• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಪಹಣಿಯಲ್ಲಿ ವಕ್ಫ್‌ ಹೆಸರು ಬರಕೂಡದು: ಕಿಸಾನ್‌ ಸಂಘದ ಅಧ್ಯಕ್ಷ ಹಾಡ್ಯ ರಮೇಶ್ ರಾಜು
ರೈತರ ಆಸ್ತಿಗಳ ಮೇಲೆ ವಕ್ಫ್ ಹೆಸರು ಬಾರದಂತೆ ನೋಡಿಕೊಳ್ಳಬೇಕು. ತಪ್ಪಿದಲ್ಲಿ ಭಾರತೀಯ ಕಿಸಾನ್ ಸಂಘದ ರೈತರು ಸಾರ್ವಜನಿಕರ ಜೊತೆಗೂಡಿ ಅನಿರ್ದಿಷ್ಟಾವಧಿ ಧರಣಿ ಮಾಡಬೇಕಾಗುತ್ತದೆ ಎಂದು ದಕ್ಷಿಣ ಪ್ರಾಂತ್ಯ ಕಿಸಾನ್ ಸಂಘದ ಅಧ್ಯಕ್ಷ ಹಾಡ್ಯ ರಮೇಶ್ ರಾಜು ಎಚ್ಚರಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಕ್ಫ್ ಬಗ್ಗೆ ಸಿಎಂ ನಡೆ ಚುನಾವಣಾ ತಂತ್ರ: ಬಿಜೆಪಿ ಮಂಡಲ ಸಂಚಾಲಕ ಲೋಕೇಶ್
ರೈತರ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂಬುದಾಗಿ ನಮೂದು ಮಾಡದಂತೆ ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಮುಂದಿನ ದಿನಗಳಲ್ಲಿ ರೈತರಿಗೆ ಇದು ಮರಣ ಶಾಸನವಾಗಿಯೇ ಮುಂದುವರಿಯಲಿದೆ ಎಂದು ಬಿಜೆಪಿ ಮಂಡಲ ಸಂಚಾಲಕ ಲೋಕೇಶ್ ತಿಳಿಸಿದರು. ಅರಕಲಗೂಡು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಕ್ಫ್ ಹೆಸರಲ್ಲಿ ಸರ್ಕಾರದ ಜನರ ಆಸ್ತಿ ವಶ: ಬಿಜೆಪಿಯ ಉಮಾ ರವಿಪ್ರಕಾಶ್
ರಾಜ್ಯ ಕಾಂಗ್ರೆಸ್ ಸರ್ಕಾರವು ವಕ್ಫ್ ಮಂಡಳಿ ಹೆಸರಿನಲ್ಲಿ ಆಸ್ತಿ ವಶಪಡಿಸಿಕೊಳ್ಳುತ್ತಿರುವುದು ಜನಸಾಮಾನ್ಯರಿಗೆ ಹಿಂಸೆಯಾಗಿದೆ. ತಾಲೂಕು ಬಿಜೆಪಿ ವತಿಯಿಂದ ಇದನ್ನು ಖಂಡಿಸುತ್ತದೆ ಎಂದು ಆಲೂರು- ಕಟ್ಟಾಯ ಮಂಡಲ ಬಿಜೆಪಿ ಅಧ್ಯಕ್ಷೆ ಉಮಾ ರವಿಪ್ರಕಾಶ್ ತಿಳಿಸಿದರು. ಆಲೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಕ್ಫ್‌ನಿಂದ ಕಾಂಗ್ರೆಸ್ ರಾಜ್ಯದಲ್ಲಿ ಶಾಂತಿ ಕದಡುತ್ತಿದೆ: ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್
ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ವಕ್ಫ್ ಮಂಡಳಿಯ ಮೂಲಕ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಆರೋಪಿಸಿದರು. ಸಕಲೇಶಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸರ್ಕಾರಿ ಶಾಲೆಯ ಆಸ್ತಿಗಳಲ್ಲಿ ವಕ್ಫ್‌ ಹೆಸರು: ಶಾಸಕ ಎಚ್.ಕೆ.ಸುರೇಶ್
ಸರ್ಕಾರಿ ಶಾಲೆ ಆಸ್ತಿ ಸರ್ವೆ ನಂ ೪೩೫ರಲ್ಲಿ ವಕ್ಫ್ ಹೆಸರು ಸೇರ್ಪಡೆ ಕಂಡು ಬಂದಿರುವುದರಿಂದ ಬೇಲೂರು ತಾಲೂಕ ಮಟ್ಟದಲ್ಲಿ ವಕ್ಫ್‌ ಬೋರ್ಡ್ ವಿರುದ್ಧ ಆಕ್ರೋಶ, ಭಾರಿ ಪ್ರತಿಭಟನೆ ನಡೆಯಲಿದೆ ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಹಳೆಬೀಡಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕನ್ನಡದ ತೇರಾದ ಕೆಎಸ್‌ಆರ್‌ಟಿಸಿ ಬಸ್‌
ಬೇಲೂರು ಸಾರಿಗೆ ಘಟಕದ ವತಿಯಿಂದ ಬೇಲೂರು ‌ಬಾಣಾವಾರ ನಡುವೆ ಚಲಿಸುವ ಬಸ್ಸನ್ನು ಸಂಪೂರ್ಣವಾಗಿ ಕನ್ನಡ ಧ್ವಜ, ಬಾವುಟ, ಸಾಹಿತಿಗಳು, ನಟರು, ಪ್ರೇಕ್ಷಣೀಯ ಸ್ಥಳಗಳ ಚಿತ್ರಗಳಿಂದ ಅಲಂಕರಿಸಲಾಗಿದೆ. ಒಂದೊಂದನ್ನೇ ಓದುತ್ತಾ ಹೋದರೆ ಕರ್ನಾಟಕದ ಇತಿಹಾಸ ನೆನಪಿಗೆ ಬರುತ್ತದೆ. ಕನ್ನಡ ರಥದಲ್ಲಿ ರಾಜ್ಯೋತ್ಸವ ಪುರಸ್ಕೃತ ಸಾಹಿತಿಗಳು, ಕನ್ನಡದ ಮೇರು ನಟರು, ರಾಜರು, ಹಾಸನ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ಮಾಹಿತಿಯಿದೆ.ಇಡೀ ಬಸ್‌ನ ಒಂದೊಂದು ಸೀಟಿನಲ್ಲೂ ಕನ್ನಡದದ ಬಾವುಟ. ಕನ್ನಡದ ವಾತಾವರಣ ಸೃಷ್ಟಿಸುವ ಬಲೂನುಗಳ ಅಲಂಕಾರ ಗಮನ ಸೆಳೆಯುತ್ತದೆ.
ಎಂ ಶಿವರ ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾಗಿ ಶಿವರಾಜು ಅವಿರೋಧ ಆಯ್ಕೆ
ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ ಎಂ. ಶಿವರ ಗ್ರಾಮಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಎಸ್.ಎಸ್. ಶಿವರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಇದ್ದ ತಿಮ್ಮಪ್ಪಗೌಡರು ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಶಿವರಾಜು ಆಯ್ಕೆಯಾಗಿದ್ದು, ಗ್ರಾಮಪಂಚಾಯಿತಿಯ ೧೪ ಸದಸ್ಯರಲ್ಲಿ ೧೩ ಜನ ಸದಸ್ಯರು ಹಾಜರಿದ್ದರು. ಚುನಾವಣಾಧಿಕಾರಿಯಾಗಿ ಗಿರೀಶ್ ಎ. ಡಿ. ಕರ್ತವ್ಯ ನಿರ್ವಹಿಸಿದರು.
ನಾಳೆ ಹಾಸನಾಂಬೆಯ ಅಕ್ಕ ಕೆಂಚಾಂಬೆಯ ಜಾತ್ರೆ
ಕೆಂಚಾಂಬ ದೇವಿಯ ಜಾತ್ರೆಗೆ ಹಾಸನಾಂಬೆಯ ದರ್ಶನ ಮುಗಿದ ಮರುದಿನದಿಂದಲೇ ಧಾರ್ಮಿಕ ಕಾರ್ಯಗಳು ಆರಂಭವಾಗುವುದು ಎರಡೂ ಪುಣ್ಯಕ್ಷೇತ್ರಗಳ ನಡುವಿನ ಒಡನಾಟಕ್ಕೆ ಸಾಕ್ಷಿಯಾಗಿದ್ದು, ಹಾಸನಾಂಬೆ ಉತ್ಸವ ಮುಗಿದ ನಂತರ ಹಾಸನದಲ್ಲಿ ನೆಲೆಸಿರುವ ಸಹೋದರಿಯರು ಹಿರಿಯ ಸಹೋದರಿ ಕ್ಷೇತ್ರಕ್ಕೆ ವಿಹಾರ ಹೊರಡುತ್ತಾರೆಂಬ ಪ್ರತೀತಿ ಇದೆ. ಹಾಸನಾಂಬೆಯ ಹಿರಿಯ ಸಹೋದರಿ ಕೆಂಚಾಂಬದೇವಿಗೂ ಹಾಸನಾಂಬೆಯಷ್ಟೆ ಐತಿಹಾಸಿಕ ಹಿನ್ನೆಲೆ ಇದ್ದು ನವೆಂಬರ್ ೬ರಂದು ದೇವಿಯ ಜಾತ್ರೆ ನಡೆಯಲಿದೆ.
ಶ್ರೀ ಭೀಷ್ಟಮ್ಮನವರ ಜಾತ್ರಾ ಮಹೋತ್ಸವ
ವಿಷ್ಣುಸಮುದ್ರ ಕೆರೆಯ ಏರಿ ದಡದಲ್ಲಿರುವ ಶ್ರೀ ಭೀಷ್ಟಮ್ಮನವರ ಜಾತ್ರಾ ಮಹೋತ್ಸವನ್ನು ಬಿಟ್ರುವಳ್ಳಿ ಗ್ರಾಮಸ್ಥರ ವತಿಯಿಂದ ನಡೆಸಿ ಬಂದ ಸಾವಿರಾರು ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು. ಶ್ರೀ ಭೀಷ್ಟಮ್ಮನವರನ್ನು ವಿಷ್ಣುಸಮುದ್ರ ಕೆರೆ ಏರಿಯ ಮೇಲೆ ಪ್ರತಿಷ್ಠಾಪಿಸಿದ್ದು, ಪ್ರತಿ ವರ್ಷ ದೀಪಾವಳಿ ಹಬ್ಬದ ತರುವಾಯ ಜಾತ್ರಾ ಮಹೋತ್ಸವ ನಡೆಸಲಾಗುತ್ತದೆ. ಗಣಪತಿ ಪೂಜೆ, ಗಂಗಾಪೂಜೆ, ಮಹಾಮಂಗಳಾರತಿ ನಡೆಸಿದ ಬಳಿಕ ಉತ್ಸವಮೂರ್ತಿ ಸನ್ನಿಧಾನದಲ್ಲಿ ಜಾತ್ರೆಯನ್ನು ನಡೆಸುತ್ತಾ ಬಂದ ಭಕ್ತರಿಗೆ ಶ್ರೀ ಭೀಷ್ಟಮ್ಮನವರ ಚಾರಿಟಬಲ್ ಟ್ರಸ್ಟ್ ಬಿಟ್ರುವಳ್ಳಿ ಮತ್ತು ಭಕ್ತರ ಸಹಕಾರದಿಂದ ಅನ್ನ ದಾಸೋಹ ವ್ಯವಸ್ಥೆ ಮಾಡಲಾಯಿತು.
ಜಾನಪದ ಪರಿಷತ್ತಿನಿಂದ ಸಂಗೀತ ಸಾಧಕರಿಗೆ ಸನ್ಮಾನ
ಹಳೇಬೀಡಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ನಡೆದ ಬೇಲೂರು ತಾಲೂಕು ಜಾನಪದ ಪರಿಷತ್ತಿನಿಂದ ಸಂಗೀತಾ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಐಶ್ವರ್ಯ ಜಾನಪದ ಸೇರಿದಂತೆ ಸಂಗೀತದ ವಿವಿಧ ಪ್ರಕಾರದಲ್ಲಿ ರಾಜ್ಯ ಮಟ್ಟದ ಸಾಧನೆ ಮಾಡಿದ್ದಾಳೆ. ಸರಿಗಮಪ ಕಾರ್ಯಕ್ರಮದ ಮೆಟ್ಟಿಲೇರಿ, ಸಂಗೀತ ದಿಗ್ಗಜ ಹಂಸಲೇಖ ಅವರ ಮೆಚ್ಚುಗೆ ಪಡೆದಿದ್ದಾರೆ. ಬೇಲೂರು ತಾಲೂಕು ಜಾನಪದ ಪರಿಷತ್ತಿನವರು ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಉಪ ಪ್ರಾಂಶುಪಾಲ ಮುಳ್ಳಯ್ಯ ಹೇಳಿದರು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 414
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved