• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಷ್ಪಗಿರಿ ಶ್ರೀಗಳಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಇಲ್ಲಿಗೆ ಸಮೀಪದ ಪುಷ್ಪಗಿರಿಯಲ್ಲಿ ನಡೆದ ಶ್ರೀ ಕರಿಬಸವ ಅಜ್ಜಯ್ಯ ಸ್ವಾಮಿಯವರ ದೇವಾಲಯದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಹುಲ್ಲಳ್ಳಿ ಸುರೇಶ್ ಹಾಗೂ ತಾಲೂಕು ದಂಡಾಧಿಕಾರಿ ಮಮತಾ ಅವರು ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಸೋಮಶೇಖರ ಸ್ವಾಮೀಜಿಯವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡುತ್ತ,ತಾಲೂಕು ಆಡಳಿತ ಶ್ರೀ ಮಠದ ಹಲವಾರು ಸಾಮಾಜಿಕ ಸೇವೆಗಳನ್ನು ಗುರುತಿಸಿ ಜಿಲ್ಲಾ ಮತ್ತು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿರುವುದಕ್ಕೆ ಆಭಾರಿಯಾಗಿರುತ್ತೇನೆ ಎಂದರು.
ಕನ್ನಡ ಭಾಷೆಗೆ ಹೆಚ್ಚು ಆದ್ಯತೆ ನೀಡಿ
ಹಳೇಬೀಡಿನ ಸರ್ಕಾರಿ ಕೆ.ಪಿ.ಎಸ್ ಶಾಲೆಯ ಆವರಣದಲ್ಲಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಕನ್ನಡ ಧ್ವಜವನ್ನು ಹಾರಿಸಲಾಯಿತು.ಈ ದ್ವಾರಸಮುದ್ರದಲ್ಲಿ ಸಾಂಸ್ಕೃತಿಕ ಮತ್ತು ಸಾಹಿತ್ಯಗಳಿಗೆ ಅಪಾರ ಪ್ರಾಮುಖ್ಯತೆ ನೀಡಿದ ಹೊಯ್ಸಳರ ರಾಜರು ಎಂದು ಇತಿಹಾಸ ತಿಳಿಸಿದೆ ಎಂದು ಸರ್ಕಾರಿ ಕೆಪಿಎಸ್ ಶಾಲೆಯ ಅಧ್ಯಕ್ಷ ಬಿ. ಎಸ್. ಸೋಮಶೇಖರ ತಿಳಿಸಿದರು.
ವಿದ್ಯಾರ್ಥಿಗಳು ಅಂಕಗಳಿಗೆ ಸೀಮಿತವಾಗದಿರಿ ನೈತಿಕ ಶಿಕ್ಷಣ ಅಗತ್ಯ
ವೈಜ್ಞಾನಿಕವಾಗಿ ದಿನೇ ದಿನೆ ಅಭಿವೃದ್ಧಿ ಹೊಂದುತ್ತಿದ್ದೇವೆ ಆದರೂ ಶಿಕ್ಷಣ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಲ್ಲಿ ಸಿಲೆಬಸ್ ಮುಗಿಸುವುದು ಮತ್ತು ಅಂಕಕ್ಕೆ ಸೀಮಿತವಾಗದೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಶಾಲಾ ಕಾಲೇಜುಗಳು ಆದ್ಯತೆ ಕೊಡಬೇಕೆಂದು ಮಾಜಿ ಅಡ್ವೋಕೇಟ್ ಜನರಲ್ ಮತ್ತು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರು ಚಂದ್ರಶೇಖರ ಭಾರತೀಯ ವಿದ್ಯಾಸಂಸ್ಥೆಯ ಅಧ್ಯಕ್ಷರು ಆದ ಅಶೋಕ್ ಹಾರನಹಳ್ಳಿ ಅಭಿಪ್ರಾಯಪಟ್ಟರು.
ದುರ್ಬಲರಿಗೆ ಕಂದಾಯ ಇಲಾಖೆ ಸೇವೆ ಗಗನಕುಸುಮ
ಕಂದಾಯ ಇಲಾಖೆಗೆ ಒಳಪಡುವ ಸೇವೆಗಳು ಸಾರ್ವಜನಿಕರಿಗೆ ಒಂದೇ ಸೂರಿನಡಿ ಸಿಗಬೇಕು ಎಂಬ ಉದ್ದೇಶದಿಂದ ಈ ಹಿಂದೆ ಇದ್ದ ಶಾಸಕ ಎಚ್.ಕೆ ಕುಮಾರಸ್ವಾಮಿ ಅವಧಿಯಲ್ಲಿ ನೆಲ ಮತ್ತು 2 ಅಂತಸ್ತುಗಳು ಒಳಗೊಂಡಂತೆ ಸುಮಾರು 8 ಕೋಟಿ ರು.ವೆಚ್ಚದ ಮೂರು ಅಂತಸ್ತಿನ ಕಟ್ಟಡವನ್ನು ಸರ್ಕಾರ ಮಂಜೂರು ಮಾಡಿತ್ತು. ಈ ಕಟ್ಟಡ ಕಾಮಗಾರಿಯು ಈಗ ಮುಕ್ತಾಯಗೊಂಡು ಪ್ರಸ್ತುತ ಸಾರ್ವಜನಿಕ ಸೇವೆಗೆ ಮುಕ್ತವಾಗಿದೆ. ಆದರೆ ತಾಲೂಕಿನಲ್ಲಿ ಕಂದಾಯ ಇಲಾಖೆ ಅಡಿಯಲ್ಲಿ ಬರುವ ಸೇವೆಗಳು ಅಂಗವಿಕಲರು ಮತ್ತು ವೃದ್ಧರಿಗೆ ಕೈಗೆಟುಕದೆ ಗಗನ ಕುಸುಮವಾಗಿರುವುದು ವಿಪರ್ಯಾಸವೆ ಸರಿ.
ಕಲೋತ್ಸವ ಸ್ಪರ್ಧೆಯಲ್ಲಿ ಗಮನಾರ್ಹ ಸಾಧನೆ
ಅರೇಹಳ್ಳಿಯ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜನೆ ಮಾಡಲಾಗಿದ್ದ 2024-25ನೇ ಸಾಲಿನ ಕಲೋತ್ಸವ ಸ್ಪರ್ಧೆಯಲ್ಲಿ ಅರೇಹಳ್ಳಿಯ ಅಂಬೇಡ್ಕರ್‌ ನಗರದಲ್ಲಿರುವ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ನಾನಾ ಸ್ಥಾನಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದು, ಜಾನಪದ ನೃತ್ಯ 6 , ಕ್ವಿಜ್ 2, ಕವ್ವಾಲಿ 6 ವಿದ್ಯಾರ್ಥಿಗಳು ಸೇರಿದಂತೆ ವೈಯಕ್ತಿಕ ಹಾಗೂ ಗುಂಪು ವಿಭಾಗಗಳಲ್ಲಿ ಭಾಗವಹಿಸಿ ಒಟ್ಟು 27 ಪದಕಗಳನ್ನು ವಿದ್ಯಾರ್ಥಿಗಳು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಮಾಧ್ಯಮದವರ ಮೇಲೆ ತುಮಕೂರು ಎಎಸ್ಪಿ ಖಾದರ್‌ ಹಲ್ಲೆ
ಕಾರ್ಯನಿರತ ಪತ್ರಕರ್ತರ ಮೇಲೆ ಗೂಂಡಾ ವರ್ತನೆ ತೋರಿಸಿ ಹಲ್ಲೆ ಮಾಡಿದ ತುಮಕೂರಿನ ಎಎಸ್ಪಿ ಅಬ್ದುಲ್ ಖಾದರ್‌ ಅವರನ್ನು ಹಾಸನಾಂಬೆ ಸೇವೆಯಿಂದ ರಿಲೀವ್ ಮಾಡಿದಲ್ಲದೇ, ಎಲ್ಲಾ ಪತ್ರಕರ್ತರ ಸಮ್ಮುಖದಲ್ಲಿ ಕ್ಷಮೆ ಯಾಚಿಸಿದ ಪ್ರಸಂಗ ಶುಕ್ರವಾರ ಮಧ್ಯಾಹ್ನ ನಡೆದಿದೆ. ಐಜಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೇರಿದಂತೆ ಪೊಲೀಸ್ ಅಧಿಕಾರಿಗಳ ಸಮಕ್ಷಮದಲ್ಲಿ ಪತ್ರಕರ್ತರ ಜೊತೆ ಸಭೆ ನಡೆಸಿ ರಾಜಿ ಮಾಡಿದಲ್ಲದೇ ಹಲ್ಲೆ ಮಾಡಿದ ಪೊಲೀಸ್ ಅಬ್ದುಲ್‌ರಿಂದ ಕ್ಷಮೆ ಕೇಳಿಸಿ ಹಾಸನಾಂಬೆ ದೇವಾಲಯದ ಕರ್ತವ್ಯದಿಂದ ವಾಪಸ್ ಕಳುಹಿಸಲಾಯಿತು.
ಗಾಣಿಗರ ಯುವಕ ಸಂಘದಿಂದ ಕನ್ನಡರಾಜ್ಯೋತ್ಸವ
ಗಾಣಿಗರ ಯುವಕ ಸಂಘದಿಂದ 69ನೇ ಕನ್ನಡ ರಾಜ್ಯೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಇಲ್ಲಿನ ಗಾಣಿಗರ ಬೀದಿಯಲ್ಲಿರುವ ಧ್ವಜಸ್ತಂಭದಲ್ಲಿ ಕನ್ನಡ ಧ್ವಜ ಹಾರಿಸುವ ಮೂಲಕ ಜನಾಂಗದ ಯುವಕರು ನಾಡು ನುಡಿಯ ಬಗ್ಗೆ ಗೌರವ ಸಮರ್ಪಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಕೇವಲ ಕನ್ನಡ ರಾಜ್ಯೋತ್ಸವ ದಿನದಂದು ಕಾರ್ಯಕ್ರಮ ರೂಪಿಸದೆ ನಾಡು, ನುಡಿ, ಜಲ, ಭಾಷೆಗಾಗಿ ವರ್ಷಪೂರ್ತಿ ಕನ್ನಡ ಸೇವೆಗಾಗಿ ಮುಡಿಪಾಗಿಟ್ಟಗ ಮಾತ್ರ ರಾಜ್ಯೋತ್ಸವ ಅರ್ಥಪೂರ್ಣವಾಗಿರುತ್ತದೆ ಎಂದರು.
ರಾಜ್ಯೋತ್ಸವಕ್ಕೆ ಉಚಿತ ಟ್ರಾಕ್ಟರ್ ವಿತರಣೆ
ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ವಿವಿಧ ಶಾಲೆಗಳ ಸ್ತಬ್ಧಚಿತ್ರ ಅಳವಡಿಕೆಗೆ ೧೪ ಟ್ರ್ಯಾಕ್ಟರ್ ಅನ್ನು ಟ್ರ್ಯಾಕ್ಟರ್ ಮಾಲೀಕರ ಸಂಘದವರು ಉಚಿತವಾಗಿ ನೀಡಿದರು.ಹಿಂದೆ ರೈತರು ನೀಡುವ ಟ್ರ್ಯಾಕ್ಟರ್ ಒಂದಕ್ಕೆ ೩೦೦ ರು.ನಿಂದ ೫೦೦ ರು.ಗಳವರಗೆ ಡೀಸೆಲ್ ವೆಚ್ಚ ಎಂದು ನೀಡಲಾಗುತ್ತಿತ್ತು. ಚಾಲಕರಿಗೆ ಉಪಹಾರದ ವ್ಯವಸ್ಥೆಯೂ ಇತ್ತು. ಈ ವರ್ಷ ತಹಸೀಲ್ದಾರ್ ಹಾಗೂ ಆರ್‌ಟಿಒ ಅಧಿಕಾರಿಗಳ ಮನವಿಯಂತೆ ಮಾಲೀಕರು ಉಚಿತವಾಗಿ ಟ್ರ್ಯಾಕ್ಟರ್ ನೀಡಿ ಕನ್ನಡ ಪ್ರೇಮ ಮೆರೆದಿದ್ದಾರೆ.
ಪಂಚ ಗ್ಯಾರಂಟಿಗಳು ಪಂಚರ್ ಆಗಿವೆ
ಪಂಚ ಗ್ಯಾರಂಟಿಗಳು ಪಂಚರ್ ಆಗಿ ಚುನಾವಣೆ ಪೂರ್ವದಲ್ಲಿ ಕೊಟ್ಟ ಪಂಚ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ. ನಿರುದ್ಯೋಗಿ ಯುವಕರಿಗೆ ಮೂರು ಸಾವಿರ ಕೊಡುತ್ತೇವೆ ಎಂದು ಹೇಳಿ ಇವತ್ತಿನವರೆಗೂ ಮೂರು ಸಾವಿರ ಬರಲಿಲ್ಲ, ಮೂರು ನಾಮ ಹಾಕಿದ್ದಾರೆ. ಪ್ರತಿ ಬಿಪಿಎಲ್ ಕುಟುಂಬದ ಯಜಮಾನಿಗೆ 2 ಸಾವಿರ ಹಣ ಕೊಡುತ್ತೇವೆ ಎಂದು ಹೇಳಿದರು. ಆದರೆ ಈಗ್ಗೆ 3 ತಿಂಗಳಿನಿಂದ ಈ ಹಣವೂ ಬರುತ್ತಿಲ್ಲ ಎಂದು ಸಿ ಟಿ ರವಿ ಹೇಳಿದರು.
ಕನ್ನಡ ಮಾತನಾಡಲು ಹಿಂಜರಿಯುವ ಕನ್ನಡಿಗರೇ ಕನ್ನಡಕ್ಕೆ ಅಪಾಯಕಾರಿ
ಇತರೆ ಭಾಷೆಗಳ ಬಗ್ಗೆ ವ್ಯಾಮೋಹ ಬೇಡ. ಆದರೆ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು. ದೇಶದಲ್ಲಿರುವ ಹಲವಾರು ದೇವಾಲಯಗಳನ್ನು ನಿರ್ಮಾಣ ಮಾಡಿರುವವರು ಕನ್ನಡಿಗರು. ಕನ್ನಡ ನಾಡಿನಲ್ಲಿ ಹುಟ್ಟಿ ಕನ್ನಡ ಭಾಷೆ ಗೊತ್ತಿದ್ದರೂ ಮಾತನಾಡಲು ಹಿಂಜರಿಯುವವರಿಂದ ಭಾಷೆ ಉಳಿಯಲು ತೊಡಕಾಗುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ವಿಷಾದ ವ್ಯಕ್ತಪಡಿಸಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 414
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved