• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಲೂರು ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನೂತನ ಅಧ್ಯಕ್ಷರ ಪದಗ್ರಹಣ
ಬೇಲೂರು ಪಟ್ಟಣದ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಅಧಿಕಾರ ಸ್ವೀಕರಿಸಿ ಮಾತನಾಡಿ, ಬೇಲೂರು ಅರ್ಬನ್ ವ್ಯಾಪ್ತಿಯಲ್ಲಿ ಪ್ರತಿಷ್ಠಿತ ಬ್ಯಾಂಕ್ ಆಗಿ ಹೆಸರುಗಳಿಸಿದ್ದು ಷೇರುದಾರರ ಹಾಗೂ ನಿರ್ದೇಶಕರು ಸೇರಿದಂತೆ ಸಿಬ್ಬಂದಿಯ ಸಹಕಾರದೊಂದಿಗೆ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ನೂತನ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಪೈಂಟ್ ರವಿ ತಿಳಿಸಿದರು.
ಹೆಬ್ಬಾಳು ಗ್ರಾಪಂ ಅವ್ಯವಹಾರ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ
ಹೆಬ್ಬಾಳು ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ಕೇಳಲು ಹೋದರೆ ಅಧ್ಯಕ್ಷ ಮತ್ತು ಪಿಡಿಒ ಸಾರ್ವಜನಿಕರೊಂದಿಗೆ ಉಡಾಫೆ ಉತ್ತರ ನೀಡುತ್ತಿದ್ದು, ಇಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಪಿಡಿಒ ಅವರನ್ನು ಅಮಾನತು ಮಾಡಬೇಕು ಎಂದು ದೊಡ್ಡಬ್ಯಾಡಿಗೆರೆ ಗ್ರಾಮಸ್ಥರು ಪಂಚಾಯಿತಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿ ಆಡಳಿತ ಮಂಡಳಿ ಮತ್ತು ಅಧಿಕಾರಿಗಳಿಗೆ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬೆಲೆ ಏರಿಕೆ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ
ಸರ್ಕಾರದ ಜನ ವಿರೋಧಿ ಬೆಲೆ ಏರಿಕೆ ವಿರೋಧಿಸಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಕಾರ್ಯಕರ್ತರು ಬುಧವಾರ ಕೊಣನೂರಿನ ಸಿದ್ದಾಪುರ ಗೇಟ್‌ನಲ್ಲಿ ರಸ್ತೆ ಮಧ್ಯೆ ನಿಂತು ಪ್ರತಿಭಟನೆ ನಡೆಸಿದರು. ಒಂದೇ ಬಾರಿಗೆ ಒಂದು ಲೀಟರ್‌ಗೆ ನಾಲ್ಕು ರು. ಹೆಚ್ಚಿಸಿದ್ದಾರೆ. ಒಟ್ಟಾರೆ ಒಂದೇ ವರ್ಷದಲ್ಲಿ ಹಾಲಿಗೆ ಒಂದು ಲೀಟರ್‌ಗೆ 9 ರು. ಹೆಚ್ಚಿಸಿದ್ದಾರೆ. ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಿಸಿದ್ದಾರೆ. ಇದರಿಂದ ಸಣ್ಣ, ಮಧ್ಯಮ ವರ್ಗದ ಜನ ಜೀವನ ಮಾಡಲು ಸಾಧ್ಯವಿಲ್ಲದೆ ಉಸಿರುಗಟ್ಟುವ ಸ್ಥಿತಿ ಬಂದಿದೆ. ನೋವು ಅನುಭವಿಸುತ್ತಿರುವ ಜನಪರ ನಿಲ್ಲುವ ಪರಿಸ್ಥಿತಿ ಉದ್ಭವವಾಗಿದೆ ಎಂದರು.
ಬೇಲೂರು ರಥೋತ್ಸವದ ಹಿನ್ನೆಲೆ ಮುಂಜಾಗ್ರತಾ ಕ್ರಮಗಳು
ಶ್ರೀ ಚನ್ನಕೇಶವ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈಗ ಬೇಸಿಗೆ ಕಾಲವಾಗಿರುವುದರಿಂದ ನೀರು ಮತ್ತು ಆಹಾರದಿಂದ ಹರಡುವ ಕಾಯಿಲೆಗಳಾದ ಅತಿಸಾರಭೇದಿ, ಕಾಲರ, ವಿಷಮಶೀತ ಜ್ವರ, ಆಮಶಂಕೆ, ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತ ಕ್ರಮವಹಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕೋರಲಾಯಿತು. ಭಕ್ತಾದಿಗಳಿಗೆ ಅನ್ನದಾಸೋಹ ನೀಡುವ ಸಮಯದಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಹಾಗೂ ಅಡುಗೆ ಸಿಬ್ಬಂದಿಯವರಿಗೆ ಅಡುಗೆಗೆ ಬಳಸುವ ಪಾತ್ರೆಗಳು ನೀರು ಇನ್ನಿತರೆ ದಿನಸಿ ಸಾಮಗ್ರಿಗಳನ್ನು ಬಳಸುವಾಗ ಸ್ವಚ್ಛತೆಯನ್ನು ಕಾಪಾಡುವಂತೆ ತಿಳಿಸಿದರು.
ಕುಲದಲ್ಲಿ ಕೀಳ್ಯಾವುದೋ ಸಿನಿಮಾಕ್ಕೆ ಶಾಸಕ ಬಾಲಕೃಷ್ಣ ಪ್ರಮೋಷನ್‌
ಕುಲದಲ್ಲಿ ಕೀಳ್ಯಾವುದೋ ಚಲನಚಿತ್ರ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದರು. ಪರಭಾಷಾ ಸಿನಿಮಾಗಳಂತೆ ಕನ್ನಡ ಸಿನಿಮಾಗಳನ್ನು ಜನ ನೋಡಿ ಆನಂದಿಸುತ್ತಿದ್ದಾರೆ. ಹಾಸನ ಜಿಲ್ಲೆ ಶಿಲ್ಪಕಲೆಗಳಿಗೆ ಹೆಸರುವಾಸಿಯಾಗಿದೆ. ಈ ಚಿತ್ರದ ಹಾಡುಗಳು ಸಕಲೇಶಪುರ ಹಾಗೂ ರಾಮನಗರ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಚಿತ್ರೀಕರಣಗೊಂಡಿದೆ. ರಾಮಾಚಾರಿ ಧಾರವಾಹಿಯ ಖ್ಯಾತಿಯ ನಟಿ ಮೌನ ಗುಡ್ಡೆ ಮನೆ ಈ ಚಿತ್ರದ ನಾಯಕಿ. ಈ ಚಿತ್ರಕ್ಕೆ ಕಥೆ ಸಾಹಿತ್ಯ ಯೋಗರಾಜ್ ಭಟ್, ನಿರ್ದೇಶನ ರಾಮನಾರಾಯಣ, ದೊಡ್ಡ ತಾರಾ ಬಳಗ ಹೊಂದಿದೆ. ಪ್ರೇಕ್ಷಕರು ಸಿನಿಮಾ ನೋಡಿ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.
ಭಟ್ಟಾರಕ ಶ್ರೀಗಳಲ್ಲಿ ಗುರುತ್ವಾಕರ್ಷಣಾ ಶಕ್ತಿ ಇತ್ತು
ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಶ್ರೀಗಳಲ್ಲಿ ಎಲ್ಲರನ್ನೂ ಸೆಳೆಯುವ, ಆಕರ್ಷಿಸುವ ಗುರುತ್ವಾಕರ್ಷಣಾ ಶಕ್ತಿ ಇತ್ತು ಎಂದು ಶ್ರೀ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಪಟ್ಟಚಾರ್ಯವರ್ಯ ಮಹಾಸ್ಚಾಮೀಜಿ ಹೇಳಿದರು. ಶ್ರೀ ಕ್ಷೇತ್ರವನ್ನು ದೇಶ ಮಾತ್ರವಲ್ಲದೆ ವಿದೇಶಕ್ಕೂ ತಮ್ಮದೇ ಸಂದೇಶಗಳ ಮೂಲಕ ಪರಿಚಯಿಸಿದರು. ರಾಜಮನೆತನ, ಸರ್ಕಾರಗಳನ್ನು ಆಕರ್ಷಿಸಿ ಕ್ಷೇತ್ರಕ್ಕೆ ಆಗಬೇಕಾದ ಕೆಲಸ ಮಾಡಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಮಹನೀಯರು ಎಂದು ಸ್ಮರಿಸಿದರು.
ಕಿತಬೂರು ಹಾಲು ಉತ್ಪಾದಕರ ಸಂಘದ ನೂತನ ಸಭಾಂಗಣ ಉದ್ಘಾಟನೆ
ಕಿತಬೂರು ಹಾಲು ಉತ್ಪಾದಕರ ಸಂಘದ ನೂತನ ಸಭಾಂಗಣ ಉದ್ಘಾಟನೆಯನ್ನು ಮಾಜಿ ಶಾಸಕ ಎಚ್. ಕೆ. ಕುಮಾರಸ್ವಾಮಿ ಇತ್ತೀಚೆಗೆ ನೆರವೇರಿಸಿದರು. ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ರೈತರ ಉಪ ಕಸುಬಾದ ಪಶುಪಾಲನೆ ಹಾಗೂ ಹಾಲಿನ ಉತ್ಪಾದನೆಯಿಂದ ಜೀವನಕ್ಕೆ ತುಂಬ ಅನುಕೂಲವಾಗುತ್ತಿದೆ. ಹಾಲಿನ ಮಾರಾಟದಿಂದ ರೈತರಿಗೆ ಆದಾಯ ಬರುತ್ತಿದ್ದು, ಇದರಿಂದ ಅನೇಕ ರೈತ ಕುಟುಂಬಗಳು ಅಭಿವೃದ್ಧಿ ಹೊಂದಿವೆ. ರೈತರು ಗುಣಮಟ್ಟದ ಹಾಲಿನ ಉತ್ಪಾದನೆಗೆ ಹೆಚ್ಚಿನ ಗಮನಹರಿಸಬೇಕು ಎಂದರು.
ಇ ಖಾತೆ ಮಾಡಿಸಲು ಮಧ್ಯವರ್ತಿಗಳ ಹಾವಳಿ
ಪುರಸಭೆ ವ್ಯಾಪ್ತಿಯಲ್ಲಿ ೧೮ ವಾರ್ಡ್‌ಗಳನ್ನು ಸ್ಲಂ ಬೋರ್ಡ್ ವ್ಯಾಪ್ತಿಗೆ ಒಳಪಡಿಸಿ, ಬಡವರ ಏಳಿಗೆಗೆ ಶ್ರಮಿಸಲಾಗಿದೆ. ಇತ್ತೀಚಿಗೆ ಈ ಖಾತೆ ಮಾಡಿಸಲು ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ದೂರುಗಳು ಬರುತ್ತಿದ್ದು, ಇದೇ ರೀತಿಯಾದರೇ ಲೋಕಾಯುಕ್ತಕ್ಕೆ ದೂರು ನೀಡಿ, ಅಗತ್ಯ ಕ್ರಮಕ್ಕೆ ಸೂಚಿಸುತ್ತೇವೆ. ಆದ್ದರಿಂದ ಅಧಿಕಾರಿಗಳು ಎಚ್ಚರದಿಂದ ಇರಬೇಕು ಎಂದು ಶಾಸಕ ಎಚ್.ಡಿ. ರೇವಣ್ಣ ಸಲಹೆ ನೀಡಿದರು. ಪಟ್ಟಣದ ಪುರಸಭೆ ವ್ಯಾಪ್ತಿಯ ಕವರ್‌ ಡೆಕ್ ಪಕ್ಕದಲ್ಲಿರುವ ಪತಂಜಲಿ ಯೋಗಭವನದ ಪಕ್ಕದ ಖಾಲಿ ನಿವೇಶನವನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೀಡಲು ಪುರಸಭೆ ಅನುಮೋದನೆ ನೀಡಿದ್ದರೂ ಏಕೆ ನೀಡಿಲ್ಲ, ಪುರಸಭೆಗೆ ನೀಡಲು ಅವಕಾಶವಿದೆ, ಅವರಿಗೆ ನಿವೇಶನ ಮಂಜೂರು ಮಾಡಿಕೊಡಿ ಎಂದು ಸೂಚಿಸಿದರು.
ದೌರ್ಬಲ್ಯಗಳನ್ನು ಮೆಟ್ಟಿ ನಿಂತು ಯುವಜನತೆ ಶಕ್ತಿಯನ್ನು ಗುರ್ತಿಸಿಕೊಳ್ಳಿ
ಯುವಜನತೆ ತಮ್ಮ ಮನಸ್ಸಿನ ಕತ್ತಲೆಯನ್ನು ಹೋಗಲಾಡಿಸಿಕೊಳ್ಳುವ ನಿಟ್ಟಿನಲ್ಲಿ ಸಾಗಬೇಕು ಎಂದು ಎಂದು ಮೈಸೂರು ಮಹಾರಾಜ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಟಿ.ಕೆ. ಕೆಂಪೇಗೌಡ ಕರೆ ನೀಡಿದರು. ತಮ್ಮ ದೌರ್ಬಲ್ಯಗಳನ್ನು ಮೆಟ್ಟಿ ನಿಂತು ತಮ್ಮ ಶಕ್ತಿಯನ್ನು ಗುರುತಿಸಿಕೊಳ್ಳುವ ಜವಾಬ್ದಾರಿ ಯುವಜನತೆಯ ಮೇಲಿದೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ವ್ಯಸನಿಗಳಾಗದೇ ಆಚಾರ, ವಿಚಾರಗಳನ್ನು ಕುರಿತು ಚಿಂತನೆ ಮಾಡುವ, ದಿನಚರಿಯನ್ನು ಬರೆಯುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ದೇವಸ್ಥಾನದ ಜಾಗ ಹಾಲು ಉತ್ಪಾದಕರ ಸಂಘಕ್ಕೆ
ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನ ಬಳಿ ಜಾಗವನ್ನು ಹಾಲು ಉತ್ಪಾದಕರ ಮಹಿಳಾ ಸಂಘದ ಕಟ್ಟಡ ನಿರ್ಮಾಣಕ್ಕೆ ಗ್ರಾಪಂ ಪಿಡಿಒ ಇ ಖಾತೆ ಮಾಡಿಕೊಟ್ಟಿರುವ ಕುರಿತು ಗ್ರಾಮಸ್ಥರು ತಕರಾರು ತೆಗೆದ ಹಿನ್ನೆಲೆಯಲ್ಲಿ ತಾಪಂ ಇಒ ಪ್ರಕಾಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮದ ಕೆಲವರು ಈ ಜಾಗವನ್ನು ಅಕ್ರಮವಾಗಿ ಖಾತೆ ಮಾಡಿಕೊಡಲಾಗಿದೆ. ಸಂಘದ ಕಟ್ಟಡ ಕಟ್ಟಲು ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತಿನ ಚಕಮಕಿ ನಡೆಯಿತು. ರಸ್ತೆ ಬದಿಯ ಈ ಜಾಗದಲ್ಲಿ ಡೇರಿ ಕಟ್ಟಡ ಕಟ್ಟಲು ಅವಕಾಶ ನೀಡುವುದಿಲ್ಲ. ನಿಯಮಬಾಹಿರವಾಗಿ ಮಾಡಿರುವ ಇ ಖಾತೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 552
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved