• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ರಿಯಾಯಿತಿ ದರದಲ್ಲಿ ಪಿವಿಸಿ ಪೈಪ್ ವಿತರಣೆ
ರೈತರಿಗೆ ಕೃಷಿ ನೀರಾವರಿ ಅನುಕೂಲ ಕಲ್ಪಿಸಲು ಒಂದು ವರ್ಷದಲ್ಲಿ 700 ಜನ ರೈತರಿಗೆ ರಿಯಾಯಿತಿ ದರದಲ್ಲಿ ಪಿವಿಸಿ ಪೈಪ್‌ಗಳನ್ನು ವಿತರಿಸಲಾಗಿದೆ ಎಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಜೀ.ವಿ. ದಿನೇಶ್ ಗುರುವಾರ ತಿಳಿಸಿದರು. ಬೇಸಿಗೆಯಲ್ಲಿ ತೆಂಗು, ಅಡಿಕೆ, ಬಾಳೆ, ತರಕಾರಿ, ಶುಂಠಿ ಬೆಳೆಯುವ ರೈತರಿಗೆ ಹನಿ ನೀರಾವರಿ ಹಾಗೂ ಸ್ಪಿಂಕ್ಲರ್ ಅಳವಡಿಸಿಕೊಳ್ಳಲು ಗುಣಮಟ್ಟದ ಪೈಪ್‌ಗಳ ವಿತರಣೆ ಮಾಡಲಾಗುತ್ತಿದೆ ಎಂದರು.
ನಗರಸಭೆ ಸಭಾಂಗಣ ಆವರಣ ನೋಡಿದರೆ ನಾಚಿಕೆಯಾಗಬೇಕು
ಈಗಾಗಲೇ ನಗರಸಭೆಯು ನಗರಪಾಲಿಕೆಯಾಗಿದ್ದು, ಇಲ್ಲಿನ ನಗರಸಭೆ ಸಭಾಂಗಣದ ಒಳ ಹಾಗೂ ಹೊರ ಆವರಣ ನೋಡಿದರೆ ನಾಚಿಕೆಯಾಗಬೇಕು ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ಸಲ್ಪ ಗರಂ ಆಗಿ ಮಾತನಾಡಿದರು. ಸಭೆ ನಡೆಯುವ ಸಭಾಂಗಣದ ಆವರಣದಲ್ಲಿ ಎಲ್ಲೆಂದರಲ್ಲಿ ಕಡತ ಜೋಡಿಸಲಾಗಿದೆ. ಸೂಕ್ತ ಸೌಲಭ್ಯ ಇಲ್ಲ, ಮೈಕ್ ಕೆಟ್ಟಿವೆ. ನನ್ನ ನಿರೀಕ್ಷೆ ಏನಿತ್ತು ಅದು ಹುಸಿಯಾಗಿದೆ. ಇಲ್ಲಿನ ಅನೇಕ ಅಧಿಕಾರಿಗಳ ನಡುವೆ ಹೊಂದಾಣ ಕೆಯೇ ಇಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ಅಡಿಕೆ ಶೇಖರಣೆಯ ಗೋದಾಮಿಗೆ ಬೀಗ ಖಂಡಿಸಿ ಪ್ರತಿಭಟನೆ
ಐದಾರು ಕೋಟಿ ಬೆಲೆ ಬಾಳುವ ಅನೇಕ ರೈತರು ಸೇರಿ ಬೆಳೆದ ಅಡಿಕೆಯನ್ನು ಒಂದು ಕಡೆ ಗೋದಾಮಿನಲ್ಲಿ ಶೇಖರಣೆ ಮಾಡಲಾಗಿದ್ದು, ಈ ವೇಳೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಯಾವ ಕಾರಣ ನೀಡದೇ ಏಕಾಏಕಿ ದಾಳಿ ನಡೆಸಿ ಅಡಿಕೆ ಶೇಖರಣೆಯ ಗೋದಾಮಿಗೆ ಬೀಗ ಹಾಕಿರುವುದಕ್ಕೆ ಇದನ್ನ ಖಂಡಿಸಿ ಫೆ.೨೧ರಿಂದ ಕಚೇರಿ ಮುಂದೆ ಅಹೋರಾತ್ರಿ ಧರಣಿ ಮಾಡುವುದಾಗಿ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಳ್ಳೂರು ಸ್ವಾಮಿಗೌಡ ಎಚ್ಚರಿಸಿದರು.
ಚುನಾವಣೆ ಸಮೀಪಿಸುತ್ತಿದ್ದಂತೆ ಗ್ಯಾರಂಟಿಗಳಿಗೆ ಹಣ ಸಿಗುತ್ತದೆ
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರು, ಹಾಲಿ, ಮಾಜಿ ಶಾಸಕರು ಕಳೆದ ವಿಧಾನಸಭಾ ಚುನಾವಣೆ ಪರಾಜಿತ ಅಭ್ಯರ್ಥಿಗಳ ಸಭೆಯನ್ನು ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ ಸಮಯದಲ್ಲಿ ಗೃಹಲಕ್ಷ್ಮಿ ಹಣ ಕೊಡಲಾಗಿತ್ತು. ಆದರೆ ಮನೆಯಲ್ಲಿ ಗೃಹಣಿಯರು ಗೃಹಲಕ್ಷ್ಮಿ ಹಣ ಬರುತ್ತದೆ ಎಂದು ಕಾದಿದ್ದಾರೆ. ಮುಂದೆ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಘೋಷಣೆ ಆದರೆ ಮಾತ್ರ ಗೃಹಲಕ್ಷ್ಮಿಯ ಹಣ ಹಾಕುತ್ತಾರೆ. ಇವರಿಗೆ ಚುನಾವಣೆ ವೇಳೆ ಮಾತ್ರ ಗ್ಯಾರಂಟಿ ನೆನಪಿಗೆ ಬರುತ್ತದೆ ಎಂದು ವ್ಯಂಗ್ಯವಾಡಿದರು.
ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಸಿಕೊಳ್ಳಬೇಕು
ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಸಿಕೊಂಡು, ಹೊಂದಾಣಿಕೆಯಿಂದಿರಬೇಕು, ಆದರೆ ಇಂದಿನ ದಿನಮಾನಗಳಲ್ಲಿ ಸಣ್ಣಸಣ್ಣ ಮನಸ್ತಾಪದಿಂದ ಹೊಂದಾಣಿಕೆ ಇಲ್ಲದೆ ಕೌಟುಂಬಿಕ ದೌರ್ಜನ್ಯಗಳು ನಡೆಯುತ್ತಿವೆ ಎಂದು ಜಿಲ್ಲಾಧಿಕಾರಿ ಸತ್ಯಭಾಮ ಹೇಳಿದರು. ಹೆಣ್ಣುಮಕ್ಕಳು ಸ್ವಭಾವತಃ ಶಕ್ತಿವಂತರೆ ಆದರೆ, ಕೆಲವು ಮಹಿಳೆಯರು ಬಲಹೀನರಿದ್ದಾರೆ ಅವರ ಸಬಲೀಕರಣಕ್ಕಾಗಿ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇದರ ಕುರಿತು ಸಾರ್ವಜನಿಕರಿಗೆ ಹಾಗೂ ದೌರ್ಜನ್ಯ, ಹಿಂಸೆ ಅನುಭವಿಸುತ್ತಿರುವವರಿಗೆ ಹೊಂದಾಣಿಕೆಯಿಂದ ಸಂಬಂಧ ವೃದ್ಧಿಸಿಕೊಳ್ಳಲು ತಿಳಿಹೇಳಿ ಎಂದರು.
ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿಗೆ ಅಗತ್ಯ ಕ್ರಮ ವಹಿಸಿ
ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ.೧ರಿಂದ ೨೦ರವರೆಗೆ ಬೆಳಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ನಡೆಯಲಿದ್ದು, ಯಾವುದೇ ಲೋಪದೋಷಗಳಾಗದಂತೆ ನಿಗಾವಹಿಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ ಮುತ್ತ ೨೦೦ ಮೀಟರ್ ಪ್ರದೇಶವನ್ನು ನಿಗಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝೆರಾಕ್ಸ್ ಅಂಗಡಿ ಮತ್ತು ಸೈಬರ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು.
ಕೊಣನೂರಿನಲ್ಲಿ ಬೃಹತ್‌ ಉದ್ಯೋಗ ಮೇಳ
ಅರಕಲಗೂಡು ತಾಲೂಕಿನ ಕೊಣನೂರು ಬಿಎಂಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಪ್ರಥಮ ಬಾರಿಗೆ ಬೃಹತ್ ಉದ್ಯೋಗ ಮೇಳವನ್ನು ಫೆ.22ರಂದು ಹಮ್ಮಿಕೊಳ್ಳಲಾಗಿದೆ. ತಾಲೂಕು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ನಿರುದ್ಯೋಗಿ ಯುವಕ, ಯುವತಿಯರು, ಮಹಿಳೆಯರು, ಪುರುಷರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕೆಂದು ಶಾಸಕ ಎ.ಮಂಜು ಮನವಿ ಮಾಡಿದರು.
ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯಿಂದ ಹೆಣ್ಣುಮಕ್ಕಳ ಸಂಖ್ಯೆ ಏರಿಕೆ
ಬೇಟಿ ಬಚಾವೊ, ಬೇಟಿ ಪಡಾವೊ ಯೋಜನೆ ಜಾರಿಯಾದ ಬಳಿಕ ಲಿಂಗಾನುಪಾತದಲ್ಲಿ ಏರಿಕೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಕುಮಾರ್ ತಿಳಿಸಿದರು. ಬೇಟಿ ಬಚಾವೊ, ಬೇಟಿ ಪಡಾವೊ ಯೋಜನೆ 10 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಾಲ್ಯವಿವಾಹ ನಿಷೇಧಕಾಯ್ದೆ ಮತ್ತು ಪೋಕ್ಸೊ ಕಾಯ್ದೆಗಳ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಾಗ ಪೋಕ್ಸೋ ಕಾಯ್ದೆ ಮೂಲಕ ಕಠಿಣ ಶಿಕ್ಷೆ ವಿಧಿಸಲು ಕಾನೂನು ರೂಪಿಸಲಾಗಿದೆ ಎಂದು ತಿಳಿಸಿ ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ವಿವರಿಸಿದರು.
ಟಿಪ್ಪರ್‌ ಡಿಕ್ಕಿಯಾಗಿ ಹನಿಕೆ ಗ್ರಾಪಂ ಅಧ್ಯಕ್ಷೆ ಸಾವು
ಪಾದಾಚಾರಿ ಮಹಿಳೆಗೆ ಟಿಪ್ಪರ್ ಲಾರಿವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಪಟ್ಟಣದ ನೆಹರೂ ನಗರದಲ್ಲಿ ಬುಧವಾರ ನಡೆದಿದೆ.ಪಟ್ಟಣದ ಮುಖ್ಯ ರಸ್ತೆಯಲ್ಲಿ ತಾಲೂಕಿನ ಹನಿಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯೂ ಆಗಿರುವ ಮಲ್ಲಿಗಮ್ಮ (58) ಎಂಬ ಮಹಿಳೆ ಬ್ಯಾಂಕಿನ ವ್ಯವಹಾರ ಮುಗಿಸಿಕೊಂಡು ತನ್ನ ಪತಿ ಮತ್ತು ಮೊಮ್ಮಗನೊಂದಿಗೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ನೆಹರು ನಗರದ ಮಾರ್ಗವಾಗಿ ತೆರಳುವ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಟಿಪ್ಪರ್ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅರಣ್ಯ ಇಲಾಖೆ ಜಮೀನನ್ನು ಅಕ್ರಮ ಖಾತೆ ಮಾಡಿದವರ ಮೇಲೆ ಕ್ರಮವಾಗಲಿ
ಅರಣ್ಯ ಇಲಾಖೆಯ ಹೆಸರಿನಲ್ಲಿರುವ ಜಮೀನನ್ನು ಅಕ್ರಮವಾಗಿ ಮಂಜೂರು ಮಾಡಿರುವ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎ. ಮಂಜು ಒತ್ತಾಯಿಸಿದರು. ಅಕ್ರಮವಾಗಿ ಮಂಜೂರು ಮಾಡಿರುವ ಜಮೀನನ್ನು ಕೂಡಲೇ ಅರಣ್ಯ ಇಲಾಖೆಯವರು ತಮ್ಮ ಸ್ವಾಧೀನಕ್ಕೆ ತೆಗೆದುಕೊಳ್ಳಬೇಕು. ಕಂದಾಯ ಮಂತ್ರಿಗಳು, ಸರ್ಕಾರ ಅವ್ಯವಹಾರ ಮಾಡಿರುವ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved