• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನಸಿಕ ಆರೋಗ್ಯದಿಂದ ಮಾತ್ರ ಸಮಾಜದ ಸ್ವಾಸ್ಥ್ಯ ಸಾಧ್ಯ
ಮಾನಸಿಕ ಆರೋಗ್ಯದಿಂದ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯವಿದ್ದು, ಇದರಿಂದ ಅಪರಾಧ ಮುಕ್ತ ಪರಿಸರ ನಿರ್ಮಾಣ ಮಾಡಬಹುದು ಎಂದು ಜಿಲ್ಲಾ ನ್ಯಾಯಾಧೀಶರಾದ ಹೇಮಾವತಿ ತಿಳಿಸಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀ ವಿಶ್ವವಿದ್ಯಾಲಯದ ಬಾಬಣ್ಣರವರು ಮಾತನಾಡಿ, ಉತ್ತಮ ಹವ್ಯಾಸಗಳಿಂದ ನಮ್ಮಲ್ಲಿರುವ ಕಲ್ಮಶಗಳನ್ನು ತೊಡೆಯಲು ಸಾಧ್ಯವಿದೆ. ನಮ್ಮ ಮಾನಸಿಕ ಸ್ಥಿಮಿತತೆಯಿಂದ ಕೆಟ್ಟ ಆಲೋಚನೆಗಳನ್ನು ನಿಯಂತ್ರಿಸಬಹುದು. ಯೋಗಾಭ್ಯಾಸವು ನಿರಂತರ ಪ್ರಕ್ರಿಯೆಯಾಗಬೇಕು ಎಂದು ಹೇಳಿದರು.
ಆಹಾರ ಸುರಕ್ಷತಾಧಿಕಾರಿಗಳ ಭೇಟಿ ಪರಿಶೀಲನೆ
ಸಾಂಕ್ರಾಮಿಕ ರೋಗಗಳ ತಡೆ ಹಾಗೂ ಆಹಾರ ಸುರಕ್ಷತೆ, ಶುಚಿತ್ವ ಮತ್ತು ಗುಣಮಟ್ಟ ಕುರಿತು ಪಟ್ಟಣದ ಹೋಟೆಲ್‌ಗಳ ಮೇಲೆ ಆಹಾರ ಸುರಕ್ಷಿತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಜನಸಾಮಾನ್ಯರ ಆರೋಗ್ಯ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಮಾಲೀಕರು ಮತ್ತು ವ್ಯಾಪಾರಸ್ಥರು ಗ್ರಾಹಕರಿಗೆ ಉತ್ತಮವಾದ ಮತ್ತು ಶುದ್ಧವಾದ ಒಳ್ಳೆ ಗುಣಮಟ್ಟದ ತಿಂಡಿ ಪದಾರ್ಥ ಮತ್ತು ಆಹಾರವನ್ನು ನೀಡಬೇಕು, ಹೋಟೆಲ್‌ಗಳಲ್ಲಿ ಸಾರ್ವಜನಿಕರಿಗೆ ಶುದ್ಧವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ತಿಳಿಸಿದರು.
ಉತ್ತಮ ಸಮಾಜ ನಿರ್ಮಾಣದಲ್ಲಿ ಸ್ಕೌಟ್ಸ್‌ ಗೈಡ್ಸ್‌ ಪಾತ್ರವಿದೆ
ಸ್ಕೌಟ್ಸ್ ಗೈಡ್ಸ್ ಚಳವಳಿ ಹುಟ್ಟಿರುವುದೇ ಜೀವನ ಮೌಲ್ಯಗಳನ್ನು ಬಿತ್ತಿ ಬದುಕನ್ನು ಉದಾತ್ತವಾಗಿಸುವುದಕ್ಕಾಗಿ, ಸ್ಕೌಟ್ ಅಥವಾ ಗೈಡ್ ಎಂದರೆ ನಂಬಿಕೆಗೆ ಅರ್ಹವಾಗಿರುವುದು, ತಾನು ಭರವಸೆ ನೀಡಿದ್ದನ್ನು ಸಾಧ್ಯವಾದಷ್ಟು ಸಾಧಿಸಲು ಪ್ರಯತ್ನಿಸುತ್ತಾನೆ. ತನ್ನ ನಾಯಕ, ದೇಶಕ್ಕೆ ನಿಷ್ಠನಾಗಿರುವುದು. ಇತರರಿಗೆ ಸಹಾಯ ಮಾಡುವುದು, ಸಮಾಜದ ಇತರೆ ಸಂಗಡಿಗರಿಗೆ ಸಹೋದರ-ಸಹೋದರಿಯ ಸ್ಥಾನಮಾನ ನೀಡಿ ಸಾಮಾಜಿಕ ವರ್ಗದ ವ್ಯತ್ಯಾಸಗಳನ್ನು ಲೆಕ್ಕಿಸದೇ ಸಹಾಯ ಮಾಡುತ್ತಾರೆ. ವಿನಯಶೀಲ ಗುಣವನ್ನು ಹೊಂದಿ ಎಲ್ಲರಿಗೂ ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರಿಗೆ ಸಭ್ಯ ಮತ್ತು ಸಹಾಯಕವಾಗಿರುವುದು.
ಜನಪದ ಸೊಗಡನ್ನು ಉಳಿಸಲು ಯುವಜನಾಂಗ ಮುಂದಾಗಬೇಕು
ಜನಪದ ಕಲೆಗಳು ಈ ಮಣ್ಣಿನ ಸಂಸ್ಕೃತಿಗಳು, ರಂಗಭೂಮಿ, ಜನಪದ ಗೀತೆಗಳು, ಕಲಾ ನೃತ್ಯಗಳು, ಸೋಬಾನೆ ಪದಗಳು, ಹರಿಕಥೆಗಳು, ಸೇರಿದಂತೆ ಮುಂತಾದ ಕಲೆಗಳನ್ನು ಇಂದಿನ ಯುವಸಮೂಹ ಕಲಿಯುವ ಮೂಲಕ ಜನಪದ ಸೊಗಡನ್ನು ಉಳಿಸುವಲ್ಲಿ ಮುಂದಾಗಬೇಕೆಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಆಧುನೀಕತೆಯ ಭರಾಟೆಯಲ್ಲಿ ಜನಪದ ಸಂಸ್ಕೃತಿ ಅಳಿಯಲು ಅವಕಾಶ ನೀಡಬಾರದು. ಜನಪದ ಸಂಸ್ಕೃತಿ ಅಳಿದರೆ ನಮ್ಮತನವನ್ನು ನಾವು ಕಳೆದುಕೊಂಡಂತೆ, ಜನಪದ ಸೊಗಡಿನಲ್ಲೇ ಭಾರತೀಯ ಮೂಲ, ಪರಂಪರೆಯ ಸತ್ಯ ಅಡಗಿದೆ. ಹಾಗಾಗಿ ಆಧುನಿಕತೆ ಭರಾಟೆಗೆ ಸಿಲುಕಿ ಇಂತಹ ಮಾತೃ ಸಂಸ್ಕೃತಿ ಅಳಿಯಲು ಬಿಡಬಾರದು. ಜನಪದ ಸಂಸ್ಕೃತಿ ಉಳಿಸಿ ಪೋಷಿಸಬೇಕು ಎಂದರು.
ಹಾಸನದಲ್ಲಿ ಭರ್ಜರಿ ಮಳೆ
ಹಾಸನ ನಗರದ ತಮ್ಲಾಪುರ ಆರನೇ ಕ್ರಾಸಿನಲ್ಲಿ ಬಹಳ ಸಮಸ್ಯೆ ಇದ್ದು, ಅದರಲ್ಲೂ ಮಳೆ ಬಂದರೇ ಸಾಕು ನೀರು ಹೋಗಲು ಕಷ್ಟವಿದೆ. ಏನು ಮಾಡುವುದು ಗೊತ್ತಾಗುತ್ತಿಲ್ಲ. ಚರಂಡಿ ಸಮರ್ಪಕವಾಗಿ ಇಲ್ಲದೆ ರಸ್ತೆ ಮೇಲಿನ ನೀರೆಲ್ಲಾ ಮನೆ ಒಳಗೆ ಬರುತ್ತಿದೆ. ಈ ಸಮಸ್ಯೆಗೆ ನಗರಸಭೆಯವರು ಪರಿಹಾರ ಮಾಡಿಕೊಡಬೇಕು. ಇನ್ನು ಶಾಸಕರು ಕೂಡ ಈ ಬಗ್ಗೆ ಗಮನಹರಿಸಲಿ ಎಂದು ಮನವಿ ಮಾಡಿದರು.
ಅಂಗನವಾಡಿ ಕೇಂದ್ರಗಳಿಗೆ ಕಬ್ಬಿಣದ ಬೀರುಗಳ ವಿತರಣೆ
ಕಳ್ಳೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಕಬ್ಬಿಣದ ಬೀರುಗಳನ್ನು ಅಧ್ಯಕ್ಷ ಅಬ್ದುಲ್ ಹಕೀಂ ನೇತೃತ್ವದಲ್ಲಿ ಗುರುವಾರ ವಿತರಿಸಲಾಯಿತು. ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಸರಿಯಾಗಿ ಸದುಪಯೋಗ ಪಡಿಸಿಕೊಂಡು ಕೇಂದ್ರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮತ್ತು ಸರ್ಕಾರದಿಂದ ಬರುವಂತಹ ಸೌಲಭ್ಯಗಳನ್ನು ಸರಿಯಾಗಿ ಗರ್ಭಿಣಿಯರು ಮತ್ತು ಮಕ್ಕಳಿಗೆ ಕೊಡುವ ಮೂಲಕ ಅವರ ಮುಂದಿನ ಬೆಳವಣಿಗೆಗೆ ಮುಂದಾಗಬೇಕು. ಮುಂದಿನ ದಿನಗಳಲ್ಲಿ ಅವಶ್ಯವಿರುವ ವಸ್ತುಗಳನ್ನೂ ಸಹ ಕೊಡುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಬೇಸಿಗೆ ಶಿಬಿರಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ರಹದಾರಿ
ಬೇಸಿಗೆ ಶಿಬಿರಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ರಹದಾರಿಗಳಿದ್ದಂತೆ, ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ ಅಭಿಪ್ರಾಯಪಟ್ಟರು. ಮಾನಸಿಕ ಆಟೋಟಗಳು, ಕ್ರಾಫ್ಟ್, ಚಿತ್ರಕಲೆ, ಕಥೆ ಕಟ್ಟುವುದು, ಕವನ ರಚಿಸುವುದು, ಹೊರ ಸಂಚಾರ ಮುಂತಾದ ಮಹತ್ವದ ಅಂಶಗಳನ್ನು ಒಳಗೊಂಡಿರುವ ಈ ಬೇಸಿಗೆ ಶಿಬಿರ ಮಕ್ಕಳಿಗೆ ತುಂಬಾ ಸಹಕಾರಿಯಾಗಿದೆ ಎಂದರು.
ಪಿಎಸ್ಐ ಸುರೇಶ್‌ಗೆ ಮುಖ್ಯಮಂತ್ರಿಗಳ ಚಿನ್ನದ ಪದಕ
ಅರಸೀಕೆರೆ ತಾಲೂಕಿನ ಬಾಣಾವರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸುರೇಶ್ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿದ್ದು, ಬಾಣಾವರ ಮುಸ್ಲಿಂ ಬಾಂಧವರು ಸುನ್ನಿ ಜಾಮಿಯಾ ಮಸೀದಿ ಆವರಣದಲ್ಲಿ ಅಭಿನಂದಿಸಿ ಗೌರವಿಸಿದರು. ಬಾಣಾವರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಒಬ್ಬರಿಗೆ ಸ್ವರ್ಣ ಪದಕ ಲಭಿಸಿರುವುದು ಬಾಣವರ ಜನತೆ ಸಂತಸ ಪಡುವ ವಿಷಯವಾಗಿದೆ. ಇವರ ಕಾರ್ಯದಕ್ಷತೆ ಹಾಗೂ ಕರ್ತವ್ಯ ನಿಷ್ಠೆ ಹೀಗೆ ಮುಂದುವರೆಯಲಿ ಹಾಗೂ ಇವರಿಗೆ ಇನ್ನೂ ಹೆಚ್ಚಿನ ಗೌರವಗಳು ಲಭಿಸಲಿ ಎಂದು ಆಶಿಸಿದರು.
ಅರಸೀಕೆರೆ ಪಿಎಲ್‌ಡಿ ಬ್ಯಾಂಕ್ ಜೆಡಿಎಸ್ ತೆಕ್ಕೆಗೆ
ಕಡೇ ಕ್ಷಣದಲ್ಲಿ ಜೆಡಿಎಸ್ ಮುಖಂಡ ಎನ್. ಆರ್. ಸಂತೋಷ್ ಹೆಣೆದ ತಂತ್ರಗಾರಿಕೆ ಫಲ ನೀಡಿದ್ದು ಪಿಎಲ್‌ಡಿ ಬ್ಯಾಂಕ್ ಜೆಡಿಎಸ್ ತೆಕ್ಕೆಗೆ ಬಿದ್ದಿದೆ. ಚುನಾವಣೆಯಲ್ಲಿ ಜೆಡಿಎಸ್ ಮುಖಂಡ ಎನ್. ಆರ್.ಸಂತೋಷ್ ಕಟ್ಟಾ ಬೆಂಬಲಿಗ ಶಶಿವಾಳ ಗಂಗಾಧರ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಬೇವಿನಹಳ್ಳಿ ಯೋಗೀಶ್(ರವಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನನಗೆ ದೊರೆತಿರುವ ಅವಕಾಶ ಸದ್ಬಳಕೆ ಮಾಡಿಕೊಂಡು ರೈತರ ಹಿತಕಾಯಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಸದಸ್ಯರು ಹಾಗೂ ಷೇರುದಾರರಿಗೆ ಭರವಸೆ ನೀಡಿದರು.
ವಿವೇಕಾನಂದ ತತ್ವಾದರ್ಶ ಪಾಲನೆಯಿಂದ ಯಶಸ್ಸು
ಸ್ವಾಮಿ ವಿವೇಕಾನಂದರು ಯುವಜನತೆಗೆ ಸ್ಫೂರ್ತಿ ತುಂಬುವ ಉದ್ದೇಶದಿಂದ ಹೇಳಿದ "ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ವಿಶ್ರಮಿಸದಿರಿ " ಎಂಬ ಹಿತನುಡಿಯು ಪೋಷಕರ ಕಂಡ ಕನಸ್ಸು ಮತ್ತು ಶಿಕ್ಷಕರು ಇಟ್ಟ ನಂಬಿಕೆಯ ಉಳಿವಿಗಾಗಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಶ್ರೀಯುತರ ಮಾತುಗಳನ್ನು ಪಾಲನೆ ಮಾಡಿದಾಗ ಮಾತ್ರ ಉತ್ತಮ ಸಂಸ್ಕಾರದೊಂದಿಗೆ ಯಶಸ್ವಿ ಜೀವನ ರೂಪಿಸಿಕೊಳ್ಳಲು ಸಾಧ್ಯವೆಂದು ಹಾಸನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಿ.ಪಿ.ಗಿರೀಶ್ ಸಲಹೆ ನೀಡಿದರು.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 552
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved