ನಾಳೆ ಜೇನುಕಲ್ಲು ಸಿದ್ದೇಶ್ವರ ರಸ್ವಾಮಿ ರಥೋತ್ಸವಏ.೧೨ರಂದು ಶನಿವಾರ ಮುಂಜಾನೆ ಹುಣ್ಣಿಮೆ ಅಂಗವಾಗಿ ಬೆಟ್ಟದ ಮೇಲೆ ಧ್ವಜಾರೋಹಣ, ಅಂಕುರಾರ್ಪಣೆ, ನೂರೊಂದೆಡೆ ಸೇವೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಲಿದೆ. ಸಂಜೆ ೭ ಗಂಟೆಗೆ ಬಸವೇಶ್ವರಸ್ವಾಮಿ ಉತ್ಸವ, ಗದ್ದುಗೆ ಮಂಟಪದಲ್ಲಿ ಸಾಮ್ರಾಜ್ಯೋತ್ಸವ, ಹುಲಿವಾಹನ, ಸೂರ್ಯಮಂಡಲೋತ್ಸವ, ಬೆಳ್ಳಿಪಲ್ಲಕ್ಕಿ ಉತ್ಸವ, ಬಿಲ್ವ ವೃಕ್ಷೆತ್ಸವ, ಹರಕೆ ತೀರಿಸುವವರಿಗೆ ಬಾಯಿಬೀಗ, ಚಂದ್ರ ಮಂಡಲೋತ್ಸವ, ಅಗ್ನಿಕುಂಡ ಸೇವೆ ಹಾಗೂ ಕೆಂಚಮ್ಮನವರ ಸನ್ನಿಧಿಯಲ್ಲಿ ಗುಗ್ಗಳಸೇವೆ ನೆರವೇರಲಿದೆ.