• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿನ್ನರ್ ಚಾಂಪಿಯನ್ ಪಟ್ಟ ಗೆದ್ದ ಪವರ್ ಲಿಫ್ಟಿಂಗ್ ಸಂಸ್ಥೆ
ಈ ಬಾರಿ ನಡೆದ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು 63 ಪವರ್ ಲಿಫ್ಟರ್‌ಗಳು ಭಾಗವಹಿಸಿದ್ದು, ಅವರು ಜೂನಿಯರ್, ಸೀನಿಯರ್ ಮತ್ತು ಮಾಸ್ಟರ್ಸ್ ವಿಭಾಗಗಳಲ್ಲಿ ತಮ್ಮ ಶಕ್ತಿ, ಸಾಮರ್ಥ್ಯ ಮತ್ತು ತಂತ್ರದ ಪ್ರದರ್ಶನ ನೀಡಿದರು. ಈ ಸ್ಪರ್ಧೆ ಮೂಲಕ ಹಾಸನ ಜಿಲ್ಲೆಯ ಪವರ್ ಲಿಫ್ಟಿಂಗ್ ಪ್ರತಿಭೆಗಳು ಮತ್ತೊಮ್ಮೆ ಕ್ರೀಡಾ ಲೋಕದಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಿವೆ. ಸ್ಪರ್ಧೆಯಲ್ಲಿ ಹಾಸನ ಪವರ್ ಲಿಫ್ಟಿಂಗ್ ಸಂಸ್ಥೆ ಅತ್ಯುತ್ತಮ ಪ್ರದರ್ಶನ ನೀಡಿ ವಿನ್ನರ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಏರೋ ಫಿಟ್ನೆಸ್ ಜಿಮ್ ತಂಡವು ಶ್ರೇಷ್ಠ ಪ್ರದರ್ಶನದ ಆಧಾರದಿಂದ ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡಿದೆ.
ಗಾಂಧೀಜಿ ಚಿತಾಭಸ್ಮ ಸ್ಮಾರಕಕ್ಕೆ ಶೀಘ್ರ ಹೊಸಕಳೆ
ರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರ ಮುಂದಾಳುತ್ವದಲ್ಲಿ, ಸ್ಮಾರಕದ ಮೇಲೆ ಶಾಶ್ವತವಾಗಿ ಜ್ಯೋತಿ ಉರಿಯುವ ವ್ಯವಸ್ಥೆಯನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ.ದೆಹಲಿಯ ರಾಜ್‌ಘಾಟ್‌ನಲ್ಲಿ ಗಾಂಧೀಜಿ ಸ್ಮಾರಕದ ಮೇಲೆ ನಿತ್ಯ ಜ್ಯೋತಿ ಉರಿಯುವ ಮಾದರಿಯನ್ನು ಅನುಸರಿಸಿ, ಅರಸೀಕೆರೆಯ ಗಾಂಧೀಜಿ ಸ್ಮಾರಕದಲ್ಲೂ ಅದೇ ರೀತಿಯ ವ್ಯವಸ್ಥೆ ಕಲ್ಪಿಸಲು ಶಾಸಕರು ತಹಸೀಲ್ದಾರರು ಹಾಗೂ ಬ್ಲಾಕ್‌ ಆಫೀಸರ್‌ರಿಗೆ ನಿರ್ದೇಶನ ನೀಡಿದ್ದಾರೆ. ಜ್ಯೋತಿ ನಿರಂತರವಾಗಿ ಉರಿಯಲು ಅಗತ್ಯವಿರುವ ತೈಲವನ್ನು ತಾವು ಸ್ವತಃ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.
ಸಾರ್ವಜನಿಕರ ಆಗುಹೋಗುಗಳಿಗೆ ಸ್ಪಂದಿಸುವವನೇ ನಿಷ್ಠಾವಂತ ರಾಜಕಾರಣಿ
ಎಂ. ಎ. ಗೋಪಾಲಸ್ವಾಮಿ ಅವರ ೫೫ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದಂತಹ ಆರೋಗ್ಯ ಮೇಳ ಅಂಗಾಂಗಗಳ ದಾನ ಶಿಬಿರದಲ್ಲಿ ಮಾತನಾಡಿದರು. ರಾಜಕಾರಣಿಗಳು ತಾವು ಏನು ಮಾಡಿಕೊಳ್ಳುತ್ತೇವೆ ಎನ್ನುವುದು ದೊಡ್ಡತನವಲ್ಲ ಕ್ಷೇತ್ರದ ಜನತೆಗೆ ಏನು ಮಾಡುತ್ತೇವೆ ಎಂಬುದು ಆ ಕ್ಷೇತ್ರದ ಜನತೆ ನೋಡುತ್ತಿದ್ದಾರೆ. ಇವುಗಳನ್ನೆಲ್ಲ ಮನಗೊಂಡು ರಾಜಕಾರಣಿಗಳು ಕೆಲಸ ಮಾಡುವ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ. ಇಂತಹ ಉತ್ಸಾಹಿ ರಾಜಕಾರಣಿಗಳನ್ನು ಈ ಕ್ಷೇತ್ರದ ಜನ ಬೆಳೆಸಿ ಹರಸಿ. ಇದರಿಂದ ನಿಮ್ಮ ಕ್ಷೇತ್ರದ ಅಭಿವೃದ್ಧಿಗೂ ಕೂಡ ಸಹಕಾರಿಯಾಗುತ್ತದೆ ಎಂದರು.
ನಗರಸಭೆ ಆವರಣದಲ್ಲಿ ಶ್ವಾನಗಳ ಗುಂಪು
ಸೋಮವಾರ ಬೆಳಿಗ್ಗೆ ನಗರಸಭೆ ಆವರಣವನ್ನೇ ನಾಯಿಗಳ ಗುಂಪೊಂದು ಆವರಿಸಿದ ಪರಿಣಾಮ ಕಚೇರಿಗೆ ಆಗಮಿಸಿದ್ದ ನಾಗರಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ನಗರದ ವಿವಿಧ ಪ್ರದೇಶಗಳಲ್ಲಿ ಮಾಂಸಾಹಾರ ಹಾಗೂ ಸಸ್ಯಹಾರ ಅಂಗಡಿಗಳ ಮಾಲೀಕರು ತಯಾರಿಸಿದ ಅಥವಾ ಮಾರಾಟವಾಗದ ಆಹಾರವನ್ನು ರಸ್ತೆ ಬದಿಗಳು, ಚರಂಡಿಗಳು ಮತ್ತು ತೆರೆಯಾದ ಸ್ಥಳಗಳಲ್ಲಿ ಬಿಸಾಡುತ್ತಿರುವುದು ಈ ನಾಯಿಗಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಮುಖ ಕಾರಣವಾಗಿದೆ. ಹಸಿವಿನಿಂದ ಬಳಲುತ್ತಿರುವ ನಾಯಿಗಳು ದಿನದ ಯಾವ ಸಮಯದಲ್ಲಾದರೂ ಬೀದಿಗಳಲ್ಲಿ ಸಂಚರಿಸುವ ನಾಗರೀಕರ ಮೇಲೆ ದಾಳಿ ನಡೆಸುತ್ತಿರುವ ಘಟನೆಗಳು ಹೆಚ್ಚುತ್ತಿವೆ.
ಲೋಕಕಲ್ಯಾಣಾರ್ಥವಾಗಿ ಸಹಸ್ರ ಮೋದಕ ಗಣಪತಿ ಹೋಮ
ಸನಾತನ ಧರ್ಮದಲ್ಲಿ ಹೋಮಗಳಿಗೆ ವಿಶಿಷ್ಟ ಮಹತ್ವವಿದ್ದು, ಲೋಕಕಲ್ಯಾಣಕ್ಕಾಗಿ ಈ ಹೋಮಗಳು ಪ್ರಾರ್ಥನೆಯ ಶಕ್ತಿಯ ಪ್ರತೀಕವಾಗಿವೆ. ಕಳೆದ 84 ವರ್ಷಗಳಿಂದ ಶ್ರೀ ಪ್ರಸನ್ನ ಗಣಪತಿ ಆಸ್ಥಾನ ಮಂಟಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಈ ಧಾರ್ಮಿಕ ಕಾರ್ಯಗಳು ಇಂದು ಭಕ್ತರ ನಂಬಿಕೆಯ ಆಧಾರವಾಗಿವೆ. ರೈತರ ಕಷ್ಟಗಳು ನಿವಾರಣೆಯಾಗಲಿ, ಉತ್ತಮ ಮಳೆ ಹಾಗೂ ಬೆಳೆಯಿಂದ ಶಾಂತಿ ಮತ್ತು ನೆಮ್ಮದಿ ನೆಲೆಸಲಿ ಎಂದು ಆಶೀರ್ವದಿಸಿದರು.
ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ದಾರುಣ ಸಾವು
ಕೃಷಿ ಹೊಂಡದ ಬಳಿ ಆಟವಾಡುತ್ತಿದ್ದ ಇಬ್ಬರು ಪುಟ್ಟ ಬಾಲಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಶಾಲೆ ಹಾಗೂ ಅಂಗನವಾಡಿಗೆ ರಜೆ ಇದ್ದುದ್ದರಿಂದ ಪ್ರಣಯ್ ಹಾಗೂ ನಿಶಾಂತ್ ಮನೆಯ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಲೇ ಕಾಫಿ ಎಸ್ಟೇಟ್‌ನಲ್ಲಿದ್ದ ಕೃಷಿ ಹೊಂಡದ ಬಳಿಗೆ ಕೈಯಲ್ಲಿದ್ದ ಪ್ಲಾಸ್ಟಿಕ್ ಆಟಿಕೆಗಳನ್ನು ಹಿಡಿದು ತೆರಳಿದ್ದಾರೆ. ಪ್ರಣಯ್ ತನ್ನ ಕೈಯಲ್ಲಿದ್ದ ಪ್ಲಾಸ್ಟಿಕ್ ರೈಲನ್ನು ಕೃಷಿ ಹೊಂಡಕ್ಕೆ ಎಸೆದಿದ್ದಾನೆ. ನಂತರ ಇಬ್ಬರು ಹೊಂಡದ ದಡದಲ್ಲಿ ಚಪ್ಪಲಿ ಬಿಟ್ಟು ರೈಲು ತರಲು ನೀರಿಗೆ ಇಳಿದಿದ್ದಾರೆ. ಕೃಷಿ ಹೊಂಡದಲ್ಲಿ ನೀರು ತುಂಬಿದ್ದರಿಂದ ಮೇಲೆ ಬರಲಾರದೆ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ.
ವ್ಯಕ್ತಿಗಿಂತ ವ್ಯಕ್ತಿತ್ವ ದೊಡ್ಡದು ಎಂದ ಕುಮಾರ್
ವ್ಯಕ್ತಿಗಿಂತ ವ್ಯಕ್ತಿತ್ವ ದೊಡ್ಡದು, ವ್ಯಕ್ತಿತ್ವಕ್ಕೆ ವ್ಯಕ್ತಿಯನ್ನು ಗೆಲ್ಲುವ ಶಕ್ತಿ ಇರುತ್ತದೆ ಎಂದು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕುಮಾರ್ ಅಭಿಪ್ರಾಯಪಟ್ಟರು. ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಸಾಮಾಜಿಕ ಪ್ರಜ್ಞೆ, ನಾಡನುಡಿಯ ಬಗ್ಗೆ ಅಭಿಮಾನ ದೇಶಾಭಿಮಾನ, ಸೇವಾ ಮನೋಭಾವ ಮತ್ತು ಸಾಮಾಜಿಕ ಕಳಕಳಿ ವಿದ್ಯಾರ್ಥಿ ದೆಸೆಯಲ್ಲೇ ಮನಸ್ಸಿನಲ್ಲಿ ಭದ್ರವಾಗಿ ಬೇರೂರಬೇಕು. ಇದು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಗಳಿಂದ ಸಾಧ್ಯ. ಶಿಕ್ಷಣಕ್ಕೆ ಪೂರಕವಾದ ಇಂತಹ ಯೋಜನೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕೊಡುಗೆ ನೀಡುತ್ತದೆ ಎಂದು ತಿಳಿಸಿದರು.
ಸಮೀಕ್ಷೆ ವೇಳೆ ಬೀದಿ ನಾಯಿ ದಾಳಿಯಿಂದ ಶಿಕ್ಷಕಿ ಗಂಭೀರ

ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಮೇಲೆ‌ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆ ಬೇಲೂರಿನ ಹೊಯ್ಸಳ ನಗರದ ಬಡಾವಣೆಯಲ್ಲಿ ಭಾನುವಾರ ಈ ಘಟನೆ ನಡೆದಿದೆ.

ಉದ್ಯೋಗ ಮಾರುಕಟ್ಟೆಗೆ ಅಗತ್ಯವಿರುವ ಕೌಶಲ ಮೈಗೂಡಿಸಿಕೊಳ್ಳಿ
ಈಗಿನ ಉದ್ಯೋಗ ಮಾರುಕಟ್ಟೆಗೆ ಅಗತ್ಯವಿರುವ ಕೌಶಲಗಳನ್ನು ಮೈಗೂಡಿಸಿಕೊಳ್ಳಲು ಆದ್ಯತೆ ನೀಡಿ ಎಂದು ಬೆಂಗಳೂರಿನ ನಾಗಾರ್ಜುನ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಹಾಗೂ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿ ಡಾ.ಎಸ್.ಜಿ. ಗೋಪಾಲಕೃಷ್ಣ ಅವರು ಸಲಹೆ ನೀಡಿದರು. ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಮಾರ್ಗದರ್ಶಕರಾಗಿ ಇಂದಿನ ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಿದ್ದೇವೆ. ಇದಕ್ಕಾಗಿ ಪ್ರಾಂಶುಪಾಲರಾದ ಡಾ.ಹೆಚ್.ಜೆ.ಅಮರೇಂದ್ರ ಅವರು’ಮಾರ್ಗದರ್ಶಕ’ ಉಪಕ್ರಮ ರೂಪಿಸಿದ್ದಾರೆ ಎಂದು ತಿಳಿಸಿದರು.
ದೀಕ್ಷಾ ಭೂಮಿ ಯಾತ್ರೆಗೆ ೩೮ ಯಾತ್ರಾರ್ಥಿಗಳ ಪ್ರಯಾಣ
ಈ ಸಂದರ್ಭ ಮಾತನಾಡಿದ ಅವರು, ಬೇರೆ ಬೇರೆ ಧರ್ಮದವರು ವಿವಿಧ ಕ್ಷೇತ್ರಗಳಿಗೆ ಯಾತ್ರೆ ಮಾಡುವ ಮಾದರಿಯಲ್ಲಿಯೇ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳು ಪ್ರತಿ ವ? ಅಕ್ಟೋಬರ್ ತಿಂಗಳಲ್ಲಿ ನಾಗಪುರದಲ್ಲಿ ನಡೆಯುವ ದಮ್ಮ ಪ್ರವರ್ತನಾ ದಿನ ಕಾರ್ಯಕ್ರಮಕ್ಕೆ ದೀಕ್ಷಾ ಯಾತ್ರೆ ಕೈಗೊಳ್ಳುವುದು ವಾಡಿಕೆ. ಸಾಹೇಬ ಅಂಬೇಡ್ಕರ್ ಅವರ ಅನುಯಾಯಿಗಳನ್ನು ಪ್ರತಿ ವರ್ಷವೂ ದೀಕ್ಷಾಯಾತ್ರೆಗೆ ಕಳುಹಿಸಲಾಗುತ್ತಿದೆ. ಈ ವರ್ಷ ಚನ್ನರಾಯಪಟ್ಟಣ ತಾಲೂಕಿನಿಂದ ೩೮ ಹಾಗೂ ಹೊಳೆನರಸೀಪುರದಿಂದ ೫ ಅನುಯಾಯಿಗಳನ್ನು ನಾಗಪುರ ದೀಕ್ಷಾಯಾತ್ರೆಗೆ ಕಳುಹಿಸುತ್ತಿರುವುದಾಗಿ ಅವರು ತಿಳಿಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 545
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved