• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಳೆನರಸೀಪುರದಲ್ಲಿ ವಾಹನ ಪಾರ್ಕಿಂಗ್‌
ಪಟ್ಟಣದ ಡಾ. ಅಂಬೇಡ್ಕರ್‌ ವೃತ್ತ, ಶ್ರೀ ಜಯಚಾಮರಾಜೇಂದ್ರ ಒಡೆಯರ್‌ ವೃತ್ತ ಹಾಗೂ ಸಾರ್ವಜನಿಕ ಆಸ್ಪತ್ರೆ ರಸ್ತೆಯ ಬದಿಗಳು ಪೊಲೀಸ್ ಇಲಾಖೆ ಅಳವಡಿಸಿದ ಸಿಸಿ ಕ್ಯಾಮರಾಗಳ ಕಣ್ಗಾವಲಿನಲ್ಲಿದ್ದು, ಇವುಗಳ ಕಣ್ಗಾವಲಿಗೆ ಪೊಲೀಸ್ ಠಾಣೆಯಲ್ಲಿ ಟಿವಿ ಅಳವಡಿಸಲಾಗಿದೆ. ಆದ್ದರಿಂದ ಪರ ಊರುಗಳಿಗೆ ಕರ್ತವ್ಯಕ್ಕೆ ತೆರಳುವ ನೌಕರರು ತಮ್ಮ ವಾಹನಗಳನ್ನು ಬಹಳ ಬುದ್ಧಿವಂತಿಕೆಯಿಂದ ಸಿಸಿ ಕ್ಯಾಮರಾ ಕಣ್ಗಾವಲು ಇರುವ ಸ್ಥಳಗಳಲ್ಲಿ ನಿಲ್ಲಿಸಿ ತೆರಳುತ್ತಾರೆ. ಈ ಕಾರಣದಿಂದ ನಾಗರಿಕರಿಗೆ ತೊಂದರೆ ಉಲ್ಪಣಿಸಿದೆ.
ಕಾಡಾನೆ ಹಾವಳಿಗೆ ಅಪಾರ ಬೆಳೆ ನಷ್ಟ
ಕಟಾವಿಗೆ ಬಂದ ಮುಸುಕಿನ ಜೋಳ, ಭತ್ತದ ಗದ್ದೆ, ತೆಂಗು ಬೆಳೆಗಳು ಆನೆ ದಾಳಿಗೆ ತುತ್ತಾಗಿದೆ. ನಾಗರತ್ನ ಅವರಿಗೆ ಸೇರಿದ ೨೦ ತೆಂಗಿನ ಮರದ ಜೊತೆ ಜೋಳದ ಬೆಳೆ ತುಳಿದು ನಾಶಪಡಿಸಿದೆ. ಯೋಗೇಶ್ ಎಂಬುವವರ ಒಂದೂವರೆ ಎಕರೆಯಷ್ಟು ಮುಸುಕಿನ ಜೋಳ ಹಾಡುಗೆಡವಿದೆ. ಚಂದ್ರಶೇಖರ್‌ ಅವರ ಎರಡು ಎಕರೆ ಜೋಳ, ದೇವರಾಜ್ ಅವರಿಗೆ ಸೇರಿದ ಗುಡ್ಡೆಹಾಕಿದ್ದ ಜೋಳದ ಮೇತೆಯನ್ನು ತಿಂದು ಹಾಕಿವೆ. ಮಲ್ಲೇಶ್‌ ಎಂಬುವರ ೬ ವರ್ಷದ ೧೨ ತೆಂಗಿನ ಮರವನ್ನು ಬುಡ ಸಹಿತ ಕಿತ್ತುಹಾಕಿವೆ.
ಬೀದಿನಾಟಕಗಳ ಮೂಲಕ ಜನಜಾಗೃತಿ
ದೇಶದಲ್ಲಿ ಅನೇಕ ಮಹಾನ್ ಪುರುಷರು ಜನ್ಮ ತಾಳಿ ಜಾತೀ ಎಂಬ ಭೂತವನ್ನು ತೊಡೆದು ಹಾಕಲು ಪ್ರಯತ್ನ ಪಟ್ಟರೂ ಇಂದಿಗೂ ಜಾತಿ ವ್ಯವಸ್ಥೆ ನಮ್ಮಲ್ಲಿದೆ. ನಾವೆಲ್ಲರೂ ಒಂದೇ ಎಂಬ ಭಾವನೆ ನಮ್ಮಲ್ಲಿ ಮೂಡಬೇಕಿದೆ ಆಗ ಮಾತ್ರ ನಾವು ಸುಭದ್ರವಾದಂತಹ ದೇಶವನ್ನು ಕಟ್ಟಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮತ್ತು ಸಮಾಜ ಕಲ್ಯಾಣ ಇಲಾಖೆ ಅಸ್ಪೃಶ್ಯತಾ ನಿವಾರಣೆ ಅಭಿಯಾನವನ್ನು ಹಳ್ಳಿಹಳ್ಳಿಯಲ್ಲಿ ಹಮ್ಮಿಕೊಂಡಿದೆ.
5 ಗ್ಯಾರಂಟಿಗಳು ಯೋಗೇಶ್ವರ್ ಗೆಲುವಿಗೆ ಸಹಕಾರಿ: ಗ್ಯಾರಂಟಿ ಯೋಜನಾ ಸಮಿತಿಯ ಪ್ರಕಾಶ್ ಗೌಡ
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಿ.ಪಿ.ಯೋಗೇಶ್ವರ್ ಗೆಲುವು ನಿಶ್ಚಿತವಾಗಿದೆ. ಗ್ಯಾರಂಟಿ ಯೋಜನೆಗಳು ಅವರ ಕೈಯಡಿಯಲ್ಲಿವೆ ಎಂದು ಚನ್ನರಾಯಪಟ್ಟಣ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಎಲ್‌.ಪಿ.ಪ್ರಕಾಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು. ನುಗ್ಗೇಹಳ್ಳಿಯಲ್ಲಿ ಪ್ರಚಾರ ವೇಳೆ ಮಾತನಾಡಿದರು.
ನವೆಂಬರ್‌ 18ರಂದು ತಂಬಾಕು ಮಾರುಕಟ್ಟೆ ಬಂದ್‌ ಮಾಡಿ ರೈತರ ಪ್ರತಿಭಟನೆ
ಗುಣಮಟ್ಟದ ತಂಬಾಕಿಗೆ ಉತ್ತಮ ದರ ದೊರೆಯುತ್ತಿಲ್ಲ ಹಾಗೂ ಕೆಳ ದರ್ಜೆಯ ತಂಬಾಕು ಖರೀದಿ ನಡೆಸುತ್ತಿಲ್ಲ. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನ.18 ರಂದು ತಂಬಾಕು ಮಾರುಕಟ್ಟೆ ಬಂದ್ ಮಾಡಿ ಪ್ರತಿಭಟನೆ ನಡಸುವುದಾಗಿ ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ವಿ.ಯೋಗಣ್ಣ ಎಚ್ಚರಿಸಿದರು. ಅರಕಲಗೂಡಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕನ್ನಡಜ್ಯೋತಿ ರಥದಿಂದ ಕನ್ನಡ ಸಂಸ್ಕೃತಿ ಅರಿವು: ತಹಸೀಲ್ದಾರ್‌ ಕೃಷ್ಣಮೂರ್ತಿ
ಕನ್ನಡ ನಾಡು, ನುಡಿ, ನೆಲ, ಜಲ, ಕನ್ನಡಾಭಿಮಾನ ಹಾಗೂ ಸಂಸ್ಕೃತಿಯ ಹಿರಿಮೆಯನ್ನು ಕಾಪಾಡುತ್ತ, ವಿಸ್ತಾರವಾಗಿ ಪಸರಿಸುವ ಜತೆಗೆ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಕನ್ನಡಜ್ಯೋತಿ ರಥವು ರಾಜ್ಯದಲ್ಲಿ ಸಂಚರಿಸುತ್ತಿದೆ ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಹೇಳಿದರು. ಹೊಳೆನರಸೀಪುರಕ್ಕೆ ಆಗಮಿಸಿದ ಕನ್ನಡಜ್ಯೋತಿ ರಥಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಹೈದರಾಲಿಯಿಂದ ಕೋಟೆ ರಕ್ಷಿಸಿದ ವೀರ ಮಹಿಳೆ ಓಬವ್ವ: ತಹಸಿಲ್ದಾರ್ ನಂದಕುಮಾರ್
ಚಿತ್ರದುರ್ಗದ ಕೋಟೆಯನ್ನು ಹೈದರಾಲಿಯ ದಾಳಿಯಿಂದ ತಪ್ಪಿಸಿದ ವೀರ ವನಿತೆ ಒನಕೆ ಓಬವ್ವ ಅವಳ ಸಾಹಸ ಮತ್ತು ಶೌರ್ಯದಿಂದ ಚಿತ್ರದುರ್ಗದ ಕೋಟೆ ಹೈದರಾಳಿಯ ಕೈ ವಶವಾಗುವುದನ್ನ ತಪ್ಪಿಸಿದರು ಎಂದು ತಹಸಿಲ್ದಾರ್ ಸಿ.ಪಿ.ನಂದಕುಮಾರ್ ತಿಳಿಸಿದರು. ಆಲೂರಿನಲ್ಲಿ ಓಬವ್ವ ಜಯಂತಿಯಲ್ಲಿ ಮಾತನಾಡಿದರು.
ನವೆಂಬರ್‌ 29ರಿಂದ ಡಿಸೆಂಬರ್‌ 4ರ ವರೆಗೆ ಹಳೆಬೀಡಿನಲ್ಲಿ ಪಂಚಕಲ್ಯಾಣ ಉತ್ಸವ: ವೀರ ಸಾಗರ ಮುನಿ ಮಹಾರಾಜರು
ಪ್ರಸಕ್ತ ವರ್ಷದ ನ.೨೯ ರಿಂದ ಡಿ.೪ರ ವರೆಗೆ ೩೧ ಅಡಿ ಎತ್ತರದ ಭಗವಾನ್ ಶ್ರೀ ೧೦೦೮ ಮುನಿಸುವ್ರತ ತೀರ್ಥಂಕರ ಮೂರ್ತಿಯ ಪ್ರತಿಷ್ಠಾಪನಾ ಮಹೋತ್ಸವ ಅಂಗವಾಗಿ ಬೃಹತ್ ಪಂಚಕಲ್ಯಾಣ ಪ್ರತಿಷ್ಠಾಪನಾ ಮಹೋತ್ಸವ ಜರಗಲಿದೆ ಎಂದು ವೀರ ಸಾಗರ ಮುನಿ ಮಹಾರಾಜರು ಹೇಳಿದರು. ಹಳೆಬೀಡು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಧ್ವಜ ದಿನಾಚರಣೆ
ನವೆಂಬರ್ ೭ರಂದು ಭಾರತ್ ಸ್ಕೌಟ್ ಮತ್ತು ಗೈಡ್ ಎಂದು ವಿಲೀನಗೊಂಡ ಈ ದಿನವನ್ನು ಧ್ವಜ ದಿನವೆಂದು ಆಚರಿಸುವುದಾಗಿದೆ. ಯುವ ಜನರು ತಮ್ಮ ದೈಹಿಕ, ಬೌದ್ಧಿಕ, ಭಾವನಾತ್ಮಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುವುದು ಸ್ಕೌಟ್ ಗೈಡ್ ಸಂಸ್ಥೆಯ ಉದ್ದೇಶವಾಗಿದೆ. ಹಾಸನಾಂಬ ಜಾತ್ರ ಮಹೋತ್ಸವ ಸಮಯದಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ವಿದ್ಯಾರ್ಥಿಗಳು ಸಲ್ಲಿಸಿದ ಸೇವೆ ಶ್ಲಾಘನೀಯ.
ಅರಸೀಕೆರೆ ನಗರಸಭೆ ಉಪಚುನಾವಣೆ ಹಿನ್ನೆಲೆ ಸಂತೋಷ್‌ ಸಭೆ
ನ.23ರಂದು ನಡೆಯಲಿರುವ ಇಲ್ಲಿನ ನಗರಸಭೆ ಎಂಟು ವಾರ್ಡ್‌ಗಳ ಉಪ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಗೆಲುವಿಗೆ ಶಕ್ತಿ ಮೀರಿ ಹೋರಾಟ ನಡೆಸಲು ಕಂಕಣ ಬದ್ಧರಾಗೋಣ ಎಂದು ಜೆಡಿಎಸ್ ಮುಖಂಡ ಎನ್. ಆರ್. ಸಂತೋಷ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಉತ್ಸಾಹ ತುಂಬಿದರು. ವಾರ್ಡ್‌ ವ್ಯಾಪ್ತಿ, ಮತದಾರರ ಪಟ್ಟಿ ಎಲ್ಲವನ್ನೂ ಪರಿಶೀಲಿಸಿ ಗೆಲುವಿಗೆ ಸಮರ್ಥವಾಗಿ ಹೋರಾಟ ಮಾಡೋಣ.ಚುನಾವಣಾ ಪ್ರಚಾರದಲ್ಲಿ ಪಕ್ಷದ ಸಿದ್ಧಾಂತ ಅಳವಡಿಸಿಕೊಳ್ಳೋಣ ಎಂದರು.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 414
  • next >
Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved