದೊಡ್ಡಮಗ್ಗೆ ರಾಜೇಂದ್ರ ಕರೆ ನೀಡಿದರು. ಎಲ್ಲ ಮಹನೀಯರು ತಮ್ಮ ಜೀವನದಲ್ಲಿ ಎಲ್ಲಾ ಸಮುದಾಯದ ಅಭ್ಯುದಯಕ್ಕಾಗಿ ಅನುಭವಿಸಿದ ಕಷ್ಟ, ನೋವು ನಲಿವುಗಳ ಬಗ್ಗೆ ನಾವೆಲ್ಲ ತಿಳಿಯಬೇಕಿದೆ ಎಂದರು.
ಸಮಾಜವನ್ನು ಬೆಳಕಿನೆಡೆಗೆ ಕೊಂಡೊಯ್ದ ಮಹಾನ್‌ ವ್ಯಕ್ತಿ ಅಂಬೇಡ್ಕರ್‌
ಅಂಬೇಡ್ಕರ್‌ ಎದುರಿಸಿದ ಕಷ್ಟಕರ ಜೀವನವನ್ನು ಮರೆತು ತಮ್ಮದೇ ದೃಢ ನಿರ್ಧಾರ ಕೈಗೊಂಡು ಮುಂದಿನ ಪೀಳಿಗೆಗೆ ಅನುಕೂಲ ಕಲ್ಪಿಸಿದ ನಿಟ್ಟಿನಲ್ಲಿ ಅವರು ಬರೆದ ಮಹಾನ್ ಹಾಗೂ ಬೃಹತ್ ಗ್ರಂಥವಾದ ಸಂವಿಧಾನ ಕೊಡ ಮಾಡಿದ ಮಹಾನ್ ಪುರುಷರು. ಭಾರತರತ್ನ ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದಲ್ಲಿ ನಮ್ಮ ಹಕ್ಕುಗಳನ್ನು ತಿಳಿಸಿ ಕೊಡುವ ಜತೆಗೆ ನಮ್ಮ ಆದ್ಯ ಕರ್ತವ್ಯವನ್ನೂ ಎಚ್ಚರಿಕೆಯಿಂದ ತಿಳಿಸಿಕೊಟ್ಟಿದ್ದಾರೆ. ಸಮಾಜದ ಅಭಿವೃದ್ಧಿಗೆ ಅವರ ಕೊಡುಗೆ ಅಮೂಲ್ಯವಾಗಿದೆ ಜತೆಗೆ ಅವರ ಆದರ್ಶಗಳನ್ನು ಪಾಲನೆ ಮಾಡುತ್ತಾ, ನಮ್ಮ ಮೇಲಿರುವ ಗುರುತರ ಜವಾಬ್ದಾರಿಯನ್ನು ಉಳಿಸಿಕೊಂಡು, ಬಳಸಿಕೊಂಡು ಉತ್ತಮ ಜೀವನ ನಡೆಸೋಣವೆಂದು ಕರೆ ಕೊಟ್ಟರು.
ಸೇವೆಗಾಗಿ ಸಿದ್ಧನಾಗಿ ಸಮಾಜದಲ್ಲಿ ಉತ್ತಮ ಪ್ರಜೆ ಆಗಬೇಕು
ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ಗೆ ಒಂದು ಉದ್ದೇಶವನ್ನು ಕೊಡಲಾಗಿದ್ದು, ಮುಖ್ಯವಾಗಿ ನೀವು ಸಂತೋಷವಾಗಿರಬೇಕು. ಸೇವೆಗಾಗಿ ಸದಾ ಸಿದ್ಧನಾಗಿರಬೇಕು. ಎಲ್ಲದಕ್ಕಿಂತ ಪ್ರಮುಖವಾಗಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬಾಳ್ವೆಯನ್ನು ನಡೆಸುವುದು ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ತಿಳಿಸಿದರು. ಜಯಚಾಮರಾಜೇಂದ್ರ ಒಡೆಯರ್ ಇದರ ಮೊದಲ ಸದಸ್ಯರಾಗಿ ಅಂದಿನಿಂದ ಇಂದಿನವರೆಗೂ ಬೆಳೆದುಬಂದ ಹಾದಿಯಲ್ಲಿ ಶಿಸ್ತು, ಸಂಯಮ, ಸಮಾಜ ಸೇವೆ, ಪ್ರಕೃತಿ ರಕ್ಷಣೆ ಸಲುವಾಗಿ ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ಮಾಹಿತಿ ನೀಡಿದರು.
ಅಂಬೇಡ್ಕರ್ ಕೊಡುಗೆ ಭಾರತದ ಬೆಳವಣಿಗೆಗೆ ಭದ್ರ ಬುನಾದಿ
ಬ್ರಿಟೀಷರ ಆಕ್ರಮಣ ನೀತಿ, ರಾಜ ಮಹಾರಾಜರ ಪ್ರಾಂತ್ಯವಾರು ಆಡಳಿತವಿದ್ದ ವಿಭಿನ್ನ ಸನ್ನಿವೇಶದಲ್ಲಿ ರೂಪುಗೊಂಡ ಹಾಗೂ ಸ್ವಾತಂತ್ರ್ಯ ಭಾರತ ಹೇಗೆ ಮುನ್ನಡೆಯಲಿದೆ ಎಂದು ವಿಶ್ವ ಸಮುದಾಯವೇ ಕುತೂಹಲದಿಂದ ನೋಡುತ್ತಿದ್ದ ಕಾಲಘಟ್ಟದಲ್ಲಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವಿರಚಿತ ಸಂವಿಧಾನ ಸದೃಢ ಭಾರತ ನಿರ್ಮಾಣಕ್ಕೆ ನೀಡಿದ ಕೊಡುಗೆ ಅಪಾರ ಎಂದು ಹೇಳಿದರು. ಸ್ವಾತಂತ್ರ್ಯ ನಂತರ ಸಂವಿಧಾನದ ಮೂಲಕ ಅಂಬೇಡ್ಕರ್ ನೀಡಿರುವ ಕೊಡುಗೆ ಭವ್ಯ ಭಾರತದ ಬೆಳವಣಿಗೆಗೆ ಭದ್ರ ಬುನಾದಿಯಾಗಿದೆ ಎಂದರು.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 551
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved