• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹತ್ತಾರು ಎಕರೆ ಭತ್ತ ನಾಶ ಮಾಡಿದ ಕಾಡಾನೆಗಳು
ಭಾನುವಾರ ಮುಂಜಾನೆ ಸುಮಾರು ಇಪ್ಪತ್ತಕ್ಕೂ ಹೆಚ್ಚಿನ ಕಾಡಾನೆಗಳು ಇನ್ನೇನು ಕೆಲವೇ ದಿನಗಳಲ್ಲಿ ಕಟಾವು ಮಾಡಬೇಕಾಗಿದ್ದ ಭತ್ತದ ಬೆಳೆಯು ಕಾಡಾನೆ ದಾಳಿಗೆ ನಾಶಗೊಂಡಿದೆ. ಈ ಗ್ರಾಮದ ಈರಪ್ಪಗೌಡ, ರಾಮೇಗೌಡ,ದ್ಯಾವಪ್ಪಗೌಡ, ಆನಂದ, ಮಂಜುನಾಥ್ ಎಂಬುವವರ ರೈತರಿಗೆ ಸೇರಿದ ೯೯ ಸರ್ವೆ ನಂ.ನ ಗದ್ದೆಯಲ್ಲಿ ಸಮೃದ್ಧಿಯಾಗಿ ಬೆಳೆದಿದ್ದ ಪೈರು ಕಾಡಾನೆಗಳ ಓಡಾಟದಿಂದ ನೆಲ ಕಚ್ಚಿವೆ. ಹತ್ತಾರು ಎಕರೆ ಭತ್ತದ ಪೈರು ನಾಶಗೊಂಡು ರೈತರಿಗೆ ಲಕ್ಷಾಂತರ ರು. ನಷ್ಟ ಸಂಭವಿಸಿದೆ.
ಗ್ರಾಮಸಭೆಯಲ್ಲಿ ಮಂಡಿಸಿದ ಕಾಮಗಾರಿಗಳ ಲೆಕ್ಕದಲ್ಲಿ ಲೋಪ
ಗ್ರಾಮಸಭೆಯಲ್ಲಿ ಮಂಡಿಸಿದಂತಹ ಹಲವಾರು ಕಾಮಗಾರಿಗಳ ಲೆಕ್ಕದಲ್ಲಿ ಲೋಪವಿದೆ ಎಂದು ಸಾರ್ವಜನಿಕರು ಹಾಗೂ ಗ್ರಾಮ ಪಂಚಾಯಿತಿಯ ಕೆಲ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. 15ನೇ ಹಣಕಾಸು ಯೋಜನೆ ಅಡಿಯಲ್ಲಿ ಕೈಗೊಂಡಂತಹ ಕುಡಿಯುವ ನೀರು, ವಿದ್ಯುತ್ ದೀಪ, ಮೋಟಾರ್ ದುರಸ್ತಿ, ಚರಂಡಿ ನಿರ್ಮಾಣ ಹಾಗೂ ಹಲವಾರು ಪರಿಕರಗಳ ಖರೀದಿಯಲ್ಲಿ ಲೋಪವಿದ್ದು ಸದರಿ ಅಂಶಗಳ ಲೆಕ್ಕವನ್ನು ಪರಿಶೀಲನೆ ನಡೆಸುವಂತೆ ಹಾಗೂ ತನಿಖೆ ನಡೆಸುವಂತೆ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಆವರಣದಲ್ಲಿ ಕೆಲ ನಾಗರಿಕರು ಆಕ್ಷೇಪ ವ್ಯಕ್ತಪಡಿಸಿದರು.
ಗ್ಯಾರಂಟಿನೇ ನಮಗೆ ಉಪ ಚುನಾವಣೆಯಲ್ಲಿ ಶ್ರೀರಕ್ಷೆ : ಕೃಷಿ ಸಚಿವ ಚೆಲುವರಾಯ ಸ್ವಾಮಿ

ಹಾಸನಾಂಬೆ ದೇವಿ ದರ್ಶನದ ಬಳಿಕ ಉಪಚುನಾವಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೃಷಿ ಸಚಿವರು, ಚನ್ನಪಟ್ಟಣ ಚುನಾವಣೆ ಬಿಸಿ ಆರಂಭವಾಗಿದೆ. ದೀಪಾವಳಿ ಆದ ಮೇಲೆ ಇನ್ನೂ ವೇಗವಾಗುತ್ತದೆ. ಮೂರೂ ಕ್ಷೇತ್ರದಲ್ಲಿ ಗೆಲ್ಲುವಂತಹ ವಾತಾವರಣ ಇದೆ. 

ಸಾವಿರ ರುಪಾಯಿ ಕೊಟ್ಟು ಪಾಸ್‌ ಪಡೆದವರ ಹಿಡಿಶಾಪ
ಹಾಸನಾಂಬೆ ದರ್ಶನಕ್ಕಾಗಿ ಸೋಮವಾರ ರಾತ್ರಿಯಿಂದ ಭಕ್ತ ಸಾಗರವಲ್ಲ ಭಕ್ತರ ಸುನಾಮಿಯೇ ಹರಿದುಬಂದಿದೆ. ಇದರ ಪರಿಣಾಮವಾಗಿ ವಿವಿಐಪಿ ಪಾಸ್‌ಗಳ ಕ್ಯೂಗಳಲ್ಲಿ ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ. ಇನ್ನು ಒಬ್ಬರಿಗೆ ಒಂದು ಸಾವಿರ ರುಪಾಯಿ ಕೊಟ್ಟು ಕ್ಯೂನಲ್ಲಿ ನಿಂತವರದ್ದೂ ಅದೇ ಸ್ಥಿತಿಯಾಯಿತು. ಸೋಮವಾರ ರಾತ್ರಿಯಿಂದಲೇ ಲಕ್ಷ ಲಕ್ಷ ಭಕ್ತರು ದರ್ಶನಕ್ಕಾಗಿ ಆಗಮಿಸಿದ್ದರಿಂದ ಸೋಮವಾರ ರಾತ್ರಿಯೇ ಧರ್ಮದರ್ಶನದ ಕ್ಯೂ ಹೊಸಲೈನ್‌ ರಸ್ತೆ ದಾಟಿ ಸಂತೇಪೇಟೆ ವೃತ್ತವನ್ನೂ ದಾಟಿ ವಲ್ಲಬಾಯಿ ರಸ್ತೆಯಲ್ಲಿತ್ತು.
ಹಾಸನಾಂಬೆ ದೇವಿ ದರ್ಶನ ಪಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದವರು

 ಯಡಿಯೂರಪ್ಪ ಹಾಗೂ ಕುಟುಂಬದವರು   ಹಾಸನಾಂಬೆ ದೇವಿ ದರ್ಶನ ಪಡೆದರು. ಇದೇ ವೇಳೆ   ಮಾತನಾಡಿ, ಪ್ರತಿನಿತ್ಯ ಇಲ್ಲಿಗೆ ಬಂದು ಹಾಸನಾಂಬೆ ದರ್ಶನ ಮಾಡುತ್ತಿದ್ದು, ವರ್ಷಪೂರ್ತಿ ಅದೇ ದೀಪ ಉರಿದು ತಾಯಿ ವರ್ಷಕ್ಕೆ ಒಂದು ಬಾರಿ ಮಾತ್ರ ಭಕ್ತರಿಗೆ ದರ್ಶನ ನೀಡಿ ಆಶೀರ್ವಾದ ಮಾಡಲಾಗುತ್ತಿದೆ  ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರತಿಬಂಧ ಅಧಿನಿಯಮ ಪಾಲಿಸಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಯುವ ಉದ್ದೇಶದಿಂದ ದೇಶದಲ್ಲಿ ಜಾರಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989, ಹಾಗೂ ಪರಿಷ್ಕೃತ ಅಧಿನಿಯಮ 2015, ನಿಯಮಗಳು 1995 ಮತ್ತು 2016ರ ಪರಿಷ್ಕೃತ ನಿಯಮಗಳ ಪಾಲನೆ ಮತ್ತು ದಲಿತ ದೌರ್ಜನ್ಯ ಕಾಯ್ದೆಗಳ ಬಗ್ಗೆ ಅರಿವು ಪ್ರತಿಯೊಬ್ಬರೂ ಅರಿತುಕೊಳ್ಳುವುದು ಒಳ್ಳೆಯದು ಎಂದು ತಹಸೀಲ್ದಾರ್ ಸಂತೋಷ್ ಕುಮಾರ್ ಸಲಹೆ ನೀಡಿದರು.
ರೈತರ ಭೂಮಿ ಕಸಿಯುವ ವಕ್ಫ್‌ ಬೋರ್ಡ್‌ಗೆ ಜಮೀರ್‌ ಕುಮ್ಮಕ್ಕು
ರೈತರು ತಲೆತಲಾಂತರಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ಭೂಮಿಯನ್ನು ಕಿತ್ತುಕೊಳ್ಳಲು ಮುಂದಾಗಿರುವ ವಕ್ಫ್ ಬೋರ್ಡ್‌ ಕಿತಾಪತಿಗೆ ಸಚಿವ ಜಮೀರ್ ಅಹಮ್ಮದ್ ಕುಮ್ಮಕ್ಕು ನೀಡುತ್ತಿದ್ದಾರೆ. ಹಾಗಾಗಿ ಜಮೀರ್‌ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಚ್ಚರಿಕೆ ನೀಡಿದರು. ಹಲವಾರು ದಶಕಗಳಿಂದ ರೈತರು ಉಳುಮೆ ಮಾಡುತ್ತಿದ್ದು, ಇದನ್ನು ವಕ್ಫ್ ಬೋರ್ಡ್‌ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ. ಇದಕ್ಕೆ ಕುಮಕ್ಕು ಕೊಡುವ ಕೆಲಸ ಜಮೀರ್ ಅಹಮ್ಮದ್ ಮಾಡುತ್ತಿರುವುದು ದುರದೃಷ್ಟಕರ ಎಂದರು.
ಬೇಲೂರಲ್ಲಿ ಶೀಘ್ರ ಪುನೀತ್‌ ಪುತ್ಥಳಿ ಸ್ಥಾಪನೆ
ಪವರ್ ಸ್ಟಾರ್ ಪುನೀತ್‌ ರಾಜಕುಮಾರ್ ನಟನೆ ಜೊತೆಗೆ ಸಮಾಜಮುಖಿ ಕೆಲಸ ಮಾಡಿದ್ದು, ಅವರ ಪುತ್ಥಳಿಯನ್ನುಶೀಘ್ರವೇ ಸ್ಥಾಪನೆ ಮಾಡಲಾಗುತ್ತದೆ ಎಂದು ಪುರಸಭಾ ಅಧ್ಯಕ್ಷ ಎ.ಆರ್‌. ಅಶೋಕ್ ಹೇಳಿದರು. ಪಟ್ಟಣದ ಬಸ್‌ನಿಲ್ದಾಣದ ಮುಂದಿನ ಬಸವೇಶ್ವರ ವೃತ್ತ ಬಳಿಯಲ್ಲಿ ಡಾ.ರಾಜಕುಮಾರ್‌ ಅಭಿಮಾನಿ ಸಂಘ, ದಿ.ಪುನೀತ್‌ ರಾಜಕುಮಾರ್ ಅಭಿಮಾನಿ ಸಂಘದಿಂದ ಹಮ್ಮಿಕೊಂಡ ಪುನೀತ್‌ ಮೂರನೇ ವರ್ಷ ಪುಣ್ಯಸ್ಮರಣೆ ನಡೆಯಿತು.
ಹಾಸನಾಂಬೆ ದರ್ಶನ ಪಡೆದ ಮಾಜಿ ಸಚಿವ ಈಶ್ವರಪ್ಪ
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಂಗಳವಾರ ಕುಟುಂಬ ಸಮೇತವಾಗಿ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದರು. ನಂತರ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ಈ ವರ್ಷವೂ ಕೂಡ ಆ ತಾಯಿ ಹಾಸನಾಂಬೆ ದರ್ಶನ ಭಾಗ್ಯ ನಮಗೆ ಕೊಟ್ಟಿದ್ದು, ಆ ತಾಯಿಯ ಕೃಪೆಯಿಂದ ಇಡೀ ಕರ್ನಾಟಕ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ ಎಂದರು.
ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಆಹ್ವಾನ ಬಂದಿಲ್ಲ
ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರದ ವಿಚಾರದಲ್ಲಿ ಇನ್ನು ಯಾವ ತೀರ್ಮಾನ ಮಾಡಿಲ್ಲ. ನನಗೆ ಕೂಡ ಯಾವ ಆಹ್ವಾನ ಬಂದಿರುವುದಿಲ್ಲ ಎಂದು ಶಾಸಕ ಹಾಗೂ ಜೆಡಿಎಸ್ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು. ಕುಟುಂಬ ಸಮೇತರಾಗಿ ಮಂಗಳವಾರ ಹಾಸನಾಂಬೆ ದೇವಿ ದರ್ಶನ ಪಡೆದ ನಂತರ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ನನ್ನ ಜೀವನದಲ್ಲಿ ಎರಡನೇ ಬಾರಿ ಹಾಸನಾಂಬೆ ತಾಯಿ ದರ್ಶನವನ್ನು ಮಾಡುತ್ತಿದ್ದೇನೆ ಎಂದರು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 414
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved