• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಹೆಚ್ಚು
ಅರ್ಥಶಾಸ್ತ್ರ ವಿಷಯವನ್ನು ಯಾರು ಆಯ್ಕೆ ಮಾಡಿಕೊಂಡಿದ್ದಾರೆ ಅಂತಹ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಗಿದ ಮೇಲೆ ಉತ್ತಮವಾದ ನೌಕರಿಯನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಜಿ ಕವಿತಾ ತಿಳಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ. ವೈ.ಡಿ. ರತ್ನ ಅವರು ಮಾತನಾಡಿ, ಭಾರತದ ಸಾರ್ವಜನಿಕ ಹಣಕಾಸಿನ ಇತ್ತೀಚಿನ ಪ್ರವೃತ್ತಿಗಳು ಈ ಎಂಬ ವಿಷಯವನ್ನು ವಿಸ್ತರಿಸಿ ಜಗತ್ತಿನಲ್ಲಿ ೪ನೇ ಬೃಹತ್ ರಾಷ್ಟ್ರವಾಗಿ ಹೊರಹೊಮ್ಮಿದ್ದೇವೆ. ಸಾರ್ವಜನಿಕ ಹಣಕಾಸು ಮುಖ್ಯ ಪಾತ್ರ ವಹಿಸುತ್ತದೆ ಎಂದು ಪ್ರಾಸ್ತಾವಿಕ ನುಡಿಯನ್ನಾಡಿದರು.
ಒಳ ಮೀಸಲಾತಿ ಅನುಷ್ಠಾನಕ್ಕಾಗಿ ಹೋರಾಟ
ಒಳಮೀಸಲಾತಿಯನ್ನು ಜಾರಿ ಮಾಡುವುದರಿಂದ ಎಲ್ಲಾ ಶೋಷಿತ ಸಮುದಾಯಗಳಿಗೆ ಅನುಕೂಲವಾಗುವ ಕಾರಣದಿಂದ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಜೂನ್ ೯ ರಂದು ನಡೆಯುವ ಕ್ರಾಂತಿಕಾರಿ ಹೋರಾಟದಲ್ಲಿ ಶೋಷಿತ ಸಮುದಾಯದವರು ಹಾಗೂ ಹಿತೈಷಿಗಳು ಭಾಗಿಯಾಗುವಂತೆ ಕ್ರಾಂತಿಕಾರಿ ಹೋರಾಟ ರಥದ ನೇತೃತ್ವ ವಹಿಸಿರುವ ಬಿ.ಆರ್‌. ಭಾಸ್ಕರ್‌ ಪ್ರಸಾದ್ ವಿನಂತಿಸಿದರು.
ಅರಸೀಕೆರೆ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ
ಇತ್ತೀಚೆಗೆ ಸರಿಯಾದ ಸಂಸ್ಕಾರವಿಲ್ಲದೆ ಗುರುಹಿರಿಯರಲ್ಲಿ ಗೌರವ, ತಂದೆ ತಾಯಿಗಳ ಪೋಷಣೆ ಲೋಪದಿಂದ ವೃದ್ಧಾಶ್ರಮಗಳು ತಲೆ ಎತ್ತುತ್ತಿವೆ, ಇದೊಂದು ವಿಪರ್ಯಾಸದ ಸಂಗತಿ ಎಂದರು. ನೂತನ ಪಟ್ಟಾಧಿಕಾರಿಗಳಾದ ಶ್ರೀ ತೇಜೇಶ್ವರ ಮಹಾಸ್ವಾಮಿಗಳು ಬೆಳೆಯುವ ಪೈರು ಮೊಳಕೆಯಲ್ಲಿ ಎಂಬಂತೆ ಭಕ್ತಾದಿಗಳನ್ನು ಮಠದ ಕಡೆ ಗಮನ ಸೆಳೆದು ಸಮಾಜದಲ್ಲಿ ಸಮಾಜಮುಖಿಯಾಗಿ ಬೆಳೆಯುವ ಲಕ್ಷಣಗಳನ್ನು ಅವರಲ್ಲಿ ಕಾಣುತ್ತಿದ್ದೇವೆ ಎಂದರು. ಪೋಷಕರು ಬಿಡುವಿನ ವೇಳೆ ಮಕ್ಕಳನ್ನು ಮಠಮಾನ್ಯಗಳಲ್ಲಿ ನಡೆಯುವ ಧಾರ್ಮಿಕ ಸಮಾರಂಭಗಳಿಗೆ ಕರೆತಂದು ಅವರನ್ನು ಸುಸಂಸ್ಕೃತರನ್ನಾಗಿ ಮಾಡುವ ಅಗತ್ಯವಿದೆ ಎಂದರು.
ದೇವಾಲಯಗಳು ನೆಮ್ಮದಿಯ ಕೇಂದ್ರಗಳು
ಶ್ರೀ ಚೌಡೇಶ್ವರಿ ಅಮ್ಮನವರ ನೂತನ ರಜತ ಕವಚ ಧಾರಣೆ ಹಾಗೂ ಬಂಟನ ದೇವಸ್ಥಾನ ಉದ್ಘಾಟನೆ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಪಂಚ ತಂತ್ರಜ್ಞಾನದಲ್ಲಿ ಎಷ್ಟು ಮುಂದುವರಿದರೂ ಧಾರ್ಮಿಕ ಭಾವನೆಗಳ ಆಧಾರದಲ್ಲಿ ನಡೆಯುತ್ತಿವೆ. ನಮ್ಮ ದೇಶದ ಜನರು ದೇವಸ್ಥಾನ ಮಠ ಮಂದಿರಗಳನ್ನು ಬಿಟ್ಟು ಇರಲು ಸಾಧ್ಯವೇ ಇಲ್ಲ. ಹೀಗಾಗಿ ದೇವಸ್ಥಾನದ ಉದ್ಘಾಟನೆ ವೇಳೆ ಪಾವಿತ್ರ್ಯತೆಗೆ ನೀಡುವ ಮಹತ್ವವನ್ನು ಮುಂದಿನ ದಿನಗಳಲ್ಲಿ ಕಾಪಾಡಿಕೊಂಡು ಹೋಗಬೇಕು. ಪ್ರತಿಕ್ಷಣ, ಪ್ರತಿನಿಮಿಷ ದೇವರ ಸ್ಮರಣೆ ಮಾಡುತ್ತಾ ನಮ್ಮ ಕರ್ತವ್ಯ ನಿರ್ವಹಿಸಿದರೆ ಯಾವ ಕಷ್ಟವೂ ಸುಳಿಯುವುದಿಲ್ಲ ಎಂದರು.
ನುಗ್ಗೇಹಳ್ಳಿಯ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ
ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ, ಶ್ರೀ ವೇಣುಗೋಪಾಲಸ್ವಾಮಿ, ಶ್ರೀ ಸೌಮ್ಯ ಚೆನ್ನಕೇಶವ ಸ್ವಾಮಿ ದೇವರುಗಳಿಗೆ ವಿಶೇಷ ಪೂಜೆ, ಅಭಿಷೇಕ, ಹೂವಿನ ಅಲಂಕಾರ ಸೇರಿದಂತೆ ವಿವಿಧ ಪೂಜೆಗಳು ನೆರವೇರಿದವು. ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಗ್ರಾಮದ ರಾಜಬೀದಿಗಳಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಅವರ ಉತ್ಸವ ನಡೆಯಿತು. ರಥವನ್ನು ಹೂವಿನ ಅಲಂಕಾರಗಳಿಂದ ಸಿದ್ಧಗೊಳಿಸಲಾಯಿತು. ಉತ್ಸವದ ನಂತರ ರಥದ ಸುತ್ತ ದೇವರನ್ನು ಪ್ರದಕ್ಷಿಣೆ ನಡೆಸಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ವಿಧಿವಿಧಾನಗಳು ನೆರವೇರಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತರು ಹಣ್ಣುದವನ ಅರ್ಪಿಸುವ ಮೂಲಕ ದೇವರಿಗೆ ಪೂಜೆ ಸಲ್ಲಿಸಿದರು.
ಮಳೆ ನಡುವೆಯೂ ಪತ್ರಕರ್ತರ ಕ್ರಿಕೆಟ್‌ ಪಂದ್ಯಾವಳಿ ಯಶಸ್ವಿ
,ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಆರೋಗ್ಯ ಮೇಳ, ಕ್ರೀಡಾಕೂಟದಂತಹ ಹಲವಾರು ಕಾರ್ಯಕ್ರಮವನ್ನು ಪತ್ರಕರ್ತರು ಮಾಡಿಕೊಂಡು ಬರುತ್ತಿರುವುದು ಉತ್ತಮವಾಗಿದೆ. ಯಾವಾಗಲೂ ಕೆಲಸದ ಒತ್ತಡದಲ್ಲಿರುವ ಪತ್ರಕರ್ತರು ಬಿಡುವಿನ ಸಮಯದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಏರ್ಪಡಿಸಿದ್ದಾರೆ. ಬೇರೆ ಜಿಲ್ಲೆಗಳಿಂದ ಕ್ರೀಡಾಪಟುಗಳು ಬಂದಿದ್ದು, ಪ್ರತಿವರ್ಷ ವಿಶೇಷವಾಗಿ ಇಂತಹ ಕ್ರೀಡೆಯನ್ನು ಹಮ್ಮಿಕೊಳುತ್ತಾ ಬಂದಿದ್ದಾರೆ ಎಂದರು.
ದಾಸಿಮಯ್ಯ ಕಾಯಕನಿಷ್ಠೆ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಿ
೧೦ನೇ ಶತಮಾನದಲ್ಲಿ ಪ್ರಥಮ ವಚನಕಾರರಾಗಿದ್ದ ದೇವರ ದಾಸಿಮಯ್ಯನವರು ಮಹಾನ್ ದೈವ ಭಕ್ತರಾಗಿದ್ದರು. ಜತೆಗೆ ಅವರ ಕಾಯಕ ನಿಷ್ಠೆ, ದಾಸೋಹ ನಿಷ್ಠೆ, ಕರ್ತವ್ಯದಲ್ಲಿ ಅವರು ತೋರುತ್ತಿದ್ದ ಶ್ರದ್ಧೆ ಹಾಗೂ ಆಸಕ್ತಿಯು ಎಲ್ಲರಿಗೂ ಆದರ್ಶವಾಗಿದೆ. ಮಹನೀಯರ ಆದರ್ಶಗಳ ಪಾಲನೆ ನಮ್ಮಗಳ ಕರ್ತವ್ಯವಾಗಿದೆ ಎಂದು ನಿವೃತ್ತ ಪ್ರಾಂಶುಪಾಲ ಪ್ರಭುಶಂಕರ್ ತಿಳಿಸಿದರು.
ಕನ್ನಡ ಸಾಹಿತ್ಯಕ್ಕೆ ಅಕ್ಕಮಹಾದೇವಿ ಕೊಡುಗೆ ಅಪಾರ
೧೨ನೇ ಶತಮಾನದಲ್ಲಿ ಅಕ್ಕಮಹಾದೇವಿ ಕನ್ನಡ ಸಾಹಿತ್ಯಕ್ಕೆ ತಮ್ಮದೆಯಾದ ಕೊಡುಗೆ ನೀಡಿದ್ದು ಅವರ ವಚನ ಸಾಹಿತ್ಯದಲ್ಲಿ ಜನಪರ ಮತ್ತು ಸಾಮಾಜಿಕ ಚಿಂತನೆಗಳು ಅಡಗಿದೆ ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಹೇಳಿದರು.
ಮಳೆ, ಬಿರುಗಾಳಿಗೆ ಹಾರಿ ಹೋದ ಮನೆ ಸೀಟ್‌
ತಾಲೂಕಿನ ಗಂಡಸಿ ಹೋಬಳಿ ವಡಗರಹಳ್ಳಿ ಗ್ರಾಮದಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿಗೆ ರೈತರ ಮನೆ ಹಾಗೂ ಹಸುವಿನ ಕೊಟ್ಟಿಗೆಯ ಸೀಟ್ ಹಾರಿ ಹೋಗಿದ್ದು, ಲಕ್ಷಾಂತರ ರು. ನಷ್ಟ ಸಂಭವಿಸಿದೆ. ಶುಕ್ರವಾರ ಸಂಜೆ ದಿಢೀರನೇ ಬಂದ ಮಳೆ ಹಾಗೂ ಬಿರುಗಾಳಿಗೆ ಮನೆಯ ಸೀಟ್‌ಗಳು, ರಾಗಿ, ಮನೆಯ ವಸ್ತುಗಳು, ಸೇರಿದಂತೆ ಕೊಟ್ಟಿಗೆಯಲ್ಲಿ ಕಟ್ಟು ಹಾಕಿದ ಹಸುಗಳಿಗೂ ಹಾನಿಯಾಗಿದೆ
ವಿಜೃಂಭಣೆಯಿಂದ ನಡೆದ ಕೋಡಮ್ಮದೇವಿ ರಥೋತ್ಸವ
ಗ್ರಾಮದೇವತೆ ಕೋಡಮ್ಮದೇವಿ ರಥೋತ್ಸವ ನಡೆಯಿತು. ಕೋಡಮ್ಮದೇವಿ ಮೂಲ ಸನ್ನಿಧಾನದಲ್ಲಿ ಶ್ರೀ ದೇವಿಗೆ ಜಾತ್ರಾ ಪ್ರಯುಕ್ತ ವಿಶೇಷ ಪೂಜೆ ಅಲಂಕಾರವನ್ನು ಏರ್ಪಡಿಸಲಾಗಿತ್ತು. ಯಳವಾರೆ ಹುಚ್ಚಮ್ಮದೇವಿ, ಕೋಡಮ್ಮದೇವಿ, ಧೂತರಾಯಸ್ವಾಮಿ, ವೀರಭದ್ರಸ್ವಾಮಿ ಉತ್ಸವವು ಕೋಡಿಮಠಕ್ಕೆ ತೆರಳಿ ಪೂಜೆ ಸಲ್ಲಿಸಿದ ನಂತರ ಜಾತ್ರಾ ಆವರಣದಲ್ಲಿ ಸಿಡಿಸೇವೆ ಯಲ್ಲಿ ನೂರಾರು ಮಹಿಳೆಯರು ಮಕ್ಕಳು ಸಿಡಿ ಕಂಬಸುತ್ತಿ ದೇವಿಯವರನ್ನು ಪ್ರಾರ್ಥಿಸಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 552
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved