• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಭೆಗಳನ್ನು ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ
ಯಡಿಯೂರಪ್ಪನವರು ಹಾಗೂ ನನ್ನ ವಿರುದ್ಧ ಕೆಲವರು ಲಿಂಗಾಯತ ಸಮಾಜ ಮುಖಂಡರೆಂದು ಸಭೆ ಕರೆದಿದ್ದರು. ಅದರಲ್ಲಿ ಕೆಲವು ಪ್ರಮುಖರನ್ನು ಬಿಟ್ಟರೆ ಉಳಿದವರು ಯಾರು ಅಂಥ ಅವರ ಬೀದಿ, ಕೇರಿಯಲ್ಲೂ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು. ಯಾರು ಸಭೆಯನ್ನು ಮಾಡ್ತಿದ್ದಾರೆ ಅವರು ಕೂರಿಸಿ ನಾನು ಮಾತನಾಡುತ್ತೇನೆ. ವಾತಾವರಣ ತಿಳಿಯಾಗುತ್ತಿರುವ ಸಂದರ್ಭದಲ್ಲಿ ಸಭೆಗಳನ್ನು ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ.‌ ನಮಗೂ ಕೂಡ ಯಾವುದೇ ರೀತಿಯ ಅನುಕೂಲ ಆಗಲ್ಲ ಎಂದರು.
ಪರಶುರಾಮ್‌ಗೆ ಕರೀಂಖಾನ್ ಸೌಹಾರ್ದ ಪ್ರಶಸ್ತಿ
ಎಸ್.ಕೆ. ಕರೀಂಖಾನ್ ಸೌಹಾರ್ದ ಪ್ರಶಸ್ತಿಗೆ, ಹರಪನಹಳ್ಳಿಯ ಬಿ.ಪರಶುರಾಮ್ ಅವರು ಪಾತ್ರರಾಗಿದ್ದಾರೆ. ಬಿ.ಪರಶುರಾಮ್ ಅವರು ಸಾಮಾಜಿಕ ಬದ್ಧತೆಯೊಂದಿಗೆ ನಿರಂತರವಾಗಿ ಜನಪರ ಹೋರಾಟ ಗಳಲ್ಲಿಯೂ ಭಾಗಿಯಾಗುತ್ತ ಬಂದವರು. ಮೂಡಲಪಾಯ ಯಕ್ಷಗಾನ ಹಾಗೂ ಆಧುನಿಕ ರಂಗಭೂಮಿ ಹೀಗೆ ಎರಡೂ ಕ್ಷೇತ್ರಗಳಲ್ಲಿ ನಿರಂತರವಾಗಿ ದುಡಿಯುತ್ತ ಬಂದವರು. ಹರಪನ ಹಳ್ಳಿಯಲ್ಲಿ ಸಾಂಸ್ಕೃತಿಕ ಸಂಸ್ಥೆಯನ್ನು ಕಟ್ಟಿಕೊಂಡು ರಂಗ ಕಾಯಕ ವನ್ನು ಮುಂದುವರಿಸಿದ್ದಾರೆ.
ಬಾಳೆ ಬೆಳೆ ತುಳಿದು ನಾಶ ಮಾಡಿದ ಕಾಡಾನೆಗಳ ಹಿಂಡು
ಬೇಲೂರು ತಾಲೂಕಿನ ಅರೇಹಳ್ಳಿ ಸಮೀಪದ ಮಾಲಹಳ್ಳಿ ಕಾಫಿ ತೋಟದ ಕೆರೆಯಲ್ಲಿ ಬುಧವಾರ ರಾತ್ರಿ 15ಕ್ಕೂ ಹೆಚ್ಚು ಆನೆಗಳು ಈಜಾಡುವುದರ ಜೊತೆಗೆ ಕಾಫಿ, ಅಡಿಕೆ, ಮೆಣಸು ಹಾಗೂ ಬಾಳೆಗಿಡಗಳ ಫಸಲನ್ನು ನಾಶ ಮಾಡಿದ್ದು ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ. ಈ ಬಗ್ಗೆ ಕಾಫಿ ತೋಟದ ಮಾಲೀಕ ಚಂದ್ರು ಮಾತನಾಡಿ, ನಮ್ಮ ತೋಟಕ್ಕೆ 15ಕ್ಕೂ ಹೆಚ್ಚು ಆನೆಗಳು ಬುಧವಾರ ರಾತ್ರಿ ಲಗ್ಗೆ ಇಟ್ಟಿವೆ. ಕಷ್ಟಪಟ್ಟು ಬೆಳೆದಿದ್ದ ಕಾಫಿ ಗಿಡ, ಬಾಳೆ ಗಿಡ ಹಾಗೂ ಅಡಿಕೆ ಮರಗಳನ್ನು ನಾಶ ಮಾಡಿದ್ದು ಅಂದಾಜು 5 ಲಕ್ಷ ರು. ಬೆಳೆ ಹಾನಿ ಸಂಭವಿಸಿದೆ ಎಂದಿದ್ದಾರೆ.
ಮುಂದಿನ 3-4 ತಿಂಗಳಲ್ಲಿ ಸಕಲೇಶಪುರದಿಂದ ಮಾರನಹಳ್ಳಿವರೆಗೆ ಹೆದ್ದಾರಿ-75ರ ನಾಲ್ಕುಪಥ ರಸ್ತೆ ಸಂಚಾರಕ್ಕೆ ಮುಕ್ತ

ಮುಂದಿನ 3-4 ತಿಂಗಳಲ್ಲಿ ಸಕಲೇಶಪುರದಿಂದ ಮಾರನಹಳ್ಳಿವರೆಗೆ ಹೆದ್ದಾರಿ-75ರ ನಾಲ್ಕುಪಥ ರಸ್ತೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು. 

ಪಂಚಾಕ್ಷರಿ ಮಂತ್ರದಿಂದ ದೈಹಿಕ ಮಾನಸಿಕ ಆರೋಗ್ಯ
ಮಹಾ ಮೃತ್ಯುಂಜಯ ಮಂತ್ರ ಹಾಗೂ ಓಂ ನಮಃ ಶಿವಾಯ ಮಂತ್ರ ಇವೆರಡು ಸನಾತನ ಧರ್ಮದಲ್ಲಿ ಮಹಾರುದ್ರನಿಗೆ ಅರ್ಪಿತವಾದ ಪವಿತ್ರ ಮಂತ್ರಗಳಾಗಿವೆ. ಇಂತಹ ಶಿವ ಪಂಚಾಕ್ಷರಿ ಮಂತ್ರವನ್ನು ಭಕ್ತಿಯಿಂದ ಜಪಿಸಿದರೆ ನಮ್ಮ ದೇಹ, ಮನಸ್ಸು ಹಾಗೂ ಆತ್ಮವು ಶುದ್ಧವಾಗುವುದು ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ನೀಡುವುದು. ಈ ನಿಟ್ಟಿನಲ್ಲಿ ರಾಜಯೋಗ ಶಿಕ್ಷಣ ಉತ್ತಮವಾದದ್ದು ಎಂದು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ ಹೇಳಿದರು.
ಆರೋಗ್ಯ ಶಿಬಿರದ ಸದುಪಯೋಗ ಪಡೆಯಿರಿ
ಬಂಧೀಖಾನೆಯಲ್ಲಿರುವ ಕೈದಿಗಳಿಗೆ ಹಲವು ಸಂಘಸಂಸ್ಥೆಗಳು ಉಚಿತವಾಗಿ ಏರ್ಪಡಿಸುವ ಆರೋಗ್ಯ ಶಿಬಿರದ ಸದುಪಯೋಗಪಡಿಸಿಕೊಳ್ಳಿ ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ಹೇಮಾವತಿಯವರು ತಿಳಿಸಿದರು. ಕ್ಯಾನ್ಸರ್‌ನಂತಹ ಕಾಯಿಲೆಗಳು ಸುಲಭವಾಗಿ ಗೊತ್ತಾಗುವುದಿಲ್ಲ ಅದು ಪತ್ತೆಯಾಗುವ ವೇಳೆಗೆ ನಾಲ್ಕನೇ ಐದನೆಯ ಹಂತ ತಲುಪಿ ಗುಣಮುಖರಾಗದೆ ರೋಗದೊಂದಿಗೆ ಸೆಣಸಾಡುವ ಮೂಲಕ ಯಾತನೆಯನ್ನು ಅನುಭವಿಸಬೇಕಾಗುವುದು. ಆದುದರಿಂದ ಉತ್ತಮ ಅಭ್ಯಾಸಗಳೊಂದಿಗೆ ಆರೋಗ್ಯ ಉತ್ತಮವಾಗಿರಿಸಿಕೊಳ್ಳುವುದು ಅಗತ್ಯ ಎಂದರು.
ಆಂಜನೇಯ ಸ್ವಾಮಿ ನೂತನ ದೇವಸ್ಥಾನದ ಲೋಕಾರ್ಪಣೆಗೆ ಸಿದ್ಧತೆ
ತಾಲೂಕಿನ ಕೆಂಪುಸಾಗರ ಗ್ರಾಮದಲ್ಲಿ ಸುಮಾರು 150 ವರ್ಷಕ್ಕೂ ಹಿಂದಿನ ನದೇವಸ್ಥಾನದ ಲೋಕಾರ್ಪಣೆ ಮಾರ್ಚ್ ಒಂದು ಹಾಗೂ 2ರಂದು ನಡೆಯಲಿದೆ. 2021ರಲ್ಲಿ ಕೆಂಪುಸಾಗರ ಗ್ರಾಮಸ್ಥರು ದೇವಸ್ಥಾನದ ಜೀವನೋದ್ಧಾರಕ್ಕಾಗಿ ಶ್ರೀ ಆಂಜನೇಯ ಸ್ವಾಮಿ ಜೀರ್ಣೋದ್ಧಾರ ಸಮಿತಿ ರಚಿಸಿ ಇದೀಗ ದೇವಸ್ಥಾನದ ಗರ್ಭಗುಡಿ, ಪರಿಕ್ರಮ ಮತ್ತು ಗೋಪುರವು ನೂತನವಾಗಿ ನಿರ್ಮಾಣ ಪೂರ್ಣಗೊಂಡಿದ್ದು ಮಾರ್ಚ್ 1 ಹಾಗೂ 2ರೊಂದು ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಕೆಂಪುಸಾಗರ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಸಮಿತಿಯ ಪರವಾಗಿ ಗೋಪಿನಾಥ್ ಮನವಿ ಮಾಡಿದ್ದಾರೆ.
ಯೋಗಾನಂದೇಶ್ವರ ಸರಸ್ವತೀ ಮಠದಲ್ಲಿ ವಿವಿಧ ಪೂಜೆ
ಹೊಳೆನರಸೀಪುರ ಪಟ್ಟಣದ ರಥ ಬೀದಿಯಲ್ಲಿರುವ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಶಾಖಾ ಮಠದ ಆವರಣದಲ್ಲಿರುವ ಶ್ರೀ ನೀಲಕಂಠೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಗುರುವಾರ ಬೆಳಗ್ಗೆ ಗಣೇಶ ಪೂಜೆ, ಪುಣ್ಯಾಹ ವಾಚನ, ಧ್ವಜಾರೋಹಣ ಮತ್ತು ಇತ್ಯಾದಿ ಪೂಜಾ ಕಾರ್ಯಗಳು ಜರುಗಿತು. ಕೆ.ಆರ್‌.ನಗರದ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ಪತೀ ಮಠದ ಮಠಾಧೀಶ ಶ್ರೀ ಶಂಕರಭಾರತೀ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ತತ್ಕರಕಮಲಸಂಜಾತರಾದ ಬ್ರಹ್ಮಾನಂದಭಾರತೀ ಸ್ವಾಮಿಗಳ ಉಪಸ್ಥಿತಿಯಲ್ಲಿ ನಡೆಯಿತು.
ಮೃತ ಕೇಶವಯ್ಯ ಕುಟುಂಬಕ್ಕೆ ರೈತ ಸಂಘ ಸಾಂತ್ವನ
ಸಾಲದ ಬಾಧೆ ತಾಳಲಾರದೆ ವಿಷಸೇವಿಸಿ ಆತ್ಮಹತ್ಯೆಮಾಡಿಕೊಂಡ ಕಳ್ಳಿಮುದ್ದನಹಳ್ಳಿ ಕೇಶವಯ್ಯ ಅವರ ಸಾವಿಗೆ ಕಾರಣರಾದವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ತಾಲೂಕು ರೈತಸಂಘದ ಕಾರ್ಯಾಧ್ಯಕ್ಷ ಭುವನೇಶ್ ಎಚ್ಚರಿಸಿದರು. ತಾಲೂಕಿನಲ್ಲಿ ಇದು ಎರಡನೇ ಪ್ರಕರಣವಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.
ಕುಂಭಮೇಳದ ಸಂದರ್ಭದ ಮಹಾಶಿವರಾತ್ರಿ ವಿಶೇಷ
೧೪೪ ವರ್ಷಗಳ ನಂತರ ಗಂಗೆ, ಯುಮುನೆ, ಸರಸ್ವತಿ ನದಿಗಳ ಸಂಗಮ ಪ್ರಯಾಜ್‌ರಾಗ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿರುವ ಸಂದರ್ಭದಲ್ಲಿ, ಕ್ರೋಧಿನಾಮ ಸಂವತ್ಸರದ ಮಾಘ ಮಾಸದ ಕೃಷ್ಣಪಕ್ಷದಲ್ಲಿ ಶಿವರಾತ್ರಿ ಹಬ್ಬ ಆಚರಣೆ ನಡೆಯುತ್ತಿರುವುದು ಅತ್ಯಂತ ವಿಶೇಷ ಹಾಗೂ ಆರೋಗ್ಯಪೂರ್ಣವಾಗಿದೆ ಎಂದು ಕಣತೂರಿನ ಪುರೋಹಿತರಾದ ಕೆ. ವೈ. ರಾಘವೇಂದ್ರಶರ್ಮ ತಿಳಿಸಿದ್ದಾರೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved