• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವ ಕಂಡಂತಹ ಶ್ರೇಷ್ಠ ಕಾದಂಬರಿಕಾರರಲ್ಲಿ ಭೈರಪ್ಪ ಒಬ್ಬರು
ಡಾ. ಎಸ್ ಎಲ್ ಭೈರಪ್ಪನವರು ಕನ್ನಡ ಸಾಹಿತ್ಯ ಲೋಕದಲ್ಲಿ ಶಾಶ್ವತವಾದ ಹೆಜ್ಜೆ ಗುರುತನ್ನು ಸ್ಥಾಪಿಸಿದ್ದಾರೆ ಎಂದು ಅರಕಲಗೂಡು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸುಂದರೇಶ್ . ಡಿ ಉಡುವರೇ ಅಭಿಪ್ರಾಯಪಟ್ಟರು. ಎಸ್ ಎಲ್ ಭೈರಪ್ಪನವರ ಸಾಹಿತ್ಯವನ್ನು ಅರ್ಥ ಮಾಡಿಕೊಂಡವರು ಎಂದೂ ತಪ್ಪನ್ನೆಸುವುದಿಲ್ಲ. ಇವರ ಸಾಹಿತ್ಯ ಹಲವಾರು ಚರ್ಚೆಗೆ ಗ್ರಾಸವಾದರೂ ಕೂಡ ಉತ್ತಮ ವಿಮರ್ಶೆಗೆ ಒಳಗಾಗಿತ್ತು. ಹಾಗಾಗಿಯೇ ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಸ್ಥಾಯಿಯಾಗಿ ಇವರ ಹೆಸರು ಉಳಿದಿದೆ ಎಂದು ನುಡಿದರು.
ಪವರ್ ಲಿಫ್ಟಿಂಗ್‌ ನಮ್ಮನ್ನು ಸದೃಢಗೊಳಿಸುತ್ತದೆ
ಸರಕಾರಿ ನೌಕರರ ಗೃಹ ನಿರ್ಮಾಣ ಅಧ್ಯಕ್ಷ ಕೆ.ಎಂ. ಶ್ರೀನಿವಾಸ್ ಮಾತನಾಡಿ, ದೈಹಿಕ ಮತ್ತು ಮಾನಸಿಕವಾಗಿ ಸದೃಢಗೊಳ್ಳುವಂತಹ ಕ್ರೀಡೆ ಪವರ್ ಲಿಫ್ಟಿಂಗ್‌ ಆಗಿದೆ. ಇಂತಹ ಕ್ರೀಡೆ ಹಾಸನ ಜಿಲ್ಲೆಯಲ್ಲಿ ಹೆಚ್ಚು ಬೆಳೆಯಬೇಕು. ದಕ್ಷಿಣ ಕನ್ನಡ ಮತ್ತು ಬೇರೆ ಬೇರೆ ಕಡೆ ಈ ಕ್ರೀಡೆ ಹೆಚ್ಚು ಒಲವಿದೆ. ಈ ಸಂಸ್ಥೆಯು ಇಂತಹ ಕ್ರೀಡೆಯನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಯುವ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಜಿಲ್ಲಾ ಪವರ್‌ ಲಿಫ್ಟಿಂಗ್ ಸಂಸ್ಥೆ ನಡೆಸುತ್ತಿರುವ ೨ನೇ ವರ್ಷದ ಮಹಿಳಾ ಹಾಗೂ ಪುರುಷ ಬೆಂಚ್‌ಪ್ರೆಸ್ ಪವರ್‌ ಲಿಫ್ಟಿಂಗ್ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು.
ಪ್ರಿಕಾಟ್ ಲಿಮಿಟೆಡ್ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭ
ಕಳೆದ ೧೪ ವರ್ಷಗಳಿಂದ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಿಕಾಟ್ ಲಿಮಿಟೆಡ್ ಸಂಸ್ಥೆಯ ಗುತ್ತಿಗೆ ಕಾರ್ಮಿಕರು ತಮ್ಮ ಸಂಬಳವನ್ನು ಹೆಚ್ಚಿಸಿ, ಉದ್ಯೋಗ ಕಾಯಂ ಮಾಡಲು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಖಾನೆ ಎದುರು ಎಐಟಿಯುಸಿ ನೇತೃತ್ವದಲ್ಲಿ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಬೇಡಿಕೆಗಳನ್ನು ನಿರ್ಲಕ್ಷಿಸಿರುವುದರಿಂದ ಇದೀಗ ಮುಷ್ಕರದ ದಾರಿಯನ್ನು ಹಿಡಿಯಬೇಕಾಯಿತು ಎಂದು ತಿಳಿಸಿದರು. ನಮ್ಮ ಬೇಡಿಕೆಗೆ ಏನಾದರೂ ಸ್ಪಂದನೆ ಕೊಡದಿದ್ದರೇ ಮುಂದಿನ ದಿನಗಳಲ್ಲಿ ನಾನಾ ರೀತಿಯಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ದಾನಗಳಲ್ಲಿ ಶ್ರೇಷ್ಠವಾದುದು ರಕ್ತದಾನ ಎಂದ ಭರತ್ ಕುಮಾರ್
ದಾನಗಳಲ್ಲಿ ಅತ್ಯಂತ ಪ್ರಮುಖವಾದ ದಾನ ರಕ್ತದಾನ. ಇಂದು ಜಿಲ್ಲೆಯಲ್ಲಿ ರಕ್ತದಾನಿಗಳ ಕೊರತೆಯಿಂದ ಸಾಕಷ್ಟು ಜನ ತೊಂದರೆಗೆ ಒಳಗಾಗುತ್ತಿದ್ದಾರೆ ಹಾಗೂ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ರಕ್ತದಾನ ಮಾಡುವುದರ ಮುಖಾಂತರ ಸದೃಢವಾದ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡೋಣ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತಾಲೂಕು ಗವರ್ನರ್ ಎಚ್. ಜಿ. ಭರತ್ ಕುಮಾರ್ ತಿಳಿಸಿದರು. ಸರ್ಕಾರಿ ಆಸ್ಪತ್ರೆಯ ಅಧಿಕಾರಿಗಳಾದ ಕೆಂಚೇಗೌಡ ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದನೆ ಮಾಡಲು ಆಗುವುದಿಲ್ಲ, ದಾನಿಗಳಿಂದ ಮಾತ್ರ ಸಂಗ್ರಹಿಸಿದ ರಕ್ತವನ್ನು ಉಪಯೋಗಿಸಬಹುದು ಎಂದರು.
ರೇಷ್ಮೆ ನೂಲು ಬಿಡಿಸುವ ಘಟಕ ಉದ್ಘಾಟನೆ
ಬೆಂಡೆಕೆರೆ ಗ್ರಾಮದಲ್ಲಿ ‘ಮೆರಾಜ್ ಟ್ರೇಡರ್ಸ್’ ಸಂಸ್ಥೆಯ ಸ್ವಯಂಚಾಲಿತ ರೇಷ್ಮೆ ನೂಲು ಬಿಡಿಸುವ ಘಟಕದ ಭವ್ಯ ಉದ್ಘಾಟನಾ ಸಮಾರಂಭವು ಭಾನುವಾರ ಜರುಗಿತು. ಘಟಕದ ಉದ್ಘಾಟನೆಯನ್ನು ಶಾಸಕ ಹಾಗೂ ಗೃಹ ಮಂಡಳಿಯ ಅಧ್ಯಕ್ಷರಾದ ಕೆ.ಎಂ. ಶಿವಲಿಂಗೇಗೌಡ ನೆರವೇರಿಸಿದರು. ರೈತರು ರೇಷ್ಮೆಯ ಜೊತೆಗೆ ವಾಣಿಜ್ಯ ಬೆಳೆಗಳತ್ತಲೂ ಗಮನಹರಿಸಿ ಆದಾಯದ ಮಾರ್ಗಗಳನ್ನು ವಿಸ್ತರಿಸಬೇಕು. ರೈತರ ಸಮಸ್ಯೆಗಳಿಗೆ ಸರ್ಕಾರ ಹಾಗೂ ಅಧಿಕಾರಿಗಳು ಸಂವಾದದ ಮೂಲಕ ಪರಿಹಾರ ಕಂಡುಹಿಡಿಯಲು ಬದ್ಧರಾಗಿದ್ದಾರೆ ಎಂದು ಹೇಳಿದರು.
ಇಂದು ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಅಗ್ನಿಹೋತ್ರ
ಹಾಸನಾಂಬೆ ದೇವಾಲಯದ ರಸ್ತೆ, ಶ್ರೀ ಕನ್ನಿಕಾಪರಮೇಶ್ವರಿ ದೇವಾಲಯ ಆವರಣದಲ್ಲಿ ಪತಂಜಲಿ ಯೋಗ ಸಮಿತಿ ಸಹಯೋಗ, ವೇದಭಾರತೀ ಹಾಗೂ ಶ್ರೀ ಕನ್ನಿಕಾಪರಮೇಶ್ವರಿ ದೇವಾಲಯ ಸಮಿತಿ ಸಹಯೋಗದಲ್ಲಿ ಅಕ್ಟೋಬರ್ 5ರ ಭಾನುವಾರದಂದು ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಅಗ್ನಿಹೋತ್ರ ಮತ್ತು ಅಗ್ನಿಹೋತ್ರ ಕಾರ್ಯಾಗಾರವನ್ನು ಬೆಳಿಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ ಎಂದು ತಿಳಿಸಿದರು. ಪ್ರಮುಖವಾಗಿ ಎಲ್ಲರಿಗಾಗಿ ಯೋಗ, ಎಲ್ಲರಿಗಾಗಿ ಯಜ್ಞ, ಎಲ್ಲರಿಗೂ ಆರೋಗ್ಯ ಎಂಬ ಧ್ಯೇಯದೊಂದಿಗೆ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.
ಸಾರ್ವಜನಿಕರು ಆರೋಗ್ಯ ಶಿಬಿರಗಳ ಪ್ರಯೋಜನ ಪಡೆಯಿರಿ
ಸಾರ್ವಜನಿಕರು ಆರೋಗ್ಯದ ಬಗ್ಗೆ ಗಮನಹರಿಸಬೇಕು. ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ಆರೋಗ್ಯವನ್ನು ಪರೀಕ್ಷಿಸಿಕೊಳ್ಳಬೇಕು. ಇದರಿಂದ ಮೊದಲ ಹಂತದಲ್ಲೇ ಆರೋಗ್ಯ ಸಮಸ್ಯೆಯನ್ನು ಕಂಡು ಹಿಡಿಯಲು ಸಾಧ್ಯವಾಗುತ್ತದೆ ಎಂದು ಡಾ. ಅಬ್ದುಲ್ ಬಶೀರ್ ವಿ.ಕೆ ತಿಳಿಸಿದರು. ಉಚಿತ ತಪಾಸಣೆಯೊಂದಿಗೆ ಉಚಿತ ಔಷಧಿಯನ್ನು ವ್ಯವಸ್ಥೆ ಮಾಡಿರುವುದು ಖುಷಿಯ ವಿಚಾರ ಹಾಗೂ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಶಿಬಿರದ ಅನುಕೂಲವನ್ನು ಪಡೆದುಕೊಳ್ಳುತ್ತಿದ್ದಾರೆ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ತಾಲೂಕಿನಲ್ಲಿ ಉತ್ತಮ ಸೇವೆಯನ್ನು ಸಲ್ಲಿಸುತ್ತಿದೆ ಎಂದು ತಿಳಿಸಿದರು.
ಅರಸೀಕೆರೆಯಲ್ಲಿ ಸಂಭ್ರಮದಿಂದ ನೆರವೇರಿದ ನವರಾತ್ರಿ ದಾಂಡಿಯ
ಈ ಬಾರಿ ವಿಶೇಷವಾಗಿ ತಾಯಿ ಚಾಮುಂಡೇಶ್ವರಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ ಪ್ರತಿದಿನ ದೇವಿಗೆ ಅಲಂಕಾರ, ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ನೆರವೇರಿಸಲಾಯಿತು. ಮಹಾಮಂಗಳಾರತಿ ನಂತರ ದಾಂಡಿಯ, ಗುಜರಾತಿ ಗರ್ಭ, ಮಕ್ಕಳಿಗೆ ಫ್ಯಾನ್ಸಿ ಡ್ರೆಸ್ ಸೇರಿದಂತೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಯುವ ಮಂಡಳಿಯ ಅಧ್ಯಕ್ಷ ಚೇತನ್ ಜೈನ್ ಮಾತನಾಡಿ, ಕಳೆದ ಹದಿಮೂರು ವರ್ಷಗಳಿಂದ ಜೈನ ಭವನದಲ್ಲಿ ನವರಾತ್ರಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಎಲ್ಲಾ ಸಮಾಜದ ಬಂಧುಗಳ ಪ್ರೋತ್ಸಾಹದಿಂದ ಇದು ಯಶಸ್ವಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ದೇವಿಯ ಶಕ್ತಿ ದೊರಕಲಿ ಎಂದು ಶುಭ ಹಾರೈಸಿದರು.
ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ಅವಶ್ಯಕ
ಲಿಂಗಾಯತ ಧರ್ಮವು ತನ್ನದೇ ಆದ ಆಚರಣೆ, ನಂಬಿಕೆ, ತತ್ವಶಾಸ್ತ್ರ ಹೊಂದಿರುವ ಪ್ರತ್ಯೇಕ ಧರ್ಮ. ಆದರೆ ಇನ್ನೂ ಹಿಂದೂ ಧರ್ಮದ ಅಂಗವೆಂದು ಪರಿಗಣಿಸಲಾಗುತ್ತಿದೆ. ಇದರಿಂದಾಗಿ ಲಿಂಗಾಯತರಿಗೆ ಅಲ್ಪಸಂಖ್ಯಾತರ ಸೌಲಭ್ಯಗಳು ಸಿಗದೆ ಅನ್ಯಾಯವಾಗಿದೆ. ನಮ್ಮ ಹೋರಾಟವು ಯಾವ ಧರ್ಮ, ಜಾತಿ ಅಥವಾ ಪಕ್ಷದ ವಿರುದ್ಧವಲ್ಲ. ಇದು ಸಮಾಜದ ಹಕ್ಕುಗಳನ್ನು ಪಡೆಯುವ ಹೋರಾಟ ಎಂದು ಸ್ಪಷ್ಟಪಡಿಸಲಾಗಿದೆ. ಲಿಂಗಾಯತ ಶಿಕ್ಷಣ ಸಂಸ್ಥೆಗಳಲ್ಲಿ ಲಿಂಗಾಯತ ವಿದ್ಯಾರ್ಥಿಗಳಿಗೆ ಶೇ.50 ಮೀಸಲಾತಿ, ವಿದ್ಯಾರ್ಥಿವೇತನ ಹಾಗೂ ಶುಲ್ಕ ವಿನಾಯ್ತಿ, ಬಡ ಕುಟುಂಬಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ನಿಧಿಯಿಂದ ಸಾಲ, ಸಬ್ಸಿಡಿ ಹಾಗೂ ಉದ್ಯೋಗ ತರಬೇತಿ, ಮಠ, ಮಂದಿರ, ಗದ್ದುಗೆಗಳ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸರ್ಕಾರದ ನೆರವು ಅಗತ್ಯ ಎಂದರು.
ಹಿರಿಯ ನಾಗರಿಕರು ಸಮಾಜದ ಅವಿಭಾಜ್ಯ ಅಂಗ
ಹಿರಿಯ ನಾಗರಿಕರು ಸಮಾಜದ ಅವಿಭಾಜ್ಯ ಅಂಗವಿದ್ದಂತೆ. ಕೊನೆಯ ಉಸಿರು ಇರುವವರೆಗೂ ಕ್ರಿಯಾಶೀಲತೆಯನ್ನು ಅಳವಡಿಸಿಕೊಂಡರೆ ಜೀವನ ಗೌರವಯುತವಾಗುತ್ತದೆ ಎಂದು ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಹೇಳಿದರು. ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ. ಹಿರಿಯರು ನಮ್ಮ ಕೈಯಿಂದ ಇನ್ನು ಏನು ಸಾಧ್ಯ ಎಂಬ ನಿರುತ್ಸಾಹದ ಭಾವನೆ ಬೆಳೆಸಿಕೊಳ್ಳದೆ, ಉತ್ಸಾಹಭರಿತ ಜೀವನ ರೂಪಿಸಿಕೊಂಡು ಯುವ ಪೀಳಿಗೆಗೆ ಮಾದರಿಯಾಗಬೇಕು. ವಯಸ್ಸಾದಂತೆ ದೇಹದಲ್ಲಿ ಉಂಟಾಗುವ ಸಮಸ್ಯೆಗಳನ್ನು ಕಡೆಗಣಿಸದೆ ಆರೋಗ್ಯ ಕಾಪಾಡಿಕೊಳ್ಳಬೇಕು. ಕೆಟ್ಟ ಹವ್ಯಾಸಗಳನ್ನು ಬಿಟ್ಟು ಪ್ರತಿನಿತ್ಯ ಸಕ್ರಿಯವಾಗಿರುವ ಅಭ್ಯಾಸ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 545
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved