• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಜ್ಞಾನಿಕತೆ ಅಳವಡಿಸಿಕೊಂಡರೆ ಕೃಷಿಯಲ್ಲಿ ಲಾಭ ಸಾಧ್ಯ
ರೈತರು ಸಾಂಪ್ರದಾಯಿಕ ಪದ್ಧತಿಗೆ ಅಂಟಿಕೊಳ್ಳದೆ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಜ್ಞಾನಿಕವಾಗಿ ಕೃಷಿ ನಡೆಸಿದಾಗ ಕೃಷಿಯನ್ನು ಲಾಭದಾಯಕ ವಾಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಂ.ಸಿ.ರಂಗಸ್ವಾಮಿ ತಿಳಿಸಿದರು. ರೈತರಿಗೆ ತಜ್ಞರ ಸಲಹೆ, ಮಾರ್ಗದರ್ಶನ ದೊರಕಿಸಲು ಕ್ರಮ ಕೈಗೊಳ್ಳಲಾಗುವುದು. ವಾಟ್ಸ್ಆ್ಯಪ್‌ನಲ್ಲಿ ರೈತರ ಗುಂಪು ರಚಿಸಿ ಪ್ರತಿದಿನ ತಾಲೂಕಿನ ಪ್ರಮುಖ ಬೆಳೆಗಳ ಮಾರುಕಟ್ಟೆ ದರವನ್ನು ತಿಳಿಸುವ ಯೋಜನೆ ರೂಪಿಸುವುದಾಗಿ ಹೇಳಿದರು.
ನಾಳೆ ಗಾಂಧಿ ಭವನದಲ್ಲಿ ಉಚಿತ ಮೆಗಾ ಆರೋಗ್ಯ ಶಿಬಿರ
ಹಾಸನ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪ್ರಪಥಮ ಬಾರಿಗೆ ಫೆಬ್ರವರಿ 8ರಂದು ನಗರದ ಎಂ.ಜಿ ರಸ್ತೆಯ ಗಾಂಧಿ ಭವನ ಹಾಗೂ ಯೂತ್‌ ಹಾಸ್ಟೆಲ್‌ನಲ್ಲಿ ಉಚಿತ ಮೆಗಾ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಅಧ್ಯಕ್ಷ ಕೆ.ಎಚ್. ವೇಣುಕುಮಾರ್ ತಿಳಿಸಿದರು. ಶಿಬಿರದಲ್ಲಿ ಉಚಿತ ವೈದ್ಯಕೀಯ ತಪಾಸಣೆಗಳನ್ನು ನಡೆಸಲಾಗುತ್ತಿದ್ದು ಸುಮಾರು ನೂರಕ್ಕೂ ಹೆಚ್ಚು ವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಲಿದ್ದಾರೆ.
ಬೇಲೂರು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಳೇಬೀಡಿನ ರಘುನಾಥ್‌ ಆಯ್ಕೆ
ಬೇಲೂರು ತಾಲೂಕು ಪತ್ರಕರ್ತ ಸಂಘದ ನೂತನ ಅಧ್ಯಕ್ಷರಾಗಿ ರಘುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಜ್ ಆಯ್ಕೆಯಾದರು. ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘದಲ್ಲಿ ಜಿಲ್ಲಾಧ್ಯಕ್ಷ ವೇಣುಕುಮಾರ್, ರಾಜ್ಯ ಪತ್ರಕರ್ತ ಸಂಘದ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸದಸ್ಯರಾದ ರವಿ ನಾಕಾಲಗೂಡು, ಪ್ರಧಾನ ಕಾರ್ಯದರ್ಶಿ ಶಶಿಧರ್‌, ಉಪಾಧ್ಯಕ್ಷ ಹರೀಶ್ ಅವರ ಸಮ್ಮುಖದಲ್ಲಿ ತಾಲೂಕು ಸಂಘದ ಅಧ್ಯಕ್ಷರಾಗಿ ರಘುನಾಥ್, ಕಾರ್ಯದರ್ಶಿಯಾಗಿ ಶಿವರಾಜ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ಹಳೇಬೀಡಿನ ಕರಿಯಮ್ಮ ದೇವಿಯ ಜೀರ್ಣೋದ್ಧಾರ ಕಾರ್ಯ
ಜೀರ್ಣೋದ್ಧಾರಗೊಂಡು ಇದೀಗ ಉದ್ಘಾಟನೆಯಾಗುತ್ತಿರುವ ಕರಿಯಮ್ಮ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಬೆಳಗ್ಗೆ ೬ ಗಂಟೆಯಿಂದ ಉಷಾಪೂಜೆ, ಮಹಾಗಣಪತಿ ಹೋಮ, ಸ್ಥಾನಶುದ್ದಿ, ಬಿಂಬಶುದ್ಧಿ ಕಲಶಪೂಜೆ, ಶ್ರೀಸೂಕ್ತ ಹೋಮ, ಅನುಜ್ಞಾನಕಲಶ ಪೂಜೆ, ಪ್ರಸಾದ ಹೋಮ, ಆಂಜನೇಯ ಹೋಮ, ರತ್ನಾನ್ಯಾಸ, ಪೀಠಾಧಿಗಳ ಪ್ರತಿಷ್ಠೆ, ಕಾರ್ಯಕ್ರಮದೊಂದಿಗೆ ಅಷ್ಟಬಂಧನ ಪೂಜೆ ದುರ್ಗ ಹೋಮ ನಡೆಸಲಾಯಿತು ಎಂದು ಕೇಶವಭಟ್ಟರು ತಿಳಿಸಿದರು. ನವಗ್ರಹ ಪೂಜೆ, ಅಂಕುರ ಪೂಜೆ, ಶಾಂತಿ ಪ್ರಾಯಶ್ಚಿತ, ಬಿಂಬಶುದ್ಧಿ, ಹೋಮ ಹವನ, ಜೀವಕಲಶ ಸಪ್ತದಿವಾಸಾಂಗ, ಗಂಗೆಪೂಜೆ, ದುರ್ಗಪೂಜೆ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ರವಿ ಕುಟುಂಬಕ್ಕೆ ಯೋಗಾರಮೇಶ್ ಸಾಂತ್ವನ
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಅರಕಲಗೂಡು ತಾಲೂಕಿನ ಕಂಠೇನಹಳ್ಳಿ ಗ್ರಾಮದ ಮೃತ ರೈತ ಕೆ.ಡಿ. ರವಿ ನಿವಾಸಕ್ಕೆ ಪೊಟ್ಯಾಟೋ ಕ್ಲಬ್ ಅಧ್ಯಕ್ಷ ಎಚ್.ಯೋಗಾರಮೇಶ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ನೀಡಿದರು. ಕಾನೂನು ಕಟ್ಟಲೆಗಳಿಂದ ರೈತರ ಬದುಕು ಬದಲಾಗುವುದಿಲ್ಲ. ಬದಲಿಗೆ ಮಾರುಕಟ್ಟೆ ವ್ಯವಸ್ಥೆ ಬೆಂಬಲ ಬೆಲೆ ಗುಣಮಟ್ಟದ ಬೀಜಗಳ ಸರಬರಾಜಿಗೆ ಮುಂದಾಗಬೇಕೆಂದು ಅವರು ಕೇಂದ್ರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಎಸ್ಸೆಸ್ಸೆಲ್ಸಿಯಲ್ಲಿ ಹಾಸನ ಮೊದಲ ಸ್ಥಾನ ಪಡೆಯಲು ಪ್ರಯತ್ನಿಸಿ
ಪ್ರಸ್ತುತದಲ್ಲಿ ಸ್ಪರ್ಧೆ ಹೆಚ್ಚಾಗಿ ಇರುವುದರಿಂದ ಮಕ್ಕಳಿಗೆ ಒತ್ತಡ ನೀಡದೆ, ಆತ್ಮಸ್ಥೈರ್ಯ ತುಂಬಬೇಕು. ಪ್ರಾಮಾಣಿಕ ಅಧ್ಯಯನದ ಜೊತೆಗೆ ಉತ್ತಮ ಪರಿಶ್ರಮದ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಈ ಬಾರಿ ರಾಜ್ಯದಲ್ಲಿ ಹಾಸನ ಜಿಲ್ಲೆ ಮೊದಲ ಸ್ಥಾನ ಪಡೆಯಲು ಪ್ರಯತ್ನಿಸಿ ಎಂದು ಜಿಲ್ಲಾಧಿಕಾರಿ ಸತ್ಯಭಾಮ ಅವರು ಹೇಳಿದ್ದಾರೆ. ಮಕ್ಕಳಿಗೆ ಮತ್ತಷ್ಟು ಮಾದರಿ ಪರೀಕ್ಷೆಗಳನ್ನು ಮಾಡಿ, ಗಣಿತ, ವಿಜ್ಞಾನ, ಇಂಗ್ಲೀಷ್‌ ವಿಷಯದಂತಹ ಕಷ್ಟವಾಗಿರುವ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಟ್ಟು, ಪುನರ್ ಮನನ ಮಾಡಿಸಿ ಎಂದು ತಿಳಿಸಿದರು.
ಕೃಷಿ ಕಾಲೇಜು ಬೆಂಗಳೂರು ವಿವಿ ವ್ಯಾಪ್ತಿಯಲ್ಲೇ ಉಳಿಯಲಿ : ಎಚ್. ಡಿ. ರೇವಣ್ಣ ಆಗ್ರಹ

 ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಿಗೆ ತಿಂಗಳಿಗೆ 50 ಸಾವಿರ ಹಾಗೂ ತಾಲೂಕಾಧ್ಯಕ್ಷರಿಗೆ 25 ಸಾವಿರ ನಿಗದಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಂಚಿಕೆ ಮಾಡಲಾಗುತ್ತಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಉತ್ತಮ ಸೇವೆಗೆ ಗ್ರಾಹಕರ ಸ್ಪಂದನೆಯೂ ಅಗತ್ಯ: ಮೋಹನ್
ನಾನು 40 ವರ್ಷಕ್ಕೂ ಮೇಲ್ಪಟ್ಟು ಈ ಬ್ಯಾಂಕಿನ ಗ್ರಾಹಕನಾಗಿ ವ್ಯವಹರಿಸುತ್ತಿದ್ದೇನೆ, ಬ್ಯಾಂಕಿನಲ್ಲಿ ಉತ್ತಮ ಸೇವೆ ಸಿಗುತ್ತಿದೆ, ನಗು ಮೊಗದಿಂದ ಎಲ್ಲರೂ ಸೇವೆ ನೀಡುತ್ತಾರೆ, ಮೋಹನ್ ರವರು ಗ್ರಾಹಕರೊಂದಿಗೆ ಒಳ್ಳೆಯ ವಿಶ್ವಾಸವನ್ನು ಇಟ್ಟುಕೊಂಡಿದ್ದರು, ಬಡ್ತಿ ಮೇಲೆ ವರ್ಗಾವಣೆಗೊಂಡಿರುವ ಅವರಿಗೆ ಮುಂದಿನ ದಿನಗಳಲ್ಲಿಯೂ ದೇವರು ಶ್ರೇಯಸ್ಸನ್ನು ನೀಡಲಿ.
ಲಕ್ಷ್ಮೀ ನರಸಿಂಹಸ್ವಾಮಿ ದೇಗುಲದಲ್ಲಿ ಸೂರ್ಯ ಮಂಡಲೋತ್ಸವ
ಶ್ರೀ ಸ್ವಾಮಿಯ ಉತ್ಸವ ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಿ, ಪೂಜಾ ಕೈಂಕರ್ಯ ನೆರವೇರಿಸಿದ ನಂತರ ರಥ ಬೀದಿಯಲ್ಲಿ ಸೂರ್ಯ ಮಂಡಲೋತ್ಸವ ನಡೆಸಲಾಯಿತು.
ಸೂರ್ಯನಿಗೆ ಕೃತಜ್ಞತೆ ಸಲ್ಲಿಸುವ ದಿನವೇ ರಥಸಪ್ತಮಿ: ಹರೀಶ್
ಸೂರ್ಯನಿಗೆ ಶಕ್ತಿ ಸಂಚಯನವಾಗುವ ದಿನವೇ ರಥಸಪ್ತಮಿ. ಸೂರ್ಯ ತನ್ನ ಪಥ ಹಾಗೂ ರಥ ಬದಲಿಸುವ ದಿನ. ಎಲ್ಲಾ ರೀತಿಯ ಯೋಗ ಪದ್ಧತಿಗಳಲ್ಲಿಯೂ ಸೂರ್ಯ ನಮಸ್ಕಾರಕ್ಕೆ ಮಹತ್ವದ ಸ್ಥಾನವಿದೆ. ಪುರಾಣಗಳಲ್ಲಿ ರಥಸಪ್ತಮಿಯನ್ನು ಸೂರ್ಯನ ಹುಟ್ಟಿದ ದಿನವೆಂದು ಹೇಳಲಾಗಿದೆ.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved