• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರದಲ್ಲಿ ತ್ಯಾಜ್ಯ ವಿಲೇವಾರಿ ಬಗ್ಗೆ ಲೋಕಾ ಎಸ್ಪಿ ಅಸಮಾಧಾನ

ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿಯಾಗದೆ ರಾಶಿರಾಶಿಯಾಗಿ ಬಿದ್ದಿರುವ ಸ್ಥಳಗಳಿಗೆ ಜಿಲ್ಲಾ ಲೋಕಾಯುಕ್ತ ಎಸ್ಪಿ ನಂದಿನಿ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.  

ದರ ಏರಿಕೆಯಿಂದ ಆಗೋ ನಷ್ಟವನ್ನು ಸರ್ಕಾರ ತುಂಬಿಕೊಡುತ್ತಾ
ರಾಜ್ಯ ಸರಕಾರವು ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್)ನಿಂದ ಹಾಲು ಮತ್ತು ಮೊಸರಿನ ದರವನ್ನು ಲೀಟರಿಗೆ ೪ ರು. ಹೆಚ್ಚಿಸಿದ್ದು, ಸರ್ಕಾರದ ಈ ನಿರ್ಧಾರದಿಂದ ಒಕ್ಕೂಟಗಳಿಗೆ ಭಾರಿ ನಷ್ಟವಾಗಲಿದೆ. ಈ ನಷ್ಟವನ್ನು ರಾಜ್ಯ ಸರ್ಕಾರ ತುಂಬಿಕೊಡುತ್ತದೆಯೇ? ಇದಕ್ಕೆ ಯಾರು ಜವಾಬ್ದಾರರು? ಒಕ್ಕೂಟದಲ್ಲಿ ಇರುವ ಲಾಭದ ಹಣ ಮುಗಿಯುವರೆಗೂ ಸಿಎಂ ಆದೇಶ ಪಾಲನೆ ಮಾಡಲಾಗುವುದು ಎಂದು ಹಾಸನ ಹಾಲು ಒಕ್ಕೂಟದ ಅಧ್ಯಕ್ಷರಾದ ಎಚ್.ಡಿ. ರೇವಣ್ಣ ದರ ಏರಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.
ದೇವಾಲಯದ ಉಪಯೋಗಕ್ಕಿರುವ ಗ್ರಾಮಠಾಣಾದಲ್ಲಿ ಇತರೆ ಕಟ್ಟಡ ನಿರ್ಮಾಣ ಬೇಡ
ಶ್ರೀ ಆಂಜನೇಯಸ್ವಾಮಿ ಮತ್ತು ಶ್ರೀ ಈಶ್ವರ ದೇವಾಲಯಗಳ ಧಾರ್ಮಿಕ ಆಚರಣೆಗೆ ಬಳಕೆಯಲ್ಲಿರುವ ಗ್ರಾಮಠಾಣಾ ಜಾಗದಲ್ಲಿ ಇತರೆ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ತಿಳಿಸಿದರು. ಈ ಜಾಗದಲ್ಲಿ ಕಟ್ಟಡ ಕಟ್ಟಲು ಅನುಮತಿ ನೀಡಲು ಮುಂದಾಗಿರುವ ವಿಚಾರ ತಿಳಿದುಬಂದಿದ್ದು, ಜಾಗದಲ್ಲಿ ಕಟ್ಟಡ ಕಟ್ಟಲು ಅನುಮತಿ ನೀಡಿದರೆ ಅನ್ಯ ಚಟುವಟಿಕೆಗಳು ದೇವಾಸ್ಥಾನದ ಸರಹದ್ದಿನಲ್ಲಿ ನಡೆಯುವ ಸಂಭವವಿದೆ. ಇದರಿಂದ ದೇವಸ್ಥಾನದ ದೇವರ ಕಾರ್ಯಗಳಿಗೆ ಹಾಗೂ ಸಾರ್ವಜನಿಕ ಕಾರ್ಯಗಳಿಗೆ ತೊಂದರೆಯಾಗುವ ಸಂಭವವಿರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ನಗರಸಭೆ ಅಧ್ಯಕ್ಷರ ವಿರುದ್ಧ ಇದೇ ಸೋಮವಾರ ಅವಿಶ್ವಾಸ ನಿರ್ಣಯ
ಮೊದಲೇ ನಿರ್ಧರಿಸಿದಂತೆ ನಗರಸಭೆ ಅಧ್ಯಕ್ಷರ ಅಧಿಕಾರವಧಿ ಆರು ತಿಂಗಳು ಮುಗಿದಿದ್ದರೂ ರಾಜೀನಾಮೆ ನೀಡಿಲ್ಲ. ಆ ಮನುಷ್ಯನಿಗೆ ಗೌರವವಿಲ್ಲ. ದಿಮಾಕು ಇದ್ದರೆ ಅವರ ಮನೆಯಲ್ಲಿ ಇಟ್ಟುಕೊಳ್ಳಲಿ. ಮುಂದಿನ ಸೋಮವಾರ ಪಕ್ಷದಿಂದ ಸಭೆ ಮಾಡಿ ತೀರ್ಮಾನ ತೆಗೆದುಕೊಂಡು ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಸಿ ಸಿಡಿಮಿಡಿಗೊಂಡರು.
ಬೂವನಹಳ್ಳಿ ಸೊಸೈಟಿಗೆ ಬೊಮ್ಮೇಗೌಡ ನೂತನ ಅಧ್ಯಕ್ಷ
ಇದೇ ಮೊದಲ ಬಾರಿಗೆ ಸಾಲಗಾರರಲ್ಲದ ಕ್ಷೇತ್ರದಿಂದ ಸ್ಪರ್ಧಿಸಿ ಕೇವಲ ೧ ಮತದ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದ ಬಿ.ಆರ್‌.ಬೊಮ್ಮೇಗೌಡ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದರು. ಚುನಾವಣೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಒಟ್ಟು ೧೧ ಸದಸ್ಯ ಬಲದ ಸಂಘದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ.ಆರ್‌.ಬೊಮ್ಮೇಗೌಡ ಹಾಗೂ ಗಣೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಂದ್ರಮ್ಮ ಹಾಗೂ ವಿಜಯಲಕ್ಷ್ಮಿ ಎಂಬುವರು ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಬಿ.ಆರ್‌. ಬೊಮ್ಮೇಗೌಡ ಹಾಗೂ ವಿಜಯಲಕ್ಷ್ಮಿ ಅವರು ತಲಾ ೬ ಮತ ಪಡೆದು ಆಯ್ಕೆಯಾದರು.
ಬೇಲೂರು ಪುರಸಭೆ ವಾಣಿಜ್ಯ ಮಳಿಗೆ ಮರು ಟೆಂಡರ್‌ ಕರೆಯಲು ಮನವಿ
ಬೇಲೂರು ಪುರಸಭೆ ಮಳಿಗೆಯಲ್ಲಿ ಅಕ್ರಮವಾಗಿ ನಡೆದಿದ್ದ ಇ -ಟೆಂಡರ್ ಹರಾಜು ಪ್ರಕ್ರಿಯೆ ಸರಿಇಲ್ಲ ಎಂದು ಸಾಮಾಜಿಕ ಹೋರಾಟಗಾರರಾದ ವೆಂಕಟೇಶ್, ಸತೀಶ್, ತೊಟೇಶ್ ಸೇರಿದಂತೆ ಇತರರು ನ್ಯಾಯಾಲಯದಲ್ಲಿ ಹೊಸದಾಗಿ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅದರಂತೆ ನ್ಯಾಯಾಲಯದ ಆದೇಶದ ಮೇರೆಗೆ ತೀರ್ಪು ಹೊರಬಂದಿದ್ದು, ಹಿಂದೆ ನಡೆದ ಇ ಟೆಂಡರ್ ಪ್ರಕ್ರಿಯೆ ಸರಿಇಲ್ಲದೆ ಇರುವುದರಿಂದ ಅದನ್ನು ರದ್ದುಮಾಡಲಾಗಿ ಮರು ಹೊಸ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಮನವಿ ಮಾಡಿದ್ದಾರೆ.
ದೇವರ ದಾಸಿಮಯ್ಯ ಬಸವಾದಿ ಶರಣರಿಗೂ ಮಾರ್ಗದರ್ಶಕರು
ನೇಯ್ಗೆ ಕಾಯಕದ ಅವತಾರ ಪುರುಷ ದೇವರ ದಾಸಿಮಯ್ಯ ಅವರಾಗಿದ್ದಾರೆ, ಇವರು ಬಸವಾದಿ ಶರಣರಿಗೂ ಮಾರ್ಗದರ್ಶಕರಾಗಿದ್ದವರು, ನೇಯ್ಗೆ ವೃತ್ತಿಯಿಂದ ಕಾಯಕಕ್ಕೆ ಬುನಾದಿ ಹಾಕಿದವರು, ವಚನ ಸಾಹಿತ್ಯಕ್ಕೆ ಪೀಠಿಕೆ ಬರೆದು ಮುನ್ನುಡಿ ಹಾಕಿದವರು ದೇವರ ದಾಸಿಮಯ್ಯ, ಶರಣರ ತತ್ವಗಳನ್ನು ಪ್ರಚಾರ ಮಾಡಿದವರಾಗಿದ್ದಾರೆ. ಬಸವಣ್ಣನವರು ಕೂಡ ಇವರ ಕುರಿತು ವಚನಗಳಲ್ಲಿ ಹಾಡಿ ಹೊಗಳಿದ್ದಾರೆ. ದೇವರ ದಾಸಿಮಯ್ಯ ಅವರು ಕೇವಲ ಒಂದು ಜಾತಿ ಧರ್ಮಕ್ಕೆ ಸೀಮಿತವಾಗದೆ ಸಮಸ್ತ ಕುಲ ಕೋಟಿಗೆ ಸೇರಿದವರಾಗಿದ್ದಾರೆ. ಇವರು ವಚನ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದು ಎಂದು ನಗರಸಭೆಯ ಅಧ್ಯಕ್ಷ ಚಂದ್ರೇಗೌಡ ಅವರು ತಿಳಿಸಿದ್ದಾರೆ.
ಸ್ಥಗಿತಗೊಂಡಿದ್ದ ಎತ್ತಿನಹೊಳೆ ನಾಲೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಹಸಿರು ನಿಶಾನೆ
ಹಬ್ಬನಘಟ್ಟ ರೈಲ್ವೆ ನಿಲ್ದಾಣ ಹಾಗೂ ಮೈಲನಹಳ್ಳಿ ಗ್ರಾಮದ ಕೂಗಳತೆ ದೂರದಲ್ಲಿ ಸ್ಥಗಿತಗೊಂಡಿದ್ದ ಎತ್ತಿನಹೊಳೆ ನಾಲೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿದೆ. ಸದ್ಯದ ಬೆಳವಣಿಗೆಯಿಂದಾಗಿ ಬಹುಕಾಲದಿಂದ ನೆನಗುದಿಗೆ ಬಿದ್ದಿದ್ದ ದೊಡ್ಡಮಟ್ಟದ ಕೆಲಸ ಮೊದಲ ಹಂತದಲ್ಲಿ ಹಬ್ಬನಘಟ್ಟ ಬಳಿ ಮಂಗಳವಾರ ಆರಂಭವಾಗಿದೆ. ಅರಸೀಕೆರೆ, ಹಾಸನ ಮಾರ್ಗವಾಗಿ ಮೈಸೂರು ಹಾಗೂ ಅರಸೀಕೆರೆ- ಬೆಂಗಳೂರು ಸಂಪರ್ಕಿಸುವ ರೈಲ್ವೆ ಮಾರ್ಗದಲ್ಲಿ ನಾಲೆ ಹಾದು ಹೋಗಬೇಕಿದ್ದ ಹಿನ್ನಲೆಯಲ್ಲಿ ಅನುಮತಿ ಪಡೆಯವುದು ಕಡ್ಡಾಯವಾಗಿತ್ತು.
ದಾಸಿಮಯ್ಯ ಮೆರವಣಿಗೆಗೆ ಚಾಲನೆ
ಶ್ರೀ ದೇವರ ದಾಸಿಮಯ್ಯ ಜಯಂತಿಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಾಸಕರಾದ ಸ್ವರೂಪ್ ಪ್ರಕಾಶ್ ಹಾಗೂ ಜಿಲ್ಲಾಧಿಕಾರಿ ಸತ್ಯಭಾಮ ಸಿ ಅವರು ದೇವರ ದಾಸಿಮಯ್ಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು ಜಯಂತಿಗೆ ಹೆಚ್ಚು ಮಹಿಳೆಯರು ಬಂದಿರುವುದು ವಿಶೇಷವಾಗಿದೆ, ನೇಕಾರ ಸಮಾಜ ಆರ್ಥಿಕವಾಗಿ, ರಾಜಕೀಯವಾಗಿ ಬೆಳೆಯಲಿ ಎಂದು ಆಶಿಸಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.
ರಾಷ್ಟ್ರೀಯ ಆರೋಗ್ಯ ಗುಣಮಟ್ಟ ಸಮೀಕ್ಷೆ ತಂಡ ಭೇಟಿ
ಬಸವಾಪಟ್ಟಣ ಆರೋಗ್ಯ ಕೇಂದ್ರದಲ್ಲಿ ದೊರೆಯುತ್ತಿರುವ ಹೆರಿಗೆ ಸೌಲಭ್ಯ ಹೊರರೋಗಿಗಳ ವಿಭಾಗದ ಚಿಕಿತ್ಸೆ ಸಿಬ್ಬಂದಿ ವರ್ಗದವರ ಮಾಹಿತಿ, ಕಡತಗಳ ಪರೀಶಿಲನೆ ಆರೋಗ್ಯಕೇಂದ್ರದಲ್ಲಿ ಸ್ವಚ್ಛತೆ ಮೊದಲಾದ ಅಂಶಗಳನ್ನು ತಂಡವು ಅವಲೋಕಿಸಿದ್ದು, ಆರೋಗ್ಯ ಕೇಂದ್ರವನ್ನು ಉತ್ತಮವಾಗಿ ನಿರ್ವಹಣೆ ಮಾಡಲಾಗಿದ್ದು, ಭೇಟಿ ನೀಡಿದ ತಂಡವು ಆರೋಗ್ಯ ಕೇಂದ್ರಾಡಳಿತ ಅಧಿಕಾರಿಗಳಿಗೆ ಕೇಂದ್ರ ಸೂಚನೆಗಳನ್ನು ಸಹ ನೀಡಿತು. ಉತ್ತಮ ನಿರ್ವಹಣೆ ಎಂದು ಆರೋಗ್ಯ ಕೇಂದ್ರತಂಡವು ಅಭಿಪ್ರಾಯ ವ್ಯಕ್ತಪಡಿಸಿತು.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 552
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved